ಪುತ್ತೂರು

ವಿವಾಹದ ಭರವಸೆ ನೀಡಿ ಯುವತಿಗೆ ವಂಚನೆ: ಆರೋಪಿ ಅಂದರ್

ಪುತ್ತೂರು: ವಿವಾಹದ ಭರವಸೆ ನೀಡಿ ಯುವತಿಯೊಬ್ಬಳನ್ನು ಗರ್ಭವತಿಯನ್ನಾಗಿ ಮಾಡಿದ ಆರೋಪಿಯನ್ನು ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಬಕ ನಿವಾಸಿ ಪ್ರಕಾಶ್ ಗೌಡ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿವಾಹದ ಭರವಸೆ ನೀಡಿ ಯುವತಿಗೆ ವಂಚನೆ: ಆರೋಪಿ ಅಂದರ್ Read More »

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಪುತ್ತೂರು: ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ನಡೆದಿದೆ. ಲಾರಿ ತಮಿಳುನಾಡು ನೋಂದಣಿಯದಿದಾಗಿದ್ದು, ಸರಕು ತುಂಬಿಕೊಂಡು ಮಂಗಳೂರಿನಿಂದ ಮಡಿಕೇರಿಯತ್ತ ‌ಸಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಂಚಿನ ತಡೆ ಬೇಲಿಗೆ ಗುದ್ದಿದೆ‌. ಬಳಿಕ ಹತ್ತಿರದಲ್ಲೇ ಇದ್ದ ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಅದರಲ್ಲಿದ್ದ ಸರಕುಗಳೆಲ್ಲಾ ರಸ್ತೆಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು, ರಾತ್ರಿಯೇ ಅವೆಲ್ಲವನ್ನೂ ತೆರವು ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಒದಗಿಸಿ ಕೊಡಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಫೆ.21ರಂದು ಪುತ್ತೂರಿನಲ್ಲಿ ಬೃಹತ್‌ ಉದ್ಯೋಗ ಮೇಳ

ಫೆ.21ರಂದು ಪುತ್ತೂರಿನಲ್ಲಿ ಬೃಹತ್‌ ಉದ್ಯೋಗ ಮೇಳ ನಿರುದ್ಯೋಗಿ ಯುವಕರಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಳ್ಳಲು ಅವಕಾಶ ಮಂಗಳೂರು: ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ವತಿಯಿಂದ ಫೆ.21ರಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿ ಪುತ್ತೂರು ಇಲ್ಲಿ ಆಯೋಜಿಸಲಾಗಿದೆ ಎಂದು ದ.ಕ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕೆ.ಇ.ಜಯರಾಮ್ ತಿಳಿಸಿದ್ದಾರೆ. ಪ್ರಧಾನಮಂತ್ರಿಗಳ ಮಹತ್ವಾಕಾಂಕ್ಷೆಯ ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆಯಡಿ ಗ್ರಾಮೀಣ ಪ್ರದೇಶದ ಬಡ ಯುವಜನರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಿ ಉದ್ಯೋಗ ಕಲ್ಪಿಸಲು

ಫೆ.21ರಂದು ಪುತ್ತೂರಿನಲ್ಲಿ ಬೃಹತ್‌ ಉದ್ಯೋಗ ಮೇಳ Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ’ದ ಪುತ್ತೂರು ಘಟಕದ ಸಭೆ

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಬಂಟವಾಳ ಮೆಲ್ಕಾರ್ ಇದರ ಪುತ್ತೂರು ಘಟಕದ ಸಭೆಯು ಹೋಟೆಲ್ ಸ್ವಾಗತ್‍ನ ಸಭಾಂಗಣದಲ್ಲಿ ನಡೆಯಿತು. ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ ಸಂಚಾಲಕ ಭಾಸ್ಕರ್ ಬಾರ್ಯ ಕೇಂದ್ರ ಸಮಿತಿಯ ಚಟುವಟಿಕೆಗಳ ಮಾಹಿತಿ ಮತ್ತು ಪುತ್ತೂರು ಘಟಕದ ಪ್ರಗತಿಯ ಬಗ್ಗೆ ಸಲಹೆಗಳನ್ನು ನೀಡಿದರು. ಮುರ ಶಿವ ಸದನದಲ್ಲಿರುವ ಆಶ್ರಮದಲ್ಲಿ ಮುಂದಿನ ಕಾರ್ಯಕ್ರಮ ನಡೆಸುವುದೆಂದು ಶಂಕರಿ ಶರ್ಮ ತಿಳಿಸಿದರು. ಮೆಲ್ಕಾರ್ ಶಂಕರಪತ್ತಿನ ಸಹಕಾರಿ ಸಂಘದ ಪಾಲುದಾರರಾಗಲು

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ’ದ ಪುತ್ತೂರು ಘಟಕದ ಸಭೆ Read More »

ಸಾರ್ವಜನಿಕ ರಸ್ತೆಯನ್ನು ಮುಚ್ಚಿದ ಖಾಸಗಿ ವ್ಯಕ್ತಿ: ಸಾರ್ವಜನಿಕರ ಪರದಾಟ

ಪುತ್ತೂರು: ಖಾಸಗಿ ವ್ಯಕ್ತಿಯೆಬ್ಬರು ಸುಮಾರು 25 ವರ್ಷಗಳಿಂದ ಸಾರ್ವಜನಿಕವಾಗಿ ಬಳಕೆ ಮಾಡುತ್ತಿದ್ದ ರಸ್ತೆಯನ್ನೇ ಮುಚ್ಚಿದ್ದು, ಇದರಿಂದಾಗಿ ಎಂಡೋಸಲ್ಫಾನ್ ಪೀಡಿತ ಬಾಲಕನೊಬ್ಬ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗುವುದಕ್ಕೂ ಪರದಾಡಬೇಕಾದ ಸ್ಥಿತಿ ಕೊಡಿಪ್ಪಾಡಿಯ ಬಾಯಂಬೆಯಲ್ಲಿ ನಿರ್ಮಾಣವಾಗಿದೆ. ವ್ಯಕ್ತಿಯೊಬ್ಬರು ತಮ್ಮ ಜಮೀನನ್ನು ತುಂಡು ಭೂಮಿಯಾಗಿ ಪರಿವರ್ತಿಸಿ ಅನೇಕರಿಗೆ ಮಾರಾಟ ಮಾಡಿದ್ದರು. ಈ ಸಂದರ್ಭದಲ್ಲಿ ರಸ್ತೆಯನ್ನು ದಾಖಲೆಗಳಲ್ಲಿ ಸಾರ್ವಜನಿಕ ರಸ್ತೆ ಎಂಬುದಾಗಿ ತೋರಿಸಲಾಗಿತ್ತು. ಸ್ಥಳೀಯರು ಸಹ ಇದೇ ರಸ್ತೆಯನ್ನು ಕಳೆದ 25 ವರ್ಷಗಳಿಂದ ಬಳಕೆ ಮಾಡುತ್ತಿದ್ದರು. ಆದರೆ ಪ್ರಸ್ತುತ ಕಲ್ಲುಗಳನ್ನು ಕಟ್ಟಿ ಈ ರಸ್ತೆಯನ್ನು

ಸಾರ್ವಜನಿಕ ರಸ್ತೆಯನ್ನು ಮುಚ್ಚಿದ ಖಾಸಗಿ ವ್ಯಕ್ತಿ: ಸಾರ್ವಜನಿಕರ ಪರದಾಟ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಕ್ಕಳ ಮಾರ್ಟ್

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ದಿನಾಂಕ ಮಕ್ಕಳ ಮಾರ್ಟ್(ಮೆಟ್ರಿಕ್ ಮೇಳ) ನಡೆಯಿತು. ವಿದ್ಯಾರಶ್ಮಿ ಮಾರ್ಟ್ ಅನ್ನು ಎಸ್. ಎನ್. ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್‌ನ ಸದಸ್ಯ ಎನ್. ಸುಂದರ್ ರೈ ಅವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ ಮಾತನಾಡಿ, ಶಿಕ್ಷಣದ ಜೊತೆಗೆ ಮಕ್ಕಳಿಗೆ ಅವಶ್ಯವಿರುವ ಆರ್ಥಿಕ, ವ್ಯವಹಾರಿಕ, ಸಾಮಾನ್ಯ ಜ್ಞಾನ ಮತ್ತು ಕೌಶಲ್ಯವನ್ನು ಹೆಚ್ಚಿಸಲು ಇಂತಹ ಮಾರ್ಟ್ ಸಹಾಯಕವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸದಸ್ಯೆ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಕ್ಕಳ ಮಾರ್ಟ್ Read More »

ವಿಟ್ಲ: ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ಧ ದೂರು ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವಿದ್ಯಾರ್ಥಿಗೆ ಬೆತ್ತದಿಂದ ಸಿಕ್ಕಾಪಟ್ಟೆ ಥಳಿಸಿದ ಘಟನೆ ವರದಿಯಾಗಿದೆ. ಗಂಭೀರವಾಗಿ ಹಲ್ಲೆ ನಡೆಸಿದ ಶಿಕ್ಷಕ ಇಸ್ತಿಕಾರ್ ವಿರುದ್ಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಹೋಗಿದ್ದು ಮಧ್ಯಾಹ್ನ 2 ಗಂಟೆಗೆ ನಿಮ್ಮ ಮಗು ಇತರ ಮಕ್ಕಳಿಗೆ ತೊಂದರೆ ಮಾಡಿದ್ದು ಹಾಗೂ ಈ ವಿಚಾರವಾಗಿ ಬೈದಾಗ ಅಲ್ಲಿಯೇ ಮೂತ್ರ ಮಾಡಿಕೊಂಡಿದ್ದು ನೀವು ಬಂದು ಮಗುವನ್ನು ಕರೆದುಕೊಂಡು ಹೋಗಿ ಎಂದು ಶಾಲೆಯ ಕಚೇರಿಯಿಂದ ಕರೆ ಹೆತ್ತವರಿಗೆ ಬಂದಿದೆ.

ವಿಟ್ಲ: ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ಧ ದೂರು ದಾಖಲು Read More »

ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಪುತ್ತೂರು: ನಗರದ ಹಿರಿಮೆ ಹೆಚ್ಚಿಸುವ ಪುತ್ತೂರು ನ್ಯಾಯಾಲಯ ಸಂಕೀರ್ಣವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪೊಲೀಸ್ ಗೌರವ ರಕ್ಷೆ ಸ್ವೀಕರಿಸಿ ಆಗಮಿಸಿದ ಅತಿಥಿಗಳು ಹೊಸ ನ್ಯಾಯಾಲಯ ಸಂಕೀರ್ಣದ ಫಲಕ ಅನಾವರಣ ಮಾಡಿ ರಿಬ್ಬನ್ ಕತ್ತರಿಸಿ, ದೀಪ ಬೆಳಗುವ ಮೂಲಕ ಕೋರ್ಟ್‌ನ ಕಾರ್ಯ ಕಲಾಪಗಳಿಗೆ ಚಾಲನೆ ನೀಡಿದರು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ಆಡಳಿತಾತ್ಮಕ ನ್ಯಾಯಮೂರ್ತಿ ಹೆಚ್.ಟಿ.

ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ Read More »

ಪುತ್ತೂರು : ಮೋರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು

ಕಾರಿನಲ್ಲಿದ್ದ ಯುವಕ-ಯುವತಿ ಅದೃಷ್ಟವಶಾತ್‌ ಪಾರು ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡು ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಬಳಿ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಹಳೆಯ ಹೆದ್ದಾರಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹಾಸನದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ

ಪುತ್ತೂರು : ಮೋರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು Read More »

ಗ್ಯಾರೇಜಿನಲ್ಲಿ ಜಗಳ, ಹಲ್ಲೆ: ದೂರು ದಾಖಲು

ಪುತ್ತೂರು: ನಗರದ ಪರ್ಲಡ್ಕ ಎಂಬಲ್ಲಿರುವ ಶ್ರೀ ಮಹಾಲಿಂಗೇಶ್ವರ ಆರ್. ಆರ್. ವರ್ಕ್ಸ್‌ನಲ್ಲಿ ಅದರ ಮಾಲೀಕ ಮತ್ತು ವ್ಯಕ್ತಿಯೊಬ್ಬರ ‌ನಡುವೆ ಮಾತಿನ ಚಕಮಕಿ ನಡೆದು, ಹಲ್ಲೆ ನಡೆದ ಬಗ್ಗೆ ಪ್ರಕರಣ ದಾಖಲಾಗಿದೆ. ಗ್ಯಾರೇಜಿನ ಮಾಲೀಕ ಬಲ್ನಾಡು ನಿವಾಸಿ ರಮೇಶ್ ಆಚಾರ್ಯ ಅವರು ಈ ಕುರಿತು ದೂರು ನೀಡಿದ್ದಾರೆ. ಜ. 27 ರಂದು ತಾನು ಗ್ಯಾರೇಜ್ ಓಪನ್ ಮಾಡುತ್ತಿದ್ದ ವೇಳೆ ರಮೇಶ್ ನಾಯ್ಕ್ ಎಂಬವರು ಇನ್ನೋವಾ ಕಾರಿನಲ್ಲಿ ಬಂದು, ಕಾರಿನ ಕ್ಯಾರಿಯರ್ ಮಾರಾಟಕ್ಕೆ ಸಂಬಂಧಿಸಿದ ಹಾಗೆ ಜಗಳವಾಡಿದ್ದಾರೆ. ಹಲ್ಲೆ ನಡೆಸಿದ್ದಾಗಿ

ಗ್ಯಾರೇಜಿನಲ್ಲಿ ಜಗಳ, ಹಲ್ಲೆ: ದೂರು ದಾಖಲು Read More »

error: Content is protected !!
Scroll to Top