ಪುತ್ತೂರು

ಪ್ರತಿಷ್ಠಿತ ಜಿ.ಎಲ್‍. ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಪ್ರಾಚೀನ ಪರಂಪರೆಯ ಚಿನ್ನಾಭರಣ ಮಹೋತ್ಸವ ‘ಜಿ.ಎಲ್‍.ಆ್ಯಂಟಿಕ್‍ ಫೆಸ್ಟ್’

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಪ್ರಾಚೀನ ಪರಂಪರೆಯ ಚಿನ್ನಾಭರಣ ಮಹೋತ್ಸವ ‘ಜಿ.ಎಲ್‍.ಆ್ಯಂಟಿಕ್‍ ಫೆಸ್ಟ್‍’ ಫೆ.24 ರಿಂದ ಆರಂಭಗೊಂಡಿದೆ. ಪುರಾತನ ಆಭರಣಗಳು ಸಾಮಾನ್ಯ ಆಭರಣಗಳಂತೆ ಇದ್ದು ಪ್ರಾಚೀನ ಸಂಸ್ಕೃತಿಯನ್ನು ಬಿಂಬಿಸುತ್ತವೆ. ಆ್ಯಂಟಿಕ್ ಆಭರಣಗಳನ್ನು ವಜ್ರಗಳು, ಚಿನ್ನ, ಬೆಳ್ಳಿ, ಪ್ಲಾಟಿನಂ ಮತ್ತು ಮುತ್ತುಗಳಂತಹ ಅಮೂಲ್ಯ ಲೋಹಗಳಿಂದ ತಯಾರಿಸಲಾಗುತ್ತದೆ. ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಆಂಟಿಕ್ ಆಭರಣಗಳ ವಿಭಾಗ ‘ಪ್ರಾಚಿ’ಯಲ್ಲಿ ಗ್ರಾಹಕರ ಕಣ್ಮನ ಸೆಳೆಯುವ ಅಮೋಘ ಆಭರಣಗಳ ಸಂಗ್ರಹವಿದ್ದು ಸಂಸ್ಥೆಯು ತಮ್ಮೆಲ್ಲ ನೆಚ್ಚಿನ ಗ್ರಾಹಕರಿಗೆ ಆ್ಯಂಟಿಕ್‍ ಆಭರಣಗಳನ್ನು […]

ಪ್ರತಿಷ್ಠಿತ ಜಿ.ಎಲ್‍. ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಪ್ರಾಚೀನ ಪರಂಪರೆಯ ಚಿನ್ನಾಭರಣ ಮಹೋತ್ಸವ ‘ಜಿ.ಎಲ್‍.ಆ್ಯಂಟಿಕ್‍ ಫೆಸ್ಟ್’ Read More »

ವಿಟ್ಲದ ಲಾಡ್ಜ್ ನಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ

ವಿಟ್ಲ: ವ್ಯಕ್ತಿಯೊಬ್ಬರ ದೇಹ ಚಿಂತಾಜನಕ ಸ್ಥಿತಿಯಲ್ಲಿ ವಿಟ್ಲದ ಕಾವೇರಿ ಬಾ‌ರ್ ಲಾಡ್ಜ್‌ ನಲ್ಲಿ ಕಂಡು ಬಂದ ಘಟನೆ ನಡೆದಿದೆ. ಚಿಂತಾಜನಕ ಸ್ಥಿತಿಯಲ್ಲಿ ಕಂಡುಬಂದ ವ್ಯಕ್ತಿಯನ್ನು ಕೇರಳ ಮೂಲದ ಸುಜೇಶ್ ಎಂದು ಗುರುತಿಸಲಾಗಿದೆ. ವಿಟ್ಲ ಮಂಗಳೂರು ರಸ್ತೆಯ ಕೋಡಿ ಕಾವೇರಿ ಬಾರ್ & ರೆಸ್ಟೋರೆಂಟ್ ಲಾಡ್ಜ್‌ನಲ್ಲಿ ವ್ಯಕ್ತಿಯೊಬ್ಬರು ಕಳೆದ ಒಂದು ವಾರಗಳ ಹಿಂದೆ ಬಂದು ತಂಗಿದ್ದು. ಇಂದು ಮುಂಜಾನೆ ಲಾಡ್ಜ್ ಸಿಬ್ಬಂದಿಯವರು ಕೋಣೆಯ ಬಾಗಿಲು ತೆಗೆಯುತ್ತಿದ್ದಂತೆ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿಯು ರಕ್ತದ ಮಡುವಿನಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಕಂಡುಬಂದಿದೆ. ಕೂಡಲೇ

ವಿಟ್ಲದ ಲಾಡ್ಜ್ ನಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ Read More »

ಸಹಕಾರ ರತ್ನ ಡಾ.ಎಂ.ಎನ್‍.ರಾಜೇಂದ್ರ ಕುಮಾರ್, ಶಶಿಕುಮಾರ್ ರೈ ಬಾಲ್ಯೊಟ್ಟುಗೆ ಸಹಕಾರಿ ಬಂಧುಗಳಿಂದ ಅಭಿನಂದನೆ | ಸಹಕಾರಿ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಮಾಡದೇ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದೇನೆ : ಎಂ.ಎನ್‍.ರಾಜೇಂದ್ರ ಕುಮಾರ್‍

ಪುತ್ತೂರು: ನ್ಯಾಷನಲ್‍ಪ್ರೆಸ್ ಕೌನ್ಸಿಲ್ ಆಫ್‍ಎಸ್‍ಸಿಆರ್‍ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್‍.ರಾಜೇಂದ್ರ ಕುಮಾರ್ ಹಾಗೂ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ ಪುತ್ತೂರು ಬಂಟರ ಭವನದಲ್ಲಿ ಶನಿವಾರ ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ನೆರವೇರಿಸಿ, ಡಾ|ರಾಜೇಂದ್ರ ಕುಮಾರ್ ಸಹಕಾರಿ ಕ್ಷೇತ್ರದಲ್ಲಿ ಉತ್ತುಂಗ ಸ್ಥಾನವನ್ನು ಸಾಧಿಸಿದ್ದಾರೆ. ಸುದೀರ್ಘ ಅವಧಿಗೆ ದ.ಕ.ಜಿಲ್ಲಾ

ಸಹಕಾರ ರತ್ನ ಡಾ.ಎಂ.ಎನ್‍.ರಾಜೇಂದ್ರ ಕುಮಾರ್, ಶಶಿಕುಮಾರ್ ರೈ ಬಾಲ್ಯೊಟ್ಟುಗೆ ಸಹಕಾರಿ ಬಂಧುಗಳಿಂದ ಅಭಿನಂದನೆ | ಸಹಕಾರಿ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಮಾಡದೇ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದೇನೆ : ಎಂ.ಎನ್‍.ರಾಜೇಂದ್ರ ಕುಮಾರ್‍ Read More »

ಜೀವನ ಪದ್ಧತಿ, ಸ್ವಾವಲಂಬಿ ಬದುಕು ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ : ಸಂಜೀವ ಮಠಂದೂರು | ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿಯ ಸುಳ್ಯ ಶಾಖಾ ಪ್ರಥಮ ವಾರ್ಷಿಕೋತ್ಸವ ಸಮಾರಂಭ

ಸುಳ್ಯ: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿಯ ಸುಳ್ಯ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಶನಿವಾರ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಜನರ ಜೀವನ ಪದ್ಧತಿ ಸುಧಾರಣೆ ಮತ್ತು ಸ್ವಾವಲಂಬಿ ಬದುಕು ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ. ಸಹಕಾರ ರಂಗ ಜನರ ಪ್ರೀತಿ ವಿಶ್ವಾಸ ಗಳಿಸಿದೆ. ಸಹಕಾರ ರಂಗ ಬಲಗೊಂಡಾಗ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ ಎಂದು ಹೇಳಿದ ಅವರು, ಸಹಕಾರಿ ಸಂಘದ

ಜೀವನ ಪದ್ಧತಿ, ಸ್ವಾವಲಂಬಿ ಬದುಕು ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ : ಸಂಜೀವ ಮಠಂದೂರು | ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿಯ ಸುಳ್ಯ ಶಾಖಾ ಪ್ರಥಮ ವಾರ್ಷಿಕೋತ್ಸವ ಸಮಾರಂಭ Read More »

ಹಲವಾರು ಬೇಡಿಕಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆಯಿಂದ ಪ್ರತಿಭಟನೆ

ಪುತ್ತೂರು: ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ದ.ಕ ಜಿಲ್ಲಾ ಸಮಿತಿಯಿಂದ ದ.ಕ ಜಿಲ್ಲೆಯ ರೈತರ ಹಲವಾರು ವರ್ಷಗಳಿಂದ ಇರುವ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ.1 ರಂದು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ಮಾತನಾಡಿ, ಹಲವು ವರ್ಷಗಳಿಂದ ಬಾಕಿಯಿರುವ ಅಕ್ರಮ-ಸಕ್ರಮ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು. ಕುಮ್ಕಿ ಹಕ್ಕು ಅನುಭವಿಸುತ್ತಿರುವವರಿಗೆ ಭೂಮಿಯನ್ನು ಮಂಜೂರುಗೊಳಿಸಬೇಕು. ಹವಾಮಾನ ವೈಪರೀತ್ಯ ಹಾಗೂ ಪ್ರಾಕೃತಿಕ

ಹಲವಾರು ಬೇಡಿಕಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆಯಿಂದ ಪ್ರತಿಭಟನೆ Read More »

ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಗೆ ರಾಜ್ಯ ಯುವಜನೋತ್ಸವದಲ್ಲಿ ಪ್ರಶಸ್ತಿ

ಪುತ್ತೂರು: ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಗೆ ರಾಜ್ಯ ಯುವಜನೋತ್ಸವದಲ್ಲಿ ನಡೆದ ವೈಯಕ್ತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ತೃತೀಯ, ಗುಂಪು ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಪ್ರಹಸನ ದ್ವಿತೀಯ ಹಾಗೂ ಮೂಖಾಭಿನಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಜೊತೆಗೆ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಸಮಗ್ರ ಪ್ರಶಸ್ತಿ ಪಡೆದಿದೆ. ಇವರು ರಾಜ್ಯ ಎನ್.ಎಸ್.ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್

ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಗೆ ರಾಜ್ಯ ಯುವಜನೋತ್ಸವದಲ್ಲಿ ಪ್ರಶಸ್ತಿ Read More »

ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೋತ್ಸವ

ಕಾಣಿಯೂರು : ಕಾಣಿಯೂರು  ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನಮ್ ಉಡುಪಿ, ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೆಯು ಫೆ. 28ರಂದು ಪ್ರಾರಂಭಗೊಂಡಿದೆ.   ಫೆ.28ರಂದು ಸಂಜೆ ಕಾಣಿಯೂರು ಮಠದಲ್ಲಿ ರಂಗಪೂಜೆ, ರಾತ್ರಿ ಉಳ್ಳಾಕುಲು ದೈವಗಳ ಭಂಡಾರ ತೆಗೆದು ಶ್ರೀ ಕಾಣಿಯೂರು ಉಳ್ಳಾಕುಲು ಮಾಡದಲ್ಲಿ ಧ್ವಜಾರೋಹಣ ನಡೆಯಿತು.  ಈ ಸಂದರ್ಭದಲ್ಲಿ ಕಾಣಿಯೂರು ಮಠದ ವ್ಯವಸ್ಥಾಪಕರಾದ ಶ್ರೀನಿಧಿ ಆಚಾರ್ಯ, ಅರ್ಚಕ ಬಾಲಕೃಷ್ಣ ಅಸ್ರಣ್ಣ ಹಾಗೂ ಉತ್ಸವ ಸಮಿತಿ ಪದಾಧಿಕಾರಿಗಳು, ಕೊಡುಕಟ್ಟಿನವರು, ಗ್ರಾಮಸ್ಥರು, ಭಕ್ತಾಧಿಗಳು ಉಪಸ್ಥಿತರಿದ್ದರು. ಮಾ.1ರಂದು ಬೆಳಿಗ್ಗೆ ಕಾಣಿಯೂರು ಮಾಡದಲ್ಲಿ

ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೋತ್ಸವ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಕಂಬಳ ಕರೆಗೆ ಹಾಲು ಎರೆದು, ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದ ಈಶ್ವರ ಭಟ್‍ ಪಂಜಿಗುಡ್ಡೆ | ರಾಜ್ಯಮಟ್ಟದ ಕೆಸರುಗದ್ದೆ ಓಟಕ್ಕೆ ಚಾಲನೆ

ಪುತ್ತೂರು : ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ  ನಡೆಯುವ 32ನೇ ವರ್ಷದ ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆಗಳಲ್ಲೊಂದಾದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಶನಿವಾರ ಬೆಳಿಗ್ಗೆ ಅದ್ದೂರಿ ಚಾಲನೆ ನೀಡಲಾಯಿತು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ನಡೆಯುವ ಕಂಬಳಕ್ಕೆ ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಕಂಬಳ ಸಮಿತಿ ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ ಕಂಬಳ ಕರೆಗೆ ಹಾಲು ಎರೆದು, ತೆಂಗಿನಕಾಯಿ

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಕಂಬಳ ಕರೆಗೆ ಹಾಲು ಎರೆದು, ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದ ಈಶ್ವರ ಭಟ್‍ ಪಂಜಿಗುಡ್ಡೆ | ರಾಜ್ಯಮಟ್ಟದ ಕೆಸರುಗದ್ದೆ ಓಟಕ್ಕೆ ಚಾಲನೆ Read More »

ನಾಳೆ (ಮಾ.1) : ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿ ಲಿ. ನ ಸುಳ್ಯ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ

ಸುಳ್ಯ: ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿ ಲಿಮಿಟೆಡ್‍ ನ ಸುಳ್ಯ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಮಾ.1 ಶನಿವಾರ ಸುಳ್ಯ ಲಯನ್ಸ್ ಕ್ಲಬ್‍ ನಲ್ಲಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿಯ ಅಧ್ಯಕ್ಷ ಪಾಣತ್ತಲೆ ಪಳಂಗಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪಾಲ್ಗೊಳ್ಳುವರು. ಅತಿಥಿಗಳಾಗಿ ಪುತ್ತೂರು ಮಾಜಿ ಶಾಸಕ ಸಂಜೀವ

ನಾಳೆ (ಮಾ.1) : ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‍ ಸೊಸೈಟಿ ಲಿ. ನ ಸುಳ್ಯ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ Read More »

ನಗರಸಭೆ ವಿಶೇಷ ಸಾಮಾನ್ಯ ಸಭೆ | ನೂತನ ಉದ್ಯಮ ಪರವಾನಗಿ ಬೈಲಾ ರಚನೆ

ಪುತ್ತೂರು: ನಗರಸಭೆ ವಿಶೇಷ ಸಾಮಾನ್ಯ ಸಭೆ ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ನಡೆಯಿತು. ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉದ್ಯಮ ಪರವಾನಗಿ ಶುಲ್ಕ ಮತ್ತು ಉದ್ಯಮಗಳ ಘನತ್ಯಾಜ್ಯ ವಿಲೇವಾರಿಗಾಗಿ ವಿಧಿಸಲಾಗುತ್ತಿದ್ದ ಶುಲ್ಕದಲ್ಲಿ ಉಂಟಾಗಿದ್ದ ತಾರತಮ್ಯ ನಿವಾರಿಸಿ ನೂತನ ಉದ್ಯಮ ಪರವಾನಗಿ ಬೈಲಾವನ್ನು ಪುತ್ತೂರು ನಗರಸಭೆ ರಚಿಸಿದ್ದು, ಇದರ ಅನುಷ್ಠಾನಕ್ಕೆ ಮಂಜೂರಾತಿ ನೀಡಲಾಯಿತು. ಸಭೆಯಲ್ಲಿ ಬೈಲಾ ಕರಡು ಪ್ರತಿಯ ಮೇಲೆ ಸುದೀರ್ಘ ಚರ್ಚೆ ನಡೆದು ಅಂಗೀಕರಿಸಲಾಯಿತು. ಪೌರಾಯುಕ್ತ ಮಧು ಎಸ್. ಮನೋಹರ್ ಬೈಲಾದಲ್ಲಿರುವ

ನಗರಸಭೆ ವಿಶೇಷ ಸಾಮಾನ್ಯ ಸಭೆ | ನೂತನ ಉದ್ಯಮ ಪರವಾನಗಿ ಬೈಲಾ ರಚನೆ Read More »

error: Content is protected !!
Scroll to Top