ಪುತ್ತೂರು

ಮಂಗಳೂರು-ಬೆಂಗಳೂರು ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿ | ಸವಣೂರಿನಲ್ಲಿ ಪತ್ತೆ

ಪುತ್ತೂರು: ಯುವಕನೋರ್ವ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಬಿದ್ದು, 15 ಗಂಟೆ ಬಳಿಕ ಸವಣೂರಿನಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮಾ 25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11 ಗಂಟೆ ವೇಳೆಗೆ ಸವಣೂರು ಸಮೀಪದ ಸುಣ್ಣಾಜೆ ಬಳಿ ರೈಲಿನಿಂದ ಬಿದ್ದಿದ್ದಾರೆ. ರಾತ್ರಿ ವೇಳೆ ಯುವಕ ರೈಲಿನಿಂದ ಬೀಳುವುದನ್ನು ಸಹ ಪ್ರಯಾಣಿಕರು ಗಮನಿಸಿದ್ದು ನೆಟ್ಟಣ ತಲುಪಿದ ವೇಳೆ ರೈಲ್ವೆ ಮಾಸ್ಟ‌ರ್ ಗಮನಕ್ಕೆ ತಂದಿದ್ದರು. ಆದರೆ ಯುವಕ ಬಿದ್ದ ಜಾಗ ಯಾವುದು […]

ಮಂಗಳೂರು-ಬೆಂಗಳೂರು ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿ | ಸವಣೂರಿನಲ್ಲಿ ಪತ್ತೆ Read More »

ಅಕ್ಷಯ ಕಾಲೇಜು: ರಕ್ಷಕ ಶಿಕ್ಷಕ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆಯಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.  ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದ ಪುತ್ತೂರು ಟೌನ್ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯದ ಶ್ರೀ ಶೇಖರ್ ಶೆಟ್ಟಿ ಇವರು, ಸೋಲು ಗೆಲುವಿನ ಪಯಣದಲ್ಲಿ ಮಕ್ಕಳನ್ನು ಸೋಲಲು ಬಿಡಿ, ಸೋತ ನಂತರ ಗೆಲುವು ಪಡೆದುಕೊಳ್ಳುವುದು ಗೆಲುವಿನ ಪ್ರಥಮ ದಾರಿಯಾಗಿರುತ್ತದೆ. ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿ ಮಾಡಿ ಎಂದು ಅಭಿಪ್ರಾಯಪಟ್ಟರು.

ಅಕ್ಷಯ ಕಾಲೇಜು: ರಕ್ಷಕ ಶಿಕ್ಷಕ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ Read More »

ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ವೀರಮಂಗಲ  ಪುತ್ತೂರು ಕಡಬ ತಾಲೂಕಿನಲ್ಲಿ ಅತ್ಯುತ್ತಮ ಶಾಲೆ ಎಂಬ ಗೌರವ | ಅತ್ಯುತ್ತಮ ಎಸ್‌ ಡಿ ಎಂ ಸಿ ಕಾರ್ಯನಿರ್ವಹಣೆ| ಪುಷ್ಠಿ ಗೌರವದೊಂದಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಒಂದು ಲಕ್ಷ ಬಹುಮಾನ

 ವೀರಮಂಗಲ : ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆಯಿಂದ ಅತ್ಯುತ್ತಮ ಶಾಲಾ ನಿರ್ವಹಣೆ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿ ಸಮೀಕ್ಷೆ ನಡೆಸಿದ್ದು . ಈ ಸಮೀಕ್ಷೆಯಲ್ಲಿ ಪುತ್ತೂರು ಕಡಬ ತಾಲೂಕಿನ  ವೀರಮಂಗಲ ಪಿಎಂಶ್ರೀ ಶಾಲೆ ಅತ್ಯುತ್ತಮ ಶಾಲೆಯಾಗಿ ಪುಷ್ಠಿ ಗೌರವದೊಂದಿಗೆ ಒಂದು ಲಕ್ಷ ನಗದು ಬಹುಮಾನವನ್ನು ಪಡೆದಿದೆ. ಪುತ್ತೂರು ಮತ್ತು ಕಡಬ ತಾಲೂಕಿನ ಎಲ್ಲಾ ಕಿರಿಯ ಪ್ರಾಥಮಿ ,ಹಿರಿಯ ಪ್ರಾಥಮಿಕ ಹಾಗೂ ಹೈಸ್ಕೂಲ್‌ ಗಳು ಇಲಾಖೆಯ ವಿದ್ಯಾವಾಹಿನಿ ಪೋರ್ಟಲ್‌ ನಲ್ಲಿ ಪ್ರಸ್ತಾವನೆ ಸಲ್ಲಿಸಿದ್ದವು.  ಆಯಾ ಕ್ಲಸ್ಟರ್‌ ಸಿ

ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ವೀರಮಂಗಲ  ಪುತ್ತೂರು ಕಡಬ ತಾಲೂಕಿನಲ್ಲಿ ಅತ್ಯುತ್ತಮ ಶಾಲೆ ಎಂಬ ಗೌರವ | ಅತ್ಯುತ್ತಮ ಎಸ್‌ ಡಿ ಎಂ ಸಿ ಕಾರ್ಯನಿರ್ವಹಣೆ| ಪುಷ್ಠಿ ಗೌರವದೊಂದಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಒಂದು ಲಕ್ಷ ಬಹುಮಾನ Read More »

ಪರೀಕ್ಷಾ ವಠಾರದಲ್ಲಿ ಶೂಟಿಂಗ್ | ಶೂಟಿಂಗ್‍ ತಡೆಹಿಡಿದ ಬಿಇಒ

ಪುತ್ತೂರು: ಶಾಲಾ ಪರೀಕ್ಷಾ ವಠಾರದಲ್ಲಿ ಫಿಲಂ ಶೂಟಿಂಗ್ ಇಂದು ಬೆಳಗ್ಗೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಚರ್ಚಾ ಸೈಂಟ್ ವಿಕ್ಚರ್ಸ್ ಶಾಲಾ ವಠಾರದಲ್ಲಿ ಶೂಟಿಂಗ್‍ ನಡೆಯುತ್ತಿದ್ದು, ಎಸ್.ಎಸ್.ಎಲ್‍.ಸಿ ಪರೀಕ್ಷೆ ನಡೆಯುತ್ತಿದ್ದರಿಂದ ಪೋಷಕರು ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ದೂರಿದ್ದಾರೆ.   200 ಮೀಟ‌ರ್ ಅಂತರದಲ್ಲಿ ಸೆಕ್ಷನ್ ಜಾರಿಯಲ್ಲಿದ್ದರೂ ಶೂಟಿಂಗ್ ನಡೆದ ಮತ್ತು ಪೋಷಕರ ದೂರಿಗೆ ಸಂಬಂಧಿಸಿ ಸ್ಥಳಕ್ಕೆ ಬಿಇಒ ಆಗಮಿಸಿ ಶೂಟಿಂಗ್ ಕ್ಯಾನ್ಸಲ್ ಮಾಡಿದ್ದಾರೆ. ಮದ್ಯಾಹ್ನದ ಬಳಿಕ ಶೂಟಿಂಗ್ ಗೆ ಅನುಮತಿಯನ್ನು ನೀಡಲಾಗಿದೆ ಎನ್ನಲಾಗಿದೆ.

ಪರೀಕ್ಷಾ ವಠಾರದಲ್ಲಿ ಶೂಟಿಂಗ್ | ಶೂಟಿಂಗ್‍ ತಡೆಹಿಡಿದ ಬಿಇಒ Read More »

ಸಮಾಜದ ಒಳಿತಿಗೆ ಹಿರಿಯರ ಅನುಭವ ಬಳಕೆಯಾಗಲಿ: ಕೊಂಡೆವೂರು ಶ್ರೀಗಳು 

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ  ಕೇಂದ್ರ ಸಮಿತಿಯ ಸಭೆಯು ಉಪ್ಪಳ ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಜರಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಯೋಗಾಶ್ರಮದ ಶ್ರೀ ನಿತ್ಯಾನಂದ  ಸ್ವಾಮೀಜಿಯವರು ಜ್ಞಾನವೃದ್ಧರಾದ ಹಿರಿಯರ ಅನುಭವವು ನಿಂತ ನೀರಾಗದೆ ಸಮಾಜದ ಒಳಿತಿಗೆ ಬಳಕೆಯಾಗಬೇಕು. ಹಿರಿಯರ ಸೇವಾ ಪ್ರತಿಷ್ಠಾನದ ಸೇವಾ ಕಾರ್ಯಗಳು ಅನುಭವಗಳ ವಿನಿಮಯದೊಂದಿಗೆ ನಡೆಯುತ್ತಿರುವುದು ಇಂದಿನ ಸಾಮಾಜಿಕ ಪರಿಸರಕ್ಕೆ   ಅತ್ಯಂತ ಉಪಯುಕ್ತವಾಗಿದ್ದು  ಪ್ರತಿಷ್ಠಾನದ ಸೇವಾಕಾರ್ಯಗಳಿಗೆ ಆಶ್ರಮದ ಪೂರ್ಣ ಬೆಂಬಲ ನೀಡುವುದಾಗಿ  ತಿಳಿಸಿದರು.  ಸಮಾರಂಭದ ಅಧ್ಯಕ್ಷತೆಯನ್ನು

ಸಮಾಜದ ಒಳಿತಿಗೆ ಹಿರಿಯರ ಅನುಭವ ಬಳಕೆಯಾಗಲಿ: ಕೊಂಡೆವೂರು ಶ್ರೀಗಳು  Read More »

ಯುವಕನ ಶವ ಕೆರೆಯಲ್ಲಿ ಪತ್ತೆ

ಪುತ್ತೂರು: ಯುವಕನೋರ್ವನ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ರಾಗಿದಕುಮೇರು ಸಮೀಪದ ಅಂದ್ರಟ್ಟದ ಮರಕ್ಕೂರು ಎಂಬಲ್ಲಿ ನಡೆದಿದೆ. ಮರಕ್ಕೂರ್ ನಿವಾಸಿ ಕಿರಣ್‍ ನಾಯ್ಕ್ (29) ಎಂಬವರ ಶವ ಪತ್ತೆಯಾಗಿದೆ. ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ,ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

ಯುವಕನ ಶವ ಕೆರೆಯಲ್ಲಿ ಪತ್ತೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದಂದು ಡ್ರೋನ್ ಹಾರಾಟಕ್ಕೆ ಅವಕಾಶವಿಲ್ಲ | ವರ್ಷಾವಧಿ ಜಾತ್ರೆಯ ಅಂಗವಾಗಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದಂದು ಯಾವುದೇ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಸುರಕ್ಷತಾ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸ್ಟಾಲ್ ನವರಿಗೆ ಯಾವುದೇ ಕಾರಣ ವಿದ್ಯುತ್ ಸಂಪರ್ಕವಿಲ್ಲ. ದೇವಸ್ಥಾನದ ಆಸುಪಾಸಿನಲ್ಲಿ ಯಾವುದೇ ವಾಹನ ನಿಲುಗಡೆಗೂ ಅವಕಾಶ ಕೊಡುವಂತಿಲ್ಲ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ೧೦ ರಿಂದ ೨೦ ರ ತನಕ ನಡೆಯುವ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ದೇವಸ್ಥಾನದ ವಠಾರದಲ್ಲಿ ನಡೆದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಜನ ಸಂದಣಿತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದಂದು ಡ್ರೋನ್ ಹಾರಾಟಕ್ಕೆ ಅವಕಾಶವಿಲ್ಲ | ವರ್ಷಾವಧಿ ಜಾತ್ರೆಯ ಅಂಗವಾಗಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ Read More »

ನರಿಮೊಗರಿನ ಹಿಂದುಳಿದ ವಿದ್ಯಾರ್ಥಿನಿ ನಿಲಯದಲ್ಲಿ ತಾಲೂಕು ಮಟ್ಟದ ಸಂಯುಕ್ತ ವಾರ್ಷಿಕೋತ್ಸವ

ಪುತ್ತೂರು: ತಾಲೂಕು ಮಟ್ಟದ  ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯಗಳ ಸಂಯುಕ್ತ ವಾರ್ಷಿಕೋತ್ಸವ ಹಾಸ್ಟೆಲ್ ನ ಒಳಾಂಗಣದಲ್ಲಿ ನಡೆಯಿತು. ನ್ಯೂಸ್ ಪುತ್ತೂರು ಇದರ ಅಧ್ಯಕ್ಷ ಸೀತಾರಾಮ ಕೇವಳ ಮಾತನಾಡಿ, ಸರ್ಕಾರ ಒದಗಿಸಿರುವ ಹಾಸ್ಟೆಲ್ ಸೌಲಭ್ಯವನ್ನು ಬಳಸಿ ಪ್ರಗತಿ ಹೊಂದಿದ ವಿದ್ಯಾರ್ಥಿನಿಯರು ಮುಂದಿನ ಪೀಳಿಗೆಯ ಮಕ್ಕಳಿಗೆ ಆಧಾರವಾಗುವ ಮೂಲಕ ಋಣ ಸಂದಾಯ ಮಾಡಬೇಕು ಎಂದು ಕರೆಯಿತ್ತರು. ಇತರ ಗಣ್ಯರೊಡಗೂಡಿ ಐದು ನಿಲಯಗಳ ಈ ಕೆಳಗಿನ ಶೈಕ್ಷಣಿಕ ಪ್ರತಿಭಾನ್ವಿತ ವಿದ್ಯಾರ್ಥಿನಿಯರನ್ನು ಅವರು ಸನ್ಮಾನಿಸಿದರು. ಪ್ರಥಮ ಸ್ಥಾನಿಗಳಾದ ನರಿಮೊಗರು ನಿಲಯದ

ನರಿಮೊಗರಿನ ಹಿಂದುಳಿದ ವಿದ್ಯಾರ್ಥಿನಿ ನಿಲಯದಲ್ಲಿ ತಾಲೂಕು ಮಟ್ಟದ ಸಂಯುಕ್ತ ವಾರ್ಷಿಕೋತ್ಸವ Read More »

ಅಲ್ಪಸಂಖ್ಯಾತರ ಓಲೈಕೆ ಮೂಲಕ ಓಟ್‍ ಬ್ಯಾಂಕ್‍ ಗಾಗಿ ಕಾಂಗ್ರೆಸ್‍ ನಿಂದ ಸಂವಿಧಾನ ಬದಲಾವಣೆಯ ನೀಚ ರಾಜಕಾರಣ : ಕಿಶೋರ್ ಕುಮಾರ್ ಪುತ್ತೂರು | ಡಿ.ಕೆ.ಶಿವಕುಮಾರ್ ವಿರುದ್ಧ ಬೃಹತ್‍ ಪ್ರತಿಭಟನೆ

ಪುತ್ತೂರು: ಕಾಂಗ್ರೆಸ್‍ ಆಡಳಿತಕ್ಕೆ ಬಂದ ಬಳಿಕ ಜನಸಾಮಾನ್ಯರು ಕ್ಲಿಷ್ಟಕರ ಜೀವನ ನಡೆಸುತ್ತಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಜನರ ಹಾದಿ ತಪ್ಪಿಸುತ್ತಿದ್ದಾರೆ. ಇದೀಗ ಬಾಬಾಸಾಹೇಬ್‍ ಅಂಬೇಡ್ಕರ್ ಬರೆದ ಸಂವಿಧಾನವನ್ನು ಮುಸಲ್ಮಾನರ ಓಲೈಕೆಗಾಗಿ ಬದಲಾವಣೆ ಮಾಡಲು ಹೊರಟು ಸಂವಿಧಾನಕ್ಕೆ ಅವಮಾನ ಮಾಡುವ ನೀಚ ರಾಜಕೀಯಕ್ಕಿಳಿದಿದ್ದಾರೆ ಡಿ.ಕೆ.ಶಿವಕುಮಾರ್ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪಿಸಿದರು. ಅವರು ಮಂಗಳವಾರ ಸಂಜೆ ದರ್ಬೆ ವೃತ್ತದ ಬಳಿಕ ಪುತ್ತೂರು ಬಿಜೆಪಿ ವತಿಯಿಂದ ಮುಸಲ್ಮಾನರಿಗಾಗಿ ಸಂವಿಧಾನ ಬದಲಾಯಿಸಲು ಹೊರಟ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ನಡೆದ

ಅಲ್ಪಸಂಖ್ಯಾತರ ಓಲೈಕೆ ಮೂಲಕ ಓಟ್‍ ಬ್ಯಾಂಕ್‍ ಗಾಗಿ ಕಾಂಗ್ರೆಸ್‍ ನಿಂದ ಸಂವಿಧಾನ ಬದಲಾವಣೆಯ ನೀಚ ರಾಜಕಾರಣ : ಕಿಶೋರ್ ಕುಮಾರ್ ಪುತ್ತೂರು | ಡಿ.ಕೆ.ಶಿವಕುಮಾರ್ ವಿರುದ್ಧ ಬೃಹತ್‍ ಪ್ರತಿಭಟನೆ Read More »

ಕೆ ಎಸ್ ಎಸ್ ಕಾಲೇಜಿನಲ್ಲಿ ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ,  ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ  ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಾ, 25 ರಂದು  ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮವನ್ನು ಕೆ.ಎಸ್.ಎಸ್ ಕಾಲೇಜಿನ ನಿಕಟಪೂರ್ವ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್ ಉದ್ಘಾಟಿಸಿದರು.  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ

ಕೆ ಎಸ್ ಎಸ್ ಕಾಲೇಜಿನಲ್ಲಿ ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ Read More »

error: Content is protected !!
Scroll to Top