ಪುತ್ತೂರು

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿ ಲೋಕಾರ್ಪಣೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿಯ ಉದ್ಘಾಟನೆ ಏಪ್ರಿಲ್ 5ರಂದು ನೂತನ  ಕಚೇರಿ ಆವರಣದಲ್ಲಿ ನಡೆಯಿತು. ಆರಂಭದಲ್ಲಿ ಶಾಸಕರಾದ ಅಶೋಕ್ ರೈ ಅವರು ರಿಬ್ಬನ್ ಕತ್ತರಿಸಿ ಕಛೇರಿಯೊಳಗಡೆ ದೀಪ ಪ್ರಜ್ವಲಿಸಿ ಕಚೇರಿಯನ್ನು ಉದ್ಘಾಟಿಸಿದರು. ಶಿಕ್ಷಕರು ನಮ್ಮ ಜಿಲ್ಲೆಯ ಮಕ್ಕಳನ್ನು ಪ್ರತಿಭಾವಂತರನ್ನಾಗಿ ರೂಪಿಸಿ ಹೆಚ್ಚು ಸರ್ಕಾರಿ ಉದ್ಯೋಗ ಸಿಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿ ಶಿಕ್ಷಣ ಇಲಾಖೆಯಿಂದ ಸಿಗುವ ಎಲ್ಲಾ ಅನುದಾನಗಳನ್ನು ತರಿಸಿಕೊಡುತ್ತೇನೆ ಎಂದು ವಾಗ್ದಾನ ನೀಡಿದರು. ಬಳಿಕ ಕಳೆದ ಸಾಲಿನಲ್ಲಿ 10ನೇ […]

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ನೂತನ ಕಛೇರಿ ಲೋಕಾರ್ಪಣೆ Read More »

7 ನೇ ವಾರ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 3:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.6 ಭಾನುವಾರದಂದು ಸಂಜೆ 3:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

7 ನೇ ವಾರ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 3:30 ಕ್ಕೆ ಚಿತ್ರ ಪ್ರದರ್ಶನ Read More »

ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4 % ಮೀಸಲಾತಿ | ರದ್ದುಪಡಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ

ಪುತ್ತೂರು: ಕರ್ನಾಟಕ ಸರಕಾರ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವಂತೆ ಹಿಂದೂ ಜನಜಾಗೃತಿ ಸಮಿತಿ ಆಯುಕ್ತರ ಸಹಾಯಕ ಪೂವಪ್ಪ ಅವರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದೆ. ಸರಕಾರದ ಟೆಂಡರ್ ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಮಸೂದೆಯನ್ನು ಸಹ ಮಂಡಿಸಲಾಗಿದೆ. ಭಾರತದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲದಿರುವಾಗಲೂ ಸರಕಾರ ಸಂವಿಧಾನಕ್ಕೆ ವಿರುದ್ಧವಾಗಿ ಸಂವಿಧಾನಬಾಹಿರ ಮೀಸಲಾತಿಯನ್ನು ನೀಡಿದೆ. ಇದನ್ನು ರದ್ದುಮಾಡುವಂತೆ ಮನವಿಯಲ್ಲಿ ಸಮಿತಿ ಉಲ್ಲೇಖಿಸಿದೆ. ಕರ್ನಾಟಕ ಸರಕಾರ ಇತ್ತಿಚೇಗೆ ತನ್ನ ಬಜೆಟ್

ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4 % ಮೀಸಲಾತಿ | ರದ್ದುಪಡಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ Read More »

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ 118ನೇ ಜಯಂತಿ

ಪುತ್ತೂರು: ಧೀಮಂತ ನಾಯಕ, ರಾಜಕೀಯ, ಸಾಮಾಜಿಕವಾಗಿ ಎಲ್ಲಾ ಅರ್ಹತೆಗಳನ್ನು ಹೊಂದಿ ಬದುಕಿದ ಬಾಬು ಜಗಜ್ಜೀವನ್ ರಾಮ್‍ ಅವರು ಒಂದರ್ಥದಲ್ಲಿ ಸಮಾಜ ಶಕ್ತಿಯಾಗಿದ್ದರು ಎಂದು ಪುತ್ತೂರು ಸರಕಾರಿ ಪ್ರಥಮದರ್ಜೆ ಕಾಲೇಜು ಪ್ರಿನ್ಸಿಪಾಲ್‍ ಸುಬ್ಬಪ್ಪ ಕೈಕಂಬ ಹೇಳಿದರು. ಅವರು ಶನಿವಾರ ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ 118ನೇ ಜನ್ಮ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸುವ

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ 118ನೇ ಜಯಂತಿ Read More »

ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಪುತ್ತೂರಿನ ರಂಗಭೂಮಿ ಕಲಾವಿದೆ  ಜ್ಯೋತಿ ಕುಲಾಲ್‍

ಪುತ್ತೂರು  : ರಂಗಭೂಮಿಯಲ್ಲಿ ಸಾಧನೆಗೈದ ಪುತ್ತೂರಿನ ರಂಗಭೂಮಿ ಕಲಾವಿದೆ  ಜ್ಯೋತಿ ಕುಲಾಲ್‍ ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಆಕ್ಸಿಸ್‍ ಮ್ಯಾಕ್ಸ್ ಲೈಫ್ ಇನ್ಸುರೆನ್ಸ್‍ ವತಿಯಿಂದ  “VALUE AWARD CEREMONY “ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಪುತ್ತೂರಿನ ರಂಗಭೂಮಿ ಕಲಾವಿದೆ  ಜ್ಯೋತಿ ಕುಲಾಲ್‍ Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 4:30ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಏ.05(ನಾಳೆ) ರಂದು ಸಂಜೆ 4:30 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 4:30ಕ್ಕೆ ಚಿತ್ರ ಪ್ರದರ್ಶನ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯ ಮಟ್ಟದ ಐಟಿ ಫೆಸ್ಟ್‌ “ಪಿನ್ಯಾಕಲ್‌” ಗೆ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗ ಮತ್ತು ಪಿನ್ಯಾಕಲ್‌ ಐಟಿಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಐಟಿ ಫೆಸ್ಟ್‌ ಪಿನ್ಯಾಕಲ್‌-25 ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಸೋಷಿಯಲ್‌ ಮೀಡಿಯಾ ಇನ್‌ ಪ್ಲುಎನ್ಸರ್‌ ಹಾಗೂ ತುಳು ಕಂಟೆಂಟ್‌ ಕ್ರಿಯೇಟರ್‌ ಶರಣ್‌ ಚಿಲಿಂಬಿ ದೀಪ ಬೆಳಗಿಸುವುದರ ಮೂಲಕ ಐಟಿ ಫೆಸ್ಟ್‌ ನ್ನು ಉದ್ಘಾಟಿಸಿ ಮಾತನಾಡಿ, “ಪಾಠಗಳಿಂದ ಮಾತ್ರವಲ್ಲದೆ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಬಹಳಷ್ಟು ಕಲಿಯಲು ಸಾಧ್ಯವಾಗುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವುದು ಹೆಚ್ಚು ಮುಖ್ಯ. ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಜನರು ಇತರರಿಗಿಂತ ಒಂದು ಹೆಜ್ಜೆ

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯ ಮಟ್ಟದ ಐಟಿ ಫೆಸ್ಟ್‌ “ಪಿನ್ಯಾಕಲ್‌” ಗೆ ಚಾಲನೆ Read More »

ನಾಳೆ (ಏ.5) ವಿವಿಧೆಡೆ ಕರೆಂಟಿಲ್ಲ | ಎಲ್ಲೆಲ್ಲಿ ? ಇಲ್ಲಿದೆ ಡಿಟೈಲ್ಸ್

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಕಾಂಚನ, ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಮತ್ತು ವಾಟರ್ ಸಪ್ಲೈ ಫೀಡರ್ ನಲ್ಲಿ ಏ.5ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಉಪ್ಪಿನಂಗಡಿ, ಬಜತ್ತೂರು, ಕೊಲ, ದಾರಂದಕುಕ್ಕು, ಸೇಡಿಯಾಪು ಮತ್ತು ಕೋಡಿಂಬಾಡಿ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಅದರಂತೆ 110/33/11

ನಾಳೆ (ಏ.5) ವಿವಿಧೆಡೆ ಕರೆಂಟಿಲ್ಲ | ಎಲ್ಲೆಲ್ಲಿ ? ಇಲ್ಲಿದೆ ಡಿಟೈಲ್ಸ್ Read More »

ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್

ಪುತ್ತೂರು: ಬನ್ನೂರಿನ ಅಲಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್ ಪಟ್ಟೆ ಅಧಿಕಾರ ಸ್ವೀಕರಿಸಿದರು. ಇಂದು ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಾಲಾ ಅಧ್ಯಕ್ಷ ಕಳುವಾಜೆ ವೆಂಕಟ್ರಮಣ ಗೌಡರು ನೂತನ ಮುಖ್ಯೋಪಾಧ್ಯಾಯರಿಗೆ ನೇಮಕಾತಿ ಆದೇಶ ಪತ್ರ ಮತ್ತು ಶಾಲಾ ಕಡತಗಳನ್ನು ನೀಡಿ ಶಾಲು ಹೊದಿಸಿ ಶುಭ ಹಾರೈಸಿದರು. ಸಂಚಾಲಕರಾದ ಎ.ವಿ. ನಾರಾಯಣ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ನೂತನ ಪ್ರಾಂಶುಪಾಲರನ್ನು ಪರಿಚಯಿಸಿದರು. ನಿರ್ದೇಶಕರಾದ ಸೀತಾರಾಮ ಕೇವಳ ಮಾತನಾಡಿ ನೂತನ ಪ್ರಾಂಶುಪಾಲರಿಗೆ ಶುಭ ಹಾರೈಸಿದರು. ಆಡಳಿತಾಧಿಕಾರಿ ಗುಡ್ಡಪ್ಪ

ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್’ನ ಮುಖ್ಯೋಪಾಧ್ಯಾಯರಾಗಿ ಅಮರನಾಥ್ Read More »

ಬಸ್ ಪಲ್ಟಿ : ಓರ್ವ ಮೃತ್ಯು, 12 ಮಂದಿಗೆ ಗಾಯ

ನೆಲ್ಯಾಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಪ್ರಯಾಣಿಕನೋರ್ವ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಬೆಂಗಳೂರು, ಯಡಿಯೂರು ನಿವಾಸಿ ಹರ್ಷ (24) ಮೃತಪಟ್ಟವರು. ಅವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮುಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ 12 ಮಂದಿಯಲ್ಲಿ 11 ಜನರು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಟ್ರಾಫಿಕ್

ಬಸ್ ಪಲ್ಟಿ : ಓರ್ವ ಮೃತ್ಯು, 12 ಮಂದಿಗೆ ಗಾಯ Read More »

error: Content is protected !!
Scroll to Top