ಪುತ್ತೂರು

ಜುಬಿನ್ ಮೊಹಾಪಾತ್ರ ಅತ್ಯಂತ ಕ್ರಿಯಾಶೀಲ ಅಧಿಕಾರಿ : ಮುಲ್ಲೈ ಮುಗಿಲನ್ | ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರಿಗೆ ಪುತ್ತೂರು ಉಪವಿಭಾಗ ಮಟ್ಟದಿಂದ ಬೀಳ್ಕೊಡುಗೆ

ಪುತ್ತೂರು: ಯುವ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಅವರು ಉತ್ತಮ ಮನುಷ್ಯತ್ವ ಹೊಂದಿರುವ ಒಳ್ಳೆಯ ದೃಷ್ಟಿಕೋನ ಹೊಂದಿರುವ, ಬಡವರ ಹಾಗೂ ಸಮಾಜದ ಕಾಳಜಿ ಹೊಂದಿರುವ ಅತ್ಯಂತ ಕ್ರಿಯಾಶೀಲ ಅಧಿಕಾರಿ. ಉದ್ದೇಶ ಸರಿ ಇದ್ದಾಗ ಉನ್ನತ ಅವಕಾಶಗಳೂ ಹುಡುಕಿಕೊಮಡು ಬರುತ್ತವೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು. ಪುತ್ತೂರು ಉಪವಿಭಾಗಾಧಿಕಾರಿಯಾಗಿ 13 ತಿಂಗಳು ಕರ್ತವ್ಯ ನಿರ್ವಹಿಸಿ ರಾಯಚೂರು ಮಹಾನಗರಪಾಲಿಕೆ ಡೆಪ್ಯೂಟಿ ಕಮಿಷನರ್ ಆಗಿ ವರ್ಗಾವಣೆಗೊಂಡಿರುವ ಜುಬಿನ್ ಮೊಹಪಾತ್ರ ಅವರಿಗೆ ಪುತ್ತೂರು ಉಪವಿಭಾಗ ಮಟ್ಟದಿಂದ ನಗರದ ಸರಕಾರಿ ನೌಕರರ […]

ಜುಬಿನ್ ಮೊಹಾಪಾತ್ರ ಅತ್ಯಂತ ಕ್ರಿಯಾಶೀಲ ಅಧಿಕಾರಿ : ಮುಲ್ಲೈ ಮುಗಿಲನ್ | ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರಿಗೆ ಪುತ್ತೂರು ಉಪವಿಭಾಗ ಮಟ್ಟದಿಂದ ಬೀಳ್ಕೊಡುಗೆ Read More »

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ನಡುತೋಟ ಆಯ್ಕೆ

ಮಂಗಳೂರು: ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷ ಮಹೇಶ್ ನಡುತೋಟರವರು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಚುಣಾವಣೆಯಲ್ಲಿ ಸ್ಫರ್ಧಿಸಿ ಅತ್ಯಧಿಕ ಮತಗಳಿಂದ ಚುನಾಯಿತರಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಮಹೇಶ್‍ ನಡುತೋಟ ಅವರು ಸುಬ್ರಹ್ಮಣ್ಯದ ಬಿಳಿನೆಲೆ ಗ್ರಾಮದ ಕೈಕಂಬದ ನಡುತೊಟ ಮನೆಯವರು. ಮಂಗಳೂರಿನಲ್ಲಿ ಉದ್ಯಮಿ ಯಾಗಿ ಕಳೆದ 15 ವರುಷದಿಂದ ನೆಲೆಸಿದ್ದಾರೆ. ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ನಿರ್ದೇಶಕರಾಗಿದ್ದಾರೆ. ದಿವಂಗತ ಚೆನ್ನಕೇಶವ ಗೌಡ ನಡುತೋಟ ಮತ್ತು ರುಕ್ಮಿಣಿ ದಂಪತಿ

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ನಡುತೋಟ ಆಯ್ಕೆ Read More »

ಪುತ್ತೂರು ನಗರಸಭೆಯಲ್ಲಿ 3.55 ಕೋಟಿಯ ಮಿಗತೆ ಬಜೆಟ್ ಮಂಡನೆ

ಪುತ್ತೂರು: ಪುತ್ತೂರು ನಗರಸಭೆಯಲ್ಲಿ 2025-26ನೇ ಸಾಲಿನಲ್ಲಿ 3,55,20,214 ಕೋಟಿ ರೂ.ಗಳ ಮಿಗತೆಯ ಬಜೆಟ್ ಮಂಡಿಸಲಾಗಿದೆ. ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣ ನಾಯ್ಕ್ ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ಬಜೆಟ್‍ ಮಂಡಿಸಿದರು. 2025-26ನೇ ಸಾಲಿಗೆ ನಗರಸಭೆಯ ಪ್ರಮುಖ ಸ್ವಂತ ಆದಾಯಗಳಾದ ಆಸ್ತಿ ತೆರಿಗೆ, ಕಟ್ಟಡ ಪರವಾನಿಗೆ ಶುಲ್ಕ, ಅಂಗಡಿ ಬಾಡಿಗೆ, ಮಾರುಕಟ್ಟೆ ಶುಲ್ಕ ಮತ್ತು ಉದ್ದಿಮೆ ಪರವಾನಿಗೆ ಹಾಗೂ ಘನತ್ಯಾಜ್ಯ ವಸ್ತು ನಿರ್ವಹಣೆ ಇತ್ಯಾದಿಗಳಿಂದ ಒಟ್ಟು ಸ್ವಂತ ರಾಜಸ್ವ ಆದಾಯ 13.40.95.000 ಹಾಗೂ ರಾಜ್ಯ ಸರಕಾರದಿಂದ ಬಿಡುಗಡೆ ಆಗುವ ರಾಜಸ್ವ

ಪುತ್ತೂರು ನಗರಸಭೆಯಲ್ಲಿ 3.55 ಕೋಟಿಯ ಮಿಗತೆ ಬಜೆಟ್ ಮಂಡನೆ Read More »

ದರ್ಬೆಯಲ್ಲಿ ‘ಅವೆನ್ಯೂ ಕಂಪ್ಯೂಟರ್ಸ್’ ನವೀಕೃತಗೊಂಡು ಶುಭಾರಂಭ

ಪುತ್ತೂರು: ದರ್ಬೆಯಲ್ಲಿರುವ ರಿಲಾಯನ್ಸ್ ಡಿಜಿಟಲ್ ಎದುರು ಕಳೆದ 15 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ‘ಅವೆನ್ಯೂ ಕಂಪ್ಯೂಟರ್ಸ್’ ನವೀಕರಣಗೊಂಡು ಶುಕ್ರವಾರ ಶುಭಾರಂಭಗೊಂಡಿತು.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಂಪ್ಯ ಅಕ್ಷಯ ಕಾಲೇಜು ಸಂಚಾಲಕ ಜಯಂತ ನಡುಬೈಲು, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಸಂಸ್ಥೆಯ ಮಾಲಕರಾದ ಅನಿಲ್ ಕುಮಾರ್ ಒತ್ತೆಮುಂಡೂರು, ಮತ್ತಿತರರು ಉಪಸ್ಥಿತರಿದ್ದರು. ಸಂತೃಪ್ತಿ ಹೋಟೇಲ್

ದರ್ಬೆಯಲ್ಲಿ ‘ಅವೆನ್ಯೂ ಕಂಪ್ಯೂಟರ್ಸ್’ ನವೀಕೃತಗೊಂಡು ಶುಭಾರಂಭ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.27,28 ಶ್ರೀನಿವಾಸ ಕಲ್ಯಾಣೋತ್ಸವ – ಡಿ.29ಕ್ಕೆ ಉಚಿತ ಸಾಮೂಹಿಕ ವಿವಾಹ : ಪೂರ್ವತಯಾರಿಗೆ ಮೊದಲು ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ 2025ರ ಡಿಸೆಂಬರ್ 27, 28 ರಂದು  ಪುತ್ತೂರು  ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಎದುರು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಡಿ.29 ರಂದು ಜರಗುವ 100 ಜೋಡಿಗೆ ಸಾಮೂಹಿಕ ವಿವಾಹದ ತಯಾರಿಗೆ ಪೂರ್ವಭಾವಿಯಾಗಿ ಶುಕ್ರವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಮಹಾಲಿಂಗೇಶ್ವರ ದೇವರಲ್ಲಿ ಅರ್ಚಕರು ವಿಶೇಷ ಪ್ರಾರ್ಥನೆ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಕಾರ್ಯಕ್ರಮದ ಯಶಸ್ವಿಗೆ ಶುಭಹಾರೈಸಿದರು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.27,28 ಶ್ರೀನಿವಾಸ ಕಲ್ಯಾಣೋತ್ಸವ – ಡಿ.29ಕ್ಕೆ ಉಚಿತ ಸಾಮೂಹಿಕ ವಿವಾಹ : ಪೂರ್ವತಯಾರಿಗೆ ಮೊದಲು ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ Read More »

ಫೆ. 8ರಂದು ಪುತ್ತೂರು ಕ್ಲಬ್’ನಲ್ಲಿ ಸೌಲಭ್ಯಗಳ ಉದ್ಘಾಟನೆ | ಸಾವಿರ ಆಸನ ಸಾಮರ್ಥ್ಯದ ವಿಶಾಲ ಸಭಾಂಗಣ, 200 ಆಸನ ಸಾಮರ್ಥ್ಯದ ಎಸಿ ಹಾಲ್ | ಯುಎಸ್ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ಕೋರ್ಟ್ ಮಾದರಿಯ ಸಿಂಥೆಟಿಕ್ ಟೆನಿಸ್ ಕೋರ್ಟ್

ಪುತ್ತೂರು : ಪುತ್ತೂರು ಕ್ಲಬ್’ನಲ್ಲಿ ನಿರ್ಮಾಣಗೊಂಡಿರುವ ಸೌಲಭ್ಯಗಳ ಉದ್ಘಾಟನಾ ಸಮಾರಂಭ ಫೆ. 8ರಂದು ಸಂಜೆ 4 ಗಂಟೆಗೆ ಕ್ಲಬ್ ಆವರಣದಲ್ಲಿ ನಡೆಯಲಿದೆ ಎಂದು ಕ್ಲಬ್ ಅಧ್ಯಕ್ಷ ಡಾ. ದೀಪಕ್ ರೈ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸೌಲಭ್ಯಗಳನ್ನು ಉದ್ಘಾಟಿಸಲಿದ್ದಾರೆ. ಕುಟುಂಬ ಹಾಗೂ ಆರೋಗ್ಯ ಸಚಿವ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯಅತಿಥಿಯಾಗಿರುವರು. ಸಂಸದ ಕ್ಯಾ. ಬ್ರಿಜೇಶ್ ಚೌಟಾ ಅವರು ಸಿಂಥೆಟಿಕ್ ಟೆನಿಸ್ ಕೋರ್ಟನ್ನು ಉದ್ಘಾಟಿಸಲಿದ್ದಾರೆ.

ಫೆ. 8ರಂದು ಪುತ್ತೂರು ಕ್ಲಬ್’ನಲ್ಲಿ ಸೌಲಭ್ಯಗಳ ಉದ್ಘಾಟನೆ | ಸಾವಿರ ಆಸನ ಸಾಮರ್ಥ್ಯದ ವಿಶಾಲ ಸಭಾಂಗಣ, 200 ಆಸನ ಸಾಮರ್ಥ್ಯದ ಎಸಿ ಹಾಲ್ | ಯುಎಸ್ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ಕೋರ್ಟ್ ಮಾದರಿಯ ಸಿಂಥೆಟಿಕ್ ಟೆನಿಸ್ ಕೋರ್ಟ್ Read More »

ಆರ್ಯಾಪು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಚಪ್ಪರ ಮುಹೂರ್ತ

ಪುತ್ತೂರು: ಹೊಸಮನೆ ಕ್ರಿಕೆಟರ್ಸ್ ನಿಂದ ಆರ್ಯಾಪು ಇದರ ವತಿಯಿಂದ ಎರಡು ದಿನಗಳ ಕಾಲ ಕಾರ್ಪಾಡಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಯಾಪು ಪ್ರೀಮಿಯರ್ ಲೀಗ್ ಸೀಸನ್-1ರ ಕ್ರಿಕೆಟ್ ಪಂದ್ಯಾಟಕ್ಕೆ ಫೆ.6ರಂದು ಚಪ್ಪರ ಮುಹೂರ್ತ ನೆರವೇರಿತು. ಅರ್ಚಕ ಸಂದೀಪ್ ಕಾರಂತ ಪೂಜಾ ವಿಧಿ ವಿಧಾನ‌ ನೆರವೇರಿಸಿದರು. ಹೊಸಮನೆ ಕ್ರಿಕೆಟರ್ಸ್ ನ ಅಧ್ಯಕ್ಷ ಧನುಷ್ ಹೊಸಮನೆ, ಕಾರ್ಯದರ್ಶಿ ಪವನ್ ಶೆಟ್ಟಿ ಕಂಬಳತ್ತಡ್ಡ, ಉಪಾಧ್ಯಕ್ಷ ಉಮೇಶ್ ಎಸ್.ಕೆ., ಫಿಕ್ಸೆಲ್ ಕ್ರಿಯೆಟಿವ್ ನ ಪ್ರಜ್ವಲ್ ಎಂ.ಎಸ್., ಕೋಶಾಧಿಕಾರಿ ಶಿವಪ್ರಸಾದ್ ಶೆಟ್ಟಿ, ಜತೆ ಕಾರ್ಯದರ್ಶಿ ಯತೀಶ್ ಪಿ.ಕೆ.,

ಆರ್ಯಾಪು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಚಪ್ಪರ ಮುಹೂರ್ತ Read More »

ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ  ಪ್ರಶಸ್ತಿಗೆ ಶ್ರೀಕಾಂತ್ ಪೂಜಾರಿ ಬಿರಾವು ಆಯ್ಕೆ | 500 ಕ್ಕೂ ಮಿಕ್ಕಿ ಕಾರ್ಯಕ್ರಮಗಳ ಮುಖಾಂತರ 80,000 ಯುವಜನರಿಗೆ ತರಬೇತಿ ನೀಡಿದ ಬಿರಾವು

ಪುತ್ತೂರು: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಇವರು ನೀಡುವ 2025 ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿಗೆ  ಪುತ್ತೂರಿನ ಶ್ರೀಕಾಂತ್ ಪೂಜಾರಿ ಬಿರಾವು ಆಯ್ಕೆಗೊಂಡಿದ್ದಾರೆ. ಯುವಜನ ಸಬಲೀಕರಣದಲ್ಲಿ ತೊಡಗಿಸಿಕೊಂಡಿರುವ ಶ್ರೀಕಾಂತ್ ಬಿರಾವು ಸಾಹಿತ್ಯ, ಬರವಣಿಗೆ, ತರಬೇತಿ, ಸಂಪನ್ಮೂಲ ವ್ಯಕ್ತಿಯಾಗಿ ಇನ್ನಿತರ ಕ್ಷೇತ್ರದಲ್ಲಿ ಅಪ್ರತಿಮ ಸಾಧಕರಾಗಿದ್ದಾರೆ. ತರಬೇತುದಾರರಾಗಿ ರಾಜ್ಯಾದ್ಯಂತ ಒಟ್ಟು 500 ಕ್ಕೂ ಮಿಕ್ಕಿ ಕಾರ್ಯಕ್ರಮಗಳನ್ನು ಅಯೋಜಿಸಿ ಸುಮಾರು 80 ಸಾವಿರ ಯುವಜನರಿಗೆ ಜೀವನ ಕೌಶಲ್ಯ, ವೃತ್ತಿ ಮಾರ್ಗದರ್ಶನ, ನಾಯಕತ್ವ ತರಬೇತಿ, ಉದ್ಯಮಶೀಲತಾ

ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ  ಪ್ರಶಸ್ತಿಗೆ ಶ್ರೀಕಾಂತ್ ಪೂಜಾರಿ ಬಿರಾವು ಆಯ್ಕೆ | 500 ಕ್ಕೂ ಮಿಕ್ಕಿ ಕಾರ್ಯಕ್ರಮಗಳ ಮುಖಾಂತರ 80,000 ಯುವಜನರಿಗೆ ತರಬೇತಿ ನೀಡಿದ ಬಿರಾವು Read More »

ಕೋಡಿಂಬಾಡಿ ಗ್ರಾಪಂ ವ್ಯಾಪ್ತಿಯ ವಿಶೇಷ ಚೇತನರಿಗೆ ನೀರಿನ ಟ್ಯಾಂಕ್ ವಿತರಣೆ

ಪುತ್ತೂರು: ಗ್ರಾಮದ ಕಟ್ಟಕಡೇಯ ಬಡವನ ಮನೆಗೂ ಸರಕಾರದಿಂದ ಸೌಲಭ್ಯ ದೊರೆತಾಗ ಮಾತ್ರ ನಾವು ಜನಪ್ರತಿನಿಧಿಯಾಗಿ ಮಾಡುವ ಸೇವೆಗೆ ಗೌರವ ದೊರೆತ ತೃಪ್ತಿ ದೊರೆಯುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.ಅವರು ಕೋಡಿಂಬಾಡಿ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ನಿಧಿಯಿಂದ ಗ್ರಾಮದ 8 ಮಂದಿ ವಿಶೇಷ ಚೇತನ ವ್ಯಕ್ತಿಗಳಿಗೆ ನೀರಿನ ಟ್ಯಾಂಕ್ ವಿತರಿಸಿ ಮಾತನಾಡಿದರು. ರಾಜ್ಯದ ಕಾಂಗ್ರೆಸ್ ಸರಕರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ದೊರೆಯುತ್ತಿದೆ. ಇಂದು ಬಡವರ ಮೂರು ಹೊತ್ತಿನ ಊಟಕ್ಕೂ ಈ ಯೋಜನೆ ಸಹಕಾರಿಯಾಗಿದೆ.

ಕೋಡಿಂಬಾಡಿ ಗ್ರಾಪಂ ವ್ಯಾಪ್ತಿಯ ವಿಶೇಷ ಚೇತನರಿಗೆ ನೀರಿನ ಟ್ಯಾಂಕ್ ವಿತರಣೆ Read More »

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಗೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ | ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಪ್ರೇರಣಾ ಸಂಸ್ಥೆಯ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ, ವಸಂತ ವೀರಮಂಗಲ

ಪುತ್ತೂರು: ನಗರದ ಏಳ್ಮುಡಿಯಲ್ಲಿರುವ ಪ್ರಭು ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಫೆ.5 ಬುಧವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ‘ಪ್ರೇರಣಾ’ ಸಂಸ್ಥೆಯ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ ಹಾಗೂ ವಸಂತ

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಗೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ | ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಪ್ರೇರಣಾ ಸಂಸ್ಥೆಯ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ, ವಸಂತ ವೀರಮಂಗಲ Read More »

error: Content is protected !!
Scroll to Top