ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆ ಧ್ವಂಸ ಪ್ರಕರಣ | ಇದೊಂದು ದರೋಡೆ ಪ್ರಕರಣವಾಗಿದ್ದು, ಅಪರಾಧಿಗಳನ್ನು ಪತ್ತೆಹಚ್ಚಿ ದರೋಡೆ ಪ್ರಕರಣ ದಾಖಲಿಸಿ | ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹ
ಪುತ್ತೂರು: ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಕಳೆದ ಹಲವಾರು ವರ್ಷಗಳಿಂದ ವಾಸವಾಗಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಮನೆಯನ್ನು ರಾತ್ರೋ ರಾತ್ರಿ ಕೆಡವಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದು, ಇದೊಂದು ದರೋಡೆ ಕೃತ್ಯ. ಈ ಹಿನ್ನಲೆಯಲ್ಲಿ ಅಪರಾಧಿಗಳನ್ನು ಪತ್ತೆಹಚ್ಚಿ ದರೋಡೆ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಪೊಲೀಸ್ ಇಲಾಖೆಗೆ ಆಗ್ರಹಿಸಿದರು. ಮಂಗಳವಾರ ರಾತ್ರೋ ರಾತ್ರಿ ಅಂದರೆ ಸುಮಾರು ಮಧ್ಯರಾತ್ರಿ 2 ಗಂಟೆ ಹೊತ್ತಿಗೆ ದೇವಸ್ಥಾನದ ವಠಾರದಲ್ಲಿ ರಾಜೇಶ್ ಬನ್ನೂರು ಅವರ ಮನೆಯನ್ನು […]










