ಪುತ್ತೂರು

KSRTCಯ ನಿವೃತ್ತ ನೌಕರ ಹೃದಯಾಘಾತದಿಂದ ನಿಧನ

ಪುತ್ತೂರು: KSRTC ಯ ನಿವೃತ್ತ ನೌಕರ ಪರಮೇಶ್ವರ ನಾಯ್ಕ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿ. ದ ಮಂಗಳೂರು ವಿಭಾಗದಲ್ಲಿ 20 ವರ್ಷಗಳ ಕಾಲ ನಿರ್ವಾಹಕರಾಗಿ, ಪುತ್ತೂರು ಬಸ್ಸು ನಿಲ್ದಾಣದಲ್ಲಿ 9 ವರ್ಷಗಳ ಕಾಲ ಸೇವೆ ಸಲ್ಲಿಸಿ, ಆ ನಂತರ ಪುತ್ತೂರು ಘಟಕದ ಸಹಾಯಕ ಸಂಚಾರ ನಿಯಂತ್ರಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಸಂಸ್ಥೆಯಲ್ಲಿ ಸುಮಾರು 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಇವರು 2023 ರ ಮಾರ್ಚ್‌ನಲ್ಲಿ ವೃತ್ತಿಯಿಂದ ನಿವೃತ್ತರಾಗಿದ್ದರು. ಮೃತರು ಪತ್ನಿ, […]

KSRTCಯ ನಿವೃತ್ತ ನೌಕರ ಹೃದಯಾಘಾತದಿಂದ ನಿಧನ Read More »

ಪುತ್ತೂರು : ವಿದ್ಯುತ್‌ ತಂತಿ ಕಡಿದು ಬಿದ್ದು 900 ಅಡಿಕೆ ಗಿಡ ಬೆಂಕಿಗಾಹುತಿ

ತೋಟದ ಮಧ್ಯೆ ಹಾದುಹೋಗಿದ್ದ ವಿದ್ಯುತ್‌ ತಂತಿ ಕಡಿದು ಬಿದ್ದು ಅನಾಹುತ ಪುತ್ತೂರು: ತಾಲೂಕಿನ ಕುರಿಯ ಗ್ರಾಮದ ಬೂಡಿಯಾರಿನಲ್ಲಿ ತೋಟದ ಮಧ್ಯೆ ಹಾದು ಹೋಗಿದ್ದ ವಿದ್ಯುತ್‌ ತಂತಿ ಮುರಿದು ಬಿದ್ದ ಪರಿಣಾಮವಾಗಿ ತೋಟಕ್ಕೆ ಬೆಂಕಿ ಹತ್ತಿಕೊಂಡು 900ಕ್ಕೂ ಅಧಿಕ ಅಡಿಕೆ ಗಿಡಗಳು ಸುಟ್ಟು ಕರಕಲಾದ ಘಟನೆ ಮಂಗಳವಾರ ಸಂಭವಿಸಿದೆ. ಬೂಡಿಯಾರಿನ ಗಣೇಶ್‌ ರೈ ಎಂಬವರ ತೋಟ ಪೂರ್ತಿಯಾಗಿ ಬೆಂಕಿಗಾಹುತಿಯಾಗಿದೆ. ಒಂದು ವರ್ಷದ ಹಿಂದಷ್ಟೇ ನೆಟ್ಟ ಅಡಿಕೆ ಗಿಡಗಳು ಉತ್ತಮವಾಗಿ ಬೆಳೆದು ನಿಂತಿದ್ದವು. ಮಂಗಳವಾರ ಮಧ್ಯಾಹ್ನದ ಹೊತ್ತು ವಿದ್ಯುತ್‌ ತಂತಿ

ಪುತ್ತೂರು : ವಿದ್ಯುತ್‌ ತಂತಿ ಕಡಿದು ಬಿದ್ದು 900 ಅಡಿಕೆ ಗಿಡ ಬೆಂಕಿಗಾಹುತಿ Read More »

ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸನ್ಮಾನ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ಮತ್ತು ಮೋರ್ಲ ಕುಟುಂಬ ಸ್ವರ ಸಹಯೋಗದಲ್ಲಿ ವಿಧಾನ ಸಭಾ ಸ್ಪೀಕರ್ ಯು. ಟಿ. ಖಾದರ್ ಅವರನ್ನು ಚಂದ್ರಹಾಸ ಶೆಟ್ಟಿ ಮೋರ್ಲ ಅವರ ಸ್ವಗೃಹದಲ್ಲಿ ‌ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಚಂದ್ರಹಾಸ ಶೆಟ್ಟಿ ಮೋರ್ಲ, ಜಯಶ್ರೀ ಸಿ. ಶೆಟ್ಟಿ, ರತ್ನಾಕರ ಶೆಟ್ಟಿ ಮೋರ್ಲ, ಮುರಳಿಧರ ಶೆಟ್ಟಿ ಮೋರ್ಲ, ಶೈಲಜಾ ಶೆಟ್ಟಿ, ಸೀನಿಯರ್ ಚೇಂಬ‌ರ್ ಇಂಟರ್ನ್ಯಾಷನಲ್ ಅಧ್ಯಕ್ಷೆ ಮಲ್ಲಿಕಾ ಜೆ. ರೈ ಗುಂಡ್ಯಡ್ಕ ಮೊದಲಾದವರು ಉಪಸ್ಥಿತರಿದ್ದರು.

ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸನ್ಮಾನ Read More »

ಬಾಲಕಿ ಮೇಲೆ ಮಾನಭಂಗಕ್ಕೆ ಯತ್ನ: ಆರೋಪಿಯ ವಿರುದ್ದ ದೂರು ದಾಖಲು

ಉಪ್ಪಿನಂಗಡಿ: ನೆಲ್ಯಾಡಿ ಸಮೀಪದ ಕಟ್ಟೆಮಜಲಿನಲ್ಲಿ ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಪ್ರಯತ್ನ ನಡೆಸಿದ ಆರೋಪದಲ್ಲಿ ‌ಚಂದ್ರಶೇಖರ್ ಎಂಬವರ ‌ವಿರುದ್ಧ ಉಪ್ಪಿನಂಗಡಿ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಗ್ಗೆ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿರುವುದಾಗಿದೆ. ನೇಮೋತ್ಸವ ಒಂದಕ್ಕೆ ಹೋಗಿದ್ದ ವೇಳೆ ಬಾಲಕಿಯ ಕೈ ಹಿಡಿದು ಆರೋಪಿ ಮಾನಭಂಗ ಮಾಡಲು ಪ್ರಯತ್ನ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಾಲಕಿ ಮೇಲೆ ಮಾನಭಂಗಕ್ಕೆ ಯತ್ನ: ಆರೋಪಿಯ ವಿರುದ್ದ ದೂರು ದಾಖಲು Read More »

ಜ್ಯೂಸ್ ಸೆಂಟರ್ ಸಿಬ್ಬಂದಿ ಮೇಲೆ ಹಲ್ಲೆ, ಬೆದರಿಕೆ: ನ್ಯಾಯಾಲಯದ ಆದೇಶದನ್ವಯ ಆರೋಪಿಗಳ ಮೇಲೆ ದೂರು ದಾಖಲು

ಉಪ್ಪಿನಂಗಡಿ: ಕೆಲ ಸಮಯದ ಹಿಂದೆ ನಗರದ ಜ್ಯೂಸ್ ಸೆಂಟರ್ ಒಂದಕ್ಕೆ ನುಗ್ಗಿ ಅಲ್ಲಿನ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಐವರು ಆರೋಪಿಗಳ ಮೇಲೆ ನ್ಯಾಯಾಲಯದ ಆದೇಶದ ಅನ್ವಯ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಆರೋಪಿಗಳನ್ನು ಯಾಹ್ಯಾ, ಸಿರಾಜ್, ಖಾದರ್, ತಾಹಿರಾ, ತಸ್ಮಿಯಾ ಎಂದು ಗುರುತಿಸಲಾಗಿದೆ. ದೂರುದಾರ ಪೆರಿಯಡ್ಕದ ನೌಫ್ ಅವರು ನೀಡಿರುವ ದೂರಿನಲ್ಲಿ, ತಾವು ಉಪ್ಪಿನಂಗಡಿಯ ಜ್ಯೂಸ್ ಸೆಂಟರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಗೆ ಆಗಮಿಸಿದ ತಾಹಿರ ಮತ್ತು ತಸ್ಮಿಯಾ ಪೆರಿಯಡ್ಕದಲ್ಲಿ

ಜ್ಯೂಸ್ ಸೆಂಟರ್ ಸಿಬ್ಬಂದಿ ಮೇಲೆ ಹಲ್ಲೆ, ಬೆದರಿಕೆ: ನ್ಯಾಯಾಲಯದ ಆದೇಶದನ್ವಯ ಆರೋಪಿಗಳ ಮೇಲೆ ದೂರು ದಾಖಲು Read More »

ಹಳೇ ನೇರೆಂಕಿ ಗಂಗಾಧರ ಆಚಾರ್ಯ ನಿಧನ

ಉಪ್ಪಿನಂಗಡಿ: ಹಳೆನೇರೆಂಕಿ ಗ್ರಾಮದ ಪಾತ್ರ ಮಾಡಿ ನಿವಾಸಿ ಗಂಗಾಧರ ಆಚಾರ್ಯ (64 ವರ್ಷ ) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಪ್ಪಿನಂಗಡಿಯಲ್ಲಿ ನಾಲ್ಕು ದಶಕಗಳಿಂದ ಕಮ್ಮಾರಿಕೆ ವೃತ್ತಿಯನ್ನು ಮಾಡುತ್ತಿದ್ದ ಇವರು ಕೆಲವು ತಿಂಗಳ ಹಿಂದೆ ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಜನವರಿ 4ರಂದು ಮಂಗಳೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದ ಅವರು ಅಸ್ವಸ್ಥಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಸವಿತ, ಪುತ್ರರಾದ ಮಹೇಶ್, ರಾಜೇಶ್,

ಹಳೇ ನೇರೆಂಕಿ ಗಂಗಾಧರ ಆಚಾರ್ಯ ನಿಧನ Read More »

ಜ.16 – ವಿಟ್ಲ ಜಾತ್ರಾ ಪ್ರಯುಕ್ತ ಸಮರ್ಪಣ್ ಕಲೋತ್ಸವ 2026: ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಸಲುವಾಗಿ ಜ. 16 ರಂದು ಸಮರ್ಪಣ್ ವಿಟ್ಲ ಇವರಿಂದ ‘ಸಮರ್ಪಣ್ ಕಲೋತ್ಸವ 2026’ ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಗೌರವ ಸಮರ್ಪಣೆ, ವಿದ್ಯಾನಿಧಿ ‌ಸಮರ್ಪಣೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ವಿಟ್ಲದ ಹಿರಿಯ ಸ್ವಯಂಸೇವಕ ಈಶ್ವರ ಡಿ. ಕೂಜಪ್ಪಾಡಿ ಅವರು ಬಿಡುಗಡೆ ಮಾಡಿದರು. ಸಮರ್ಪಣ್ ಕಲೋತ್ಸವದಲ್ಲಿ ಚೈತನ್ಯ ಕಲಾವಿದರು ಬೈಲೂರು ಅವರಿಂದ ರಾಘು ಮಾಸ್ಟ್ರು ಎಂಬ ತುಳು ಹಾಸ್ಯಮಯ ನಾಟಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಮಂತ್ರಣ ಬಿಡುಗಡೆ ಕಾರ್ಯಕ್ರಮದಲ್ಲಿ ಸಮರ್ಪಣ್

ಜ.16 – ವಿಟ್ಲ ಜಾತ್ರಾ ಪ್ರಯುಕ್ತ ಸಮರ್ಪಣ್ ಕಲೋತ್ಸವ 2026: ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಸತತ ಪ್ರಯತ್ನದ ಫಲವೇ ಯಶಸ್ಸು: ಸೀತಾರಾಮ ಕೇವಳ

ಅಂಕ ಗಳಿಕೆಯೇ ‌ಶಿಕ್ಷಣವಲ್ಲ: ರಾಜೇಂದ್ರ ಭಟ್ ಕೆ. ಶಿಕ್ಷಣದ ಜೊತೆಗೆ ಕ್ರೀಡೆಗೂ ಒತ್ತು ನೀಡಿ: ಶಿವರಾಮ ಏನೆಕಲ್ ಕಾಣಿಯೂರು: ಸಾಧನೆ ಮಾಡಬೇಕು ಎನ್ನುವವರಿಗೆ ಅಸಾಧ್ಯವಾದದ್ದು ಏನೂ ಇಲ್ಲ. ವಿದ್ಯಾರ್ಥಿಯಾಗಿದ್ದಾಗಲೇ ಪರಿಶ್ರಮ, ಅಭ್ಯಾಸ ಇದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ. ಕುದ್ಮಾರು ಶಾಲೆಯಲ್ಲಿ ಮಕ್ಕಳ ಸಾಧನೆಗೆ ಪೂರಕ ವಾತಾವರಣ ಇರುವುದು ಸಂತಸದ ವಿಷಯ ರಾಷ್ಟ್ರೀಯ ಮಟ್ಟದ ವಿಕಸನ ತರಬೇತುದಾರ, ನಿವೃತ್ತ ಪ್ರಾಂಶುಪಾಲ ಸೀತಾರಾಮ ಕೇವಳ ಹೇಳಿದರು. ಅವರು ಕುದ್ಮಾರು ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘ ಮತ್ತು SDMC ವತಿಯಿಂದ ಸ.

ಸತತ ಪ್ರಯತ್ನದ ಫಲವೇ ಯಶಸ್ಸು: ಸೀತಾರಾಮ ಕೇವಳ Read More »

ಮಗು ಕರುಣಿಸಿದ ಪ್ರಕರಣ : ಜ.24ರಂದು ಕಲ್ಲಡ್ಕದಲ್ಲಿ ನಾಮಕರಣ ಶಾಸ್ತ್ರ

ಕೃಷ್ಣ ರಾವ್‌ ಜಾಮೀನು ರದ್ದುಪಡಿಸಲು ಕೋರ್ಟಿಗೆ ಮನವಿ ಸಲ್ಲಿಸುತ್ತೇವೆ ಎಂದ ಪ್ರತಿಭಾ ಕುಳಾಯಿ ಮಂಗಳೂರು: ಪುತ್ತೂರಿನಲ್ಲಿ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ.ರಾವ್‌ಗೆ ಕೋರ್ಟ್‌ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು. ಸಂಧಾನದ ಬಾಗಿಲು ಮುಚ್ಚಿದ್ದು, ಜ.24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದ್ದಾರೆ. ಅನ್ಯಾಯಕ್ಕೊಳಗಾದ ಯುವತಿ, ಮಗು ಹಾಗೂ ಯುವತಿಯ ಪೋಷಕರ ಜತೆ ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,

ಮಗು ಕರುಣಿಸಿದ ಪ್ರಕರಣ : ಜ.24ರಂದು ಕಲ್ಲಡ್ಕದಲ್ಲಿ ನಾಮಕರಣ ಶಾಸ್ತ್ರ Read More »

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ಓಡಿಲಾನಾಳ ಗ್ರಾಮದ ಕಟ್ಟಡಬೈಲು ನಿವಾಸಿ ವ್ಯಕ್ತಿಯೋರ್ವರು ತಮ್ಮ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಮಂಜುನಾಥ ನಾಯಕ್(42) ಎಂದು ಗುರುತಿಸಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಯ ಸಲುವಾಗಿ ಬೆಳ್ತಂಗಡಿಯ ‌ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತ ರು ತಂದೆ, ತಾಯಿ, ಪತ್ನಿ, ಮಕ್ಕಳನ್ನು ಅಗಲಿದ್ದಾರೆ. ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

error: Content is protected !!
Scroll to Top