ಪುತ್ತೂರು

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗೋಪಾಲಕೃಷ್ಣ ಗೌಡ ಆರೇಲ್ತಡಿ ನಿಧನ

 ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ, ಮಾಜಿ ಉಪಾಧ್ಯಕ್ಷ ಗೋಪಾಲಕೃಷ್ಣ ಗೌಡ ಆರೇಲ್ತಡಿ ಇಂದು (ಗುರುವಾರ) ಸಂಜೆ ಆರೇಲ್ತಡಿಯ ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಸವಣೂರು ಆರೇಲ್ತಡಿ ಒಕ್ಕೂಟದ ಪ್ರಸ್ತುತ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಆರೇಲ್ತಡಿ ಇರ್ವೆರು ಉಳ್ಳಾಕುಲು ಕೆಡೆಂಜೋಡಿತ್ತಾಯ ಪರಿವಾರ ದೈವಗಳ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ, ಬ್ರಹ್ಮ ಕಲಶ ಸಮಿತಿಗಳಲ್ಲಿ ಸಕ್ರೀಯವಾಗಿ ದುಡಿದಿದ್ದರು. ಪ್ರಗತಿಪರ ಕೃಷಿಕರಾಗಿ, ಹೈನುಗಾರರಾಗಿ ಗುರುತಿಸಿಕೊಂಡಿದ್ದರು

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗೋಪಾಲಕೃಷ್ಣ ಗೌಡ ಆರೇಲ್ತಡಿ ನಿಧನ Read More »

ನಾಳೆ (ಮೇ ೩೦): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆ

ಪುತ್ತೂರು : ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹು ನಿರೀಕ್ಷಿತ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಕರಾವಳಿಯಾದ್ಯಂತ ಮೇ ೩೦ ಶುಕ್ರವಾರ ತೆರೆ ಕಾಣಲಿದೆ. ಉಡುಪಿ, ದ.ಕ. ಜಿಲ್ಲೆಯ ಸುಮಾರು ೧೩ ಥಿಯೇಟರ್ ಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ರಝಾಕ್ ಪುತ್ತೂರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಟಪಾಡಿಯ ಒಂದೇ ಶಾಲೆಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಸುಮಾರು ೨೫ ಶಾಲೆಯ ೧೨೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷವಾಗಿದೆ. ಮೊದಲಿಗೆ

ನಾಳೆ (ಮೇ ೩೦): ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ, ಕೆ.ಸತ್ಯೇಂದ್ರ ಪೈ ನಿರ್ಮಾಣದ ಕನ್ನಡ ಸಿನಿಮಾ ’ಸ್ಕೂಲ್ ಲೀಡರ್’ ಬಿಡುಗಡೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಸ್ವಚ್ಚತಾ ಸೇ ಸಹಕಾರ್’

ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್, ದ.ಕ.ಜಿಲ್ಲಾ ಸಹಕಾರ ಇಲಾಖೆ ಹಾಗೂ ಸಂತ ಪೀಲೋಮಿನಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 ಅಂಗವಾಗಿ ‘ಸ್ವಚ್ಚತಾ ಸೇ ಸಹಕಾರ್’ ಕಾರ್ಯಕ್ರಮ ಸಂತ ಫಿಲೋಮಿನಾ ಕಾಲೇಜಿನಲ್ಲಿ ನಡೆಯಿತು.  ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ 150 ನೇ ಜನ್ಮದಿನಾಚರಣೆ ಪ್ರಯುಕ್ತ ಸ್ವಚ್ಛ ಭಾರತ ನಿರ್ಮಾಣ

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಸ್ವಚ್ಚತಾ ಸೇ ಸಹಕಾರ್’ Read More »

ಶಾಂತಿ-ಸೌಹಾರ್ದ ಕಾಪಾಡುವಲ್ಲಿ ಸರಕಾರ ಸಂಪೂರ್ಣ ವಿಫಲ | ರಾಜ್ಯ ಸರಕಾರ ರಾಜೀನಾಮೆ ನೀಡಿ ರಾಷ್ಟ್ರಪತಿ ಆಳ್ವಿಕೆ ಬರಲಿ : ಅಶ್ರಫ್‍ ಕಲ್ಲೇಗ ಆಗ್ರಹ

ಪುತ್ತೂರು : ಬಂಟ್ವಾಳದಲ್ಲಿ ನಡೆದ ಕೊಲೆಯನ್ನು ನೋಡಿದರೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ದ.ಕ.ಜಿಲ್ಲೆಯಲ್ಲಿ ಶಾಂತಿ-ಸೌಹಾರ್ದ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲಗೊಂಡಿದ್ದು, ಪೊಲೀಸ್ ಇಲಾಖೆಯ ವೈಫಲ್ಯ ಎದ್ದುಕಾಣುತ್ತಿದೆ. ಪೊಲೀಸರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ಸರಕಾರ ರಾಜೀನಾಮೆ ನೀಡಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಎಂದು ದ. ಕ. ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಆಗ್ರಹಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಕೊಲೆಯಾದ ರೌಡಿ ಶೀಟರ್ ಸಂತಾಪ ಸಭೆಗಳಲ್ಲಿ ಪ್ರತೀಕಾರದ ಮಾತನ್ನು ಹಿಂದುತ್ವವಾದಿಗಳು ಹೇಳುತ್ತಿದ್ದರು. ಇಲಾಖೆ ಇಂತವರ ಮೇಲೆ

ಶಾಂತಿ-ಸೌಹಾರ್ದ ಕಾಪಾಡುವಲ್ಲಿ ಸರಕಾರ ಸಂಪೂರ್ಣ ವಿಫಲ | ರಾಜ್ಯ ಸರಕಾರ ರಾಜೀನಾಮೆ ನೀಡಿ ರಾಷ್ಟ್ರಪತಿ ಆಳ್ವಿಕೆ ಬರಲಿ : ಅಶ್ರಫ್‍ ಕಲ್ಲೇಗ ಆಗ್ರಹ Read More »

ಯುವಕನ ಮೇಲೆ  ಬಿಯರ್‌ ಬಾಟಲ್‌ನಿಂದ ಹಲ್ಲೆ | ದೂರು ದಾಖಲು

ಪುತ್ತೂರು:  ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿದ ಘಟನೆ ನಿನ್ನೆ ಪಾಣಾಜೆ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಅರ್ಲಪದವು ನಿವಾಸಿ ಪ್ರಕಾಶ್ (28) ಎನ್ನಲಾಗಿದೆ. ಹಲ್ಲೆ ಮಾಡಿದ ಆರೋಪಿಗಳು ಧನಂಜಯ ಮತ್ತು ಪುನೀತ್  ಎಂದು ತಿಳಿದು ಬಂದಿದೆ. ಪಾಣಾಜೆ ಗ್ರಾಮದ ವೈನ್‌ ಶಾಪ್‌ ನಿಂದ ಬಿಯರ್‌ ಬಾಟಲಿಯನ್ನು ಖರೀದಿ ಮಾಡಿ, ವೈನ್‌ ಶಾಪ್‌ ನಲ್ಲಿ ಇರುವ ಶೆಡ್‌ ನಲ್ಲಿದ್ದ ಚಯರ್‌ನಲ್ಲಿ ಕುಳಿತು ಬಿಯರ್ ಕುಡಿಯುತ್ತಿದ್ದ ವೇಳೆ ಪರಿಚಯದವರಾದ ಧನಂಜಯ ಮತ್ತು ಪುನೀತ್‌ ಎಂಬುವವರು ಬಂದಿದ್ದರು. ಬಂದ

ಯುವಕನ ಮೇಲೆ  ಬಿಯರ್‌ ಬಾಟಲ್‌ನಿಂದ ಹಲ್ಲೆ | ದೂರು ದಾಖಲು Read More »

ಜೂ.1 ರಿಂದ 7 : ಪುತ್ತೂರಿನಲ್ಲಿ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ

ಪುತ್ತೂರು : ಬಹುವಚನಂ ಪುತ್ತೂರು, ದಿ.ಜಿ.ಎಲ್.ಆಚಾರ್ಯ ಜನ್ಮಶತಾಬ್ಧಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಸ್ವಾಮಿ ಕಲಾಮಂದಿರದ ಆಶ್ರಯದಲ್ಲಿ ಏಳು ದಿನಗಳ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ ಜೂ.1 ರಿಂದ 7ರ ತನಕ ಪುತ್ತೂರು ತೆಂಕಿಲ ದರ್ಶನ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಜಿ.ಎಲ್‍.ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀ ಮದ್ಭಾಗವತ, ಗರುಡಪುರಾಣಗಳ ಕುರಿತು  ಭಾರತೀಯ ಆಧ್ಯಾತ್ಮದ ಕುರಿತು ಮುಂದಿನ ತಲೆಮಾರುಗಳಿಗೆ ತಿಳಿಯಪಡಿಸುವುದೇ ಸಪ್ತಾಹದ ಉದ್ದೇಶವಾಗಿದೆ. ಸನಾತನ

ಜೂ.1 ರಿಂದ 7 : ಪುತ್ತೂರಿನಲ್ಲಿ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ Read More »

ಮಾತೃಶ್ರೀ ಕ್ರಿಯೇಷನ್  ಅರ್ಪಿಸುವ  ವಿಭಿನ್ನ ಕಥಾಧಾರಿತ ಕಿರುಚಿತ್ರದ ಟ್ರೈಲರ್‌  ಬಿಡುಗಡೆ

ಪುತ್ತೂರು : ಮಾತೃಶ್ರೀ ಕ್ರಿಯೇಷನ್  ಅರ್ಪಿಸುವ  ಚಲನಚಿತ್ರ ನಟ ಆರ್ಯನ್ ಇವರ ಸಹಕಾರದಲ್ಲಿ ಅಶ್ವಥ್ ಎನ್ ಪುತ್ತೂರು  ಇವರ ಕಥೆ, ಚಿತ್ರಕಥೆ, ಸಂಭಾಷಣೆಯಲ್ಲಿ ಮೋಡಿಬಂದ ವಿಭಿನ್ನ ಕಥಾಧಾರಿತವಾದ  “ಅಸ್ಮಿತ” ಕಿರುಚಿತ್ರದ ಪೋಸ್ಟರನ್ನು ಅಭಿನಯ ಆರ್ಟ್ಸ್ ತಂಡದ  ನಿರ್ದೇಶಕರಾದ  ಜಿಲ್ಲಾ ಮತ್ತು ತಾಲೂಕು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಲಾಚತುರ   ಕೇಶವ ಮಚ್ಚಿಮಲೆ ಬಿಡುಗಡೆ ಮಾಡಿದ್ದು, ಇದೀಗ ಕನ್ನಡ, ತುಳು ತೆನ್ಕಾಯಿ ಮಲೆ ಸಿನಿಮಾದ ಖ್ಯಾತ ನಿರ್ದೇಶಕರಾದ ರವೀಚಂದ್ರ ಮುಂಡೂರು  ಟ್ರೈಲರನ್ನು  ಬಿಡುಗಡೆ ಮಾಡಿದ್ದಾರೆ. “ಅಸ್ಮಿತ” ಕಿರುಚಿತ್ರ ಟ್ರೈಲರ್‌ ಮೂಲಕ

ಮಾತೃಶ್ರೀ ಕ್ರಿಯೇಷನ್  ಅರ್ಪಿಸುವ  ವಿಭಿನ್ನ ಕಥಾಧಾರಿತ ಕಿರುಚಿತ್ರದ ಟ್ರೈಲರ್‌  ಬಿಡುಗಡೆ Read More »

ಹೊಸ ಅಡಿಕೆ ದರ ಏರಿಕೆಯಿಂದ ರೈತರಲ್ಲಿ ಹರ್ಷ |ಮಾರುಕಟ್ಟೆಯಲ್ಲಿ ಸಂಚಲನ

ಪುತ್ತೂರು: ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಧಾರಣೆ, ಅದರಲ್ಲೂ ವಿಶೇಷವಾಗಿ ಹೊಸ ಅಡಿಕೆಯ ದರವು ಮಾರುಕಟ್ಟೆಯಲ್ಲಿ ಕೆ.ಜಿ. ಒಂದಕ್ಕೆ 500 ರೂಪಾಯಿಗಳ ಗಡಿಯನ್ನು ದಾಟಿ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದೆ. ಈ ಅನಿರೀಕ್ಷಿತ ಬೆಳವಣಿಗೆಯು ಬೆಳೆಗಾರರಲ್ಲಿ ಹೊಸ ಭರವಸೆ ಮತ್ತು ಸಂಭ್ರಮವನ್ನು ಸೃಷ್ಟಿಸಿದೆ. ಅಡಿಕೆ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸುವ ಸುದ್ದಿ ಹೊರಬಿದ್ದಿದೆ. ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಧಾರಣೆ, ಅದರಲ್ಲೂ ವಿಶೇಷವಾಗಿ ಹೊಸ ಅಡಿಕೆಯ ದರವು ಮಾರುಕಟ್ಟೆಯಲ್ಲಿ ಕೆ.ಜಿ. ಒಂದಕ್ಕೆ 500 ರೂಪಾಯಿಗಳ ಗಡಿಯನ್ನು ದಾಟಿ ಐತಿಹಾಸಿಕ

ಹೊಸ ಅಡಿಕೆ ದರ ಏರಿಕೆಯಿಂದ ರೈತರಲ್ಲಿ ಹರ್ಷ |ಮಾರುಕಟ್ಟೆಯಲ್ಲಿ ಸಂಚಲನ Read More »

ನಿಂತಿದ್ದ ಕಾರಿನ ಮೇಲೆ ಬಿದ್ದ ಮರ | ಕಾರಿನಲ್ಲಿದ್ದ ಮೂವರು ಅಪಾಯದಿಂದ ಪಾರು

ಕಡಬ: ಕೊಯಿಲ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ಕಾರಿನ ಮೇಲೆ ಬಿದ್ದ ಘಟನೆ ಇಂದು ನಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಮೂರು ಮಂದಿ ಇದ್ದು, ಅಪಾಯದ ಅರಿವು ಆಗುತ್ತಿದ್ದಂತೆ ಕಾರಿನಿಂದ ಇಳಿದು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ನಿಂತಿದ್ದ ಕಾರಿನ ಮೇಲೆ ಬಿದ್ದ ಮರ | ಕಾರಿನಲ್ಲಿದ್ದ ಮೂವರು ಅಪಾಯದಿಂದ ಪಾರು Read More »

ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

ವೀರಮಂಗಲ  : ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆಯು ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ನಡೆಯಿತು. ದಿ.ರಾಮಚಂದ್ರ ಅರ್ಬಿತ್ತಾಯ ಸಂಸ್ಮರಣೆ ಹಾಗೂ ಸುಶ್ರಾವ್ಯ ಸ್ವರದ ಯಕ್ಷಗಾನ ಭಾಗವತರಾದ ಕು.ರಚನಾ ಚಿದ್ಗಲ್ ಇವರಿಗೆ  ಶ್ರವಣಸ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿಯಾಗಿದ್ದುಕೊಂಡು ಯಕ್ಷಗಾನದಲ್ಲಿ ಸಾಧನೆ ಮಾಡುತ್ತಿರುವ ಕಲಾವಿದರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಆ ಬಳಿಕ ನಡೆದ  ಜಾಂಬವತಿ‌ ಕಲ್ಯಾಣ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು. ಹಿಮ್ಮೇಳದ ಭಾಗವತರಾಗಿ ಆನಂದ ಸವಣೂರು,  ಕು.ರಚನಾ ಹಾಗೂ

ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ Read More »

error: Content is protected !!
Scroll to Top