ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ’ರಿಸರ್ಚ್ ಇನ್ಫೋರ್ಮೇಟಿಕ್ಸ್: ಸಂಶೋಧನಾ ವಿಧಾನಕ್ರಮ, ಸಂಶೋಧನಾ ಬರಹ’ ಕಾರ್ಯಗಾರ

ಪುತ್ತೂರು: ’ರಿಸರ್ಚ್‌ ಇನ್ಫೋರ್ಮೇಟಿಕ್ಸ್ :  ಸಂಶೊಧನಾ ವಿಧಾನಶಾಸ್ತ್ರ ಮತ್ತು ಸಂಶೋಧನಾ ಬರಹ’ ವಿಷಯದಲ್ಲಿ ಒಂದು ದಿವಸದ ಕಾರ್ಯಗಾರವ ಸಂತ ಫಿಲೋಮಿನಾ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ  ರಿಸರ್ಚ್‌ಡೆವಲಪ್ ಮೆಂಟ್ಟ್ ಸೆಲ್ಲ್, ಇನ್ಸ್ಟಿಟ್ಯೂಶನ್ ಇನ್ನೋವೇಸನ್ ಕೌನ್ಸಿಲ್ ಮತ್ತು ಗ್ರಂಥಾಲಯ ಮತ್ತು ಮಾಹಿತಿ ವಿಭಾಗದ ಸಹಯೋಗದಲ್ಲಿ ಹೊಸ ಸಂಶೋಧಕರನ್ನುಉತ್ತೇಜಿಸುವ ಹಾಗೂ ಅದ್ಯಾಪಕರ ಸಂಶೋಧನಾ ಕೌಸಲ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಚಾರ್ಯ ವಂ.ಡಾ. ಆ್ಯಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವು ತಯಾರಾಗದೆ ಇದ್ದರೆ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಲು […]

ಸಂತ ಫಿಲೋಮಿನಾ ಕಾಲೇಜಿನಲ್ಲಿ’ರಿಸರ್ಚ್ ಇನ್ಫೋರ್ಮೇಟಿಕ್ಸ್: ಸಂಶೋಧನಾ ವಿಧಾನಕ್ರಮ, ಸಂಶೋಧನಾ ಬರಹ’ ಕಾರ್ಯಗಾರ Read More »

ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್‍ : ಬೈಕ್‍ ಸವಾರ ಮೃತ್ಯು

ಪುತ್ತೂರು: ಶಾಮಿಯಾನ ಲಾರಿಗೆ ಹಿಂದಿನಿಂದ ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸುದೀಪ್‍ ಚೊಕ್ಕಾಡಿ ಮೃತಪಟ್ಟ ಬೈಕ್‍ ಸವಾರ ಗಂಭೀರ ಗಾಯಗೊಂಡ ಸುದೀಪ್‍ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸುದೀಪ್‍ ಮುರ ಸಮೀಪ ಆಯುರ್ವೇದಿಕ್‍ ಔಷಧಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್‍ : ಬೈಕ್‍ ಸವಾರ ಮೃತ್ಯು Read More »

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 250000 ಮೊತ್ತದ ಚೆಕ್ ಹಸ್ತಾಂತರ | ದೇಶದ ರಕ್ಷಣೆಯ ತುಡಿತ ಪ್ರತಿ ಭಾರತೀಯನಲ್ಲಿ ಸದಾ ಇರಬೇಕು : ಚಂದಪ್ಪ ಮೂಲ್ಯ

ಉಪ್ಪಿನಂಗಡಿ : ಭಾರತದ ರಕ್ಷಣಾ ಬಲಕ್ಕೆ ಶಕ್ತಿ ತುಂಬುವ ಸಲುವಾಗಿ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ ರೂ.250000/- ಮೊತ್ತ ಚೆಕ್ ನ್ನು ನಿವೃತ್ತ ಸೈನ್ಯಾಧಿಕಾರಿ ಚಂದಪ್ಪ ಮೂಲ್ಯ ಅವರ ಮುಖಾಂತರ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಚಂದಪ್ಪ ಮೂಲ್ಯ, ನಿವೃತ್ತ ಸೈನಿಕನಾಗಿ ದೇಶದ ರಕ್ಷಣೆಗಾಗಿ  ಹೋರಾಟ ಮಾಡಲು ಸದಾ ಸಿದ್ಧ. ಭಾರತ ಜಗತ್ತಿನಲ್ಲಿ ಶಕ್ತಿ ಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಆಧುನಿಕ ಯುದ್ಧ ತಂತ್ರಜ್ಞಾನ ಬಳಕೆಯೊಂದಿಗೆ ಶತ್ರು ರಾಷ್ಟ್ರದೊಳಗೆ ನುಗ್ಗಿ ದಾಳಿ ಮಾಡುವಂತಹ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 250000 ಮೊತ್ತದ ಚೆಕ್ ಹಸ್ತಾಂತರ | ದೇಶದ ರಕ್ಷಣೆಯ ತುಡಿತ ಪ್ರತಿ ಭಾರತೀಯನಲ್ಲಿ ಸದಾ ಇರಬೇಕು : ಚಂದಪ್ಪ ಮೂಲ್ಯ Read More »

ಡಿವೈಡರ್ ಏರಿದ ಕಾರು : ಚಾಲಕ ಅಪಾಯದಿಂದ ಪಾರು

ಪುತ್ತೂರು” ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‍ ಏರಿದ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿಯಲ್ಲಿ ನಡೆದಿದೆ. ಅಪಘಾತದಿಂದ ಕಾರು ಚಾಲಕ ಅಪಾಯದಿಂದ ಪಾರಾಗಿದ್ದು, ಕಾರಿಗೆ ಹಾನಿಯಾಗಿದೆ. ಈ ಸಂದರ್ಭದಲ್ಲಿ ಅದೇ ಮಾರ್ಗದಿಂದ ತೆರಳುತ್ತಿದ್ದ ಅರುಣ್‍ ಕುಮಾರ್‍ ಪುತ್ತಿಲ ಕಾರನ್ನು ಬದಿಗೆ ಸರಿಸುವಲ್ಲಿ ಸಹಕರಿಸಿದರು.

ಡಿವೈಡರ್ ಏರಿದ ಕಾರು : ಚಾಲಕ ಅಪಾಯದಿಂದ ಪಾರು Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಪರಿಸರ ಸ್ವಚ್ಚತೆ ಕುರಿತು ಜಾಗೃತಿ’ ಕಾರ್ಯಕ್ರಮ | ಸ್ವಚ್ಛ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜದ ನಿರ್ಮಾಣ: ಡಾ. ರಾಜೇಶ್ ಬೆಜ್ಜಂಗಳ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ,  ಪುತ್ತೂರು ನಗರ ಸಭೆ ವತಿಯಿಂದ, ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಹಯೋಗದಲ್ಲಿ, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ಸಂಯೋಜಕತ್ವದಲ್ಲಿ ‘ಪರಿಸರ ಸ್ವಚ್ಚತೆ ಕುರಿತು ಜಾಗೃತಿ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಮಾತನಾಡಿ, ನಮ್ಮ ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಹಾಗೂ ಅಚ್ಚುಕಟ್ಟಾಗಿ ಇಟ್ಟುಕೊಳ್ಳುವುದು ನಮ್ಮೆಲ್ಲರ ನೈತಿಕ ಜವಾಬ್ದಾರಿಯಾಗಿದೆ.

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಪರಿಸರ ಸ್ವಚ್ಚತೆ ಕುರಿತು ಜಾಗೃತಿ’ ಕಾರ್ಯಕ್ರಮ | ಸ್ವಚ್ಛ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜದ ನಿರ್ಮಾಣ: ಡಾ. ರಾಜೇಶ್ ಬೆಜ್ಜಂಗಳ Read More »

2009ರಲ್ಲಿ ನಡೆದ ಮನೆ ಕಳ್ಳತನ ಪ್ರಕರಣ |  ಆರೋಪಿ ಬಂಧನ

ಪುತ್ತೂರು: ಮಾಡೂರು ಗ್ರಾಮದ ಕೌಡಿಚಾರ್ನಲ್ಲಿ 2009 ರಲ್ಲಿ ಮನೆ ಕಳ್ಳತನ ಮಾಡಿದ ಆರೋಪಿ ಸುಮಾರು 16 ವರ್ಷಗಳಿಂದ ಪೊಲೀಸರಿಂದ ತಲೆಮರೆಸಿಕೊಂಡಿದ್ದ. ಘೋಷಿತ ಅಪರಾಧಿ (Proclaimed Offender) ಮಾಡಾ ಸ್ವಾಮಿ ಎಂಬವನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿನ್ನು ತಮಿಳುನಾಡು ರಾಜ್ಯದ ತಿರುನಲ್ವೆ ಜಿಲ್ಲೆಯ ತಂಗಮಾಳಾಪುರಂ ನಿವಾಸಿಯಾದ ಮಾಡಾಸ್ವಾಮಿ(17ವ) ಬಂಧಿತ ಆರೋಪಿ ಎನ್ನಲಾಗಿದೆ.                                     ಪ್ರಕರಣದ ಹಿನ್ನೆಲೆ: ದಿ. ಜು 5 2009 ರಂದು ರಾತ್ರಿ ಕೌಡಿಚಾರ್ ನಿವಾಸಿ ಗಣಪಯ್ಯ ಎಂಬವರ ಮನೆಯ ಬೀಗವನ್ನು

2009ರಲ್ಲಿ ನಡೆದ ಮನೆ ಕಳ್ಳತನ ಪ್ರಕರಣ |  ಆರೋಪಿ ಬಂಧನ Read More »

ನರೇಂದ್ರ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ವೇಗವಾಗಿ ಬೆಳೆಯುತ್ತಿರುವ ಔದ್ಯೋಗಿಕರಂಗದಲ್ಲಿ ದಿನದಿಂದ ದಿನಕ್ಕೆ ಹಲವಾರು ಬದಲಾವಣೆಗಳಾಗುತ್ತಿರುತ್ತವೆ. ಅದಕ್ಕಾಗಿ ನಮ್ಮ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿ ದೆಸೆಯಿಂದಲೇ ಚಿಂತನೆ ಮಾಡಬೇಕಾಗಿದೆ. ಸಮಸ್ಯೆಗಳನ್ನು ಮೀರಿ ನಿಲ್ಲಲು ನಮಗೆ ಬೇಕಿರುವುದು ಉತ್ತೇಜನ. ಶ್ರದ್ಧೆಯಿಂದ ಅಧ್ಯಯನ ಮಾಡಿ ಯಶಸ್ಸು ಸಾಧಿಸಿ ಎಂದು ಆದಾಯ ತೆರಿಗೆ ಕಛೇರಿಯ ಟ್ಯಾಕ್ಸ್ ಅಸಿಸ್ಟೆಂಟ್ ತೇಜಸ್ವಿ ಮಕಿನ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಮಾರ್ಗಸೂಚಿಗಳು ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ರಹಸ್ಯವು

ನರೇಂದ್ರ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ Read More »

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಮೂರು ದಿನಗಳ ಯೋಗ ಶಿಬಿರ – ‘ಮೇಧಾ ಯೋಗ’

ಪುತ್ತೂರು: ಯೋಗ, ಮನುಷ್ಯ ಹಾಗೂ ಪ್ರಕೃತಿಯನ್ನು ಸೇರಿಸುವ, ಒಂದಾಗಿಸುವ ಒಂದು ಸಾಧನ. ಭೌತಿಕದಿಂದ ಅಭೌತಿಕದೆಡೆಗೆ ನಡೆಸುವ ಪಯಣಕ್ಕೆ ಈ ಯೋಗವೇ ಮಾರ್ಗದರ್ಶಕ. ಯೋಗವನ್ನು ಅಭ್ಯಾಸ ಮಾಡಿದರೆ ದೇಹದ ಜಡತ್ವವು ನಿವಾರಣೆಯಾಗಿ ಸೂಕ್ಷ್ಮ ಹಾಗೂ ಕ್ರಿಯಾಶೀಲವಾದ ಮನಸ್ಸಿನೊಡನೆ ಸ್ಪಂದಿಸಲು ಸಿದ್ಧಗೊಳ್ಳುತ್ತದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ಶರಾವತಿ ರವಿನಾರಾಯಣ ಹೇಳಿದರು. ಅವರು ಶುಕ್ರವಾರ ನರೇಂದ್ರ ಪ.ಪೂ. ಕಾಲೇಜಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿದ್ಯಾರ್ಥಿಗಳಿಗಾಗಿ ನಡೆಯುತ್ತಿರುವ ಮೂರು ದಿನಗಳ ಯೋಗ ಶಿಬಿರ ’ಮೇಧಾ ಯೋಗ’ ದಲ್ಲಿ 

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಮೂರು ದಿನಗಳ ಯೋಗ ಶಿಬಿರ – ‘ಮೇಧಾ ಯೋಗ’ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಕಬಡ್ಡಿ ತಂಡ ಚಾಂಪಿಯನ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಈ ಮೂಲಕ ತಂಡ ತಿಪಟೂರಿನ ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಕಬಡ್ಡಿ ತಂಡ ಚಾಂಪಿಯನ್ Read More »

ಮುಂದುವರಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗ ಸ್ವಾಧೀನ ಕಾರ್ಯ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ಜಾಗವನ್ನು ಮರು ತೆಗೆದುಕೊಳ್ಳುವ ಕಾರ್ಯ ಶುಕ್ರವಾರದಿಂದ ಮುಂದುವರಿದಿದೆ. ಶುಕ್ರವಾರ ಪುತ್ತೂರಿನ ನೆಲ್ಲಿಕಟ್ಟೆ ಬಳಿ ಬೇರೆಯವರಲ್ಲಿ ಬಾಡಿಗೆಗೆ ಇದ್ದ ಜಾಗದ ಕಂಪೌಂಡ್‍ ನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಸ್ವಾಧೀನ ಪಡೆಯಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍ ಮಾತನಾಡಿ, ನೆಲ್ಲಿಕಟ್ಟೆ ಪರಿಸರದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದ ಸುಮಾರು ಒಂದೂಕಾಲು ಎಕ್ರೆ ಜಾಗವಿದೆ. ಇದೀಗ 30-40 ವರ್ಷಗಳಿಂದ ರುಕ್ಕಾಂ ಆದಂ ಹಾಜಿ ಅವರ ಬಾಡಿಗೆಗಿದ್ದ 123/5 ಸರ್ವೆ

ಮುಂದುವರಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗ ಸ್ವಾಧೀನ ಕಾರ್ಯ Read More »

error: Content is protected !!
Scroll to Top