ಪುತ್ತೂರು

ಮಾ.2 : ಪ್ರತಿಷ್ಠಿತ ಆಲಂಕಾರು ಸಿ.ಎ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ | ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಧಿಕೃತ ಅಭ್ಯರ್ಥಿಗಳನ್ನೇ ಗೆಲ್ಲಿಸಿ : ವೆಂಕಟ್ ವಳಲಂಬೆ | ಆಲಂಕಾರು ಸಿಎ ಬ್ಯಾಂಕ್‍ ನಲ್ಲಿ ಬಂಡಾಯದ ಕರಿನೆರಳು

ಪುತ್ತೂರು: ಪ್ರತಿಷ್ಠಿತ ಆಂಕಾರು ಸಿ.ಎ. ಬ್ಯಾಂಕ್‍ ಆಡಳಿತ ಮಂಡಳಿ ಚುನಾವಣೆಗೆ ದಿನನಿಗದಿಯಾಗಿದ್ದು, ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯಿಂದ ಅಧಿಕೃತವಾಗಿ ಈಗಾಗಲೇ 12 ಮಂದಿಯನ್ನು ಚುನಾವಣಾ ಕಣಕ್ಕೆ ಇಳಿಸಲಾಗಿದೆ. ಈ ನಡುವೆ ಬಿಜೆಪಿಯ ಮತ್ತೊಂದು ತಂಡ ಸಹಕಾರ ಭಾರತಿಗೆ ವಿರುದ್ಧವಾಗಿ 12 ಮಂದಿಯನ್ನು ಬಂಡಾಯ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದು, ಸಹಕಾರ ಭಾರತಿಯ ಅಧಿಕೃತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಾಗಿ ಸುಳ್ಯ ಬಿಜೆಪಿ ಮಂಡಲದ ಅಧ್ಯಕ್ಷ ವೆಂಕಟ್‍ ವಳಲಂಬೆ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಳ್ಯ ಹಾಗೂ ಕಡಬ ವ್ಯಾಪ್ತಿಯನ್ನೊಳಗೊಂಡಿರುವ ಕಡಬ ತಾಲೂಕಿನ […]

ಮಾ.2 : ಪ್ರತಿಷ್ಠಿತ ಆಲಂಕಾರು ಸಿ.ಎ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ | ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಧಿಕೃತ ಅಭ್ಯರ್ಥಿಗಳನ್ನೇ ಗೆಲ್ಲಿಸಿ : ವೆಂಕಟ್ ವಳಲಂಬೆ | ಆಲಂಕಾರು ಸಿಎ ಬ್ಯಾಂಕ್‍ ನಲ್ಲಿ ಬಂಡಾಯದ ಕರಿನೆರಳು Read More »

ಪಿಕಪ್‍-ಮಿನಿ ಲಾರಿ ಅಪಘಾತ

ಬೆಳ್ಳಾರೆ: ಪಿಕಪ್‍ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಸವಣೂರು ರಸ್ತೆಯ ಕುಂಡಡ್ಕ ಚಾಮುಂಡಿಮೂಲೆ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತ ಪರಿಣಾಮ ಪಿಕಪ್ ಚಾಲಕನಿಗೆ ಗಾಯವಾಗಿದೆ. ಹೊಸ ರಸ್ತೆಯಾದ ಬಳಿಕ ಈ ಪರಿಸರದಲ್ಲಿ ಸಂಭವಿಸಿದ ಮೂರನೇ ಅಪಘಾತ ಪ್ರಕರಣ ಇದಾಗಿದ್ದು, ಅಗತ್ಯ ಸೂಚನಾ ಫಲಕ ನಿರ್ಮಿಸುವಂತೆ ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗಿದೆ.

ಪಿಕಪ್‍-ಮಿನಿ ಲಾರಿ ಅಪಘಾತ Read More »

ಸೋಜಾ ಮೆಟಲ್ಸ್ ಮಾಲಕ ಅಲೆಕ್ಸ್ ಮಿನೇಜಸ್ ನಿಧನ

ಪುತ್ತೂರು: ಸೋಜಾ ಮೆಟಲ್ಸ್ ಮಾಲಕ ಅಲೆಕ್ಸ್ ಮಿನೇಜಸ್ ಅನಾರೋಗ್ಯದಿಂದ ಶುಕ್ರವಾರ ಬೆಳಿಗ್ಗೆ ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ ಹಾಗೂ ಮೂರು ಮಕ್ಕಳನ್ನು ಅಗಲಿದ್ದಾರೆ.

ಸೋಜಾ ಮೆಟಲ್ಸ್ ಮಾಲಕ ಅಲೆಕ್ಸ್ ಮಿನೇಜಸ್ ನಿಧನ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ DCC ಬ್ಯಾಂಕ್ ಪರೀಕ್ಷಾ ತರಬೇತಿ ಇಂದು ಪ್ರಾರಂಭ

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾರ್ಚ್ 9 ರಂದು ನಡೆಯಲಿರುವ SCDCC ಬ್ಯಾಂಕ್ ಲಿಖಿತ ಪರೀಕ್ಷೆಗೆ ತರಬೇತಿಯು ಫೆ, 27ರಂದು ಆನ್ಲೈನ್ ಮೂಲಕ ಪ್ರಾರಂಭವಾಗಿದೆ.  ತರಬೇತಿಯು ರಾತ್ರಿ 7 ರಿಂದ 9 ರವರೆಗೆ ದಿನನಿತ್ಯ ಎರಡು ಗಂಟೆಯಂತೆ ವಿಷಯಧಾರಿತವಾಗಿ ನುರಿತ ತರಬೇತುದಾರರಿಂದ ನಡೆಯಲಿದ್ದು ಪರೀಕ್ಷೆಗೆ ಸಂಬಂಧಪಟ್ಟ ಅಧ್ಯಯನ ಸಾಮಗ್ರಿಗಳು ಕೂಡ ದೊರೆಯಲಿದೆ. ಆಸಕ್ತರು ವಿದ್ಯಾಮಾತಾ ಅಕಾಡೆಮಿಯ ಪುತ್ತೂರು ,ಸುಳ್ಯ ಕಚೇರಿಗೆ ಭೇಟಿ ನೀಡಬಹುದು, ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ

ವಿದ್ಯಾಮಾತಾ ಅಕಾಡೆಮಿಯಲ್ಲಿ DCC ಬ್ಯಾಂಕ್ ಪರೀಕ್ಷಾ ತರಬೇತಿ ಇಂದು ಪ್ರಾರಂಭ Read More »

ಮಾ.1-2 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮೇಳೈಸಲಿದೆ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ | ಚಲನಚಿತ್ರ ನಟಿ-ನಟಿಯರ ಮೆರುಗು | ಪ್ರಥಮ ಬಾರಿಗೆ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ

ಪುತ್ತೂರು : 32ನೇ ವರ್ಷದ ಪುತ್ತೂರಿನ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಮಾ.1 ಹಾಗೂ 2 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹ ಆಶೀರ್ವಾದಗಳಿಂದ, ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಕೀರ್ತಿಶೇಷ ಜಯಂತ ರೈ ಹಾಗೂ ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್

ಮಾ.1-2 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮೇಳೈಸಲಿದೆ ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ | ಚಲನಚಿತ್ರ ನಟಿ-ನಟಿಯರ ಮೆರುಗು | ಪ್ರಥಮ ಬಾರಿಗೆ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ | ರಾತ್ರಿ ಚಂದ್ರಮಂಡಲ ಉತ್ಸವ, ವೈಭವದ ತೆಪ್ಪೋತ್ಸವ | ಕಿಕ್ಕಿರಿದು ತುಂಬಿದ ಜನಸಾಗರ

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಬೆಳಿಗ್ಗೆ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಿತು. ಮಹಾಶಿವರಾತ್ರಿ ಉತ್ಸವದ ವಿಶೇಷವಾಗಿ ಬೆಳಗ್ಗೆ 7:30ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ಗಂಟೆಗೆ ಶತರುದ್ರಾಭಿಷೇಕ ನಡೆಯಿತು. ವಿಶೇಷವಾಗಿ ದೇವಸ್ಥಾನದ ಒಳಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಮೂರ್ತಿಗೆ ಭಕ್ತಾದಿಗಳಿಂದ ಬಿಲ್ವಾರ್ಚನೆ ಸೇವೆ ತಡ ರಾತ್ರಿ ವರೆಗೂ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಸಂಜೆ ಶ್ರೀ ದೇವಸ್ಥಾನಕ್ಕೆ ಭಕ್ತಾದಿಗಳ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ | ರಾತ್ರಿ ಚಂದ್ರಮಂಡಲ ಉತ್ಸವ, ವೈಭವದ ತೆಪ್ಪೋತ್ಸವ | ಕಿಕ್ಕಿರಿದು ತುಂಬಿದ ಜನಸಾಗರ Read More »

ಪುತ್ತೂರು : ಹೆಜ್ಜೇನು ದಾಳಿ | ವಿದ್ಯಾರ್ಥಿಗಳು ಸಹಿತ 15ಕ್ಕು ಹೆಚ್ಚು ಮಂದಿಗೆ ಗಾಯ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎಪಿಎಂಸಿಯ ಸಂಪರ್ಕ ರಸ್ತೆಯಲ್ಲಿ ಅದರ್ಶ ಆಸ್ಪತ್ರೆಯ ಎದುರು ಹೆಚ್ಚೇನು ದಾಳಿ ನಡೆಸಿರುವ ಘಟನೆ ಇಂದು ಬೆಳಿಗ್ಗೆ ಸುಮಾರು 9.30ರ ಹೊತ್ತಿಗೆ ಪುತ್ತೂರಿನಲ್ಲಿ ಈ ಘಟನೆ ನಡೆದಿದೆ. ಹೆಚ್ಚೇನು ದಾಳಿಯಿಂದ ಸುಮಾರು 10 ರಿದ 15 ಜನರಿಗೆ ಗಾಯಗಳಾಗಿದ್ದು, ಹೆಜ್ಜೇನು ದಾಳಿಯಿಂದ ಅಸ್ವಸ್ಥಗೊಂಡವರನ್ನು  ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಹಾಗೂ ಕೆಲಸಕ್ಕೆ ಹೊರಟ ಕೆಲವರಿಗೆ  ಹೆಚ್ಚೇನು  ದಾಳಿ ನಡೆಸಿದೆ. ಅಲ್ಲದೇ ಹೆಜ್ಜೆನು ವ್ಯಕ್ತಿಯೋರ್ವರ ಮೇಲೆ ಸುಮಾರು 20

ಪುತ್ತೂರು : ಹೆಜ್ಜೇನು ದಾಳಿ | ವಿದ್ಯಾರ್ಥಿಗಳು ಸಹಿತ 15ಕ್ಕು ಹೆಚ್ಚು ಮಂದಿಗೆ ಗಾಯ Read More »

ಅಪ್ರಾಪ್ತೆ ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕಳ ನೀಡಿದ ಯುವಕ | ಆರೋಪಿ ವಿರುದ್ದ ಫೋಕ್ಸೋ ಪ್ರಕರಣ  ದಾಖಲು

ಪುತ್ತೂರು : ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು  9 ವರ್ಷದ ಅಪ್ರಾಪ್ತ ಬಾಲಕಿಗೆ  ತೋರಿಸಿ,  ಲೈಂಗಿಕ ಕಿರುಕುಳದ ಆರೋಪದ ಹಿನ್ನಲೆ ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಮಹಮ್ಮದ್ ಇರ್ಷಾದ್(20) ಲೈಂಗಿಕ ಕಿರುಕುಳ ನೀಡಿದ ಆರೋಪಿ ಎನ್ನಲಾಗಿದೆ. ಮಹಮ್ಮದ್ ಇರ್ಷಾದ್ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ.  ಆರೋಪಿ 9 ವರ್ಷದ ಅಪ್ರಾಪ್ತಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಕುರಿತು ಫೆ.21ರಂದು ಅಪ್ರಾಪ್ತೆಯ ಪೋಷಕರು ಹಾಗೂ ಅಪ್ರಾಪ್ತೆ ಬಾಲಕಿ ದೂರು

ಅಪ್ರಾಪ್ತೆ ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕಳ ನೀಡಿದ ಯುವಕ | ಆರೋಪಿ ವಿರುದ್ದ ಫೋಕ್ಸೋ ಪ್ರಕರಣ  ದಾಖಲು Read More »

ಕಟ್ ಕನ್ವರ್ಶನ್ ಮತ್ತು ಅನಧಿಕೃತ ಕಟ್ಟಡಗಳಿಗೆ ಬಿ ಖಾತಾ ನೀಡಲು ಸರಕಾರದ ಆದೇಶ | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್‌ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ ಮನೆ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಲು ರಾಜ್ಯ ಸರಕಾರ ಆದೇಶ ನೀಡಿದ್ದು ,ಪುತ್ತೂರು ಶಾಸಕರು ಈ ಹಿಂದೆ ನೀಡಿದ್ದ ಮನವಿಗೆ ಸರಕಾರ ಸ್ಪಂದನೆ ನೀಡಿದೆ. 2024 ಸೆಪ್ಟಂಬರ್ ತಿಂಗಳ ಮೊದಲು ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕಟ್ಟಡ, ಮನೆ ಮತ್ತು ಕಟ್ ಕನ್ವರ್ಶನ್ ಆಗಿರುವ ಅರ್ಜಿದಾರರಿಗೆ ಬಿ ಖಾತೆ ನೀಡಲು ನಿರ್ಧರಿಸಿದೆ. ಈಗಾಗಲೇ ಈ ಅನಧಿಕೃತ ಮನೆಗಳ‌ ಪೈಕಿ ಕೆಲವೊಂದನ್ನು ಕೆಡವಲು ನಗರಸಭೆ

ಕಟ್ ಕನ್ವರ್ಶನ್ ಮತ್ತು ಅನಧಿಕೃತ ಕಟ್ಟಡಗಳಿಗೆ ಬಿ ಖಾತಾ ನೀಡಲು ಸರಕಾರದ ಆದೇಶ | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ Read More »

ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಜಾತ್ರೋತ್ಸವ

ಕಾಣಿಯೂರು: ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ವರ್ಷಾವಧಿ ಜಾತ್ರೋತ್ಸವವು ಫೆ24, 25ರಂದು ನಡೆಯಿತು. ಫೆ 25ರಂದು ಬೆಳಿಗ್ಗೆ ಬ್ರಹ್ಮಶ್ರೀ ನಿಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹವನ, ಜಂಬಶುದ್ದಿ, ಕಲಶ ಪೂಜೆ, ಕಲಶಾಭಿಷೇಕ, ನಾಗತಂಬಿಲ, ಕಲ್ಲುರ್ಟಿ ತಂಬಿಲ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ದೀಪರಾಧನೆ, ಮಹಾಪೂಜೆ, ರಾತ್ರಿ ಶ್ರೀ ದೇವರ ಬಲಿ ಉತ್ಸವ, ಕಟ್ಟೆ ಪೂಜೆ, ಬಟ್ಟಲು ಕಾಣಿಕೆ. ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ಮಂಗಳೂರು

ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಜಾತ್ರೋತ್ಸವ Read More »

error: Content is protected !!
Scroll to Top