ನೈಋತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ರಘುಪತಿ ಭಟ್ ಸ್ಪರ್ಧೆ | ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಕಾರಣವೇನು | ಈ ಕುರಿತು ಏನಂದ್ರು ರಘುಪತಿ ಭಟ್ ?
ಪುತ್ತೂರು: ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಆಸಕ್ತಿ ಇದ್ದ ಕಾರಣ ಒಂದು ಇಲೆಕ್ಟ್ರಾಲ್ ಪೊಲಿಟಿಕಲ್ ಬೇಕು ಎಂಬ ನಿಟ್ಟಿನಲ್ಲಿ ನಾನು ಸ್ಪರ್ಧೆಗೆ ನಿಂತಿದ್ದೇನೆ ಹೊರತು ಪಕ್ಷದಿಂದ ನನಗೆ ಸೀಟು ಸಿಕ್ಕಿಲ್ಲ, ನನಗೆ ಮೋಸ ಆಗಿದೆ ಎಂಬ ನಿಟ್ಟಿನಲ್ಲಿ ಚುನಾವಣೆಗೆ ನಿಂತಿಲ್ಲ ಎಂದು ಉಡುಪಿ ಮಾಜಿ ಶಾಸಕ, ನೈಋತ್ಯ ಪದವೀಧರ ಕ್ಷೇತ್ರ ಅಭ್ಯರ್ಥಿ ರಘುಪತಿ ಭಟ್ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಉಡುಪಿಯಲ್ಲಿ ಮೂರು ಬಾರಿ ಶಾಸಕನಾಗಿ ಜಿಲ್ಲೆಯಲ್ಲಿ ಜನಪರ, ಸಾಮಾಜಿಕ, ಅಭಿವೃದ್ಧಿ ಕಾರ್ಯ ಎಲ್ಲರಿಗೂ ತಿಳಿದಿದು, […]










