ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಅಷ್ಠಮಿ ಒಂದನೇ ಮಖೆ ಜಾತ್ರೆ | ದರ್ಶನ ಬಲಿ ಉತ್ಸವ
ಉಪ್ಪಿನಂಗಡಿ : ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದಲ್ಲಿ ಅಷ್ಠಮಿ ಒಂದನೇ ಮಖೆ ಜಾತ್ರೆಯ ಪ್ರಯುಕ್ತ ಗುರುವಾರದಂದು ರಾತ್ರಿ ಭಕ್ತಿ ಸಡಗರದ ರಥೋತ್ಸವವು ಜರಗಿತು. ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದು, ಬಲಿ ಉತ್ಸವವು ಜರುಗಿತು. ಬಳಿಕ ಶ್ರೀ ದೇವರು ರಥಾರೂಢರಾಗಿ ರಥ ಬೀದಿಯಲ್ಲಿ ರಥೋತ್ಸವವು ನಡೆಯಿತು. ಬಳಿಕ ಬಲಿ ಉತ್ಸವ ಜರುಗಿ ಮಹಾಪೂಜೆ ನಡೆಯಿತು. ಶುಕ್ರವಾರ ನಸುಕಿನಿಂದಲೇ ನದಿ ಸಂಗಮ ಸ್ಥಳದಲ್ಲಿ ಮಖೆ ತೀರ್ಥ ಸ್ನಾನವು ನೂರಾರು ಭಕ್ತರಿಂದ […]










