ಪುತ್ತೂರು

ಐರ್ಲೆಂಡಿನಲ್ಲಿ ಕಡಬದ ಯುವಕನ ಸಾವು: ಸಮಗ್ರ ತನಿಖೆಗೆ ಆಗ್ರಹಿಸಿ ಹುಟ್ಟೂರಿನಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆ

ಕಡಬ: ತಾಲೂಕಿನ ಕುಟ್ರುಪ್ಪಾಡಿಯ ಯುವಕ ಸ್ಯಾಂಜೋ ಸುನಿಲ್ ಕೆಲ ದಿನಗಳ ಹಿಂದಷ್ಟೇ ಐರ್ಲೆಂಡಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಅವರ ಸಾವಿಗೆ ಸಂಬಂಧಿಸಿದ ಹಾಗೆ ಸಮಗ್ರ ರೀತಿಯಲ್ಲಿ ತನಿಖೆ ನಡೆಯಬೇಕು ಎಂದು ಕಡಬದಲ್ಲಿ ‌ನಿನ್ನೆ ನೂರಾರು ಮಂದಿ ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಿದರು. ಕಡಬದ ‌ಕ್ರಿಶ್ಚಿಯನ್ ಲೈಟ್ನಿಂಗ್ ಕ್ಲಬ್ ಮತ್ತು ಮಲಯಾಳಿ ಸಂಘಟನೆಗಳ ನೇತೃತ್ವದಲ್ಲಿ ಅನುಗ್ರಹ ಸಭಾಭವನದಿಂದ ‌ಸೈಂಟ್ ಜೋಕಿಮ್ಸ್ ವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾ ನಿರತರು, ಈ ಸಾವಿನ ಹಿಂದಿನ ಸತ್ಯಗಳು ಅನಾವರಣವಾಗಬೇಕು ಎಂದು ಆಗ್ರಹಿಸಿದರು. ಸಾಂಜೋ […]

ಐರ್ಲೆಂಡಿನಲ್ಲಿ ಕಡಬದ ಯುವಕನ ಸಾವು: ಸಮಗ್ರ ತನಿಖೆಗೆ ಆಗ್ರಹಿಸಿ ಹುಟ್ಟೂರಿನಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆ Read More »

ಮಾ.15: ಕಂಪ್ರೆಸ್ಡ್ ಬಯೋ ಗ್ಯಾಸ್(ಸಿ. ಬಿ. ಜಿ.) ಘಟಕ ಲೋಕಾರ್ಪಣೆ ಸಮಾರಂಭ

ಪುತ್ತೂರು: ಕೃಷ್ಣಮುಳಿಯ ಗ್ರೀನ್ ಎನರ್ಜಿ ಎಲ್.ಎಲ್. ಪಿ ಮತ್ತು ರೋಟರಿ ಕ್ಲಬ್ ಪುತ್ತೂರು ಈಸ್ಟ್, ಸ್ವಚ್ಛಭಾರತ್ ಚಾರಿಟೇಬಲ್ ಟ್ರಸ್ಟ್ ಮತ್ತು ರಿಟ್ಯಾಪ್ ಸೊಲ್ಯೂಷನ್ಸ್ ಇವರ ಸಾರಥ್ಯದಲ್ಲಿ ಹಾಗೂ ನಗರಸಭಾ ಪುತ್ತೂರು ಇದರ ಸಹಯೋಗದೊಂದಿಗೆ ಸ್ವಚ್ಛ ಪುತ್ತೂರು ಅಭಿಯಾನದ ಪ್ರಮುಖ ಯೋಜನೆಯಾಗಿರುವ ಭಾರತದ ನಗರಸಭಾ ವ್ಯಾಪ್ತಿಯಲ್ಲಿ ಪ್ರಪ್ರಥಮವಾಗಿ ನಿರ್ಮಾಣಗೊಂಡಿರುವ ಕಂಪ್ರೆಸ್ಡ್ ಬಯೋ ಗ್ಯಾಸ್(ಸಿ. ಬಿ. ಜಿ.) ಘಟಕ ಇದರ ಲೋಕಾರ್ಪಣೆ ಮಾ. 15 ರಂದು ಬೆಳಗ್ಗೆ 10.30 ಕ್ಕೆ ಬನ್ನೂರು ಡಂಪಿಂಗ್ ಯಾರ್ಡ್‌ನಲ್ಲಿ ‌ನಡೆಯಲಿದೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು

ಮಾ.15: ಕಂಪ್ರೆಸ್ಡ್ ಬಯೋ ಗ್ಯಾಸ್(ಸಿ. ಬಿ. ಜಿ.) ಘಟಕ ಲೋಕಾರ್ಪಣೆ ಸಮಾರಂಭ Read More »

ಮಂಗಳೂರು, ಅಂಬೇಡ್ಕರ್ ಭವನ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ

ಉರ್ವ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಆಶ್ರಯದಲ್ಲಿ 2025ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಮತ್ತು ವಾದ್ಯ ಪರಿಕರಗಳ ವಿತರಣೆ ಕಾರ್ಯಕ್ರಮ ನಡೆಯಿತು. ಆರಂಭದಲ್ಲಿ ಅಭಿನಂದನಾ ನುಡಿಗಳನ್ನಾಡಿದ ಮಾಜಿ ಲಯನ್ಸ್ ಜಿಲ್ಲಾ ಗವರ್ನರ್ ಎಂ. ಬಿ. ಸದಾಶಿವ ಅವರು ಸಾಧಕರನ್ನು ಸನ್ಮಾನಿಸುವುದು ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಪ್ರತಿಪಾದಿಸಿ ಸನ್ಮಾನಿತರ ಸಾಧನೆಗಳನ್ನು ವಿಷದಪಡಿಸಿದರು. ವಿವಿಧತೆಯಲ್ಲಿ ಏಕತೆಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಸರಕಾರದ

ಮಂಗಳೂರು, ಅಂಬೇಡ್ಕರ್ ಭವನ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ Read More »

ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ: ಡಾ. ಅನುರಾಧಾ ಕುರುಂಜಿ

ಸುಳ್ಯ: ಸ್ವಾವಲಂಬಿ ಬದುಕು ವ್ಯಕ್ತಿಯನ್ನು ಬಲಿಷ್ಠನಾಗಿಸುತ್ತದೆ. ತನ್ನ ಪರಿಶ್ರಮ ಮತ್ತು ಸಾಮರ್ಥ್ಯದಿಂದ ಬದುಕುವ ವ್ಯಕ್ತಿ ಸಮಾಜಕ್ಕೆ ಮಾದರಿಯಾಗುತ್ತಾನೆ. ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರೆ, ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಅನುರಾಧಾ ಕುರುಂಜಿ ಅಭಿಪ್ರಾಯಪಟ್ಟರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್, ಸುಳ್ಯ ತಾಲೂಕಿನ ದೊಡ್ಡೇರಿ ಕಾರ್ಯಕ್ಷೇತ್ರದಲ್ಲಿ ಅಮೃತ ಜ್ಞಾನವಿಕಾಸ ಕೇಂದ್ರದಲ್ಲಿ ಮೂರು ತಿಂಗಳ ಕಾಲ ನಡೆದ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮದ

ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ: ಡಾ. ಅನುರಾಧಾ ಕುರುಂಜಿ Read More »

ಕುಸಿದು ಬಿದ್ದು ಉಪನ್ಯಾಸಕ ಮೃತ್ಯು

ಸುಳ್ಯ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದ ಉಪನ್ಯಾಸಕ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೈಸೂರಿನ ಕೆ. ಆರ್. ನಗರದ ಬೇರ್ಯ ನಿವಾಸಿ ಮಂಜು (42) ಎಂಬವರೇ ‌ಮೃತ ದುರ್ದೈವಿ. ಗುರುವಾರ ತರಗತಿ ಮುಗಿಸಿದ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ಹೀಗಾಗಿ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆದಿದ್ದರು. ಬಳಿಕ ಸ್ಥಳೀಯ ಮೆಡಿಕಲ್‌ಗೆ ಔಷಧ ಖರೀದಿಗೆ ಹೋಗಿದ್ದರು. ಅಲ್ಲಿ ಇದ್ದಕ್ಕಿದ್ದ ಹಾಗೆ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದರಾದರೂ ಅದಾಗಲೇ‌ ಅವರು

ಕುಸಿದು ಬಿದ್ದು ಉಪನ್ಯಾಸಕ ಮೃತ್ಯು Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಕಂಬಕ್ಕೆ ಡಿಕ್ಕಿ

ಸುಳ್ಯ: ನಿನ್ನೆ ರಾತ್ರಿ ದೊಡ್ಡತೋಟ ಬಳಿಯ ಕಾಸಿನಗೋಡ್ಲು ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ. ಕಾರಿಗೆ ಸ್ವಲ್ಪ ಮಟ್ಟಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಕಾರು ಮಾವಿನಕಟ್ಟೆಯಿಂದ ಸುಳ್ಯದತ್ತ ಬರುತ್ತಿರುವ ಸಮಯದಲ್ಲಿ ಈ ದುರಂತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಕಂಬಕ್ಕೆ ಡಿಕ್ಕಿ Read More »

ವಿವಾಹ ಆರತಕ್ಷತೆ ಪ್ರಯುಕ್ತ ಯಕ್ಷಗಾಯನ

ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿದ ಸನತ್ ಮತ್ತು ಹರ್ಷಿತಾ ಆರತಕ್ಷತೆ ಪ್ರಯುಕ್ತ ಯಕ್ಷ ಗಾಯನ ಜರಗಿತು. ಭಾಗವತರಾಗಿ ಮಹೇಶ್ ಕನ್ಯಾಡಿ, ಸುಶಾಂತ್ ಆಚಾರ್ಯ ಕೈಕಂಬ, ಪದ್ಮನಾಭ ಕುಲಾಲ್ ಇಳಂತಿಲ, ಡಿ.ಕೆ. ಆಚಾರ್ಯ ಅಲಂಕಾರು ಮತ್ತು ಸಂಧ್ಯಾ ಬಂಟ್ವಾಳ ಭಾಗವಹಿಸಿದರು. ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಮೋಹನ ಶರವೂರು ಭಾಗವಹಿಸಿದ್ದರು. ಕಲಾವಿದ ಸತೀಶ್ ಆಚಾರ್ಯ ಮಾಣಿ ಕಾರ್ಯಕ್ರಮ ನಿರೂಪಿಸಿದರು. ಕಲಾವಿದರನ್ನು ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಭಾರತಿ ಎಂ. ಎಲ್. ಗೌರವಿಸಿದರು. ಕುಟುಂಬದ ಹಿರಿಯರಾದ ಯಕ್ಷಗಾನ ಕಲಾವಿದ

ವಿವಾಹ ಆರತಕ್ಷತೆ ಪ್ರಯುಕ್ತ ಯಕ್ಷಗಾಯನ Read More »

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ: ಡಾ. ಅನುರಾಧಾ ಕುರುಂಜಿ

ಪುತ್ತೂರು: ಹೆಣ್ಣು ಮಗಳು ಶಿಕ್ಷಣ ಪಡೆದರೆ ಕುಟುಂಬ ಮಾತ್ರವಲ್ಲ, ಸಮಾಜವೂ ಪ್ರಗತಿ ಸಾಧಿಸುತ್ತದೆ. ಶಿಕ್ಷಣವು ಹೆಣ್ಣುಮಕ್ಕಳಿಗೆ ಆತ್ಮವಿಶ್ವಾಸ, ಸ್ವಾವಲಂಬನೆ ಮತ್ತು ಉತ್ತಮ ಭವಿಷ್ಯವನ್ನು ನೀಡುತ್ತದೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರೆ, ಎನ್ನೆಂಸಿಯ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಅನುರಾಧಾ ಕುರುಂಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಹಿಳಾ ದಿನಾಚರಣೆಯಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಯನಗರ ಕಾರ್ಯಕ್ಷೇತ್ರದ ಬಾಂಧವ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಂಪನ್ಮೂಲ

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಸಮಾಜದ ಪ್ರಗತಿಯ ಮೊದಲ ಹೆಜ್ಜೆ: ಡಾ. ಅನುರಾಧಾ ಕುರುಂಜಿ Read More »

ವಿಜೃಂಭಣೆಯಿಂದ ನಡೆದ ಮಕ್ಕಳ ಮನೆಯ ವಾರ್ಷಿಕೋತ್ಸವ ‘ವರ್ಷ ಸಂಭ್ರಮ 2026’

ಪುತ್ತೂರು: ಪ್ರಣತಿ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನಡೆಸುತ್ತಿರುವ ಮಕ್ಕಳ ಮನೆಯ ವಾರ್ಷಿಕೋತ್ಸವ ‘ವರ್ಷ ಸಂಭ್ರಮ 2026’ ಪುತ್ತೂರಿನ ಟೌನ್‌ ಹಾಲ್‌ನಲ್ಲಿ ನಡೆಯಿತು. ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು, ಹಾಗೆಯೇ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀಧರ ರೈ ಮತ್ತು ಮಕ್ಕಳ ಮನೆಯ ಮೂಲ ಸಂಸ್ಥಾಪಕ ಮಹಾಲಿಂಗೇಶ್ವರ ಭಟ್ ದಿವ್ಯ ಹಸ್ತದಿಂದ‌‌ ಉದ್ಘಾಟನೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಧರ್ ರೈ ಅವರು ಮಕ್ಕಳನ್ನುದ್ದೇಶಿಸಿ ಮಾತನಾಡಿದರು. ಜನ್ವಿ, ದುತಿ, ಆರ್ವಿ, ಮಾನುಶಿ, ವೈಶ್ವಿ ಕಾರ್ಯಕ್ರಮದ ಮೊದಲಿನ ಅಂಗವಾದ

ವಿಜೃಂಭಣೆಯಿಂದ ನಡೆದ ಮಕ್ಕಳ ಮನೆಯ ವಾರ್ಷಿಕೋತ್ಸವ ‘ವರ್ಷ ಸಂಭ್ರಮ 2026’ Read More »

ಬಾವಿ ತೋಡಲು ‌ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ, ದೂರು ದಾಖಲು

ಕಡಬ: ತಾಲೂಕಿನ ರಾಮಕುಂಜದಲ್ಲಿ ಬಾವಿ ನೋಡುವ ಸಮಯದಲ್ಲಿ ವ್ಯಕ್ತಿಯೊಬ್ಬರು ಸ್ಪೋಟಕಗಳನ್ನು ಬಳಕೆ ಮಾಡಿದ್ದು, ಇದರಿಂದ ನೆರೆಕರೆಯ ‌ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ. ಮೈಸೂರು ನಿವಾಸಿ ಸೋಮಶೇಖರ್ ಎಂಬವರು 23 ಸೆಂಟ್ಸ್ ಭೂಮಿ ಖರೀದಿ ಮಾಡಿದ್ದರು. ಅದರಲ್ಲಿರುವ ಅಡಿಕೆ ಮರಗಳಿಗೆ ನೀರಿನ ಅವಶ್ಯಕತೆ ಪೂರೈಸಲು ಬಾವಿ ತೋಡಿಸುತ್ತಿದ್ದರು. ಈ ವೇಳೆ ಸುಮಾರು 15 ಅಡಿ ಆಳದಲ್ಲಿ ಕಲ್ಲು ಸಿಕ್ಕಿದ್ದು, ಅದನ್ನು ಒಡೆಯುವ ನಿಟ್ಟಿನಲ್ಲಿ ಸ್ಪೋಟಕಗಳನ್ನು ಬಳಕೆ ಮಾಡಿದ್ದರು. ಮಾ.

ಬಾವಿ ತೋಡಲು ‌ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ, ದೂರು ದಾಖಲು Read More »

error: Content is protected !!
Scroll to Top