ಪುತ್ತೂರು

ಗೊಂದಲಕ್ಕೆಡೆ ಮಾಡಿದ ಬಿ-ಖಾತಾ ಕುರಿತ ಪತ್ರಿಕಾಗೋಷ್ಠಿ | ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ : ಇಸಾಕ್‍ ಸಾಲ್ಮರ

ಪುತ್ತೂರು: ನಗರಸಭಾ ವ್ಯಾಪ್ತಿಗೆ ಮಾಡಿದ ಬಿ ಖಾತಾ ಕುರಿತು ಪತ್ರಿಕಾಗೋಷ್ಠಿ ನಡೆಸಿ ಜನರಲ್ಲಿ ಗೊಂದಲ ಹಾಗೂ ಅರ್ಜಿಗಳೇ ಬಾರದೆ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಶಿಸ್ತು ಸಮಿತಿಗೆ ಆದೇಶಿಸುವಂತೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಸಂಚಾಲಕ ಇಸಾಕ್‍ ಸಾಲ್ಮರ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಒಂದು ಸಾವಿರ ಜನಕ್ಕೆ […]

ಗೊಂದಲಕ್ಕೆಡೆ ಮಾಡಿದ ಬಿ-ಖಾತಾ ಕುರಿತ ಪತ್ರಿಕಾಗೋಷ್ಠಿ | ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ : ಇಸಾಕ್‍ ಸಾಲ್ಮರ Read More »

ಕೆ.ಎಸ್. ಎಸ್ ಕಾಲೇಜು ವಿದ್ಯಾರ್ಥಿಗಳಿಂದ ನ್ಯಾಯಾಲಯಕ್ಕೆ ಭೇಟಿ

ಪುತ್ತೂರು : ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದಿಂದ ಮಾರ್ಚ್ 10 ರಂದು ಪುತ್ತೂರು ಸ್ಟೇಷನ್, ನ್ಯಾಯಾಲಯಕ್ಕೆ ಅಂತಿಮ ಬಿಬಿಎ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭೇಟಿ ಕಾರ್ಯಕ್ರಮ ನಡೆಯಿತು. ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕ ಶಿವಪ್ರಸಾದ್ ಎಸ್ ಅವರ ಮಾರ್ಗದರ್ಶನದಲ್ಲಿ ಹಿರಿಯ ವಕೀಲ ಮತ್ತು ನೋಟರಿ ಜಯರಾಮ್ ಚಿಲ್ತಡ್ಕ ಮತ್ತು ವಕೀಲ ಚೇತನ್ ಕೆ ಅವರ ಸಹಕಾರದಿಂದ ವಿದ್ಯಾರ್ಥಿಗಳು ನ್ಯಾಯಾಲಯದ ವಿಚಾರಣೆಗಳ ಬಗ್ಗೆ ಮೌಲ್ಯಯುತ ಒಳನೋಟಗಳನ್ನು ಪಡೆದರು  ಪಠ್ಯಕ್ಕೆ ಸಂಬಂಧಪಟ್ಟಂತೆ ಅನುಭವಾತ್ಮಕ ಕಲಿಕೆ ಮತ್ತು ನ್ಯಾಯಾಂಗ ವ್ಯವಸ್ಥೆಯ ಅಂಶಗಳ ಮಾಹಿತಿ

ಕೆ.ಎಸ್. ಎಸ್ ಕಾಲೇಜು ವಿದ್ಯಾರ್ಥಿಗಳಿಂದ ನ್ಯಾಯಾಲಯಕ್ಕೆ ಭೇಟಿ Read More »

ಬಸ್‍-ದ್ವಿಚಕ್ರ ವಾಹನ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು

ಕಡಬ: ಸ್ಕೂಟಿ ಹಾಗೂ ಸರಕಾರಿ ಬಸ್‍ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (24) ಮೃತಪಟ್ಟ ಸ್ಕೂಟಿ ಸವಾರ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ಸ್ಕೂಟರ್ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ವಿನ್ಯಾಸ್ ಆಸ್ಪತ್ರೆಗೆ ಸಾಗಿಸುವ ದಾರಿ

ಬಸ್‍-ದ್ವಿಚಕ್ರ ವಾಹನ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು Read More »

ಪುತ್ತೂರು ಪುರಭವನದಲ್ಲಿ ತಾಲೂಕು ಮಟ್ಟದ ಮಹಿಳಾ ದಿನಾಚರಣೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜನಶಿಕ್ಷಣ ಟ್ರಸ್ಟ್, ಸಾಂತ್ವನ ಕೇಂದ್ರ, ನಗರಸಭೆ, ತಾಲೂಕು ಆಡಳಿತ ಕಚೇರಿ, ತಾ.ಪಂ. ತಾಲೂಕು ಸಂಜೀವಿನಿ ಒಕ್ಕೂಟ, ಸುಗ್ರಾಮ ಜಾಗೃತಿ ವೇದಿಕೆ ಸಹಯೋಗ

ಪುತ್ತೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜನಶಿಕ್ಷಣ ಟ್ರಸ್ಟ್, ಸಾಂತ್ವನ ಕೇಂದ್ರ, ನಗರಸಭೆ, ತಾಲೂಕು ಆಡಳಿತ ಕಚೇರಿ, ತಾ.ಪಂ. ತಾಲೂಕು ಸಂಜೀವಿನಿ ಒಕ್ಕೂಟ, ಸುಗ್ರಾಮ ಜಾಗೃತಿ ವೇದಿಕೆಯ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಮಹಿಳಾ ದಿನಾಚರಣೆ ಸೋಮವಾರ ಪುರಭವನದಲ್ಲಿ ನಡೆಯಿತು. ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ಮುಖ್ಯ ಅತಿಥಿಯಾಗಿ ಮಾತನಾಡಿ, ಮನೆಯಿಂದ ಹೊರ ಬರದ ಮಹಿಳೆಯರಿಗೆ ಮಾಹಿತಿ, ಅರಿವು ಮುಡಿಸಿ ಸಮಾಜದಲ್ಲಿ ಬೆರೆತು ಸಾಧನೆ ಮಾಡಲು ಪ್ರೋತ್ಸಾಹ ನೀಡಿದಾಗ

ಪುತ್ತೂರು ಪುರಭವನದಲ್ಲಿ ತಾಲೂಕು ಮಟ್ಟದ ಮಹಿಳಾ ದಿನಾಚರಣೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜನಶಿಕ್ಷಣ ಟ್ರಸ್ಟ್, ಸಾಂತ್ವನ ಕೇಂದ್ರ, ನಗರಸಭೆ, ತಾಲೂಕು ಆಡಳಿತ ಕಚೇರಿ, ತಾ.ಪಂ. ತಾಲೂಕು ಸಂಜೀವಿನಿ ಒಕ್ಕೂಟ, ಸುಗ್ರಾಮ ಜಾಗೃತಿ ವೇದಿಕೆ ಸಹಯೋಗ Read More »

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ 5 ರ್‍ಯಾಂಕ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2023-24 ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ವಿವೇಕಾನಂದ ಪದವಿ ಕಾಲೇಜಿಗೆ ಐದು ರ್‍ಯಾಂಕ್‌ಗಳು ಲಭಿಸಿದೆ. ಬಿಕಾಂ ನ ಸ್ವಾತಿ ಎಸ್. ಭಟ್ 4150 ರಲ್ಲಿ 3984  ಅಂಕ ಪಡೆದು ಮೂರನೇ ರ್‍ಯಾಂಕನ್ನು ಗಳಿಸಿದ್ದಾರೆ. ಇವರು ಪುತ್ತೂರಿನ ಕಲ್ಲಾರೆ ನಿವಾಸಿ ಶಿವಶಂಕರ ಭಟ್ ಎಸ್. ಹಾಗೂ ಉಷಾ ಎಸ್. ಭಟ್ ದಂಪತಿ ಪುತ್ರಿ. ಬಿಕಾಂ ನ ಇನ್ನೋರ್ವ ವಿದ್ಯಾರ್ಥಿ ಪವನ್ ರಾಜ್ 3969 ಅಂಕಗಳನ್ನು ಪಡೆದು 9ನೇ ನೇ ರ್‍ಯಾಂಕ್‍ ಗಳಿಸಿದ್ದಾರೆ. ಇವರು

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ 5 ರ್‍ಯಾಂಕ್ Read More »

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ  “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಇಂದು ಸಂಜೆ 7.15 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ  “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ Read More »

ಗ್ಯಾರೇಜ್‍ ನಲ್ಲಿ ನಿಲ್ಲಿಸಿದ್ದ ಬೈಕ್‍ ಕಳವು

ಪುತ್ತೂರು: ಗ್ಯಾರೇಜೊಂದರಲ್ಲಿ ರಿಪೇರಿಗಾಗಿ ನಿಲ್ಲಿಸಿದ್ದ ಯಮಹಾ R X 100 ಬೈಕ್‌ನ್ನು ಗ್ಯಾರೇಜ್ ಶೆಟರ್‌ನ ಬೀಗ ಒಡೆದು ಕಳವು ಮಾಡಿರುವ ಘಟನೆ ಹಾರಾಡಿಯಲ್ಲಿ ನಡೆದಿದೆ. ಸಾಲ್ಮರ ನಿವಾಸಿ ಜಗದೀಶ್ ಆಚಾರ್ಯ ತನ್ನ ಬೈಕ್‌ನ್ನು ಹಾರಾಡಿ ಗ್ಯಾರೇಜೊಂದರಲ್ಲಿ ರಿಪೇರಿಗಾಗಿ ನಿಲ್ಲಿಸಿದ್ದರು. ಮಾ.10ರಂದು ಬೈಕ್ ತೆಗೆದುಕೊಂಡು ಹೋಗುವ ಕುರಿತು ಗ್ಯಾರೇಜ್ ಮಾಲಕರೊಂದಿಗೆ ಮಾತುಕತೆ ನಡೆದಿತ್ತು. ಆದರೆ ಮಾ.9 ರಂದು ಬೆಳಗ್ಗೆ ಗ್ಯಾರೇಜ್‌ನ ಶೆಟರ್ ಬೀಗ ಒಡೆದಿರುವುದನ್ನು ಗಮನಿಸಿದ ಗ್ಯಾರೇಜ್ ಮಾಲಕರು ಒಳಗೆ ನೋಡಿದಾಗ ಯಮಹಾ R X 100 ಬೈಕ್

ಗ್ಯಾರೇಜ್‍ ನಲ್ಲಿ ನಿಲ್ಲಿಸಿದ್ದ ಬೈಕ್‍ ಕಳವು Read More »

ಪುತ್ತೂರು ತಾಲೂಕು ಗೌಡ ಮಹಿಳಾ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ – ಸನ್ಮಾನ.

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಮತ್ತು ಯುವ ವಿಭಾಗಗಳ ಸಹಯೋಗದೊಂದಿಗೆ ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಭಾನುವಾರ ನಡೆಯಿತು. ಉಡುಪಿ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ಕನ್ನಡ ಪ್ರೊಫೆಸರ್, ಕನ್ನಡ ವಿಭಾಗ ಮುಖ್ಯಸ್ಥರಾಗಿರುವ ಡಾ. ಹರಿಣಾಕ್ಷಿ ಎಂ.ಡಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸಾಧನಾಶೀಲರಾಗಬೇಕು. ಆಧುನಿಕ ಕಾಲದಲ್ಲಿ ಹೆಣ್ಣಿಗೆ ಇರುವ ಅವಕಾಶಗಳತ್ತ ಬೊಟ್ಟು ಮಾಡಿ ತೋರಿಸಿದ ಅವರು ಆ ಹಾದಿಯಲ್ಲಿ ಹೆಣ್ಣು ಮಕ್ಕಳು ಮುಂದುವರಿಯಬೇಕು. ನಮ್ಮ ಮಕ್ಕಳಿಗೆ ಸಂಸ್ಕೃತಿಯನ್ನು ಕಲಿಸುವ

ಪುತ್ತೂರು ತಾಲೂಕು ಗೌಡ ಮಹಿಳಾ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ – ಸನ್ಮಾನ. Read More »

ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಅಭಿಯಾನ | ಕೆಯ್ಯೂರು ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಅಭಿಯಾನ

ಪುತ್ತೂರು: ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಅವರ ಕನಸಿನ ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಅಭಿಯಾನದ ಕನಸು ನನಸು ಮಾಡುವ ನಿಟ್ಟಿನಲ್ಲಿ ಕೆಯ್ಯುರು ಗ್ರಾಮ ಪಂಚಾಯತ್ ನಿಂದ ತಿಂಗಳ ಎರಡನೇ ಆದಿತ್ಯವಾರ ಸಂಘ ಸಂಸ್ಥೆ ಗಳ ಸಹಕಾರದಲ್ಲಿ ಸ್ವಚ್ಛತಾ ಅಭಿಯಾನ ಇಂದು ನಡೆಸಲಾಯಿತು. ಈ ಅಭಿಯಾನದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯೆ ಜಯಂತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ ದ ಪದಾಧಿಕಾರಿಗಳು, ಪೊರ್ಲುದ ಕೆಯ್ಯುರು ಘಟಕ, ವರ್ತಕರ ಸಂಘ, ಅಭಿನವ

ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಅಭಿಯಾನ | ಕೆಯ್ಯೂರು ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಅಭಿಯಾನ Read More »

ಯುವಕವಿ ನಾರಾಯಣ ಕುಂಬ್ರ ಅವರ “ಹನಿದನಿ : ಇದು ಬರಹಗಳ ಮಣಿ” ಕೃತಿ ಬಿಡುಗಡೆ

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತ್ರತ್ವದ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕ, ಯುವಕವಿ ನಾರಾಯಣ ಕುಂಬ್ರ ಅವರ “ಹನಿದನಿ : ಇದು ಬರಹಗಳ ಮಣಿ.”ಎಂಬ ಕೃತಿ ಬಿಡುಗಡೆಗೊಂಡಿತು. ಸುದಾನ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ವಿಜಯ ಹಾರ್ವಿನ್‍ ಕೃತಿ ಬಿಡುಗಡೆ ಮಾಡಿದರು. ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ.ಪುರಂದರ ಭಟ್ ಅವರ ಆಶೀರ್ವಾದದೊಂದಿಗೆ, ಪುತ್ತೂರು ತಾಲೂಕು ಘಟಕದ ಕ.ಸಾ.ಪರಿಷತ್ತಿನ ಅಧ್ಯಕ್ಷರು ಪುತ್ತೂರು ಉಮೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ, ಪುತ್ತೂರು ಅನುರಾಗ ವಠಾರದ

ಯುವಕವಿ ನಾರಾಯಣ ಕುಂಬ್ರ ಅವರ “ಹನಿದನಿ : ಇದು ಬರಹಗಳ ಮಣಿ” ಕೃತಿ ಬಿಡುಗಡೆ Read More »

error: Content is protected !!
Scroll to Top