ಪುತ್ತೂರು

ಮಗು ಕರುಣಿಸಿದ ಪ್ರಕರಣ : ಜೀವನಾಂಶ ನೀಡದೆ ಕೋರ್ಟ್‌ ಆದೇಶ ಉಲ್ಲಂಘನೆ

ಈ ತಿಂಗಳಿಂದ ಜೀವನಾಂಶ ಪಾವತಿಯಾಗಬೇಕಿತ್ತು ಎಂದ ವಿಶ್ವಕರ್ಮ ಮಹಾಸಭಾ ಪುತ್ತೂರು: ಕಾಲೇಜು ಸ್ನೇಹಿತೆಗೆ ಮಗು ಕರುಣಿಸಿದ ಪ್ರಕರಣದಲ್ಲಿ ಆರೋಪಿ ಹೈಕೋರ್ಟ್‌ ನೀಡಿದ ಆದೇಶದಂತೆ 75 ಸಾವಿರ ರೂ. ಜೀವನಾಂಶ ನೀಡಿಲ್ಲ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಆರೋಪಿಸಿದೆ. ಆರೋಪಿ ಕೃಷ್ಣ ಜೆ.ರಾವ್‌ಗೆ ಹೈಕೋರ್ಟ್‌ ಅಂತಿಮ ತೀರ್ಪು ಹೊರಬೀಳುವ ತನಕ ಸಂತ್ರಸ್ತ ಯುವತಿಗೆ ಪ್ರತಿ ತಿಂಗಳು 75 ಸಾವಿರ ರೂ ಜೀವನಾಂಶ ನೀಡಬೇಕೆಂದು ಆದೇಶಿಸಿತ್ತು. ಮೇ 1ರಂದು ಈ ತಿಂಗಳ ಜೀವನಾಂಶ ನೀಡಬೇಕಿತ್ತು. ಆದರೆ ಇನ್ನೂ ಯುವತಿಗೆ […]

ಮಗು ಕರುಣಿಸಿದ ಪ್ರಕರಣ : ಜೀವನಾಂಶ ನೀಡದೆ ಕೋರ್ಟ್‌ ಆದೇಶ ಉಲ್ಲಂಘನೆ Read More »

ಮಹಾಭಾರತ ಸರಣಿಯ 114ನೇ ತಾಳಮದ್ದಳೆ ವಿಷಮ ದಾಂಪತ್ಯ

ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ರಿ. ಉಪ್ಪಿನಂಗಡಿ ನಡೆಸುತ್ತಿರುವ ಶ್ರೀ ಮಹಾಭಾರತ ಸರಣಿಯ 114ನೇ ಕಾರ್ಯಕ್ರಮದಲ್ಲಿ ಡಾ. ಶೇಣಿ ಗೋಪಾಲಕೃಷ್ಣ ಭಟ್ ರಚಿತ ವಿಷಮ ದಾಂಪತ್ಯ ತಾಳಮದ್ದಳೆ ಜರಗಿತು. ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ್ ರಾವ್ .ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಅರ್ಥಧಾರಿಗಳಾಗಿ ಭಾಸ್ಕರ ಬಾರ್ಯ (ಉದ್ದಾಲಕ 1) ಶ್ರೀಧರ ಎಸ್. ಪಿ ಕೃಷ್ಣಾಪುರ (ಉದ್ದಾಲಕ 2) ದಿವಾಕರ ಆಚಾರ್ಯ ಗೇರುಕಟ್ಟೆ( ಚಂಡಿ 1) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಚಂಡಿ 2) ಬಿ. ಸುಬ್ರಹ್ಮಣ್ಯ

ಮಹಾಭಾರತ ಸರಣಿಯ 114ನೇ ತಾಳಮದ್ದಳೆ ವಿಷಮ ದಾಂಪತ್ಯ Read More »

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ

ತಲೆಮಾರಿನ ನಂಬಿಕೆಗೆ ಪಾತ್ರವಾದ ಪ್ರತಿಷ್ಠಿತ ಸಂಸ್ಥೆಯ ಹಿರಿಮೆಗೆ ಮತ್ತೊಂದು ಗರಿ ಪುತ್ತೂರು: ಹೈದರಾಬಾದ್‌ನಲ್ಲಿ ಮೇ 8, 9, 10ರಂದು ನಡೆದ ‘ಪವರ್ ಆಫ್ ಯಂಗ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್ (HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ ಮಾರ್ಕೆಟ್ಸ್ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಭರಣ ಕ್ಷೇತ್ರದಲ್ಲಿ

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರಿಯ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯಗೆ ‘ಪವರ್ ಆಫ್ ಯಂಗ್’ ಗೌರವ Read More »

ಹಿರಿಯರ ಸೇವಾ ಪ್ರತಿಷ್ಠಾನದಿಂದ ಸ್ವಾರ್ಥ ರಹಿತ ಸೇವೆ: ಬಿ ವಿಠಲ ರೈ

ಹಿರಿಯರ ಸೇವಾ ಪ್ರತಿಷ್ಠಾನದ ಮೂಲಕ ನಡೆಸುತ್ತಿರುವ ಸೇವಾ ಕಾರ್ಯಗಳು ವಿಶೇಷ ಮೌಲ್ಯವನ್ನು ಹೊಂದಿದೆ. ಸ್ವಾರ್ಥ ರಹಿತವಾದ ಈ ಸೇವಾ ಕಾರ್ಯಗಳನ್ನು ಎಲ್ಲರೂ ಬೆಂಬಲಿಸಬೇಕೆಂದು ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಬಿ .ವಿಠಲ ರೈ ತಿಳಿಸಿದರು. ಬೆಂದ್ರುತೀರ್ಥ ಕ್ಷೇತ್ರದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ.ರಿ ಮೆಲ್ಕಾರ್ ಇದರ ಕೇಂದ್ರೀಯ ಸಮಿತಿಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಶಿವಾಜಿ ಯುವ ಸೇನೆ ರಿ. ಗೌರವಾಧ್ಯಕ್ಷರಾದ ಚಂದ್ರಹಾಸ ಮೂರೂರು ಬೆಂದ್ರುತೀರ್ಥದ ಇತಿಹಾಸದ ಬಗ್ಗೆ ಮಾಹಿತಿ ನೀಡಿ

ಹಿರಿಯರ ಸೇವಾ ಪ್ರತಿಷ್ಠಾನದಿಂದ ಸ್ವಾರ್ಥ ರಹಿತ ಸೇವೆ: ಬಿ ವಿಠಲ ರೈ Read More »

ಖಾಸಗಿ ಬಸ್ಸಿಗೆ ‌ರಿಕ್ಷಾ ಅಡ್ಡ ಇರಿಸಿ ಚಾಲಕನ ಮೇಲೆ ಹಲ್ಲೆ: ದೂರು ದಾಖಲು

ಪುತ್ತೂರು: ವಿವಾಹದ ದಿಬ್ಬಣ ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಬಸ್ಸಿಗೆ ರಿಕ್ಷಾ ಅಡ್ಡವಿರಿಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಧುರ ಎಂಬಲ್ಲಿ ಮೇ 6 ರಂದು ನಡೆದಿದೆ. ಹಲ್ಲೆಗೊಳಗಾದ ಚಾಲಕನನ್ನು ಸಾಮೆತ್ತಡ್ಕದ ರಾಕೇಶ್ ಡಿ’ಸೋಜಾ ಎಂದು ಗುರುತಿಸಲಾಗಿದೆ. ಈ ಬಗ್ಗೆ ದೂರು ನೀಡಿರುವ ರಾಕೇಶ್, ವಿಟ್ಲದಿಂದ ಮಡಿಕೇರಿಗೆ ಮದುವೆ ದಿಬ್ಬಣವನ್ನು ಬಸ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಉರಿಮಜಲು ಸಮೀಪ ಬಸ್‌ನ ಎದುರಿನಿಂದ ಆಟೋ ರಿಕ್ಷಾವೊಂದು ಹೋಗುತ್ತಿದ್ದು, ಅದರ ಚಾಲಕನು ಒಮ್ಮೆಲೇ ಬ್ರೇಕ್ ಹಾಕಿ ನಿಲ್ಲಿಸಿ ಜನರನ್ನು ತುಂಬಿಸುತ್ತಿದ್ದ

ಖಾಸಗಿ ಬಸ್ಸಿಗೆ ‌ರಿಕ್ಷಾ ಅಡ್ಡ ಇರಿಸಿ ಚಾಲಕನ ಮೇಲೆ ಹಲ್ಲೆ: ದೂರು ದಾಖಲು Read More »

ಅಕ್ರಮ ಮರಳು ದಾಸ್ತಾನು ಪತ್ತೆ: ಪ್ರಕರಣ ದಾಖಲು

ಉಪ್ಪಿನಂಗಡಿ: ಬೆಳ್ತಂಗಡಿಯ ‌ಕರಾಯ ಎಂಬಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳನ್ನು ಉಪ್ಪಿನಂಗಡಿ ‌ಪೊಲೀಸರು ಪತ್ತೆ ಮಾಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹುಸೇನ್ ಎಂಬವರಿಗೆ ‌ಸೇರಿದ ಜಾಗದಲ್ಲಿ ಮರಳು ಅಕ್ರಮ ದಾಸ್ತಾನು ಇರಿಸಲಾಗಿತ್ತು. ಉಪ್ಪಿನಂಗಡಿ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಕುಪ್ಪೆಟ್ಟಿ ಹೊಳೆಯಿಂದ ಅಕ್ರಮವಾಗಿ ಸುಮಾರು ಎರಡು ಟನ್‌ಗಳಷ್ಟು ಮರಳು ಸಂಗ್ರಹಿಸಿ ಇಡಲಾಗಿತ್ತು. ಮರಳನ್ನು ವಶಕ್ಕೆ ಪಡೆದಿರುವ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಅಕ್ರಮ ಮರಳು ದಾಸ್ತಾನು ಪತ್ತೆ: ಪ್ರಕರಣ ದಾಖಲು Read More »

ಮನೆಯೊಂದರಲ್ಲಿ ಹಿಂದೂಗಳ ಮತಾಂತರಕ್ಕೆ ಯತ್ನ: ದೂರು ದಾಖಲು

ಕಡಬ: ಹಿಂದೂ ಮಹಿಳೆಯರು, ಪುರುಷರು ಮತ್ತು ಮಕ್ಕಳನ್ನು ಮನೆಯಲ್ಲಿ ಕೂಡಿ ಹಾಕಿ ಮತಾಂತರದ ‌ಪ್ರಯತ್ನ ನಡೆಸಲಾಗುತ್ತಿದೆ ಎಂದು ಹಿಂದೂ ಸಂಘಟನೆಗಳು ನೀಡಿದ ಮಾಹಿತಿಯ ಅನ್ವಯ ಐತ್ತೂರಿನ ಮನೆಯೊಂದರ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಐತ್ತೂರಿನ ಜೋಸೆಫ್ ಎಂಬಾತನ ಮನೆಯಲ್ಲಿ ಬೆಂಗಳೂರು ಮೂಲದ ಸುಮಾರು 15 ಕ್ಕೂ ಅಧಿಕ ಜನ‌ ಮಹಿಳೆಯರು, ಪುರುಷರು ಮತ್ತು ಮಕ್ಕಳು ತಂದಿರುವ ಸಂಗತಿ ಪೊಲೀಸ್ ದಾಳಿಯ ವೇಳೆ ಬಯಲಾಗಿದೆ. ಜೋಸೆಫ್ ಮನೆಯಲ್ಲಿ ಮತಾಂತರ ಮತ್ತು ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಹಿಂದೂ

ಮನೆಯೊಂದರಲ್ಲಿ ಹಿಂದೂಗಳ ಮತಾಂತರಕ್ಕೆ ಯತ್ನ: ದೂರು ದಾಖಲು Read More »

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶರೀಫ್ ಬಂಟ್ವಾಳ ಪೊಲೀಸರ ಬಲೆಗೆ

ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ಬಂಟ್ವಾಳ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೊಬ್ಬ ಹಲವು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಸದ್ಯ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದುನಿಯಾ ಶರೀಫ್ ಅಲಿಯಾಸ್ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತ ಬಂಟ್ವಾಳದ ಕರಿಯಂಗಳ ನಿವಾಸಿ. ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ‌ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಈಗ ಆರೋಪಿ ಭಾರತಕ್ಕೆ ಹಿಂದಿರುಗಿದ್ದು, ಆತನ ಬರುವಿಕೆಯ ಮಾಹಿತಿ ಪಡೆದ ಪೊಲೀಸರು ಮುಂಬೈ ಸಹರಾ ಠಾಣಾ ಪೊಲೀಸರ ನೆರವಿನ ಜೊತೆಗೆ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶರೀಫ್ ಬಂಟ್ವಾಳ ಪೊಲೀಸರ ಬಲೆಗೆ Read More »

ಗೇರುಕಟ್ಟೆಯಲ್ಲಿ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ಗೇರುಕಟ್ಟೆ: ಕೀರ್ತಿಶೇಷ ಆರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದ ಸಹಯೋಗದಿಂದಎಂ. ವಿ. ಪ್ರತಿಷ್ಠಾನ ಗೇರುಕಟ್ಟೆ ಆಯೋಜಿಸಿದ ಭಾರವಿ ಬೇಸಿಗೆ ಶಿಬಿರದ ಸಮಾರೋಪವು ಸಂಚಾಲಕ ದಿವಾಕರ ಆಚಾರ್ಯ ಗೇರುಕಟ್ಟೆ ಅಧ್ಯಕ್ಷತೆಯಲ್ಲಿ ಜರಗಿತು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿ ಸುಮಾರು 37 ವರ್ಷಗಳ ಕಾಲ ಕಾರ್ಯ ನಿರ್ವಹಿಸಿ ಎ. 30 ರಂದು ನಿವೃತ್ತರಾದ ಗುಣರತ್ನ ಆಚಾರ್ಯ ಕಾವೂರು ಇವರನ್ನು ಗೌರವಿಸಲಾಯಿತು. ಮುಖ್ಯಅತಿಥಿ ಯೋಗಪಟು ಸತೀಶ್ ಭಂಡಾರಿ ಶಿಬಿರದಲ್ಲಿ ನಡೆಸಲಾದ ವಿವಿಧ ಚಟುವಟಿಕೆ ವಿಭಿನ್ನವಾಗಿದ್ದು ಉಪಯುಕ್ತವಾಗಿದೆ

ಗೇರುಕಟ್ಟೆಯಲ್ಲಿ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ Read More »

ಅಕ್ರಮವಾಗಿ 4 ಜಾನುವಾರುಗಳ ಸಾಗಾಟ: ಇಬ್ಬರು ಆರೋಪಿಗಳ ಬಂಧನ

ಹಿರಿಯಡ್ಕ: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ‌ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಪಕ್ಕಾಲು ಹೆಬ್ಬಾರು ಸೇತುವೆ ಬಳಿಯಲ್ಲಿ ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುರ್ಕಾಲುವಿನ ‌ಸುಹಾಸ್(21) ಮತ್ತು ಕಾಪು ಭರತ್ ನಗರದ ಲವ ಶೆಟ್ಟಿ(64) ಎಂದು ಗುರುತಿಸಲಾಗಿದೆ. ಆರೋಪಿಗಳು ಜಾನುವಾರುಗಳನ್ನು ಮಾಂಸ ಮಾಡುವ ಉದ್ದೇಶದಿಂದ ಕಸಾಯಿಖಾನೆಗೆ ಸಾಗಿಸುತ್ತಿದ್ದರು. ಪೆರ್ಡೂರು ಕಡೆಯಿಂದ ಹಿರಿಯಡ್ಕದತ್ತ ನಾಲ್ಕು ದನಗಳನ್ನು ಪಾಪಿಗಳು ಬೊಲೆರೋ ಗೂಡ್ಸ್ ‌ಟೆಂಪೋದಲ್ಲಿ ಸಾಗಾಟ ಮಾಡುತ್ತಿದ್ದರು. ಈ ವಾಹನ ಪಕ್ಕಾಲು ‌ಹೆಬ್ಬಾರು ಸೇತುವೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಆರೋಪಿಗಳಿಬ್ಬರನ್ನು

ಅಕ್ರಮವಾಗಿ 4 ಜಾನುವಾರುಗಳ ಸಾಗಾಟ: ಇಬ್ಬರು ಆರೋಪಿಗಳ ಬಂಧನ Read More »

error: Content is protected !!
Scroll to Top