ಪುತ್ತೂರು

ಎಪಿಎಂಸಿ ರಸ್ತೆಯಲ್ಲಿ ಸರಣಿ ಕಳ್ಳತನ

ಪುತ್ತೂರು : ಆದರ್ಶ ಆಸ್ಪತ್ರೆಯ ಬಳಿ ಇರುವ ಮೆಡಿಕಲ್, ಸೆಲೂನ್ ಮತ್ತು ಪಕ್ಕದ ಕಟ್ಟಡದಲ್ಲಿರುವ ಕ್ಲಿನಿಕ್ ಹಾಗೂ ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಕಳವು ಮಾಡಿರುವುದಾಗಿ ಇಂದು ಬೆಳಗ್ಗೆ ಮಾಹಿತಿ ಲಭಿಸಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಎಪಿಎಂಸಿ ರಸ್ತೆಯಲ್ಲಿ ಸರಣಿ ಕಳ್ಳತನ Read More »

ಫೆ.21 ರಿಂದ ಸತತವಾಗಿ ಹೌಸ್ ಫುಲ್ ಆಗಿ ಪ್ರದರ್ಶನ ಕಾಣುತ್ತಿರುವ ‘ಭಾವ ತೀರ ಯಾನ’ದ ಪ್ರದರ್ಶನ ಇಂದಿನಿಂದ ಸಂಜೆ 4.45ಕ್ಕೆ

ಪುತ್ತೂರು: ನ್ಯೂಸ್ ಪುತ್ತೂರು Media Partener ಆಗಿದ್ದುಕೊಂಡು ಪುತ್ತೂರಿನ GL ONEನ ಭಾರತ್ ಸಿನಿಮಾಸ್ ನ Screen 2ರಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ, ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಕತೆ, ಚಿತ್ರಕತೆ ಬರೆದು, ಸಂಗೀತ ನೀಡಿ ನಿರ್ದೇಶಿದ ಚೊಚ್ಚಲ ಸಿನಿಮಾ ‘ಭಾವ ತೀರ ಯಾನ’ದ ಪ್ರದರ್ಶನದ ವೇಳೆಯನ್ನು ಇಂದಿನಿಂದ ಸಂಜೆ 4.45ಕ್ಕೆ ಮರು ನಿಗದಿಗೊಂಡಿದೆ. ಭಾವನೆಗಳ ಸುಂದರವಾದ ಹೊಸೆಯುವಿಕೆಯ ಮೂಲಕ ಸಹೃದಯಿ ಪ್ರೇಕ್ಷಕರ ಹೃದಯಗಳಿಗೆ ಲಗ್ಗೆಯಿಟ್ಟು ಕಣ್ಣಂಚಲ್ಲಿ ನಾಲ್ಕು ಹನಿ ಉದುರಿಸಿ ಬದುಕಿನ ಸತ್ಯಗಳನ್ನು ತೆರೆದಿಡುವ ಅಪರೂಪದ

ಫೆ.21 ರಿಂದ ಸತತವಾಗಿ ಹೌಸ್ ಫುಲ್ ಆಗಿ ಪ್ರದರ್ಶನ ಕಾಣುತ್ತಿರುವ ‘ಭಾವ ತೀರ ಯಾನ’ದ ಪ್ರದರ್ಶನ ಇಂದಿನಿಂದ ಸಂಜೆ 4.45ಕ್ಕೆ Read More »

ಸಾಂತ್ಯ ನಿವಾಸಿ ನವೀನ್‍ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಈಶ್ವರಮಂಗಲ ಸಾಂತ್ಯ ನಿವಾಸಿ ನವೀನ್ (42ವ) ರವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಕಳೆದ 15 ವರ್ಷದಿಂದ ನಾರಾಯಣ ಗೌಡ ಉರಿಕ್ಯಾಡಿ ಅವರ ಮಾಲಕತ್ವದ ಶ್ರೀ ಗಜವದನ ಗೂಡ್ಸ್ ಸರ್ವೀಸಸ್ ಲಾರಿಯಲ್ಲಿ ಚಾಲಕರಾಗಿದ್ದ ಅವರು ಗೋಡೌನ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಶ್ವರಮಂಗಲ ಹೊರಠಾಣೆಯ ಎಎಸ್‌ಐ ಚಂದ್ರಶೇಖರ್ ಮತ್ತು ಸಿಬ್ಬಂದಿಗಳು ಶವದ ಮಹಜರು ನಡೆದಿದ್ದಾರೆ. ಮೃತರು ತಂದೆ, ತಾಯಿ, ಪತ್ನಿಯನ್ನು ಅಗಲಿದ್ದಾರೆ.

ಸಾಂತ್ಯ ನಿವಾಸಿ ನವೀನ್‍ ನೇಣು ಬಿಗಿದು ಆತ್ಮಹತ್ಯೆ Read More »

ಶಿಥಿಲಾವಸ್ಥೆಯಲ್ಲಿರುವ ಪಾಣಾಜೆಯ ಆಶಕ್ತ ಕುಟುಂಬದ ಮನೆ | ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ದುರಸ್ತಿ ಕಾರ್ಯ ವಹಿಸುವ ಸಂಕಲ್ಪ

ಪುತ್ತೂರು: ಪಾಣಾಜೆ ಗ್ರಾಮದ ದೇವಸ್ಯ ಉದಯ ಕುಮಾರ್ ಮಣಿಯಾಣಿ ಅವರ ಮನೆಯ ಮೇಲ್ಚಾವಣಿಯು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ವಾಸಕ್ಕೆ ಯೋಗ್ಯವಲ್ಲದ ಕಾರಣ ಈ ಮನೆಯ ದುರಸ್ತಿ ಕಾರ್ಯವನ್ನು ಅಟಲ್ ಜೀ ಜನ್ಮ ಶತಾಬ್ದಿಯ ಪ್ರಯುಕ್ತ ಪುತ್ತಿಲಪರಿವಾರ ಸೇವಾ ಟ್ರಸ್ಟ್ ವಹಿಸಿಕೊಳ್ಳುವ ಸಂಕಲ್ಪ ಮಾಡಲಾಯಿತು. ಉದಯ ಕುಮಾರ್ ಮಣಿಯಾಣಿ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ದುರಸ್ತಿಯ ಬಗ್ಗೆ ಸಂಕಲ್ಪ ಮಾಡಲಾಯಿತು. ಪುತ್ತಿಲಪರಿವಾರ ಸೇವಾ ಟ್ರಸ್ಟ್ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಮಂಡಲ ಪ್ರದಾನ ಕಾರ್ಯದರ್ಶಿ ಉಮೇಶ್

ಶಿಥಿಲಾವಸ್ಥೆಯಲ್ಲಿರುವ ಪಾಣಾಜೆಯ ಆಶಕ್ತ ಕುಟುಂಬದ ಮನೆ | ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ದುರಸ್ತಿ ಕಾರ್ಯ ವಹಿಸುವ ಸಂಕಲ್ಪ Read More »

ಎಸ್‌ಡಿಪಿಐ ಪುತ್ತೂರು ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ವಿರುದ್ಧ ಸಹಿ ಸಂಗ್ರಹ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವಿಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಾಂಧಿಕಟ್ಟೆ ಬಳಿ, ಕಬಕ ಜಂಕ್ಷನ್, ವಿಟ್ಲ ಜಂಕ್ಷನ್, ಕುಂಬ್ರ ಜಂಕ್ಷನ್ ಹಾಗೂ ಉಪ್ಪಿನಂಗಡಿ ಪೇಟೆಯಲ್ಲಿ ನಡೆಯಿತು. ವಿವಿಧ ಪಕ್ಷಗಳ ಮುಖಂಡರು, ಧಾರ್ಮಿಕ ಸಾಮಾಜಿಕ ಮುಖಂಡರು, ವಿದ್ಯಾರ್ಥಿಗಳು, ಲಾರಿ ಚಾಲಕರು, ರಿಕ್ಷಾ ಚಾಲಕರು ಮತ್ತು ಸಾರ್ವಜನಿಕರು ಅತ್ಯುತ್ಸಾಹದಿಂದ ಪಾಲ್ಗೊಂಡು ಎಸ್ ಡಿ ಪಿ

ಎಸ್‌ಡಿಪಿಐ ಪುತ್ತೂರು ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ವಿರುದ್ಧ ಸಹಿ ಸಂಗ್ರಹ Read More »

ಫೆ.25 : ಪಾಲನಾ ಕಾರ್ಯ ಹಾಗೂ ದ್ವಿಪಥ ಮಾರ್ಗ ಬದಲಾವಣೆ ಕಾಮಗಾರಿ ನಿಮಿತ್ತ ವಿದ್ಯುತ್‍ ನಿಲುಗಡೆ | ಎಲ್ಲೆಲ್ಲಿ ? ಇಲ್ಲಿದೆ ಡಿಟೈಲ್ಸ್

ಪುತ್ತೂರು: 110/33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಾಗೂ ಕಾವು-ಸುಳ್ಯ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ವೃತ್ತದ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿ ಇರುವುದರಿಂದ ಫೆ.25 ಮಂಗಳವಾರ ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆಗೆ ತನಕ ವಿದ್ಯುತ್‍ ನಿಲುಗಡೆ ಮಾಡಲಾಗುವುದು. 110/33/11 ಕೆವಿ ಮಾಡಾವು ವಿದ್ಯುತ್‍ ಉಪಕೇಂದ್ರದಿಂದ ಹೊರಡುವ 33/11 ಕೆವಿ ಬೆಳ್ಳಾರೆ ಹಾಗೂ 33/11 ಕೆವಿ ಕಾವು ಮತ್ತು ಸುಳ್ಯ ವಿದ್ಯುತ್‍ ಮಾರ್ಗದಲ್ಲಿ ವಿದ್ಯುತ್‍ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಮಾಡಾವು

ಫೆ.25 : ಪಾಲನಾ ಕಾರ್ಯ ಹಾಗೂ ದ್ವಿಪಥ ಮಾರ್ಗ ಬದಲಾವಣೆ ಕಾಮಗಾರಿ ನಿಮಿತ್ತ ವಿದ್ಯುತ್‍ ನಿಲುಗಡೆ | ಎಲ್ಲೆಲ್ಲಿ ? ಇಲ್ಲಿದೆ ಡಿಟೈಲ್ಸ್ Read More »

ಕಾರು-ಬುಲೆಟ್ ಬೈಕ್‍ ಡಿಕ್ಕಿ

ಪುತ್ತೂರು: ಕಾರು ಹಾಗೂ ಬುಲೆಟ್ ಬೈಕ್‍ ಅಪಘಾತ ಸಂಭವಿಸಿದ ಘಟನೆ ಆರ್ಯಾಪು ಗ್ರಾಮದ ಕಲ್ಲರ್ಪೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಇಂದು ಸಂಜೆ ನಡೆದಿದೆ. ಅಪಘಾತದಲ್ಲಿ ಬುಲೆಟ್ ಸವಾರ ಗಾಯಗೊಂಡಿದ್ದಾರೆ. ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಕಾರು-ಬುಲೆಟ್ ಬೈಕ್‍ ಡಿಕ್ಕಿ Read More »

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಚುನಾವಣೆ | 11 ಸ್ಥಾನ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತೆಕ್ಕೆಗೆ, 1 ಸ್ಥಾನ ಕಾಂಗ್ರೆಸ್ ಗೆ | ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಪುತ್ತೂರು: ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಶನಿವಾರ ನಡೆದ  ಚುನಾವಣೆಯಲ್ಲಿ ಸಂಘದ 12 ಸ್ಥಾನಗಳಲ್ಲಿ 11 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತದ ಸಹಕಾರ ಭಾರತಿ, 1 ರಲ್ಲಿ ಕಾಂಗ್ರೆಸ್ ಬೆಂಬಲಿತದ ರೈತಸ್ನೇಹಿ ಬಳಗದ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ಆ ಮೂಲಕ ಆಡಳಿತಾರೂಢ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದ್ದು, ಸಹಕಾರ ಭಾರತಿಯು ಬಹುಮತದೊಂದಿಗೆ ಅಧಿಕಾರ ಪಡೆದುಕೊಂಡಿದೆ. ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಸಹಕಾರ ಭಾರತಿ ಅಭ್ಯರ್ಥಿಗಳಾಗಿದ್ದ ತೀರ್ಥಾನಂದ ದುಗ್ಗಳ, ಜನಾರ್ಧನ ಗೌಡ ಪಿ, ರಾಜೇಶ್ ಗೌಡ ಕುದ್ರುಳಿ, ಸತೀಶ್ ಪಾಂಬಾರು,

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಚುನಾವಣೆ | 11 ಸ್ಥಾನ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತೆಕ್ಕೆಗೆ, 1 ಸ್ಥಾನ ಕಾಂಗ್ರೆಸ್ ಗೆ | ಅಧಿಕಾರ ಕಳೆದುಕೊಂಡ ಕಾಂಗ್ರೆಸ್ Read More »

ಉಪ್ಪಿನಂಗಡಿ ಜಾತ್ರೆ ಸಂದರ್ಭದಲ್ಲೇ ನದಿಗೆ ಹಾರಿದ ಕುಖ್ಯಾತ ಆರೋಪಿ | ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಆರೋಪಿ | ಭಕ್ತರಲ್ಲಿ ಆತಂಕ

ಉಪ್ಪಿನಂಗಡಿ: ಮಖೆ ಜಾತ್ರೆ ಸಡಗರದಲ್ಲಿದ್ದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಭಕ್ತರಲ್ಲಿ ಯುವಕನೋರ್ವ ನದಿಗೆ ಹಾರಿರುವ ಕುರಿತು ಸುದ್ದಿಯಾಗುತ್ತಿದ್ದಂತೆ ಆತಂಕ ಸೃಷ್ಟಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ ದೇಗುಲದ ರಥೋತ್ಸವ ನಡೆಯುತ್ತಿದ್ದಂತೆಯೇ ಪೊಲೀಸರು ನೇತ್ರಾವತಿ ಹಾಗೂ ಕುಮಾರಧಾರಾ ನದಿ ಸಂಗಮ ಸ್ಥಳದತ್ತ ಧಾವಿಸುತ್ತಿರುವುದು ಕಂಡು ಬಂದಿತ್ತು. ಜತೆಗೆ ಭಕ್ತರು ಕೂಡ ಅತ್ತ ಧಾವಿಸತೊಡಗಿದರು. ಈ ವೇಳೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಮಂದಿಗೆ ಈ ಬೆಳವಣಿಗೆ ಬಗ್ಗೆ, ಕುತೂಹಲ ಮೂಡಿ ವಿಚಾರಿಸತೊಡಗಿದರು. ಆದರೆ ನದಿಗೆ

ಉಪ್ಪಿನಂಗಡಿ ಜಾತ್ರೆ ಸಂದರ್ಭದಲ್ಲೇ ನದಿಗೆ ಹಾರಿದ ಕುಖ್ಯಾತ ಆರೋಪಿ | ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಆರೋಪಿ | ಭಕ್ತರಲ್ಲಿ ಆತಂಕ Read More »

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ

ಪುತ್ತೂರು : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರಿ ಸಂಘ. ನಿ. ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪುತ್ತೂರು  ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ  ಪುತ್ತೂರು  ಗ್ರಾಮಾಂತರ ಮಂಡಲದ ಹಾಗೂ ನಗರಮಂಡಲದ ಅಧ್ಯಕ್ಷರುಗಳು ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು, ಕಾರ್ಯಕರ್ತರು  ಉಪಸ್ಥಿತರಿದ್ದರು.

ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ Read More »

error: Content is protected !!
Scroll to Top