ಪುತ್ತೂರು

ಇಚಿಲಂಪಾಡಿ-ಪೆರಿಯಶಾಂತಿ ರಸ್ತೆ ದುರಸ್ತಿ ಕಾಮಗಾರಿ : ಇಂದು (ಮಾ.19) ವಾಹನ ಸಂಚಾರದಲ್ಲಿ ಬದಲಾವಣೆ

ನೆಲ್ಯಾಡಿ: ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಮತ್ತು ಪೆರಿಯ ಶಾಂತಿ ನಡುವಿನ ರಸ್ತೆಯಲ್ಲಿ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲು ಮಾ.19 ರಂದು (ಇಂದು) ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ರಸ್ತೆ ನಿರ್ಬಂಧದಿಂದಾಗಿ, ಈ ಮಾರ್ಗ ದಲ್ಲಿ ಸಂಚರಿಸುವ ವಾಹನಗಳು ಸುಬ್ರಹ್ಮಣ್ಯ ದಿಂದ ಧರ್ಮಸ್ಥಳಕ್ಕೆ ಹೋಗುವ ವಾಹನಗಳು ಕೈಕಂಬ ಗುಂಡ್ಯ ಪೆರಿಯಶಾಂತಿ ಮಾರ್ಗವನ್ನು ಬಳಸಬಹುದು. ಧರ್ಮಸ್ಥಳ ದಿಂದ ಸುಬ್ರಹ್ಮಣ್ಯಕ್ಕೆ ತೆರಳುವ ವಾಹನಗಳು ಉದನೆ ಗುಂಡ್ಯ ಕೈಕಂಬ ಮಾರ್ಗವಾಗಿ ಸಂಚರಿಸಬಹುದು. ಸಾರ್ವಜನಿಕರನ್ನು ಈ ಕಾಮಗಾರಿಗೆ ಸಹಕರಿಸುವಂತೆ ಪುತ್ತೂರು ಉಪವಿಭಾಗದ […]

ಇಚಿಲಂಪಾಡಿ-ಪೆರಿಯಶಾಂತಿ ರಸ್ತೆ ದುರಸ್ತಿ ಕಾಮಗಾರಿ : ಇಂದು (ಮಾ.19) ವಾಹನ ಸಂಚಾರದಲ್ಲಿ ಬದಲಾವಣೆ Read More »

ವಿವೇಕಾನಂದ ಕಾಲೇಜಿನಲ್ಲಿ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಫರ್ಧೆ “ವಿವೇಕೋತ್ಸವ-2025”

ಪುತ್ತೂರು: ಮನುಷ್ಯನ ಮನಸ್ಸಿಗೆ ಶಾಂತಿ ಹಾಗೂ ಸಂತೋಷ ಎಂಬುದು ಬಹಳ ಮುಖ್ಯ, ಇದು ಕಲೆಯನ್ನು  ಆರಾಧಿಸುವುದರಿಂದ ಸಾಧ್ಯವಾಗುತ್ತದೆ. ಅದರೊಂದಿಗೆ ವೃತ್ತಿ ಜೀವನಕ್ಕೆ ಕಾಲಿಟ್ಟಾಗ ಒತ್ತಡದ ಜೀವನ ನಿರ್ವಹಣೆಗೂ ಕಲೆ ಸಹಕಾರಿಯಾಗುತ್ತದೆ. ಮುಂದಿನ ಸಾಂಸ್ಕೃತಿಕ ರಾಯಭಾರಿಗಳಾದ ವಿದ್ಯಾರ್ಥಿಗಳು ಕಲೆಯ ಮೌಲ್ಯವನ್ನು ಅರಿತುಕೊಂಡು ವಿವೇಕ ಉಳ್ಳವರಾಗಿ ಬದುಕಬೇಕು ಎಂದು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯ ನಿರ್ದೇಶಕ ವಿದ್ವಾನ್ ದೀಪಕ್ ಕುಮಾರ್ ಹೇಳಿದರು. ಅವರು ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ

ವಿವೇಕಾನಂದ ಕಾಲೇಜಿನಲ್ಲಿ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಫರ್ಧೆ “ವಿವೇಕೋತ್ಸವ-2025” Read More »

ನರಿಮೊಗರಿನ ಸರಸ್ವತಿ ವಿದ್ಯಾಮಂದಿರದಲ್ಲಿ ವಿಶೇಷ ಉಪನ್ಯಾಸ

ಪುತ್ತೂರು : ನರಿಮೊಗರಿನ ಸರಸ್ವತಿ ವಿದ್ಯಾಮಂದಿರದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಇದರ ಪುತ್ತೂರು ತಾಲೂಕು ಘಟಕದ ವತಿಯಿಂದ ನೂತನ ವರ್ಷದ ಕಾರ್ಯಕ್ರಮ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.  ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿಯವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಸಾಹಿತ್ಯದ ಬಲಗೊಳ್ಳುವಿಕೆಯೊಂದೇ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಹೆದ್ದಾರಿ ಎಂದರು. ಇಂತಹ ಕೈಂಕರ್ಯಗಳಲ್ಲಿ ಸರಸ್ವತಿ ವಿದ್ಯಾಮಂದಿರ ಯಾವತ್ತೂ ಮುಂಚೂಣಿಯಲ್ಲಿ ನಿಲ್ಲುತ್ತದೆ ಎಂದು ಹೇಳಿ ಸಂಘಟಕರ ಕಾರ್ಯವನ್ನು ಶ್ಲಾಘಿಸಿದರು ಶಾಂತಿಗೋಡಿನ ಖ್ಯಾತ ಚಿಂತಕರೂ, ವಿಮರ್ಶಕರೂ ಆಗಿರುವ

ನರಿಮೊಗರಿನ ಸರಸ್ವತಿ ವಿದ್ಯಾಮಂದಿರದಲ್ಲಿ ವಿಶೇಷ ಉಪನ್ಯಾಸ Read More »

ವಿಶೇಷ ಚೇತನೆಯ ಬಾಳಿಗೆ ಬೆಳಕಾದ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ | ಕೆಯ್ಯೂರಿನ ಬೇಬಿಯವರಿಗೆ ವಾತ್ಸಲ್ಯ ಮನೆ ಹಸ್ತಾಂತರ

ಪುತ್ತೂರು: ಗ್ರಾಮ ಪಂಚಾಯತ್ ಗೆ ಸೇರಿದ ಬಾಡಿಗೆ ಕೊಠಡಿಯೊಂದರಲ್ಲಿ ಕಳೆದ ಹಲವು ವಷ೯ಗಳಿಂದ ತನ್ನ ತಾಯಿಯೊಂದಿಗೆ ವಾಸ್ತವ್ಯವಿದ್ದ ವಿಶೇಷ ಚೇತನೆಯ ಬಾಳಿಗೆ ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳಕಾಗಿದೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡವು ನಿವಾಸಿ ಬೇಬಿ ಅವರಿಗೆ ಜ್ಞಾನವಿಕಾಸ ಕಾರ್ಯಕ್ರಮದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ರಚನೆಯಾದ “ವಾತ್ಸಲ್ಯ ಮನೆ” ಯನ್ನು ಸೋಮವಾರ ಕೇಯ್ಯೂರು ದೇವಳದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಶಿಧರ್ ರಾವ್ ಬೊಳಿಕ್ಕಲ ಹಸ್ತಾಂತರ ಮಾಡಿ, ಯೋಜನೆಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮ ನಡೆಯುತ್ತಿದ್ದು

ವಿಶೇಷ ಚೇತನೆಯ ಬಾಳಿಗೆ ಬೆಳಕಾದ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ | ಕೆಯ್ಯೂರಿನ ಬೇಬಿಯವರಿಗೆ ವಾತ್ಸಲ್ಯ ಮನೆ ಹಸ್ತಾಂತರ Read More »

ಜ್ಯೂಸ್‍ ಕುಡಿತಯುತ್ತಿದ್ದ ಅನ್ಯಕೋಮಿನ ಜೋಡಿ | ಪೋಲಿಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಪುತ್ತೂರು: ಬಸ್ ನಿಲ್ದಾಣದ ಬಳಿಯ ಹೋಟೆಲ್ ಒಂದರಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದು ಯುವತಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಸಂದರ್ಭ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಇಬ್ಬರು ಶಿವಮೊಗ್ಗ ಮೂಲದವರು ಎಂದು ತಿಳಿದು ಬಂದಿದ್ದು, ಯುವತಿ ನಗರದಲ್ಲಿ ಪಿಜಿ ಯಿಂದ ಕಾಲೇಜಿಗೆ ತೆರಳುತ್ತಿದ್ದಳು ಎನ್ನಲಾಗಿದೆ. ಠಾಣೆಗೆ ಪುತ್ತೂರು ಬಿಜೆಪಿ ನಿಯೋಗ ಬೇಟಿ ನೀಡಿದರು. ಆದರೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಸದ್ಯ ಪೊಲೀಸರು ಇಬ್ಬರ ಮನೆಯವರಿಗೆ ಮಾಹಿತಿ ನೀಡಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಜ್ಯೂಸ್‍ ಕುಡಿತಯುತ್ತಿದ್ದ ಅನ್ಯಕೋಮಿನ ಜೋಡಿ | ಪೋಲಿಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು Read More »

ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಆಗ್ರಹಿಸಿದ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಎಂ.ಎಲ್‍.ಸಿ ಕಿಶೋರ್ ಕುಮಾರ್ ಪುತ್ತೂರು ಮಾ.18(ಇಂದು) ವಿಧಾನ ಪರಿಷತ್‍ ನಲ್ಲಿ ಧ್ವನಿ ಎತ್ತಿದ್ದಾರೆ. ಮಾ. 17 2025 ರ ವಿಜಯಕರ್ನಾಟಕ ದಿನಪತ್ರಿಕೆಯಲ್ಲಿ “ಭಿಕ್ಷಾಟನೆ : 306 ಮಕ್ಕಳ ರಕ್ಷಣೆ” ಕೈಗೂಡದ ದಶಕಗಳ ಪ್ರಯತ್ನ ಎಂಬ ಶಿರೋನಾಮೆಯಡಿ ಬಂದಿರುವ ವರದಿಯನ್ನು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ,  ಈ ವರದಿಯ ಪ್ರಕಾರ ಕಳೆದ ಏಪ್ರಿಲ್ ನಿಂದ  ಡಿಸೆಂಬರ್ ತಿಂಗಳ (2024 – 25ರ ತನಕ 206  ಮಕ್ಕಳನ್ನು ಮಹಿಳಾ ಮತ್ತು ಮಕ್ಕಳ

ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಆಗ್ರಹಿಸಿದ ಕಿಶೋರ್ ಕುಮಾರ್ ಪುತ್ತೂರು Read More »

ದನದ  ಹಟ್ಟಿಗೆ ಬೆಂಕಿ ಅವಘಡ | ರಸ್ತೆಯಿಲ್ಲದೆ ಬೆಂಕಿ ನಂದಿಸಲು ಅಗ್ನಿಶಾಮಕದಳದವರ ಹರಸಾಹಸ

ಪುತ್ತೂರು : ಆರ್ಯಾಪು ಗ್ರಾಮದ ಕಾರ್ಪಾಡಿ ಬೈಲಿನ ಮನೆ ಪಕ್ಕದ ದನದ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡು, ಉರಿದ ಘಟನೆ ಭಾನುವಾರ ಸಂಜೆ ನಡೆದಿದೆ. ಮೋಹನ್ ಭಂಡಾರಿ ಎಂಬವರ ಮನೆ ಇದಾಗಿದ್ದು, ಘಟನೆ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗಿದೆ. ಮನೆ ಪಕ್ಕದಲ್ಲೇ ಇದ್ದ ಹಟ್ಟಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಸ್ಥಳಕ್ಕಾಗಮಿಸಿದ ನೆರೆಮನೆಯವರು ತಕ್ಷಣ ಜಾಗೃತರಾಗಿ ದನಗಳನ್ನು ಹೊರ ಕರೆದೊಯ್ದಿದ್ದಾರೆ. ಆದರೆ ಬೆಂಕಿ ಆರಿಸಲು ಹರಸಾಹಸ ಪಟ್ಟ ಘಟನೆ ಮಾತ್ರ ಅರಣ್ಯ ರೋಧನವಾಯಿತು. ಕಾರ್ಪಾಡಿ ದೇವಸ್ಥಾನದ ಮಗ್ಗುಲಲ್ಲೇ

ದನದ  ಹಟ್ಟಿಗೆ ಬೆಂಕಿ ಅವಘಡ | ರಸ್ತೆಯಿಲ್ಲದೆ ಬೆಂಕಿ ನಂದಿಸಲು ಅಗ್ನಿಶಾಮಕದಳದವರ ಹರಸಾಹಸ Read More »

ಅಕ್ಷಯ (ಗ್ಲೋರಿಯಾ) ಕಾಲೇಜ್ : ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ | ಅಧ್ಯಕ್ಷರಾಗಿ ಪ್ರಶಾಂತ ಪೂವಜ ಆಯ್ಕೆ

ಪುತ್ತೂರು : ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ ಯನ್ನು  ಪೂರ್ವ  ವಿದ್ಯಾರ್ಥಿ  ಶ್ರೀ ಚಂದ್ರಶೇಖರ ಕಿಲಾರ್ ಕಜೆ   ನಿರ್ವಹಿಸಿ,  ಅಕ್ಷಯ ಕಾಲೇಜ್  ತನ್ನ ಪೂರ್ವದಲ್ಲಿ  ಶ್ರೀಯುತ  ದಿ. ಆನಂದ ಆಚಾರ್ಯ  ಅವರು  ಸ್ಥಾಪಿಸಿದ ಗ್ಲೋರಿಯಾ  ಎಂಬ ಸಂಸ್ಥೆ ಯನ್ನು ಮುನ್ನಡೆಸಿದ ಮತ್ತು ಕಟ್ಟಿ  ಬೆಳೆಸಿದ ಕೀರ್ತಿ  ಜಯಂತ್  ನಡು ಬೈಲ್  ಅವರಿಗೆ  ಸಲ್ಲುತ್ತದೆ . ಪುತ್ತೂರಿನಲ್ಲಿ  ವಿದ್ಯಾಭ್ಯಾಸ  ಕ್ಷೇತ್ರಕ್ಕೆ  ದಿ. ಆನಂದ ಆಚಾರ್ಯ ಕೊಟ್ಟ  ಕೊಡುಗೆ, ಅವರ ನೆನಪು ಮತ್ತು  ಸಾಧನೆ  ಸದಾ  ಜೀವಂತವಾಗಿದೆ. ಹಳೇ  ವಿದ್ಯಾರ್ಥಿ

ಅಕ್ಷಯ (ಗ್ಲೋರಿಯಾ) ಕಾಲೇಜ್ : ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ | ಅಧ್ಯಕ್ಷರಾಗಿ ಪ್ರಶಾಂತ ಪೂವಜ ಆಯ್ಕೆ Read More »

ಸಾಲ ಮರುಪಾವತಿ ಮಾಡುವಲ್ಲಿ ವಿಫಲ | ಕಟ್ಟಡ ಮುಟ್ಟುಗೋಲು

ಪುತ್ತೂರು: ಸಾಲ ಮರುಪಾವತಿಯಾಗದ ಹಿನ್ನೆಲೆಯಲ್ಲಿ ಬೈಪಾಸ್ ರಸ್ತೆಯಲ್ಲಿರುವ ಕಟ್ಟಡವೊಂದಕ್ಕೆ ಬೀಗ ಜಡಿದು ಮುಟ್ಟುಗೋಲು ಹಾಕಿಕೊಂಡ ಘಟನೆ ನಡೆದಿದೆ. ಬಿಲ್ಡಿಂಗ್ ನಲ್ಲಿದ್ದ ಬಾರ್ ಆ್ಯಂಡ್ ರೆಸ್ಟೋರೆಂಟ್, ಬೋರ್ಡಿಂಗ್ ಆಂಡ್ ಲಾಡ್ಜ್, ಇತರ ಅಂಗಡಿ ಮಳಿಗೆ ಮತ್ತು ಹಾಲ್ ಸಮೇತವಾಗಿ ಇಡೀ ಕಟ್ಟಡಕ್ಕೆ ಬ್ಯಾಂಕಿನವರು ಬೀಗ ಹಾಕಿದ್ದಾರೆ. 31-07-2024ಕ್ಕೆ ಅನ್ವಯವಾಗುವಂತೆ ಎರಡು ಕೋಟಿಗೂ ಅಧಿಕ ಮೊತ್ತದ ಸಾಲ ಹಾಗೂ ಬಡ್ಡಿಯನ್ನು ಮರುಪಾವತಿ ಮಾಡುವಂತೆ ಬ್ಯಾಂಕ್ ನೋಟೀಸ್ ಮಾಡಿದ್ದರೂ ಮರುಪಾವತಿಯಾಗಲಿಲ್ಲ ಎನ್ನುವ ಕಾರಣಕ್ಕಾಗಿ ಬ್ಯಾಂಕಿನವರು ನಿಯಮಾನುಸಾರ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ

ಸಾಲ ಮರುಪಾವತಿ ಮಾಡುವಲ್ಲಿ ವಿಫಲ | ಕಟ್ಟಡ ಮುಟ್ಟುಗೋಲು Read More »

ರೋಟರಿ ಯುವ ಸಂಸ್ಥೆಯಿಂದ ರೈಲ್ವೇ ನಿಲ್ದಾಣಕ್ಕೆ ಎದೆಹಾಲು ಉಣಿಸುವ ಕೇಂದ್ರ ಕೊಡುಗೆ | ಮಾ.19 ರಂದು ಉದ್ಘಾಟನೆ

ಪುತ್ತೂರು: ಪುತ್ತೂರಿನ ರೋಟರಿ ಯುವ ಸಂಸ್ಥೆಯು ತನ್ನ ದಶವಾರ್ಷಿಕದ ಅಂಗವಾಗಿ  ಪುತ್ತೂರಿನ ರೈಲ್ವೇ ನಿಲ್ದಾಣಕ್ಕೆ ಸುಮಾರು 50 ಸಾವಿರ ರೂ. ವೆಚ್ಚದ ಎದೆಹಾಲು  ಉಣಿಸುವ ಹಾಗೂ ಶಿಶುಪಾಲನಾ ಕೇಂದ್ರವೊಂದನ್ನು ಕೊಡುಗೆಯಾಗಿ ನೀಡಲಿದೆ. ಮಾ.19 ರಂದು ರೈಲ್ವೇ ನಿಲ್ದಾಣದ ಮಹಿಳೆಯರ ಕೊಠಡಿಯಲ್ಲಿ ಈ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ರೋಟರಿ ಯುವ ಸಂಸ್ಥೆಯ ಅಧ್ಯಕ್ಷೆ ಅಶ್ವಿನಿ ಮುಳಿಯ ತಿಳಿಸಿದ್ದಾರೆ. ಅವರು ಸೋಮವಾರ ಪುತ್ತೂರು ಪ್ರೆಸ್‌ಕ್ಲಬ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರೋಟರಿ ಜಿಲ್ಲೆ 3081 ರ ಜಿಲ್ಲಾ ಗವರ್ನರ್ ವಿಕ್ರಮ್

ರೋಟರಿ ಯುವ ಸಂಸ್ಥೆಯಿಂದ ರೈಲ್ವೇ ನಿಲ್ದಾಣಕ್ಕೆ ಎದೆಹಾಲು ಉಣಿಸುವ ಕೇಂದ್ರ ಕೊಡುಗೆ | ಮಾ.19 ರಂದು ಉದ್ಘಾಟನೆ Read More »

error: Content is protected !!
Scroll to Top