ಪುತ್ತೂರು

ವಿದ್ಯಾರಶ್ಮಿಯಲ್ಲಿ ಯುಕೆಜಿಯ ಘಟಿಕೋತ್ಸವ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಯು.ಕೆ.ಜಿ. ತರಗತಿಯ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ದಿನ (ಗ್ರಾಜ್ಯುಯೇಷನ್ ಡೇ) ಏರ್ಪಡಿಸಲಾಯಿತು. ಸಮಾರಂಭವನ್ನು ಎಸ್. ಎನ್. ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್ ಸದಸ್ಯೆ ರಶ್ಮಿ ಅಶ್ವಿನ್ ಎಲ್. ಶೆಟ್ಟಿ ಅವರು ಉದ್ಘಾಟಿಸಿದರು. ಅತಿಥಿಯಾಗಿ ಸವಣೂರು ಕ್ಷೇತ್ರ ಸಂಪನ್ಮೂಲ ಅಧಿಕಾರಿ ಜಯಂತ್ ವೈ. ಅವರು ಮಕ್ಕಳೇ ನಮ್ಮ ಆಸ್ತಿ, ಮಕ್ಕಳನ್ನು ಆಸ್ತಿಯನ್ನಾಗಿ ಮಾಡಿ, ಸರಿಯಾದ ಗುರಿ, ಗುರುಗಳ ಮೇಲೆ ಗೌರವ ಇರಬೇಕು ಎಂಬ ಹಿತನುಡಿಯೊಂದಿಗೆ ಶುಭ ಹಾರೈಸಿದರು. ಶಾಲಾ ಆಡಳಿತಾಧಿಕಾರಿ ಅಢ್ವಕೇಟ್ ಅಶ್ವಿನ್ ಎಲ್. ಶೆಟ್ಟಿ […]

ವಿದ್ಯಾರಶ್ಮಿಯಲ್ಲಿ ಯುಕೆಜಿಯ ಘಟಿಕೋತ್ಸವ Read More »

ಹೃದಯಾಘಾತಕ್ಕೆ ಯುವಕ ಬಲಿ

ಬಂಟ್ವಾಳ: ಕೃಷಿ ಸಂಬಂಧಿ ಕೆಲಸದಲ್ಲಿ ತೊಡಗಿಕೊಂಡಿದ್ದ ಯುವಕನೊಬ್ಬ ಎದೆನೋವಿನ ಕಾರಣಕ್ಕೆ ಹೃದಯಾಘಾತದಿಂದ ಮೃತಪಟ್ಚ ಘಟನೆ ಕುಕ್ಕಿಪಾಡಿ ಎಂಬಲ್ಲಿ ನಡೆದಿದೆ. ಮೃತನನ್ನು ‌ಪ್ರಶಾಂತ್ ಆಚಾರ್ಯ (24) ಎಂದು ಗುರುತಿಸಲಾಗಿದೆ. ಇವರು ಕುಕ್ಕಿಪಾಡಿ ಗ್ರಾಮದ ಮಾಡಮೆ ‌ಎಂಬಲ್ಲಿನ ಶ್ರೀರಾಮ ಆಚಾರ್ಯ ಅವರ ಎರಡನೇ ಪುತ್ರ. ಸಿದ್ಧಕಟ್ಟೆಯ ಯಂತ್ರೋಪಕರಣದ ಅಂಗಡಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಭಾನುವಾರ ಅರಂತಾಡಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಸಿದ್ಧಕಟ್ಟೆಯ ‌ಆಸ್ಪತ್ರೆಯ ವೈದ್ಯರ ನಿರ್ದೇಶನದಂತೆ ಮೂಡುಬಿದಿರೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ,

ಹೃದಯಾಘಾತಕ್ಕೆ ಯುವಕ ಬಲಿ Read More »

ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಬೀಗ

ನೋಂದಣಿ ಇಲ್ಲದೆ ರಕ್ತ ಪರೀಕ್ಷೆ ಮಾಡುತ್ತಿದ್ದ ಲ್ಯಾಬ್‌ ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರದ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಲ್ಯಾಬ್‌ಗೆ ಬೀಗ ಜಡಿದಿದ್ದಾರೆ. ಶರತ್ ಶೆಟ್ಟಿ ಎಂಬವರು ವಿಟ್ಲದಲ್ಲಿರುವ ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ ಇಲ್ಲಿ ರಕ್ತ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದು, ಲ್ಯಾಬ್‍ನಲ್ಲಿ ಬಂದಿರುವ ವರದಿಯಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಬೇರೆಡೆ ರಕ್ತ ಪರೀಕ್ಷೆ ಮಾಡಿಸಿಕೊಂಡಿರುತ್ತಾರೆ. ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ ಸಂಸ್ಥೆಯವರು ಸಹಿ ಮಾಡದೆ ವರದಿ ನೀಡಿದ್ದು, ಆ ಸಂಸ್ಥೆಯ ವಿರುದ್ಧ

ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಬೀಗ Read More »

ಪುತ್ತೂರು: ರೈಲು ಹಳಿಯಲ್ಲಿ ಶವಪತ್ತೆ

ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಶಂಕೆ ಪುತ್ತೂರು: ನಗರದ ಹಾರಾಡಿ ಸಮೀಪದ ರೈಲ್ವೆ ಹಳಿಯಲ್ಲಿ ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ರಾತ್ರಿ ಪತ್ತೆಯಾಗಿದೆ. ಹಳಿಯ ಬಳಿ ಶವವನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪುತ್ತೂರು ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ಮಾಹಿತಿಯಂತೆ ರೈಲು ಡಿಕ್ಕಿಯಿಂದಲೇ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪುತ್ತೂರು: ರೈಲು ಹಳಿಯಲ್ಲಿ ಶವಪತ್ತೆ Read More »

ಪುತ್ತೂರು : ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂನಿಂದ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ ಉಂಟಾಗಿದೆ.ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಮತ್ತು ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆ ಬೆಂಕಿಗೆ ಆಹುತಿಯಾಗಿದೆ. ಲ್ಯಾನ್ಸಿ ಬಳಕ್ಕ ಅವರಿಗೆ ಸೇರಿದ ಗದ್ದೆಯಲ್ಲಿ 40 ಫೀಟ್ ಉದ್ದದ ಪಿವಿಸಿ ಪೈಪ್‌, ವೀಳ್ಯ ಕೃಷಿಗೆ ಹಾನಿ ಉಂಟಾಗಿದೆ. ಬೆಂಕಿ‌ ನಂದಿಸಲು ಸ್ಥಳೀಯರು ಶ್ರಮಿಸಿದರು.

ಪುತ್ತೂರು : ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ Read More »

ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಅನಾಥ ಶವವೊಂದು ಪತ್ತೆಯಾಗಿದೆ. ನೆಕ್ಕಿಲಾಡಿ ಮಸೀದಿಯ ಹಿಂಬದಿಯ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಸಿಕ್ಕಿರುವುದಾಗಿದೆ. ನದಿಯಲ್ಲಿನ ಗಿಡ ಗಂಟಿಗಳ ನಡುವೆ ಶವ ಕಂಡು ಬಂದಿದ್ದು, ನದಿಯಲ್ಲಿ ತೇಲಿಕೊಂಡು ಬಂದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ Read More »

ಅಕ್ಷಯ ಕೆರಿಯರ್ ಅಕಾಡೆಮಿಯ ಉಚಿತ ವಿಮಾನಯಾನ ತರಬೇತಿ ಯಶಸ್ವಿ

ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ, ಪುತ್ತೂರು ವತಿಯಿಂದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ವಿದ್ಯಾರ್ಥಿಗಳಿಗಾಗಿ “ವಿಮಾನಯಾನ” ವಿಶೇಷ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳಿಗೆ ವಿಮಾನ ನಿಲ್ದಾಣದ ನೈಜ ಕಾರ್ಯಪದ್ಧತಿ ಮತ್ತು ಉದ್ಯೋಗಾವಕಾಶಗಳ ಅರಿವು ಮೂಡಿಸುವುದು ತರಬೇತಿಯ ಮುಖ್ಯ ಉದ್ದೇಶವಾಗಿತ್ತು. ತರಬೇತಿಯ ಭಾಗವಾಗಿ ವಿದ್ಯಾರ್ಥಿಗಳು ಕೆಂಪೇಗೌಡ ಇಂಟರ್ನ್ಯಾಷನಲ್ ಏರ್ಪೋರ್ಟ್, ಬೆಂಗಳೂರುಗೆ ಭೇಟಿ ನೀಡಿದರು. ಅಲ್ಲಿ ನಡೆಯುವ ಚೆಕ್-ಇನ್, ಬೋರ್ಡಿಂಗ್, ಭದ್ರತಾ ತಪಾಸಣೆ, ಗ್ರೌಂಡ್ ಹ್ಯಾಂಡ್ಲಿಂಗ್ ಹಾಗೂ ಗ್ರಾಹಕ ಸೇವೆ ಸೇರಿದಂತೆ ವಿವಿಧ ವಿಭಾಗಗಳ ಕಾರ್ಯವೈಖರಿಯನ್ನು ವಿದ್ಯಾರ್ಥಿಗಳು

ಅಕ್ಷಯ ಕೆರಿಯರ್ ಅಕಾಡೆಮಿಯ ಉಚಿತ ವಿಮಾನಯಾನ ತರಬೇತಿ ಯಶಸ್ವಿ Read More »

ಪುತ್ತೂರು : ಎಂಡಿಎಂ ಸಾಗಿಸುತ್ತಿದ್ದ ಮೂವರ ಬಂಧನ

ಕಾರು, ಮಾರಕಾಸ್ತ್ರ ಸೇರಿ 5.38 ಲ.ರೂ. ಮೌಲ್ಯದ ಸೊತ್ತು ವಶ ಪುತ್ತೂರು : ಎಂಡಿಎಂಎ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕೇರಳ ಮೂಲದ ಮೂವರು ಆರೋಪಿಗಳನ್ನು ಪುತ್ತೂರು ಪೊಲೀಸರು ಬಂದಿಸಿದ್ದಾರೆ. ಕೇರಳದ ಕೋಝಿಕೋಡ್‌ನ ಮುಹಮ್ಮದ್ ಅಜ್ಮಲ್ ಸಿ. ಯಾನೆ ಅಜ್ಜು (30), ವಯನಾಡ್ ಜಿಲ್ಲೆಯ ಇಸ್ಮಾಯಿಲ್ (28), ಕೊಝಿಕೋಡ್‌ನ ಸಂಶೀರ್ (27) ಬಂಧಿತ ಆರೋಪಿಗಳು. ಆರೋಪಿಗಳು ಫೆ.18ರಂದು ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ವಾಹನದಲ್ಲಿ ಮಾರಾಕಾಯುಧ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ಮೌಲ್ಯದ 53.58 ಗ್ರಾಂ

ಪುತ್ತೂರು : ಎಂಡಿಎಂ ಸಾಗಿಸುತ್ತಿದ್ದ ಮೂವರ ಬಂಧನ Read More »

ಕಡಬದ ‌ಯುವಕ ಐರ್ಲೆಂಡಿನಲ್ಲಿ ಮೃತಪಟ್ಟ ‌ಸ್ಥಿತಿಯಲ್ಲಿ ಪತ್ತೆ

ಕಡಬ: ಉದ್ಯೋಗಕ್ಕಾಗಿ ಐರ್ಲೆಂಡಿಗೆ ತೆರಳಿದ್ದ ಕಡಬದ ಯುವಕನೊಬ್ಬ ತನ್ನ ನಿವಾಸದಲ್ಲೇ ನಿಗೂಢವಾಗಿ ಮೃತಪಟ್ಚಿರುವ ಘಟನೆ ನಡೆದಿದೆ. ಮೃತನನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿಯ ಸಾಂಜೋ ‌ಸುನಿಲ್ (31) ಎಂದು ಗುರುತಿಸಲಾಗಿದೆ. ಸಾಂಜೋ ಅವರು ಐರ್ಲೆಂಡಿನ ತಮ್ಮ ನಿವಾಸದಲ್ಲಿ ಶವವಾಗಿ ‌ಪತ್ತೆಯಾಗಿದ್ದು, ಐರಿಶ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಪರಿಗಣಿಸಲಾಗಿದೆ. ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ. ಪತಿಯ ಸಾವಿನ ವಿಷಯ ಕೇಳಿದ ಸಾಂಜೋ ಅವರ ಪತ್ನಿ ಆಘಾತಕ್ಕೆ ಒಳಗಾಗಿ ಅಸ್ವಸ್ಥರಾಗಿದ್ದಾಗಿ ತಿಳಿದು ಬಂದಿದೆ.

ಕಡಬದ ‌ಯುವಕ ಐರ್ಲೆಂಡಿನಲ್ಲಿ ಮೃತಪಟ್ಟ ‌ಸ್ಥಿತಿಯಲ್ಲಿ ಪತ್ತೆ Read More »

ಅಡಿಕೆ ಕಳ್ಳತನ: ಓರ್ವ ಆರೋಪಿಗೆ ನ್ಯಾಯಾಂಗ ಬಂಧನ, ಮತ್ತೊಬ್ಬನಿಗೆ ನಿರೀಕ್ಷಣಾ ಜಾಮೀನು

ಕಡಬ: ತಮ್ಮ ತೋಟದಿಂದ ಅಡಿಕೆ ಕಳ್ಳತನ ಮಾಡಿರುವುದಾಗಿ ‌ಅಲಂಕಾರಿನ ಸತೀಶ್ ಎಂಬವರು ಜ. 25ರಂದು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಪ್ರಕರಣದ ಆರೋಪಿಗಳಲ್ಲಿ ಓರ್ವನಿಗೆ ನ್ಯಾಯಾಂಗ ಬಂಧನ ಮತ್ತು ಇನ್ನೊಬ್ಬನಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ. ಸತೀಶ್ ಅವರ ತೋಟದಿಂದ ಅಡಿಕೆ ಕಳವು ಮಾಡಿ ಆರೋಪಿಗಳಾದ ಕಾಯಿಕಾಣ ಗ್ರಾಮದ ಜಯಂತ್ ಎಂ. ಮತ್ತು ಕಾಣಿಯೂರು ಗ್ರಾಮದ ಲಿಂಗಪ್ಪ ಎಂಬವರು ಪರಾರಿಯಾಗಿದ್ದರು. ಈ ಸಂಬಂಧ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. ಆರೋಪಿಗಳ ಪೈಕಿ ಜಯಂತ್‌ಗೆ ನ್ಯಾಯಾಂಗ

ಅಡಿಕೆ ಕಳ್ಳತನ: ಓರ್ವ ಆರೋಪಿಗೆ ನ್ಯಾಯಾಂಗ ಬಂಧನ, ಮತ್ತೊಬ್ಬನಿಗೆ ನಿರೀಕ್ಷಣಾ ಜಾಮೀನು Read More »

error: Content is protected !!
Scroll to Top