ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯ ವತಿಯಿಂದ ಐದು ದಿನಗಳ “ಪ್ರೇರಣಾ ಬೇಸಿಗೆ ಶಿಬಿರ” | ಒಕ್ಕಲಿಗ ಸೌಧ ಸಭಾಭವನದಲ್ಲಿ ಶಿಬಿರಕ್ಕೆ ಚಾಲನೆ
ಪುತ್ತೂರು: ಪುತ್ತೂರಿನ ಏಳ್ಮುಡಿಯಲ್ಲಿರುವ ಕೆನರಾ ಬ್ಯಾಂಕ್ ಬಳಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಐದು ದಿನಗಳ ಕಾಲ ನಡೆಯುವ “ಪ್ರೇರಣಾ ಬೇಸಿಗೆ ಶಿಬಿರ”ಕ್ಕೆ ಶುಕ್ರವಾರ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಒಕ್ಕಲಿಗ ಸೌಧ ಸಭಾಭವನದಲ್ಲಿ ಚಾಲನೆ ನೀಡಲಾಯಿತು. ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ನೈಸರ್ಗಿಕ ಪರಿಸರವಾದ ಹಳ್ಳಿಗಳಲ್ಲಿ ಜೀವಿಸುವುದೇ ಪುಣ್ಯ. ಈ ನಿಟ್ಟಿನಲ್ಲಿ ಮಕ್ಕಳಿಗೆ ನೈಸರ್ಗಿಕ ಪರಿಸರದ ಕುರಿತು ತಿಳಿದುಕೊಳ್ಳಲು ಅಲ್ಲಿನ […]










