ರಾಜಕೀಯ

ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ ಭರ್ಜರಿ ಗೆಲುವು

ಮೈಸೂರು : ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಧನಂಜಯ ಸರ್ಜಿ, ಕಾಂಗ್ರೆಸ್‌ನ ಆಯನೂರು ಮಂಜುನಾಥ್, ಪಕ್ಷೇತರ ಅಭ್ಯರ್ಥಿ, ಮಾಜಿ ಶಾಸಕ ರಘುಪತಿ ಭಟ್ ಕಣದಲ್ಲಿದ್ದರು. ದಾವಣಗೆರೆಯ ಹೊನ್ನಳ್ಳಿಯಿಂದ ಶಿವಮೊಗ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಡಿಕೇರಿಯವರೆಗೆ ಐದೂವರೆ ಲೋಕಸಭಾ ಕ್ಷೇತ್ರಗಳನ್ನೊಳಗೊಂಡ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶಿವಮೊಗ್ಗದ ಮಕ್ಕಳ ತಜ್ಞ ಡಾ.ಧನಂಜಯ ಸರ್ಜೆಯವರು 37627 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಕಂಡಿದ್ದಾರೆ. ಗೆಲುವು ಸಾಧಿಸಿದ ಡಾ.ಧನಂಜಯ […]

ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ ಭರ್ಜರಿ ಗೆಲುವು Read More »

ಇಂದು ಎನ್ ಡಿಎ ಸಂಸದರ ಮಹತ್ವದ ಸಭೆ | ನಾಳೆ ಮೋದಿ ಪ್ರಮಾಣ ವಚನ ಸಾಧ್ಯತೆ !

ದೆಹಲಿ:  ಇಂದು ದೆಹಲಿಯಲ್ಲಿ ಎನ್ ಡಿಎ ಸಂಸದರ ಸಭೆ ಸೇರಿ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಮೋದಿಯವರನ್ನು ತಮ್ಮ ನಾಯಕನನ್ನಾಗಿ ಔಪಚಾರಿಕವಾಗಿ ಆಯ್ಕೆ ಮಾಡಲಿದ್ದು, ನಾಳೆ ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಆದರೆ, ಅಂತಿಮ ದಿನಾಂಕವನ್ನು ಇನ್ನೂ ಬಹಿರಂಗಪಡಿಸಿಲ್ಲ. ಈಗಾಗಲೇ ರಾಷ್ಟ್ರಪತಿ ಭವನದಲ್ಲಿ ನೂತನ ಪ್ರಧಾನಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ತಯಾರಿಗಳು ಶುರುವಾಗಿವೆ. ಎನ್ ಡಿಎ ಸಂಸದರ ನಾಯಕರಾಗಿ ಮೋದಿ ಆಯ್ಕೆಯಾದ ನಂತರ, ಮೈತ್ರಿಕೂಟದ ಹಿರಿಯ ಸದಸ್ಯರಾದ ಟಿಡಿಪಿಯ ಎನ್ ಚಂದ್ರಬಾಬು

ಇಂದು ಎನ್ ಡಿಎ ಸಂಸದರ ಮಹತ್ವದ ಸಭೆ | ನಾಳೆ ಮೋದಿ ಪ್ರಮಾಣ ವಚನ ಸಾಧ್ಯತೆ ! Read More »

ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಸಂಪೂರ್ಣ | ನೈಋತ್ಯದಿಂದ ಭೋಜೇಗೌಡ, ದಕ್ಷಿಣದಿಂದ ಕೆ.ವಿವೇಕಾನಂದ ಗೆಲುವು

ಪುತ್ತೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಭೋಜೇಗೌಡ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರೀ ತಿಬ್ಬೇಗೌಡ ಅವರನ್ನು ಪರಾಭವಗೊಳಿಸಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಕುರಿತು ಭೋಜೇಗೌಡ ಹಾಗೂ ವಿವೇಕಾನಂದ ಅವರ ಆಪ್ತ ವಲಯದಲ್ಲಿ ಹರ್ಷ ಮುಗಿಲುಮುಟ್ಟಿದೆ.

ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಸಂಪೂರ್ಣ | ನೈಋತ್ಯದಿಂದ ಭೋಜೇಗೌಡ, ದಕ್ಷಿಣದಿಂದ ಕೆ.ವಿವೇಕಾನಂದ ಗೆಲುವು Read More »

ಮೈತ್ರಿಕೂಟದ ಸಂಖ್ಯೆ 303 ಕ್ಕೆ ಏರಿಕೆ | ಹೊಸ ಸರಕಾರ ರಚನೆಯಾಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮೋದಿ

ಪುತ್ತೂರು:  ಮೈತ್ರಿಕೂಟದ ಸಂಖ್ಯೆ ಬುಧವಾರ 303 ಕ್ಕೆ ಏರಿಕೆಯಾಗಿದ್ದು, ಈ ಹಿನ್ನಲೆಯಲ್ಲಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹಳೆಯ ಸರಕಾರ ವಿಸರ್ಜನೆ ಮಾಡಿ ರಾಷ್ಟ್ರಪತಿಗಳ ಮನವಿಗೆ ಹೊಸ ಸರಕಾರ ರಚನೆ ಆಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮೋದಿ ಮುಂದುವರಿಯಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಒಟ್ಟು 293 ಸ್ಥಾನಗಳನ್ನು ಹೊಂದಿತ್ತು. ಆದರೆ ಈಗ ಮೈತ್ರಿಕೂಟದ ಸಂಖ್ಯೆ ಎರಡೇ ದಿನದಲ್ಲಿ 303ಕ್ಕೆ ಏರಿಕೆಯಾಗಿದೆ. ಎನ್‍.ಡಿ.ಎ ಸಭೆ ನಡೆಸಿ ನಾಯಕರ ಸರ್ವಾನುಮತದ ಮೂಲಕ ಎನ್‍.ಡಿ.ಎ ನಾಯಕನಾಗಿ ಮೋದಿಯವರನ್ನು

ಮೈತ್ರಿಕೂಟದ ಸಂಖ್ಯೆ 303 ಕ್ಕೆ ಏರಿಕೆ | ಹೊಸ ಸರಕಾರ ರಚನೆಯಾಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮೋದಿ Read More »

ವಿಧಾನಪರಿಷತ್ ಚುನಾವಣೆ : ಮೈಸೂರಿನ ಮತ ಎಣಿಕೆ ಕೇಂದ್ರಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಪುತ್ತೂರು: ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕೇಂದ್ರ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿಗೆ ಅರುಣ್ ಪುತ್ತಿಲ ಭೇಟಿ ನೀಡಿದರು. ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೇಗೌಡರಿಗೆ ಅರುಣ್ ಕುಮಾರ್ ಪುತ್ತಿಲ ಶುಭಹಾರೈಸಿದರು. ಈ ಸಂದರ್ಭ ಬಿಜೆಪಿ ಶಾಸಕರಾದ ಚೆನ್ನಬಸಪ್ಪ, ಉಡುಪಿ ಬಿಜೆಪಿ ಮುಖಂಡರಾದ ಉದಯಕುಮಾರ್ ಶೆಟ್ಟಿ ಸಹಿತ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ವಿಧಾನಪರಿಷತ್ ಚುನಾವಣೆ : ಮೈಸೂರಿನ ಮತ ಎಣಿಕೆ ಕೇಂದ್ರಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ Read More »

ದ.ಕ. ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ವಿಜಯೇಂದ್ರ ಭೇಟಿ

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿದರು. ಬೆಂಗಳೂರಿನಲ್ಲಿ ಇಂದು ವಿಜಯೇಂದ್ರ ಭೇಟಿ ಮಾಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಬ್ರಿಜೇಶ್ ಚೌಟ ಧನ್ಯವಾದ ತಿಳಿಸಿದರು. ನಾಳೆ ದೆಹಲಿಯಲ್ಲಿ ಬಿಜೆಪಿ ನೂತನ ಸಂಸದರ ಸಭೆಯ ಹಿನ್ನೆಲೆಯಲ್ಲಿ ಬ್ರಿಜೇಶ್ ಚೌಟ ಇಂದು ದೆಹಲಿಗೆ ತೆರಳಲಿದ್ದಾರೆ.

ದ.ಕ. ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ವಿಜಯೇಂದ್ರ ಭೇಟಿ Read More »

ಮಹಾರಾಷ್ಟ್ರ  ದೇವೇಂದ್ರ ಫಡ್ನವೀಸ್  ಉಪ ಮುಖ್ಯಮಂತ್ರಿ  ಸ್ಥಾನಕ್ಕೆ ರಾಜೀನಾಮೆ

ಲೋಕಸಭಾ ಚುನಾವಣೆ ಮಹಾರಾಷ್ಟ್ರದಲ್ಲಿ ಬಿಜೆಪಿ ತೀವ್ರ ಹಿನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ.  ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಸಂಖ್ಯೆಯು 2019 ರಲ್ಲಿ 23 ಸ್ಥಾನಗಳಿಂದ ಈ ವರ್ಷ ಕೇವಲ 9ಕ್ಕೆ ಕುಸಿದಿದೆ. ರಾಜ್ಯದ ಬಿಜೆಪಿ ನಾಯಕರ ಪೈಕಿ ಪ್ರಮುಖ ವ್ಯಕ್ತಿಯಾಗಿರುವ ಫಡ್ನವೀಸ್, ಪಕ್ಷದ ಚುನಾವಣಾ ಹಿನ್ನಡೆಯ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ.

ಮಹಾರಾಷ್ಟ್ರ  ದೇವೇಂದ್ರ ಫಡ್ನವೀಸ್  ಉಪ ಮುಖ್ಯಮಂತ್ರಿ  ಸ್ಥಾನಕ್ಕೆ ರಾಜೀನಾಮೆ Read More »

ಜೂನ್ 8 : ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಬಹುಮತ ಪಡೆದು ಮೂರನೇ ಬಾರಿಗೆ ಅಧಿಕಾರದ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಜೂನ್ 8 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ನರೇಂದ್ರ ಮೋದಿ ಅವರ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ. ಸತತ ಮೂರನೇ ಬಾರಿಗೆ ಚುನಾವಣೆಯಲ್ಲಿ ಗೆದ್ದು ದೇಶದ ಪ್ರಧಾನಿಯಾದ ದೇಶದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಜೂನ್ 8 : ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ Read More »

ಕೇಂದ್ರ ಅಧಿಕಾರ ಚುಕ್ಕಾಣಿಗೆ‌ ಎನ್ ಡಿಎ ಗೆ ಬೆಂಬಲ ಘೋಷಿಸಿದ  ಎನ್ ಚಂದ್ರಬಾಬು ನಾಯ್ಡು

ಪ್ರಸ್ತುತ ರಾಜಕಾರಣದಲ್ಲಿ ಕಿಂಗ್ ಮೇಕ‌ರ್, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಬಿಜೆಪಿ ನೇತೃತ್ವದ ಎನ್‌ಡಿಎಗೆ ತಮ್ಮ ಬೆಂಬಲವನ್ನು ಪುನರುಚ್ಛರಿಸಿದ್ದಾರೆ ಹಾಗೂ ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಹೇಳಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಲಿದ್ದೇನೆ ಎಂದು ಚಂದ್ರಬಾಬು ನಾಯ್ಡು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹೊಸ ಸರ್ಕಾರದಲ್ಲಿ ಸ್ಪೀಕ‌ರ್ ಸ್ಥಾನಕ್ಕೆ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಬೇಡಿಕೆ ಇರಿಸಿದ್ದಾರೆ. ಲೋಕಸಭೆಯಲ್ಲಿ ಟಿಡಿಪಿ ಪಕ್ಷದ ಸಂಸದರನ್ನ ಸ್ಪೀಕ‌ರ್ ಮಾಡಬೇಕು. ಸಂಪುಟದಲ್ಲಿ ಟಿಡಿಪಿಗೆ ಒಂದು

ಕೇಂದ್ರ ಅಧಿಕಾರ ಚುಕ್ಕಾಣಿಗೆ‌ ಎನ್ ಡಿಎ ಗೆ ಬೆಂಬಲ ಘೋಷಿಸಿದ  ಎನ್ ಚಂದ್ರಬಾಬು ನಾಯ್ಡು Read More »

ಪಾಕ್ ಪರ ಜೈಕಾರ ಕೂಗಿದ ಯುವಕನ ಬಂಧನ

ಚಿಕ್ಕೋಡಿ : ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಪಾಕಿಸ್ತಾನ ಪರ ಜೈಕಾರ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂದಿತ ಆರೋಪಿಯನ್ನುಜಮೀರ್ ನಾಯಿಕವಾಡಿ (25) ಎಂದು ಗುರುತಿಸಲಾಗಿದೆ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿತ್ತು. ಈ ಹಿನ್ನೆಲೆ ಮತ ಎಣಿಕೆ ಕೇಂದ್ರದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ಆರೋಪಿ ಜಮೀರ್ ಪಾಕಿಸ್ತಾನ್ ಕೀ ಜೈ ಎಂದು ಘೋಷಣೆ

ಪಾಕ್ ಪರ ಜೈಕಾರ ಕೂಗಿದ ಯುವಕನ ಬಂಧನ Read More »

error: Content is protected !!
Scroll to Top