ಪುತ್ತೂರು

ರಾಜ್ಯ ಸರಕಾರದ ತುಘಲಕ್ ಆಡಳಿತ, ಜನವಿರೋಧಿ ನೀತಿ ಖಂಡಿಸಿ ಏ.9 ರಂದು ಮಂಗಳೂರಿನಲ್ಲಿ ಜನಾಕ್ರೋಶ ಪಾದಯಾತ್ರೆ : ಸಂಜೀವ ಮಠಂದೂರು

ಪುತ್ತೂರು: ರಾಜ್ಯ ಸರಕಾರ ಒಂದೆಡೆ ಗ್ಯಾರಂಟಿ ನೆಪದಲ್ಲಿ ಅಭಿವೃದ್ಧಿ ಮರೆತು, ಇನ್ನೊಂದೆಡೆ ನೆಲ-ಜಲ ಎಲ್ಲವನ್ನೂ ಬಿಡದೆ ದರ ಏರಿಕೆ ಮೂಲಕ ಜನಸಾಮಾನ್ಯರನ್ನು ಲೂಟುತ್ತಿದ್ದು, ರಾಜ್ಯ ಸರಕಾರದ ತುಘಲಕ್ ಆಡಳಿತ, ಜನವಿರೋಧಿ ನೀತಿಯನ್ನು ಖಂಡಿಸಿ ಏ.9 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರಿನಲ್ಲಿ ಜನಾಕ್ರೋಶ ಪಾದಯಾತ್ರೆ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸುಮಾರು ಮೂರು ಸಾವಿರ ಮಂದಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಬಜೆಟ್ […]

ರಾಜ್ಯ ಸರಕಾರದ ತುಘಲಕ್ ಆಡಳಿತ, ಜನವಿರೋಧಿ ನೀತಿ ಖಂಡಿಸಿ ಏ.9 ರಂದು ಮಂಗಳೂರಿನಲ್ಲಿ ಜನಾಕ್ರೋಶ ಪಾದಯಾತ್ರೆ : ಸಂಜೀವ ಮಠಂದೂರು Read More »

7ನೇ ವಾರಕ್ಕೆ ಕಾಲಿರಿಸಿದ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.8 ಮಂಗಳವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

7ನೇ ವಾರಕ್ಕೆ ಕಾಲಿರಿಸಿದ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ Read More »

ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ಪತ್ತೆ

ಪುತ್ತೂರು :ಮನೆಯಿಂದ ಹೊರಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯೋರ್ವ ಭಾನುವಾರ ಅರಸಿಕೆರೆಯಲ್ಲಿ ಪತ್ತೆಯಾಗಿದ್ದಾನೆ. ಶನಿವಾರ ಸಂಜೆ ಕೊಡಿಪ್ಪಾಡಿ ಮನೆಯಿಂದ ಇನ್ನು ಹುಡುಕಬೇಡಿ ಎಂದು ಹೇಳಿ ನಾಪತ್ತೆಯಾಗಿದ್ದ ಕೊಡಿಪ್ಪಾಡಿ ನಿವಾಸಿ ರಝಕ್ ಮತ್ತು ಸಕೀನ ದಂಪತಿ ಪುತ್ರ ಪುತ್ತೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ (15)  ಪತ್ತೆಯಾದಾತ. ಈ ಕುರಿತು ಪೋಷಕರು ಪುತ್ತೂರು ಠಾಣೆಯಲ್ಲಿ ದೂರು ನೀಡಿದ್ದು ಪೋಷಕರಿಂದ ಮಾಹಿತಿ ಪಡೆದು ಹುಡುಕಾಡುತ್ತಿದ್ದಂತೆ ಸಂಜೆ ಅರಸಿಕೆರೆ ಸಮೀಪ ಈತ ಪತ್ತೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ಪತ್ತೆ Read More »

ಪುತ್ತೂರು ತಾಲೂಕು ವ್ಯಾಪ್ತಿಯ ಸರಕಾರಿ ನೌಕರರಿಗೆ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಮಾಹಿತಿ ಕಾರ್ಯಾಗಾರ | ಸರಕಾರಿ ನೌಕರರ ದಿನಾಚರಣೆ

ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆ ವತಿಯಿಂದ ಸರಕಾರಿ ನೌಕರರ ದಿನಾಚರಣೆ ಅಂಗವಾಗಿ ಪುತ್ತೂರು ತಾಲೂಕು ವ್ಯಾಪ್ತಿಯ ಸರಕಾರಿ ನೌಕರರಿಗೆ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಮಾಹಿತಿ ಕಾರ್ಯಾಗಾರ ಭಾನುವಾರ ದರ್ಬೆ ಆಫೀಸರ್ಸ್‍ ಕ್ಲಬ್‍ನಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನವೀನ್‍ ಕುಮಾರ್ ಎಂ.ಎಸ್‍. ಸಮಾರಂಭ ಉದ್ಘಾಟಿಸಿ ಮಾತನಾಡಿ, ಸರಕಾರಿ ನೌಕರರಿಗೆ ಮುಖ್ಯ ಸಮಸ್ಯೆಯಾಗಿರುವ ಎನ್‍ಪಿಎಸ್‍ಜ್ಯಾರಿಯನ್ನು ನ್ನು ರದ್ದುಪಡಿಸಿ ಒಪಿಎಸ್‍ಜ್ಯಾರಿಗೊಳಿಸುವಂತೆ ನಮ್ಮ ಮುಂದಿನ ಬಹುಮುಖ್ಯ ಹೋರಾಟವಾಗಿದ್ದು, ಎಲ್ಲಾ

ಪುತ್ತೂರು ತಾಲೂಕು ವ್ಯಾಪ್ತಿಯ ಸರಕಾರಿ ನೌಕರರಿಗೆ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಮಾಹಿತಿ ಕಾರ್ಯಾಗಾರ | ಸರಕಾರಿ ನೌಕರರ ದಿನಾಚರಣೆ Read More »

ತುಳು ರಂಗಭೂಮಿ ಕಲಾವಿದ ಸುರೇಶ್‍ ವಿಟ್ಲ ನಿಧನ

ವಿಟ್ಲ: ತುಳು ರಂಗ ಭೂಮಿ ಕಲಾವಿದ, ಮಂಜೇಶ್ವರ ಶಾರದಾ ಆರ್ಟ್ಸ್ನ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ತುಳು ರಂಗಭೂಮಿ ಕಲಾವಿದ ಸುರೇಶ್‍ ವಿಟ್ಲ ನಿಧನ Read More »

ಭಾವ ತೀರ ಯಾನ ಸಿನೆಮಾಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಮೆಚ್ಚುಗೆ | ನಾಳೆ (ಏ.7) ರಂದು ಸಂಜೆ 4-30 ಕ್ಕೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನೆಮಾಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಮೆಚ್ಚುಗೆ ಬರುತ್ತಿದ್ದು, ಯಶಸ್ವಿಯಾಗಿ ಪ್ರದರ್ಶನಗೊಳ್ಳುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.7 ಸೋಮವಾರ ಸಂಜೆ 4.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಭಾವ ತೀರ ಯಾನ ಸಿನೆಮಾಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಮೆಚ್ಚುಗೆ | ನಾಳೆ (ಏ.7) ರಂದು ಸಂಜೆ 4-30 ಕ್ಕೆ ಶೋ Read More »

ಸಮರ್ಪಣ್‍ ವಿಟ್ಲ ಸಂಘಟನೆಯ ಸೇವಾ ಕಲ್ಪದಲ್ಲಿ ನಿರ್ಮಿಸಿದ ಮನೆ ಗೃಹಪ್ರವೇಶ

ವಿಟ್ಲ: ಸಮರ್ಪಣ್ ವಿಟ್ಲ ಸಂಘಟನೆಯ ಸೇವಾ ಪ್ರಕಲ್ಪದಲ್ಲಿ ವಿಟ್ಲ ಕಸಬಾ ಗ್ರಾಮದ ಇರಂದೂರು ಎಂಬಲ್ಲಿ ಅರ್ಹ ಫಲಾನುಭವಿ ಕುಟುಂಬಕ್ಕೆ ನಿರ್ಮಿಸಿದ  ಮನೆಯ ಗೃಹಪ್ರವೇಶ ಇಂದು  (ಭಾನುವಾರ) ಬೆಳಿಗ್ಗೆ 7.30 ಕ್ಕೆ  ರಾಜೇಶ್ ಭಟ್ ಅವರ ಪೌರೋಹಿತ್ಯ ದೊಂದಿಗೆ ಗಣಪತಿ ಹವನ ಹಾಗೂ ಹಾಲುಕ್ಕಿಸುವುದರೊಂದಿಗೆ  ನಡೆಯಿತು. ಈ ಸಂದರ್ಭ ಮನೆ ನಿರ್ಮಾಣದಲ್ಲಿ ಸಹಕರಿಸಿದ ಮಹನೀಯರಾದ ಧನಂಜಯ ನೆಕ್ಕರೆ ಕಾಡು,  ರವಿ ಅಂಚನ್ , ಕೀರ್ತನ್ ಸಣ್ಣಗುತ್ತು,  ತೀರ್ಥೆಶ್, ಮಹೇಶ್ , ಮೊದಲಾದವರನ್ನು ಸಮರ್ಪಣ್ ವಿಟ್ಲ ಇದರ ಅಧ್ಯಕ್ಷ ಯಶವಂತ್

ಸಮರ್ಪಣ್‍ ವಿಟ್ಲ ಸಂಘಟನೆಯ ಸೇವಾ ಕಲ್ಪದಲ್ಲಿ ನಿರ್ಮಿಸಿದ ಮನೆ ಗೃಹಪ್ರವೇಶ Read More »

ಕಾರು-ಟೆಂಪೋ ಡಿಕ್ಕಿ : ಅಂಗಡಿಗೆ ನುಗ್ಗಿದ ಟೆಂಪೋ

ಪುತ್ತೂರು: ಕಾರು ಮತ್ತು ಟೆಂಪೋ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಟೆಂಪೋ ಅಂಗಡಿಗೆ ನುಗ್ಗಿದ ಘಟನೆ ಪುತ್ತೂರು ಖಾಸಗಿ ಬಸ್‍ ನಿಲ್ದಾಣದ ಬಳಿ ಇಂದು ನಡೆದಿದೆ. ಕಾರು ಮತ್ತು ಟೆಂಪೋ ನಡುವೆ ಡಿಕ್ಕಿಯಾಗಿದ್ದು ಪರಿಣಾಮ ಟೆಂಪೋ ಪಕ್ಕದಲ್ಲಿದ್ದ ಅಂಗಡಿಯೊಂದಕ್ಕೆ ನುಗ್ಗಿದೆ. ಘಟನೆ ಪರಿಣಾಮ ವಾಹನಗಳಿಗೆ ಮತ್ತು ಅಂಗಡಿಗೆ ಹಾನಿಯಾಗಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾರು-ಟೆಂಪೋ ಡಿಕ್ಕಿ : ಅಂಗಡಿಗೆ ನುಗ್ಗಿದ ಟೆಂಪೋ Read More »

ಕರ್ನಾಟಕ ಜಾನಪದ ಅಕಾಡೆಮಿಯ ಡಾ.ಜೀ.ಶಂ.ಪ ಜಾನಪದ ತಜ್ಞ ಪ್ರಶಸ್ತಿ ಪ್ರದಾನ

ಪುತ್ತೂರು: ಕರ್ನಾಟಕ ಜಾನಪದ ಅಕಾಡೆಮಿಯ 2023 ನೆಯ ಸಾಲಿನ ಡಾ.ಜೀ.ಶಂ.ಪ ಜಾನಪದ ತಜ್ಞ ಪ್ರಶಸ್ತಿಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ. ಚಿನ್ನಪ್ಪ ಗೌಡರಿಗೆ ಪ್ರದಾನ ಮಾಡಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆಯವರು ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮತ್ತು ಇತರ ಗಣ್ಯರ ಸಮಕ್ಷಮದಲ್ಲಿ ಅಕಾಡೆಮಿಯ ಕಾರ್ಯಾಲಯದಲ್ಲಿ ಜರುಗಿದ ಸಮಾರಂಭದಲ್ಲಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ ಜಾನಪದ ಅಕಾಡೆಮಿಯ ಡಾ.ಜೀ.ಶಂ.ಪ ಜಾನಪದ ತಜ್ಞ ಪ್ರಶಸ್ತಿ ಪ್ರದಾನ Read More »

ಇಂದು (ಏ.6) : ಸಮರ್ಪಣ್‍ ವಿಟ್ಲ ಸಂಘಟನೆ ಬಡ ಕುಟುಂಬಕ್ಕೆ ನಿರ್ಮಿಸಿದ ಸಮರ್ಪಣ್‍ ನಿಲಯದ ಗೃಹಪ್ರವೇಶ

ವಿಟ್ಲ : ಸಮರ್ಪಣ್ ವಿಟ್ಲ ಸಂಘಟನೆಯ ಸೇವಾ ಪ್ರಕಲ್ಪದಲ್ಲಿ ವಿಟ್ಲ ಕಸಬಾ ಗ್ರಾಮದ ಇರಂದೂರು ಎಂಬಲ್ಲಿ ಅರ್ಹ ಫಲಾನುಭವಿ ಕುಟುಂಬಕ್ಕೆ ನಿರ್ಮಿಸಿದ ಸಮರ್ಪಣ್ ನಿಲಯದ ಗ್ರಹಪ್ರವೇಶ ಇಂದು (ಭಾನುವಾರ) ನಡೆಯಲಿದೆ. ಬೆಳಿಗ್ಗೆ  ಗಣಪತಿ ಹವನ ನಡೆಯಲಿದೆ. ಬಳಿಕ ಹಾಲುಕ್ಕಿಸಿ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷರಾದ ಯಶವಂತ್ ಎನ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು (ಏ.6) : ಸಮರ್ಪಣ್‍ ವಿಟ್ಲ ಸಂಘಟನೆ ಬಡ ಕುಟುಂಬಕ್ಕೆ ನಿರ್ಮಿಸಿದ ಸಮರ್ಪಣ್‍ ನಿಲಯದ ಗೃಹಪ್ರವೇಶ Read More »

error: Content is protected !!
Scroll to Top