ಪುತ್ತೂರು

ಕಾವು ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು: ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನ ಕಾವು ವಾರ್ಷಿಕ ಜಾತ್ರೋತ್ಸವವು ಫೆ. 27ರಿಂದ ಮಾ. 3ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೇವಸ್ಥಾನದ ವಠಾರದಲ್ಲಿ ದೀಪ ಪ್ರಜ್ವಲನೆಯೊಂದಿಗೆ ನೆರವೇರಿತು. ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಸದಸ್ಯೆ ಶ್ರೀಮತಿ ನವೀನಾ ಬಿ.ಡಿ., ಹಿರಿಯರಾದ ಪ್ರಕಾಶ್ ಉಂಗ್ರುಳಿತ್ತಾಯ ಹಾಗೂ ಶೇಷಪ್ಪ ಗೌಡ, ಕಾವು ಸಿ.ಎ. ಬ್ಯಾಂಕ್ ನಿರ್ದೇಶಕ ಲೋಹಿತ್ ಅಂಚಿನಡ್ಕ, ಪುತ್ತಿಲ ಪರಿವಾರ ಕಾವು ಘಟಕದ ಕಾರ್ಯದರ್ಶಿ […]

ಕಾವು ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಳಿನಿ ಲೋಕಪ್ಪ ಗೌಡ ನಿಧನ

ಪುತ್ತೂರು: ಸಮಾಜ ಸೇವಕಿ, ಧಾರ್ಮಿಕ ಮುಂದಾಳು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನರಿಮೊಗರಿನ ಮುಂಡೂರು ಗ್ರಾಮದ ಕೆರೆಮನೆ ನಿವಾಸಿ ನಳಿನಿ ಲೋಕಪ್ಪ ಗೌಡ(74) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರು ಮುಂಡೂರು ಮೃತ್ಯುಂಜಯೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಲೋಕಪ್ಪ ಗೌಡ ಅವರ ಪತ್ನಿ. ಮೃತರು ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಳಿನಿ ಲೋಕಪ್ಪ ಗೌಡ ನಿಧನ Read More »

ರಸ್ತೆ ದುರಸ್ಥಿ ಮಾಡಿದ ಸ್ಪೋರ್ಟ್ಸ್ ಕ್ಲಬ್ ಯುವಕರು

ಕಬಕ: ಕೊಡಿಪ್ಪಾಡಿ ಹಾಗೂ ಕುಳ ಗ್ರಾಮದಲ್ಲಿರುವ ವಾಸುಕಿ ಸ್ಪೋರ್ಟ್ಸ್ ಕ್ಲಬ್ (ರಿ) ಟ್ರಸ್ಟ್ ಓಜಾಲ , ಇದರ ಸದಸ್ಯರಿಂದ ಕಬಕ-ಕುಂಡಡ್ಕ ಸಂಪರ್ಕ ರಸ್ತೆಯ ಗುಂಡಿ ಹಾಗೂ ಬದಿಗಳಿಗೆ ಮಣ್ಣು ಹಾಕುವ ಮೂಲಕ ಊರಿನ ವಾಹನ ಸವಾರರಿಗೆ ಹಾಗೂ ರಸ್ತೆಯಲ್ಲಿ ನಡೆದುಕೊಂಡು ಹೋಗುವವರಿಗೆ ಸಹಾಯಕವಾಗುವಂತೆ ಉತ್ತಮ ಕಾರ್ಯವನ್ನು ನಡೆಸಿದ್ದಾರೆ. ವಾಸುಕಿ ಸ್ಪೋರ್ಟ್ಸ್ ಕ್ಲಬ್ (ರಿ) ಟ್ರಸ್ಟ್ ಓಜಾಲ ಇದರ ಅಧ್ಯಕ್ಷ ಮಿಥುನ್ ಓಜಾಲ, ಉಪಾಧ್ಯಕ್ಷ ಕಿರಣ್ ಓಜಾಲ, ಮಾಜಿ ಅಧ್ಯಕ್ಷ ಮುರಳೀಧರ ಕೊರ್ಜೆ ಹಾಗೂ ಎಲ್ಲಾ ಸದಸ್ಯರ ಸಹಕಾರದಿಂದ

ರಸ್ತೆ ದುರಸ್ಥಿ ಮಾಡಿದ ಸ್ಪೋರ್ಟ್ಸ್ ಕ್ಲಬ್ ಯುವಕರು Read More »

ತಲೆಗೆ ಗಾಯವಾಗಿ ವೃದ್ಧ ಸಾವು : ಸಾವಿನ ಬಗ್ಗೆ ಅನುಮಾನ

ಮನೆಯಲ್ಲೇ ಬಿದ್ದಿತ್ತು 73ರ ಹರೆಯದ ವ್ಯಕ್ತಿಯ ಶವ ಕಡಬ: ವೃದ್ಧರೊಬ್ಬರು ತಲೆಗೆ ಗಾಯಗೊಂಡ ಸ್ಥಿತಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ನೆಲ್ಯಾಡಿಯಲ್ಲಿರುವ ಅವರ ನಿವಾಸದಲ್ಲಿ ಭಾನುವಾರ ಶವ ಪತ್ತೆಯಾಗಿದೆ. ಮೃತರನ್ನು ಕಡಬ ನೆಲ್ಯಾಡಿ ಗ್ರಾಮದ ನಿವಾಸಿ ಕೆ.ಸಿ. ವರ್ಗೀಸ್ (73) ಎಂದು ಗುರುತಿಸಲಾಗಿದೆ. ಕೆ.ವಿ.ಥಾಮಸ್ ಸಲ್ಲಿಸಿದ ದೂರಿನ ಪ್ರಕಾರ, ಭಾನುವಾರ ಮಧ್ಯಾಹ್ನ ಚಿಕಿತ್ಸೆಗಾಗಿ ತನ್ನ ತಾಯಿಯನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ದಿದ್ದರು. ರಾತ್ರಿ 8 ಗಂಟೆಗೆ ಅವರನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಹೋದ ನಂತರ, ರಾತ್ರಿ 11 ಗಂಟೆಗೆ ಮನೆಗೆ

ತಲೆಗೆ ಗಾಯವಾಗಿ ವೃದ್ಧ ಸಾವು : ಸಾವಿನ ಬಗ್ಗೆ ಅನುಮಾನ Read More »

ಫೆ.11: ಕರ್ನಾಟಕ ರಾಜ್ಯ ‘ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನದಿಂದ ಮಂಗಳೂರಿನಲ್ಲಿ ರಾಜ್ಯ ಸಮಾವೇಶ

ಪುತ್ತೂರು: ಕರ್ನಾಟಕ ರಾಜ್ಯ ‘ಕನ್ನಡ ಶಾಲೆ ಉಳಿಸಿ, ಬೆಳೆಸಿ’ಅಭಿಯಾನ ಇದರ ವತಿಯಿಂದ ಕನ್ನಡ ಮನಸ್ಸುಗಳ ಬೃಹತ್ ಸಂಗಮವಾಗಿ ರಾಜ್ಯ ಸಮಾವೇಶ-2026 ಮತ್ತು ಅಭಿಯಾನದ ಅಂಗವಾಗಿ 12 ವರ್ಷದೊಳಗೆ 75 ಶಾಲೆಗಳಿಗೆ ನೀಡಿದ ಜಾರುಬಂಡಿ ಸಹಿತ ವಿವಿಧ ಕ್ರೀಡಾಚಟುವಟಿಗಳಿಗೆ ನೀಡಿದ ಪ್ರೋತ್ಸಾಹದ 75ರ ಸಂಭ್ರಮ ಫೆ. 11ರಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರು ಪುಭರವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ಪುತ್ತೂರು ತಾಲೂಕು ಅಧ್ಯಕ್ಷೆ ನಿವೃತ್ತ ಶಿಕ್ಷಕಿ ವೇದಾವತಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ

ಫೆ.11: ಕರ್ನಾಟಕ ರಾಜ್ಯ ‘ಕನ್ನಡ ಶಾಲೆ ಉಳಿಸಿ ಬೆಳೆಸಿ’ ಅಭಿಯಾನದಿಂದ ಮಂಗಳೂರಿನಲ್ಲಿ ರಾಜ್ಯ ಸಮಾವೇಶ Read More »

ವಿಟ್ಲ : ಬೈಕ್‌ ಡಿಕ್ಕಿ ಹೊಡೆದು ವೃದ್ಧ ಮಹಿಳೆ ಸಾವು

ಪುತ್ತೂರಿನ ಬೈಕ್‌ ಸವಾರನಿಗೆ ಗಂಭೀರ ಗಾಯ ವಿಟ್ಲ: ಬೈಕ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ವೃದ್ಧ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬೈಕ್ ಸವಾರ ಪುತ್ತೂರು ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ

ವಿಟ್ಲ : ಬೈಕ್‌ ಡಿಕ್ಕಿ ಹೊಡೆದು ವೃದ್ಧ ಮಹಿಳೆ ಸಾವು Read More »

ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ

ಪುತ್ತೂರಿನಲ್ಲಿ 1.6 ಕ್ವಿಂಟಾಲ್‌ ಗಾಂಜಾ ವಶವಾದ ಪ್ರಕರಣ ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜ.19ರಂದು 53,03,000 ರೂ .ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42)

ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ Read More »

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ

ವೀರಮಂಗಲ: ಶಾಂತಿಗೋಡು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ ಮತ್ತು ದೈವಗಳ ನೇಮೋತ್ಸವ ಫೆ. 15 ರಂದು ನಡೆಯಲಿದೆ. ಫೆ. 9 ರಂದು ನಾಗತಂಬಿಲ, ಫೆ. 10 ರಂದು ಸಂಜೆ 6 ಗಂಟೆಗೆ ನೂತನವಾಗಿ ನಿರ್ಮಾಣವಾಗಿರುವ ಅಂಙಣಪಂಜುರ್ಲಿ ದೈವಸ್ಥಾನದ ವಾಸ್ತು ಪೂಜೆ, ಫೆ. 11 ರಂದು ಹುಲಿ ಚಾಮುಂಡಿ ಮತ್ತು ಅಂಙಣಪಂಜುರ್ಲಿ ದೈವಗಳ ಪುನಃಪ್ರತಿಷ್ಟೆ, ಫೆ. 14 ರಂದು ಕುಮಾರಧಾರಾ ನದಿಯಲ್ಲಿ ಗಂಗಾ ಪೂಜೆ, ಕಲಶ ಜಲ ಮೆರವಣಿಗೆ, ಮಹಾ ಪೂಜೆ, ಅನ್ನಸಂತರ್ಪಣೆ, ರಾತ್ರಿ

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವೀರಮಂಗಲದ ವಾರ್ಷಿಕ ಜಾತ್ರೋತ್ಸವ Read More »

ಕುದ್ಮಾರು ಶಾಲೆ: ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ

ಕುದ್ಮಾರು ಹಿರಿಯ ಮಾದರಿ ಕಿರಿಯ ಪ್ರಾಥಮಿಕ ಶಾಲೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಶಿಫಾರಸ್ಸಿನ ಮೇರೆಗೆ MRPL CRS ಫಂಡ್ ನ 15 ಲಕ್ಷ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುವ ಮುನ್ನವೇ ಸಂಸದರಿಂದ ಉದ್ಘಾಟನೆ ಆಗುವಂತೆ ಆಗಲಿ. ಈ ಕಾರ್ಯಕ್ಕೆ ಎಲ್ಲರೂ ಸಹಕರಿಸಿ ಒಟ್ಟಾಗಿ ಕೆಲಸ ಮಾಡುವಂತೆ ಮನವಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಭಾರತೀಯ

ಕುದ್ಮಾರು ಶಾಲೆ: ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿ ಪೂಜೆ Read More »

ಫೆ.21: ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೂರು ದಿನಗಳ ಕಾಲ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಮುಕ್ತ ಬೃಹತ್ ತಾಂತ್ರಿಕ ವಸ್ತು ಪ್ರದರ್ಶನ ‘ಬಿಲ್ಡ್‌ಟೆಕ್-2026’

ಪುತ್ತೂರು: ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಸೆಂಟರ್ ಮತ್ತು ಯು.ಎಸ್. ಕಮ್ಯುನಿಕೇಶನ್ಸ್ ವತಿಯಿಂದ ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಸುದ್ದಿ ಅರಿವು ಎಂಟರ್‌ಪ್ರೈಸಸ್‌ನ ಸಹಯೋಗದೊಂದಿಗೆ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಮುಕ್ತ ಬೃಹತ್ ತಾಂತ್ರಿಕ ವಸ್ತು ಪ್ರದರ್ಶನ ‘ಬಿಲ್ಸ್ ಟೆಕ್ -2026* ಫೆ.21ರಿಂದ ಮೂರು ದಿನ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರು ಭಾಗದ ಗದ್ದೆಯಲ್ಲಿ ನಡೆಯಲಿರುವುದಾಗಿ ಅಸೋಸಿಯೇಶನ್‌ ಆಫ್ ಕನ್ಸಲಿಂಗ್ ಸಿವಿಲ್ ಇಂಜಿನಿಯರ್ ಪುತ್ತೂರು ಸೆಂಟರ್‌ನ ಅಧ್ಯಕ್ಷ ಶಿವರಾಮ ಮತಾವು ತಿಳಿಸಿದ್ದಾರೆ. ಈ ಮೂರು ದಿನದ

ಫೆ.21: ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೂರು ದಿನಗಳ ಕಾಲ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಮುಕ್ತ ಬೃಹತ್ ತಾಂತ್ರಿಕ ವಸ್ತು ಪ್ರದರ್ಶನ ‘ಬಿಲ್ಡ್‌ಟೆಕ್-2026’ Read More »

error: Content is protected !!
Scroll to Top