ಪುತ್ತೂರು

ವೈವಾಹಿಕ ಜೀವನ ಪ್ರವೇಶಿಸಿದ ರಕ್ಷಿತಾ ಬಿ.ಕೆ. – ದೀಕ್ಷಿತ್ ಎಂ.ಜಿ.

ಪುತ್ತೂರು: ಕಡಬ ತಾಲೂಕಿನ ಎಣ್ಮೂರು ಗ್ರಾಮದ ಹೇಮಳ ಕೂರಂಬೈಲು ಭುವನೇಶ್ವರಿ-ಬಾಲಕೃಷ್ಣ ಗೌಡರ ಪುತ್ರಿ ರಕ್ಷಿತಾ ಬಿ.ಕೆ. ಹಾಗೂ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಮಳುವೇಲು ಮನೆ ಯಶೋಧಾ-ಗಂಗಾಧರ ಗೌಡರ ಪುತ್ರ ದೀಕ್ಷಿತ್ ಎಂ.ಜಿ. ಭಾನುವಾರ ವೈವಾಹಿಕ ಜೀವನ ಪ್ರವೇಶಿಸಿದರು. ಪುತ್ತೂರಿನ ತೆಂಕಿಲ ಬೈಪಾಸ್ ಬಳಿ ಇರುವ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ವಿವಾಹ ಸಮಾರಂಭ ನಡೆಯಿತು. ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.

ವೈವಾಹಿಕ ಜೀವನ ಪ್ರವೇಶಿಸಿದ ರಕ್ಷಿತಾ ಬಿ.ಕೆ. – ದೀಕ್ಷಿತ್ ಎಂ.ಜಿ. Read More »

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೋತ್ಸವ ಸಂಪನ್ನ | ಫೆ.22-23 ರಂದು ದೊಂಪದ ಬಲಿ ನೇಮೋತ್ಸವ

ಪುತ್ತೂರು: ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವದಿ ಜಾತ್ರೋತ್ಸವ ಶನಿವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ಉತ್ಸವದ ಅಂಗವಾಗಿ ಬೆಳಿಗ್ಗೆ 6ರಿಂದ ಗಣಪತಿ ಹೋಮ, ಸಿಯಾಳಭಿಷೇಕ, ಪವಮಾನಾಭಿಷೇಕ, ನವಕ ಕಲಶಾಭಿಷೇಕ, 11 ರಿಂದ ಬೆಳಂದೂರು ಶ್ರೀ ಲಕ್ಷ್ಮಿ ಪ್ರಿಯ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಮದ್ಯಾಹ್ನ 12:30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಸಂಜೆ 5 ಗಂಟೆಗೆ ದೈವಗಳ ಭಂಡಾರ ತೆಗೆಯಲಾಯಿತು. 6ರಿಂದ ವೀರಮಂಗಲ ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯವರಿಂದ ದಾಸ ಸಂಕೀರ್ತನೆ

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೋತ್ಸವ ಸಂಪನ್ನ | ಫೆ.22-23 ರಂದು ದೊಂಪದ ಬಲಿ ನೇಮೋತ್ಸವ Read More »

ಕೆರೆಗೆ ಹಾರಿ ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೊಬ್ಬರುರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಟ ಮುಡೂರುನ ಅಲಂಗಾರು ಎಂಬಲ್ಲಿ ನಡೆದಿದೆ. ರಮೇಶ್ ಪಲ್ಲೆದಗುರಿ (37) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡಿಕೊಂಡಿದ್ದ ರಮೇಶ್ ಶನಿವಾರ ಕೆರೆಗೆ ಹಾರಿದ್ದರು. ಭಾನುವಾರ ಅವರ ಮೃತದೇಹ ಪತ್ತೆಯಾಗಿದೆ. ಬಳಿಕ ಶವ ಮೇಲಕ್ಕೆತ್ತುವಲ್ಲಿ ಪ್ರೆಂಡ್ಸ್ ವಿಟ್ಲದ ಮುರಳಿ ಎಂಡ್ ಟೀಮ್ ಸಹಕರಿಸಿದರು.  ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಕೆರೆಗೆ ಹಾರಿ ಆತ್ಮಹತ್ಯೆ Read More »

ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ’ ಗ್ರಾಮ ಸಾಹಿತ್ಯ ಸಂಭ್ರಮ-2025′ | ಸಾಹಿತ್ಯವು ನಮ್ಮನ್ನು ಬೆಳೆಸುವುದರೊಂದಿಗೆ ಬದುಕಿಗೆ ಶ್ರೀಮಂತಿಕೆಯನ್ನು ನೀಡುತ್ತದೆ : ಎ.ಪಿ. ಮಾಲತಿ

ಪುತ್ತೂರು: ಪ್ರಸ್ತುತ ಶಾಲಾ ಕಾಲೇಜ್ ಗಳಲ್ಲಿ ಡ್ಯಾನ್ಸ್ ಹಾಡುಗಳಿಗೆ ಉತ್ತೇಜನ ನೀಡ್ತಾರೆ ಹೊರತು ಸಾಹಿತ್ಯಕ್ಕೆ ಉತ್ತೇಜನ ನೀಡುತ್ತಿಲ್ಲ. ಈ ನಿಟ್ಟಿನಲ್ಲಿ ಗ್ರಾಮ ಸಾಹಿತ್ಯ ಸಂಭ್ರಮದಂತಹ  ವೇದಿಕೆಗಳು ಮಕ್ಕಳ ಸೃಜಶೀಲ ಮನಸ್ಸುಗಳ ಬೆಳವಗೆಗೆ ಸಹಕಾರಿಯಾಗುತ್ತದೆ. ಸಾಹಿತ್ಯ ನಮ್ಮನ್ನು ಬೆಳೆಸುತ್ತದೆ ಹಾಗೂ ನಮ್ಮ ಬದುಕಿಗೆ ಶ್ರೀಮಂತಿಗೆ ನೀಡುತ್ತದೆ. ಶಾಲಾ ಕಾಲೇಜು ಮಕ್ಕಳನ್ನು ಎದುರಿಟ್ಟುಕೊಂಡು ಸಾಹಿತ್ಯದ ಕಾರ್ಯಕ್ರಮ ಮಾಡಿದಾಗ ಅದು ಹೆಚ್ಚು ಅರ್ಥಪೂರ್ಣವಾಗುತ್ತದೆ ಎಂದು ಹಿರಿಯ ಸಾಹಿತಿ ಎ.ಪಿ. ಮಾಲತಿ ಹೇಳಿದರು. ಅವರು ಶನಿವಾರ ಸಂಪ್ಯದ ಅಕ್ಷಯ ಕಾಲೇಜ್ ಸಭಾಂಗಣದಲ್ಲಿ ದ.ಕ.ಜಿಲ್ಲಾ

ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ’ ಗ್ರಾಮ ಸಾಹಿತ್ಯ ಸಂಭ್ರಮ-2025′ | ಸಾಹಿತ್ಯವು ನಮ್ಮನ್ನು ಬೆಳೆಸುವುದರೊಂದಿಗೆ ಬದುಕಿಗೆ ಶ್ರೀಮಂತಿಕೆಯನ್ನು ನೀಡುತ್ತದೆ : ಎ.ಪಿ. ಮಾಲತಿ Read More »

ಸಾಮೆತ್ತಡ್ಕದಲ್ಲಿ ತಡೆಗೋಡೆ ಹಾಗೂ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ಪುತ್ತೂರು:  ನಗರಸಭಾ ವ್ಯಾಪ್ತಿಯ ವಾರ್ಡ್ 23 ಸಾಮೆತಡ್ಕದಲ್ಲಿ ಲೋಕೋಪಯೋಗಿ ಇಲಾಖೆಯ ಮೂಲಕ ಮಂಜೂರಾದ ಅನುದಾನದಿಂದ ರಸ್ತೆ ಹಾಗೂ ತಡೆಗೋಡೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು. ಸುಮಾರು 60 ಲಕ್ಷ ರೂ. ಅನುದಾನ ಮಂಜೂರುಗೊಂಡಿದ್ದು, ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ನೂರಾರು ಮನೆಯಿರುವ ಈ ಪ್ರದೇಶದಲ್ಲಿ ಮಳೆಗಾಲದಲ್ಲಿ ತಡೆಗೋಡೆ ಇಲ್ಲದೆ ಮಳೆ ನೀರು ಬಂದು ಸಮಸ್ಯೆ ಉಂಟಾಗಿದೆ. ಅಲ್ಲದೆ ಇಲ್ಲಿ ರಸ್ತೆಯೂ ಇದಕ್ಕಾಗಿ ಸುಸಜ್ಜಿತ ರಸ್ತೆ ಸಹಿತ ತಡೆಗೋಡೆ ಕಾಮಗಾರಿಗೆ ಶಿಲಾನ್ಯಾಸ

ಸಾಮೆತ್ತಡ್ಕದಲ್ಲಿ ತಡೆಗೋಡೆ ಹಾಗೂ ರಸ್ತೆ ಕಾಮಗಾರಿಗೆ ಶಿಲಾನ್ಯಾಸ Read More »

ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಇನ್ನೊಂದು ಕಾರು | ಕಾರುಗಳು ಜಖಂ

ಪುತ್ತೂರು: ಕಾರುಗಳೆರಡು ಡಿಕ್ಕಿ ಹೊಡೆದುಕೊಂಡ ಘಟನೆ ಬೈಪಾಸ್ ರಸ್ತೆಯ ಗೌಡ ಸಮುದಾಯ ಭವನದ ಬಳಿ ಇಂದು ಸಂಜೆ ನಡೆದಿದೆ. ರಸ್ತೆಯಲ್ಲಿ ಹಾವೊಂದು ಅಡ್ಡ ಬಂದ ಪರಿಣಾಮ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ ಕಾರಣ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದೆ. ಘಟನೆಯಿಂದ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಇನ್ನೊಂದು ಕಾರು | ಕಾರುಗಳು ಜಖಂ Read More »

ನಾಳೆ (ಫೆ.16) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ತಾಂಬೂಲ ಪ್ರಶ್ನೆ

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಕುರಿತು ತಾಂಬೂಲ ಪ್ರಶ್ನೆ ಫೆ.16 ರಂದು ಶ್ರೀ ದೇವಸ್ಥಾನದಲ್ಲಿ ನಡೆಯಲಿದೆ. ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ ಬೆಳಿಗ್ಗೆ 9 ರಿಂದ ಸಂಜೆ ಗಂಟೆ 5 ರ ತನಕ ತಾಂಬೂಲ ಪ್ರಶ್ನೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಫೆ.16) : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ತಾಂಬೂಲ ಪ್ರಶ್ನೆ Read More »

ಶ್ರೀ ಸಂತ ಸೇವಾಲಾಲ್‍ 286ನೇ ಜಯಂತಿ ಆಚರಣೆ | ಹಲವಾರು ಮಹಾನ್ ನಾಯಕರ ಜಯಂತಿ ಆಚರಣೆ ಮಾಡುವ ಮೂಲಕ ನೆನಪಿಸುವ ಕಾರ್ಯ ಮಾಡುತ್ತಿರುವುದು ಅರ್ಥಪೂರ್ಣ : ಪುರಂದರ ಹೆಗ್ಡೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಸಂತ ಸೇವಾಲಾಲ್‍ ರ 286ನೇ ಜಯಂತಿಯನ್ನು ಪುತ್ತೂರು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶನಿವಾರ ಆಚರಿಸಲಾಯಿತು.. ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ಪುತ್ತೂರು ತಹಸೀಲ್ದಾರ್ ಪುರಂದರ ಹೆಗ್ಡೆ, ಪ್ರತೀ ವರ್ಷ ವಿವಿಧ ಮಹಾನ್ ನಾಯಕ್ ಜಯಂತಿ ಆಚರಣೆ ಮಾಡುವ ಮೂಲಕ ನೆನಪಿಸುವ ಕಾರ್ಯ ಮಾಡುತ್ತಿರುವುದು ಅರ್ಥಪೂರ್ಣ. ಹಾಗೆಯೇ ಬಂಜಾರ ಸಮುದಾಯದ ಮಹಾನ್ ನಾಯಕ್‍ ಸಂತ ಸೇವಾಲಾಲ್ ಅವರ ಆದರ್ಶ, ವ್ಯಕ್ತಿತ್ವ,, ತತ್ವಾದರ್ಶಗಳನ್ನು ನಮ್ಮ

ಶ್ರೀ ಸಂತ ಸೇವಾಲಾಲ್‍ 286ನೇ ಜಯಂತಿ ಆಚರಣೆ | ಹಲವಾರು ಮಹಾನ್ ನಾಯಕರ ಜಯಂತಿ ಆಚರಣೆ ಮಾಡುವ ಮೂಲಕ ನೆನಪಿಸುವ ಕಾರ್ಯ ಮಾಡುತ್ತಿರುವುದು ಅರ್ಥಪೂರ್ಣ : ಪುರಂದರ ಹೆಗ್ಡೆ Read More »

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ | ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ

ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತೂರು ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ , ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು ಬ್ಲಾಕ್ ಸಮಿತಿಗಳಿಗೆ ಸೂಚಿಸಲಾಯಿತು. ಕೆಲವು ಪ್ರಮುಖ ನಿರ್ಣಯಗಳನ್ನು ಈ ಕೆಳಗಿನಂತೆ ಕೈಗೊಳ್ಳಲಾಯಿತು.  – ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯ ಕುರಿತು ಹಾಗೂ ಪಕ್ಷದ ಸ್ಪರ್ಧೆಯ ಕುರಿತು ಸಮಗ್ರವಾಗಿ ಚರ್ಚಿಸಿ ಕಾರ್ಯಯೋಜನೆ ರೂಪಿಸಲಾಯಿತು.

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ | ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ Read More »

ಪುತ್ತೂರಿಗೆ ಸಹಾಯಕ ಆಯುಕ್ತರಾಗಿ ಆಗಮಿಸಲಿದ್ದಾರೆ ಸ್ಟೆಲ್ಲಾ ವರ್ಗೀಸ್

ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಸದ್ಯದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ನಿಯುಕ್ತಿ ಮಾಡಲಾಗಿದೆ.

ಪುತ್ತೂರಿಗೆ ಸಹಾಯಕ ಆಯುಕ್ತರಾಗಿ ಆಗಮಿಸಲಿದ್ದಾರೆ ಸ್ಟೆಲ್ಲಾ ವರ್ಗೀಸ್ Read More »

error: Content is protected !!
Scroll to Top