ಪುತ್ತೂರು

ಇಂದು ಮುಳಿಯದಲ್ಲಿ “ಪುದರ್ ದೀತಿಜಿ” ತುಳು ಹಾಸ್ಯ ನಾಟಕ

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಇಂದು (ಮೇ 9) ರಂದು ಮುಳಿಯ ಆವರಣದಲ್ಲಿ  ಖ್ಯಾತ ಹಾಸ್ಯ ನಟರಿಂದ “ಪುದರ್ ದೀತಿಜಿ” ನಾಟಕ ಪ್ರದರ್ಶನ ನಡೆಯಲಿದೆ. ಸಂಜೆ 6 ಗಂಟೆಗೆ ಸರಿಯಾಗಿ ಆರಂಭವಾಗುವ ಈ ನಾಟಕದಲ್ಲಿ ಜನಪ್ರಿಯ ತುಳು ಹಾಸ್ಯ ನಟರು ಜನರನ್ನು ರಂಜಿಸಲಿದ್ದಾರೆ. ನಾಟಕ ಪ್ರಿಯರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವ ನಿರೀಕ್ಷೆ ಇದೆ.  ನಾಟಕ ಮುಗಿದ ನಂತರ ಭೋಜನದ ವ್ಯವಸ್ಥೆ ಇರಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇಂದು ಮುಳಿಯದಲ್ಲಿ “ಪುದರ್ ದೀತಿಜಿ” ತುಳು ಹಾಸ್ಯ ನಾಟಕ Read More »

ಆಪರೇಷನ್‍ ಸಿಂಧೂರ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಪ್ರಾರ್ಥನೆ

ಪುತ್ತೂರು : ಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಹಿಂದೂಗಳ ಹತ್ಯೆಗೆ ಪ್ರತಿಕಾರವಾಗಿ ನಡೆದ “ಆಪರೇಷನ್ ಸಿಂಧೂರ” ಕಾರ್ಯಾಚರಣೆ ಹಿನ್ನಲೆಯಲ್ಲಿ ಭಾರತೀಯ ಸೇನೆಗೆ ಒಳಿತಾಗಲಿ ಹಾಗೂ ಸೇನೆಗೆ ಮತ್ತಷ್ಟು ಶಕ್ತಿ ತುಂಬುವಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಮುಜಿರಾಯಿ ಸಚಿವರ ಸೂಚನೆಯಂತೆ ವಿಶೇಷ ಪ್ರಾರ್ಥನೆ ಹಾಗೂ ಸಂಕಲ್ಪ ಪೂಜೆ ಗುರುವಾರ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ವೇ. ಮೂ. ವಸಂತ ಕದಿಲಾಯ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ

ಆಪರೇಷನ್‍ ಸಿಂಧೂರ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಪ್ರಾರ್ಥನೆ Read More »

ವಿಭಾಗ ಮಟ್ಟದ ಅಂತರ್ ಕಾಲೇಜು ಹಾಕಿ ಪಂದ್ಯಾಟ : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಚಾಂಪಿಯನ್ ಶಿಪ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಹಾಕಿ ತಂಡ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ ಕಾಲೇಜು ಹಾಕಿ ಪಂದ್ಯಾಟದಲ್ಲಿ ಚಾಂಪಿಯನ್ ಪಡೆದುಕೊಂಡಿದೆ. ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಮಂಗಳೂರು ವಿಭಾಗ ಮಟ್ಟದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು  ಪಾಲ್ಗೊಂಡಿದ್ದವು. ಈ ವಿಜಯದೊಂದಿಗೆ ಕಾಲೇಜಿನ ತಂಡವು ಮೇ ೧೫ ರಿಂದ ೧೭ರ ವರೆಗೆ ಬಳ್ಳಾರಿಯ ಬಿಐಟಿಎಂ ನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪಧೆಯಲ್ಲಿ

ವಿಭಾಗ ಮಟ್ಟದ ಅಂತರ್ ಕಾಲೇಜು ಹಾಕಿ ಪಂದ್ಯಾಟ : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಚಾಂಪಿಯನ್ ಶಿಪ್ Read More »

ಸಿಂಧೂರ ಆಪರೇಷನ್ : ಪುತ್ತೂರು ಬಿಜೆಪಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು: ಕಾಶ್ಮೀರದಲ್ಲಿ ಪಹಲ್ಗಾಮದಲ್ಲಿ ಹಿಂದೂಗಳ ಹತ್ಯೆ ಮಾಡಿದ್ದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿದ ಸಿಂಧೂರ ಆಪರೇಷನ್‍ ಹಾಗೂ ಮುಂದಿನ ದಿನಗಳಲ್ಲಿ ಭಾರತೀಯ ಸೇನೆಗೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ಪುತ್ತೂರು ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್‍.ಭಟ್ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸನ್ನ

ಸಿಂಧೂರ ಆಪರೇಷನ್ : ಪುತ್ತೂರು ಬಿಜೆಪಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ಮೇ 11 : ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ

ಪುತ್ತೂರು: ಇಲ್ಲಿಯ ಕಿಲ್ಲೇ ಮೈದಾನ ರಸ್ತೆಯಲ್ಲಿರುವ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ ಮೇ 11 ರಂದು ಬೆಳಿಗ್ಗೆ 8.26 ರ ಶುಭಮುಹೂರ್ತದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮುರಳಿಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 800 ವರ್ಷಗಳ ಇತಿಹಾಸವಿರುವ ಶ್ರೀ ದೇವಸ್ಥಾನದಲ್ಲಿ ಅರಾಧ್ಯ ದೇವಿಯಾದ ಹತ್ತೂರಿಗೆ ಸಂಬಂಧಪಟ್ಟ ಪದ್ಮಾವತಿ ಎಂಬ ಖ್ಯಾತಿಯ ಪನ್ನಗ ಕನ್ನಿಕಾದೇವಿಯನ್ನು ಪ್ರತಿಷ್ಠಾಪಿಸಿ ಆರಾಧನೆ ಮಾಡಿಕೊಂಡು ಬಂದಿದ್ದರು. ಬಳಿಕ ದಿನಗಳಲ್ಲಿ ದೇವಸ್ಥಾನ

ಮೇ 11 : ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ Read More »

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ | ವ್ಯಕ್ತಿಯೋರ್ವನಿಗೆ ಗಂಭೀರ ಗಾಯ

ಪುತ್ತೂರು : ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾದ ಘಟನೆ ನಿನ್ನೆ ಬೊಳ್ವಾರಿನಲ್ಲಿ ನಡೆದಿದೆ. ಘಟನೆ ಪರಿಣಾಮ ಆಕ್ಟಿವಾ ಮತ್ತು ಡಿಯೋ ವಾಹನಕ್ಕೆ ಹಾನಿಯಾಗಿದ್ದು ಅಕ್ಟಿವಾ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ | ವ್ಯಕ್ತಿಯೋರ್ವನಿಗೆ ಗಂಭೀರ ಗಾಯ Read More »

ಅಶೋಕ್‌ ಕುಮಾರ್‌ ಸೊರಕೆ ಹೃದಯಾಘಾತದಿಂದ ನಿಧನ

ಪುತ್ತೂರು: ಅಶೋಕ್‌ ಕುಮಾರ್‌ ಸೊರಕೆ (73)  ಇಂದು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ. ಸೊರಕೆ ಅಚ್ಚುತ ಪೂಜಾರಿ ಮತ್ತು ದಿ.ಸುನೀತಿ ದಂಪತಿಯ ಹಿರಿಯ ಪುತ್ರನಾಗಿರುವ ಅಶೋಕ್‌ ಕುಮಾರ್‌ ಸೊರಕೆ, ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಮತ್ತು ಮುಂಡೂರು ಸಿ ಎ ಬ್ಯಾಂಕ್ ಅಧ್ಯಕ್ಷರಾಗಿರುವ ಸುರೇಶ್‌ ಕುಮಾರ್‌ ಸೊರಕೆ, ಶರತ್‌ ಮತ್ತು ಶಶಿಕಲಾ ಅವರ ಸಹೋದರರಾಗಿದ್ದಾರೆ. ಹಲವು ವರ್ಷಗಳ ಕಾಲ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಅಶೋಕ್‌ ಕುಮಾರ್‌ ಸೊರಕೆ ನಿವೃತ್ತಿ ಬಳಿಕ ಸೊರಕೆಯಲ್ಲಿ ನೆಲೆಸಿದ್ದರು ಮೃತರು ಪತ್ನಿ,

ಅಶೋಕ್‌ ಕುಮಾರ್‌ ಸೊರಕೆ ಹೃದಯಾಘಾತದಿಂದ ನಿಧನ Read More »

ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣ, ಕುಂಕುಮಾರ್ಚನೆ

ಪುತ್ತೂರು: :ಮುಳಿಯ  ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆ ತನ್ನ ನವೀಕೃತ, ನೂತನ ಹಾಗೂ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಏಪ್ರಿಲ್ 20 ರಿಂದ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದು, ಅದರ ಭಾಗವಾಗಿ ಮಂಗಳವಾರ ಪುತ್ತೂರು ಮುಳಿಯದಲ್ಲಿ  ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಕುಂಕುಮಾರ್ಚನೆಯ ಪುಣ್ಯ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ಉದಯ ಭಟ್ ಅವರ ವೇದಪಾರಂಗತದೊಂದಿಗೆ ನೆರವೇರಿತು.  ಸತತವಾಗಿ  3 ವರ್ಷಗಳಿಂದ  ಮಾತಾಭಗಿನಿಯರಿಗೆ ಲಲಿತಾ ಸಹಸ್ರನಾಮ  ಹೇಳಿಕೊಟ್ಟ  ನೆಲೆಯಲ್ಲಿ 

ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣ, ಕುಂಕುಮಾರ್ಚನೆ Read More »

ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ. ನಿಧನ

ಪುತ್ತೂರು: ಏಳ್ಮುಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ (56)ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ. 07 ರಂದು ನಿಧನರಾದರು. ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, ಮಗಳು, ಅಳಿಯ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ

ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ. ನಿಧನ Read More »

ಮರ ಬಿದ್ದು ತಂತಿಗೆ  ಹಾನಿ | ಅದೃಷ್ಟವಶಾತ್ ವಾಹನ ಅಪಾಯದಿಂದ ಪಾರು

ಪುತ್ತೂರು: ಮರ ಬಿದ್ದು ವಿದ್ಯುತ್ ತಂತಿಗೆ ಗೆ ಹಾನಿಯಾದ ಘಟನೆ ಪುತ್ತೂರಿನ ಕಲ್ಲರ್ಪೆ ಬಳಿ ನಡೆದಿದೆ. ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ವಾಹನವೊಂದು ಕೂದಲೆಲೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ.

ಮರ ಬಿದ್ದು ತಂತಿಗೆ  ಹಾನಿ | ಅದೃಷ್ಟವಶಾತ್ ವಾಹನ ಅಪಾಯದಿಂದ ಪಾರು Read More »

error: Content is protected !!
Scroll to Top