ಪುತ್ತೂರು

ನಂದಿ ರಥಯಾತ್ರೆ ಪುತ್ತೂರು ಪುರಪ್ರವೇಶ : ಧಾರ್ಮಿಕ ಸಭೆ | ಎಂಡೋ, ರಸಗೊಬ್ಬರ ವಿರುದ್ಧ ಹೋರಾಟಕ್ಕೆ ಗೋವನ್ನು ಉಳಿಸಬೇಕು : ಶ್ರೀಕಾಂತ್ ಶೆಟ್ಟಿ

ಪುತ್ತೂರು: ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ನಂದಿ ರಥಯಾತ್ರೆ ಸಂಚಾಲನ ಸಮಿತಿ ಪುತ್ತೂರು ಇದರ ವತಿಯಿಂದ ಪುತ್ತೂರಿಗೆ ಆಗಮಿಸಿದ ನಂದಿ ರಥ ಯಾತ್ರೆಗೆ ದರ್ಬೆಯಲ್ಲಿ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ದರ್ಬೆಯಲ್ಲಿ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾಂಗಳವರು ದೇಶಿ ನಂದಿಗೆ ಹಾರಾರ್ಪಣೆ ಮಾಡಿ ಶ್ರೀ ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚಣೆ ಮಾಡಿದರು. ಡಾ. ಸಚಿನ್ ಶಂಕರ್ ಹಾರಕೆರೆಯವರು ತೆಂಗಿನ ಕಾಯಿ ಒಡೆಯುವ ಮೂಲಕ ನಂದಿ ರಥಯಾತ್ರೆಗೆ ಚಾಲನೆ ನೀಡಿದರು. ಈ […]

ನಂದಿ ರಥಯಾತ್ರೆ ಪುತ್ತೂರು ಪುರಪ್ರವೇಶ : ಧಾರ್ಮಿಕ ಸಭೆ | ಎಂಡೋ, ರಸಗೊಬ್ಬರ ವಿರುದ್ಧ ಹೋರಾಟಕ್ಕೆ ಗೋವನ್ನು ಉಳಿಸಬೇಕು : ಶ್ರೀಕಾಂತ್ ಶೆಟ್ಟಿ Read More »

ಇತಿಹಾಸ ಪ್ರಸಿದ್ದ  ಮಹತೋಭಾರ  ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು ಜಾತ್ರೆಗೆ ಬ್ರಹ್ಮರಥ ಮಂದಿರದಿಂದ ರಥವನ್ನು ಹೊರ ತರುವ ಮುಹೂರ್ತ | ರಥ ಕಟ್ಟುವ ಸ್ಥಳ ಸೂಚಿಸಿದ ಪುಷ್ಪ

ಪುತ್ತೂರು: ಇತಿಹಾಸ ಪ್ರಸಿದ್ದ  ಮಹತೋಭಾರ  ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10ರಿಂದ ನಡೆಯುವ ಜಾತ್ರೋತ್ಸವ ಸೇರಿದಂತೆ ಏ.17ರ ಬ್ರಹ್ಮರಥೋತ್ಸವಕ್ಕೆ ಸಿದ್ಧತೆಗಾಗಿ ಮಾ.17ರಂದು ಬೆಳಿಗ್ಗೆ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥ ಬೀದಿಗೆ ತಂದು ನಿಲ್ಲಿಸುವ ಮೂಲಕ ಪುತ್ತೂರು ಜಾತ್ರೆಗೆ ಮುನ್ಸೂಚನೆ ನೀಡಲಾಗಿದೆ. ಪ್ರತಿ ವರ್ಷದಂತೆ ರಥ ಕಟ್ಟುವ ಸ್ಥಳದಲ್ಲಿ ಬಿಲ್ವಪತ್ರೆ ಭೂಸ್ಪರ್ಶ ಮಾಡುತ್ತಿದ್ದು, ಈ ಭಾರಿ ಪುಷ್ಪದ ಮಾಲೆಯೊಂದು ಭೂ ಸ್ಪರ್ಶ ಮಾಡಿದೆ. ಇಂದು ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು

ಇತಿಹಾಸ ಪ್ರಸಿದ್ದ  ಮಹತೋಭಾರ  ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು ಜಾತ್ರೆಗೆ ಬ್ರಹ್ಮರಥ ಮಂದಿರದಿಂದ ರಥವನ್ನು ಹೊರ ತರುವ ಮುಹೂರ್ತ | ರಥ ಕಟ್ಟುವ ಸ್ಥಳ ಸೂಚಿಸಿದ ಪುಷ್ಪ Read More »

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷೆ : ಹರ್ಷಿತಾ ಕೆ ಪ್ರಥಮ ರ‍್ಯಾಂಕ್

ಪುತ್ತೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ (MA-Education) ಪರೀಕ್ಷೆಯಲ್ಲಿ  ಹರ್ಷಿತಾ ಕೆ ಅವರಿಗೆ ಪ್ರಥಮ ರ‍್ಯಾಂಕ್ ಲಭಿಸಿದೆ. ಪೆರ್ಲಂಪಾಡಿ ಕಜೆ ಜಯಾನಂದ ಕೆ ಮತ್ತು ಶಕುಂತಲಾ ದಂಪತಿ ಪುತ್ರಿ, ಬೆಳ್ಳಾರೆ ತಡಗಜೆ ಪ್ರಜ್ವಲ್ ನಾಯಕ್ ಟಿ ಅವರ ಪತ್ನಿ.ಯಾಗಿರುವ ಹರ್ಷಿತಾ ಕೆ. ಎಂಎಸ್ಸಿ ಗಣಿತಶಾಸ್ತ್ರ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮತ್ತು ಬಿ.ಎಡ್ ಪದವಿಯನ್ನು ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯ ಮಂಗಳೂರು ಇಲ್ಲಿ ಪೂರೈಸಿರುತ್ತಾರೆ. ಡಾ. ಶಿವಪ್ರಕಾಶ್ ಮತ್ತು ಡಾ. ಕುಮಾರಸ್ವಾಮಿ ಇವರ ಮಾರ್ಗದರ್ಶನದಲ್ಲಿ ”ICT use

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷೆ : ಹರ್ಷಿತಾ ಕೆ ಪ್ರಥಮ ರ‍್ಯಾಂಕ್ Read More »

ರೈಲು ಡಿಕ್ಕಿ ಹೊಡೆದು ಮೃತ್ಯು

ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎಡಮಂಗಲ ಮರ್ದೂರಡ್ಕ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ವಿಶ್ವನಾಥ ಮೃತಪಟ್ಟವರು. ವಿಶ್ವನಾಥರು ರೈಲ್ವೆ ಟ್ರ್ಯಾಕ್ ಬಳಿ ಕುಳಿತು ಮೊಬೈಲ್ ನೋಡುತ್ತಿದ್ದಾಗ ರಾತ್ರಿ 10 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ರೈಲು ಡಿಕ್ಕಿ ಹೊಡೆದು ಮೃತ್ಯು Read More »

ನಂದಿ ರಥಯಾತ್ರೆ ಪುರಪ್ರವೇಶ : ದರ್ಬೆಯಲ್ಲಿ ಸ್ವಾಗತ

ಪುತ್ತೂರು: ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ಪುತ್ತೂರು ನಂದಿ ರಥಯಾತ್ರೆ ಸಂಚಲನ ಸಮಿತಿ ವತಿಯಿಂದ ಭಾನುವಾರ ಪುತ್ತೂರಿಗೆ ಆಗಮಿಸಿದ ನಂದಿ ರಥ ಯಾತ್ರೆಗೆ ದರ್ಬೆಯಲ್ಲಿ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ದರ್ಬೆಯಲ್ಲಿ ಎಡನೀರು ಸಂಸ್ಥಾನದ ಶ್ರೀ ಸಚ್ಚೇದಾನಂದ ಭಾರತೀ ಶ್ರೀಪಾಂಗಳವರು ದೇಶಿ ನಂದಿಗೆ ಹಾರಾರ್ಪಣೆ ಮಾಡಿ ಶ್ರೀ ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚಣೆ ಮಾಡಿದರು. ಡಾ. ಸಚಿನ್ ಶಂಕರ್ ಹಾರಕೆರೆಯವರು ತೆಂಗಿನ ಕಾಯಿ ಒಡೆಯುವ ಮೂಲಕ ನಂದಿ ರಥಯಾತ್ರೆಗೆ ಚಾಲನೆ ನೀಡಿದರು.

ನಂದಿ ರಥಯಾತ್ರೆ ಪುರಪ್ರವೇಶ : ದರ್ಬೆಯಲ್ಲಿ ಸ್ವಾಗತ Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಮಾ. 17 (ನಾಳೆ) ರಂದು ಸಂಜೆ 7:15 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ Read More »

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಫುಲ್ಲ ಗಣೇಶ್ ರವರಿಗೆ IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾದಿಂದ ಗ್ಲೋಬಲ್ ಬೆಸ್ಟ್ ವುಮೆನ್ ಟೀಚರ್ ಅವಾರ್ಡ್-2025

ಪುತ್ತೂರು:  ಅಬಾಕಸ್ ಮತ್ತು ವೇದ ಗಣಿತದಲ್ಲಿ ಸ್ಥಿರವಾದ ಉನ್ನತ ಸಾಧನೆಯನ್ನು ಗುರುತಿಸಿ  ಜಾಗತಿಕ ಅತ್ಯುತ್ತಮ ಮಹಿಳಾ ಶಿಕ್ಷಕಿ ಅವಾರ್ಡ್ -2025 ಅನ್ನು  IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾ, ವಿಜಯವಾಡ ಇವರು ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.  2021ರಲ್ಲಿ ಇಂಟರ್ನ್ಯಾಷನಲ್ ಅವಾರ್ಡ್, 2022ರಲ್ಲಿ 2 ಸಲ ನ್ಯಾಷನಲ್ ಅವಾರ್ಡ್, 2023ರಲ್ಲಿ ತಿಪಟೂರಿನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ 15ಕ್ಕೂ ಹೆಚ್ಚು ಪ್ರಶಸ್ತಿ, 2023ರಲ್ಲಿ ಕರ್ನಾಟಕ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಫುಲ್ಲ ಗಣೇಶ್ ರವರಿಗೆ IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾದಿಂದ ಗ್ಲೋಬಲ್ ಬೆಸ್ಟ್ ವುಮೆನ್ ಟೀಚರ್ ಅವಾರ್ಡ್-2025 Read More »

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಶನಿವಾರ ಹಾಗೂ ಭಾನುವಾರ ನಡೆಯಿತು. ಶನಿವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಶ್ರೀ ಮಹಾಮೃತ್ಯುಂಜಯ ಹೋಮ, ಮಧ್ಯಾಹ್ನ ರಕ್ತಶ್ವರಿ, ಗುಳಿಗ ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಅನ್ನಸಂತರ್ಪಣೆ, ಸುಡುಮದ್ದು ಪ್ರದರ್ಶನ, ವಸಂತ ಕಟ್ಟೆ ಪೂಜೆ ನಡೆಯಿತು. ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು, ಅರ್ಚಕರು, ನೌಕರರು, ಭಕ್ತಾದಿಗಳು ಉಪಸ್ಥಿತರಿದ್ದರು. ಇಂದು

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ Read More »

ನಗರ ಯೋಜನಾ ಪ್ರಾಧೀಕಾರದ ಅಧ್ಯಕ್ಷರಾಗಿ ಅಮಳ ರಾಮಚಂದ್ರ ಅಧಿಕಾರ ಸ್ವೀಕಾರ

ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧೀಕಾರ(ಪೂಡಾ)ದ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರರವರ ಶನಿವಾರ ಅಧಿಕಾರ ಸ್ವೀಕರಿಸಿದರು. ನೂತನ ಅಧ್ಯಕ್ಷರನ್ನು ಸನ್ಮಾನಿಸಿ, ಗೌರವಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಗ್ರಾಮಾಂತರ ಪ್ರದೇಶಗಳ 9/11 ನೀಡುವ ಕೆಲಸ ಮುಖಾಂತರ ನಡೆಯಬೇಕಿದ್ದು ಯಾವುದೇ ಅರ್ಜಿಗಳು ಒಂದು ವಾರಕ್ಕಿಂತ ಹೆಚ್ಚು ಕಾಲ ಪೂಡಾ ಕಚೇರಿಯಲ್ಲಿ ಉಳಿಯಬಾರದು. ಬಡವರ ಬಗ್ಗೆ ಕಾಳಜಿ ಇರಲಿ. ಅವರ ಸಮಸ್ಯೆಗಳಿಗೆ ಸ್ಪಂದನೆ ನೀಡಬೇಕು. ಅದಿಕಾರಿಗಳು ವಾರದಲ್ಲಿ ಎರಡು ದಿನ ಮಾತ್ರ ಬರುತಿದ್ದು ಉಳಿದ ದಿನಗಳಲ್ಲಿ

ನಗರ ಯೋಜನಾ ಪ್ರಾಧೀಕಾರದ ಅಧ್ಯಕ್ಷರಾಗಿ ಅಮಳ ರಾಮಚಂದ್ರ ಅಧಿಕಾರ ಸ್ವೀಕಾರ Read More »

ಪುತ್ತೂರು ತಾಲೂಕು ಕಚೇರಿಗೆ ರೈಡ್ | ಪ್ರತೀ ಕಚೇರಿಗೆ ತೆರಳಿ ಹಾಜರಾತಿ ಪರಿಶೀಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ತಾಲೂಕು ಕಚೇರಿಯ ಸಿಬಂದಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ  ಬಾಗಿಲು ಹಾಕಿರುತ್ತಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಅಶೋಕ್ ರೈ ಅವರು ತಾಲೂಕು ಕಚೇರಿಗೆ ದಾಳಿ ನಡೆಸಿ ಹಾಜರಾತಿ ಪರಿಶೀಲನೆ ನಡೆಸಿದ್ದಾರೆ. ಮಿನಿ ವಿಧಾನ ಸೌಧದಲ್ಲಿರುವ ಪ್ರತೀ ಕಚೇರಿಗೂ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.‌ಈ ವೇಳೆ ಎಡಿಎಲ್  ಆರ್ ಕಚೇರಿಯಲ್ಲಿ ಯಾರೂ ಇರಲಿಲ್ಲ. ಅಧಿಕಾರಿಯ ಬಗ್ಗೆ ಪರಿಶೀಲನೆ ನಡೆಸಿದ ಶಾಸಕರು ಅಧಿಕಾರಿ ಇಲ್ಲದಿದ್ದರೆ ಕಚೇರಿಯನ್ನು ಯಾಕೆ

ಪುತ್ತೂರು ತಾಲೂಕು ಕಚೇರಿಗೆ ರೈಡ್ | ಪ್ರತೀ ಕಚೇರಿಗೆ ತೆರಳಿ ಹಾಜರಾತಿ ಪರಿಶೀಲಿಸಿದ ಶಾಸಕ ಅಶೋಕ್ ರೈ Read More »

error: Content is protected !!
Scroll to Top