ಪುತ್ತೂರು

ನಾಳೆ (ಫೆ.21) : ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ರಾಜ್ಯಾದ್ಯಂತ ತೆರೆಗೆ

ಪುತ್ತೂರು: ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ “ಭಾವ ತೀರ ಯಾನ” ಫೆ.21 (ನಾಳೆ) ರಾಜ್ಯಾದ್ಯಾಂತ ತೆರೆ ಕಾಣಲಿದೆ. ಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ್ದಾರೆ, ನವಿರಾದ ಪ್ರೇಮ ಪ್ರೀತಿಗಳ ಭಾವನೆಗಳ ತೀರದುದ್ದಕ್ಕೂ ಯಾನಕ್ಕೆ ಕರೆದೊಯ್ಯುವ ಸಿನಿಮಾ ಭಾವ ತೀರ ಯಾನ ಪುತ್ತೂರಿನ ಜಿಎಲ್‍ ಒನ್‍ ಮಾಲ್‍ ನಲ್ಲಿರುವ ಭಾರತ್ ಸಿನಿಮಾಸ್ – Screen 2 […]

ನಾಳೆ (ಫೆ.21) : ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ರಾಜ್ಯಾದ್ಯಂತ ತೆರೆಗೆ Read More »

ಬಿರುಮಲೆ ಬೆಟ್ಟದಲ್ಲಿ 5 ಲಕ್ಷ ರೂ. ವೆಚ್ಚದ ವೀಕ್ಷಣಾ ಗೋಪುರ ಲೋಕಾರ್ಪಣೆ

ಪುತ್ತೂರು: ಹಿರಿಯರಾಗಿರುವ ಅರಿಯಡ್ಕ ಚಿಕ್ಕಪ್ಪ ನಾಯಕ್ ಅವರ 91ನೇ ಹುಟ್ಟುಹಬ್ಬ, ಹಾಗೂ ಅವರ ನವತಿ ಸಂಭ್ರಮದ ಸವಿನೆನಪಿನ “ವೀಕ್ಷಣಾಗೋಪುರ ಲೋಕಾರ್ಪಣೆ “ಕಾರ್ಯಕ್ರಮ ಗುರುವಾರ ಬಿರುಮಲೆ ಬೆಟ್ಟದಲ್ಲಿ ನಡೆಯಿತು. ಪುತ್ತೂರಿನ ಹಿರಿಯ ಸಹೃದಯಿ ಸಾಮಾಜಿಕ ಕಳಕಳಿ ಹೊಂದಿರುವ ಈಗಾಗಲೇ ತೊಂಬತ್ತು ನವತಿ ಸಂಭ್ರಮ ಆಚರಿಸಿಕೊಂಡಿರುವ ಪುತ್ತೂರಿನ ಅರಿಯಡ್ಕ ಚಿಕ್ಕಪ್ಪ ನಾಯಕ್ ಅವರ ನವತಿ ಸಂಭ್ರಮದ ಅಂಗವಾಗಿ ಸುಮಾರು ಐದುಲಕ್ಷ ರೂ. ವೆಚ್ಚದ ವೀಕ್ಷಣಾ ಗೋಪುರವನ್ನು ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರು ಟೇಪ್ ಕತ್ತರಿಸಿ, ದೀಪ ಪ್ರಜ್ವಲನಗೊಳಿಸಿ ಲೋಕಾರ್ಪಣೆಗೊಳಿಸಿದರು. ಅವರ

ಬಿರುಮಲೆ ಬೆಟ್ಟದಲ್ಲಿ 5 ಲಕ್ಷ ರೂ. ವೆಚ್ಚದ ವೀಕ್ಷಣಾ ಗೋಪುರ ಲೋಕಾರ್ಪಣೆ Read More »

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ | ಪುರಸಭೆ ಮಾಜಿ ಅಧ್ಯಕ್ಷ ಯು.ಲೋಕೇಶ್‍ ಹೆಗ್ಡೆ ದಂಪತಿಗೆ ಸನ್ಮಾನ

ಪುತ್ತೂರು: ದೇಶದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿಯಿಂದ ಒಂದು ವರ್ಷಗಳ ಕಾಲ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಾಜಪೇಯಿಯವರು ಪುತ್ತೂರು ಭೇಟಿ ಕಾರ್ಯಕ್ರಮದಲ್ಲಿ ಭಾಗಹಿಸಿದವರಿಗೆ ಸನ್ಮಾನ ಕಾರ್ಯಕ್ರಮ ನಡೆಯುತ್ತಿದ್ದು, 1991 ರಲ್ಲಿ ಪುತ್ತೂರಿನಲ್ಲಿ ವಾಜಪೇಯಿ ಕಾರ್ಯಕ್ರಮದ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಾಜಿ ಪುರಸಭೆ ಅಧ್ಯಕ್ಷ ಯು. ಲೋಕೇಶ್ ಹೆಗ್ಡೆ ದಂಪತಿಯನ್ನು ಪುತ್ತೂರು ಬಿಜೆಪಿಯಿಂದ ಬುಧವಾರ ಉರ್ಲಾಂಡಿ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಮಾಜಿ ಪುರಸಭೆ ಅಧ್ಯಕ್ಷ ಯು. ಲೋಕೇಶ್ ಹೆಗ್ಡೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ | ಪುರಸಭೆ ಮಾಜಿ ಅಧ್ಯಕ್ಷ ಯು.ಲೋಕೇಶ್‍ ಹೆಗ್ಡೆ ದಂಪತಿಗೆ ಸನ್ಮಾನ Read More »

ಛತ್ರಪತಿ ಶಿವಾಜಿ, ಶ್ರೀ ಸಂತ ಕವಿ ಸರ್ವಜ್ಞರ ಕುರಿತು ಪ್ರಸ್ತುತ ಓದಿ ತಿಳಿದುಕೊಳ್ಳಬೇಕಾದ ಅಗತ್ಯವಿದೆ : ಸ್ಟೆಲ್ಲಾ ವರ್ಗೀಸ್ | ಛತ್ರಪತಿ ಶಿವಾಜಿ, ಶ್ರೀ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಕುಲಾಲ ಸಮಾಜ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಹಾಗೂ ಶ್ರೀ ಸಂತ ಕವಿ ಸರ್ವಜ್ವ ಜಯಂತಿ ಆಚರಣೆ ಪುತ್ತೂರು ಮಿನಿ ವಿಧಾನಸೌಧದದಲ್ಲಿರುವ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆಯಿತು. ದೀಪ ಪ್ರಜ್ವಲನೆ ಮಾಡಿ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಸಹಾಯ ಉಪವಿಭಾಗ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಮಾತನಾಡಿ, ದೇಶಕ್ಕೆ ಉತ್ತಮ ಸಂದೇಶ ನೀಡಿ, ಉತ್ತಮ ಆಡಳಿತ ನಡೆಸಿದ ಛತ್ರಪತಿ ಶಿವಾಜಿ ಹಾಗೂ ತನ್ನ

ಛತ್ರಪತಿ ಶಿವಾಜಿ, ಶ್ರೀ ಸಂತ ಕವಿ ಸರ್ವಜ್ಞರ ಕುರಿತು ಪ್ರಸ್ತುತ ಓದಿ ತಿಳಿದುಕೊಳ್ಳಬೇಕಾದ ಅಗತ್ಯವಿದೆ : ಸ್ಟೆಲ್ಲಾ ವರ್ಗೀಸ್ | ಛತ್ರಪತಿ ಶಿವಾಜಿ, ಶ್ರೀ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ Read More »

ಲಾರಿ – ರಿಕ್ಷಾ ನಡುವೆ ಅಪಘಾತ  | ಮೂವರು ಮಹಿಳೆಯರಿಗೆ ಗಂಭೀರ ಗಾಯ

ಪುತ್ತೂರು: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗದ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ನಡೆದಿದ್ದು, ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯರನ್ನು ಸರೋಜಿನಿ, ವೇದಾವತಿ ಹಾಗೂ ಮಾಲತಿ ಎನ್ನಲಾಗಿದೆ. ಸರ್ವೆ ಕಡೆಗೆ ಹೋಗುತ್ತಿದ್ದ ಲಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ. ಅವಿನಾಶ್ ಎಂಬವರ ರಿಕ್ಷಾದಲ್ಲಿ ಮೂವರು ಮಹಿಳೆಯರು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಪುತ್ತೂರು

ಲಾರಿ – ರಿಕ್ಷಾ ನಡುವೆ ಅಪಘಾತ  | ಮೂವರು ಮಹಿಳೆಯರಿಗೆ ಗಂಭೀರ ಗಾಯ Read More »

ಪುತ್ತೂರು (ಫೆ. 26):  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜ್ರಂಭನೆಯ ಮಹಾಶಿವರಾತ್ರಿ ಉತ್ಸವ

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಫೆ.26ರಂದು ರಾತ್ರಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಹಾಶಿವರಾತ್ರಿ ಉತ್ಸವದ ವಿಶೇಷವಾಗಿ ಬೆಳಗ್ಗೆ 7:30ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ಗಂಟೆಗೆ ಶತರುದ್ರಾಭಿಷೇಕ, ಬಿಲ್ವಾರ್ಚನೆ ಸೇವೆ ಹಾಗೂ ಭಜನಾ ಕಾರ್ಯಕ್ರಮ ನೆರವೇರಲಿದೆ.  ಬಳಿಕ ಸಂಜೆ 7:30ಕ್ಕೆ ಮಹಾಶಿವರಾತ್ರಿ ಉತ್ಸವ ಜರುಗಲಿದೆ. ಭಕ್ತರು ಹೆಚ್ಚಿನ ಸಂಖೆಯಲ್ಲಿ ಉತ್ಸವದಲ್ಲಿ ಭಾಗವಹಿಸಿ ಎಂದು ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್‍ ಪಂಜಿಗುಡ್ಡೆ  ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪುತ್ತೂರು (ಫೆ. 26):  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜ್ರಂಭನೆಯ ಮಹಾಶಿವರಾತ್ರಿ ಉತ್ಸವ Read More »

ಮಾ.11 : ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್

ಪುತ್ತೂರು : ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ಮಾ.11 ರಂದು ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ  ನಡೆಯಲಿದೆ. ಅದಾಲತ್ತಿನಲ್ಲಿ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ, ಮೂಡಬಿದ್ರೆ, ಬೆಳ್ತಂಗಡಿ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗೆ ಸಂಬಂಧಪಟ್ಟ  ಎಲ್ಲಾ ರೀತಿಯ ಸಾರ್ವಜನಿಕ ಕುಂದು ಕೊರತೆಗಳನ್ನು, ತಕರಾರುಗಳನ್ನು  ಪರಿಶೀಲಿಸಲಾಗುವುದು.  ಸಾರ್ವಜನಿಕರು ಪುತ್ತೂರು ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು   ಪತ್ರಮುಖೇನ, ಅಂಚೆ ಅದಾಲತ್ ತಲೆಬರಹದಡಿ ಮಾ.7 ರೊಳಗೆ ಹಿರಿಯ ಅಂಚೆ  ಅಧೀಕ್ಷಕರು, ಪುತ್ತೂರು ವಿಭಾಗ,

ಮಾ.11 : ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ Read More »

ಕಾರು ಅಪಘಾತ | ಮೂವರಿಗೆ ಗಾಯ

ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಪೋಳ್ಯ ಸಮೀಪದ ಪುಳಿತ್ತಡಿಯಲ್ಲಿ  ನಡೆದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ರೆಮ್ಮಾಯಿ ಸಮೀಪದ ನಿವಾಸಿಗಳಿದ್ದ ಕಾರು ಹಾಗೂ ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನ ಮಧ್ಯೆ ಈ ಅಪಘಾತ ಸಂಭವಿಸಿದೆ. ಮದುವೆಗೆ ತೆರಳುತ್ತಿದ್ದ ಕಾರಿನ ಮುಂಭಾಗದಲ್ಲಿ ಹೂವಿನ ಬೊಕ್ಕೆಯಿಂದ ಅಲಂಕಾರ ಮಾಡಿದ್ದು, ಗಾಳಿಗೆ ಹೂವಿನ ಬೊಕ್ಕೆ ಚಾಲಕನ ಸೈಡಿನ ಗಾಜಿಗೆ ಬಡಿದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ

ಕಾರು ಅಪಘಾತ | ಮೂವರಿಗೆ ಗಾಯ Read More »

ಮಾಜಿ ಪ್ರಧಾನಿ ಅಟಲ್‍ ಬಿಹಾರಿ ವಾಜಪೇಯಿ ಜನ್ಮ ಶತಾಬ್ಧಿ | ಬಿಜೆಪಿಯಿಂದ ಜಿ.ಎಲ್‍.ಬಲರಾಮ ಆಚಾರ್ಯ, ಡಾ.ಎಂ.ಕೆ.ಪ್ರಸಾದ್, ಮುರಳೀಧರ ಅವರ ಮನೆಗೆ ತೆರಳಿ ಸನ್ಮಾನ

ಪುತ್ತೂರು: ದೇಶದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿಯಿಂದ ಒಂದು ವರ್ಷಗಳ ಕಾಲ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಂದು ವಾಜಪೇಯಿಯವರು ಪುತ್ತೂರಿನಲ್ಲಿ ಹಲವು ಮನೆಗಳಿಗೆ ಭೇಟಿ ನೀಡಿದ ಮತ್ತು ವಾಜಪೇಯಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಮನೆಗೆ ತೆರಳಿ ಮನೆ ಮಂದಿಯನ್ನು ಸನ್ಮಾನಿಸುವ ವಿಶೇಷ ಕಾರ್ಯಕ್ರಮಕ್ಕೆ ನಡೆಯುತ್ತಿದೆ. 1991 ರಲ್ಲಿ ಪುತ್ತೂರಿನಲ್ಲಿ ವಾಜಪೇಯಿ ಬಂದಾಗ ಅವರನ್ನು ಜಿ.ಎಲ್.ಕಾಂಪ್ಲೆಕ್ಸ್‌ನಲ್ಲಿ ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದ ಜಿ.ಎಲ್.ಬಲರಾಮ ಅಚಾರ್ಯ ಅವರನ್ನು ಅವರ ಕೊಂಬೆಟ್ಟು ನಿವಾಸದಲ್ಲಿ,

ಮಾಜಿ ಪ್ರಧಾನಿ ಅಟಲ್‍ ಬಿಹಾರಿ ವಾಜಪೇಯಿ ಜನ್ಮ ಶತಾಬ್ಧಿ | ಬಿಜೆಪಿಯಿಂದ ಜಿ.ಎಲ್‍.ಬಲರಾಮ ಆಚಾರ್ಯ, ಡಾ.ಎಂ.ಕೆ.ಪ್ರಸಾದ್, ಮುರಳೀಧರ ಅವರ ಮನೆಗೆ ತೆರಳಿ ಸನ್ಮಾನ Read More »

ಅಂಬಿಕಾ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜರಿಗೆ ಮಾತೃವಿಯೋಗ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅವರ ಮಾತೃಶ್ರೀ ಸುಶೀಲಾ ಶಿವಾನಂದ ರಾವ್ (86) ಸೋಮವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತೀರಾ ಇತ್ತೀಚೆಗಿನವರೆಗೂ ಆರೋಗ್ಯವಾಗಿದ್ದ ಅವರು ಕಳೆದ ಕೆಲ ದಿನಗಳಿಂದ ಅಸೌಖ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪುತ್ರ, ಸೊಸೆ, ನಾಲ್ವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಅಂಬಿಕಾ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜರಿಗೆ ಮಾತೃವಿಯೋಗ Read More »

error: Content is protected !!
Scroll to Top