ಪುತ್ತೂರು

ಕೋಡಿಂಬಾಡಿ ಗ್ರಾಪಂ ವ್ಯಾಪ್ತಿಯ ವಿಶೇಷ ಚೇತನರಿಗೆ ನೀರಿನ ಟ್ಯಾಂಕ್ ವಿತರಣೆ

ಪುತ್ತೂರು: ಗ್ರಾಮದ ಕಟ್ಟಕಡೇಯ ಬಡವನ ಮನೆಗೂ ಸರಕಾರದಿಂದ ಸೌಲಭ್ಯ ದೊರೆತಾಗ ಮಾತ್ರ ನಾವು ಜನಪ್ರತಿನಿಧಿಯಾಗಿ ಮಾಡುವ ಸೇವೆಗೆ ಗೌರವ ದೊರೆತ ತೃಪ್ತಿ ದೊರೆಯುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.ಅವರು ಕೋಡಿಂಬಾಡಿ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ನಿಧಿಯಿಂದ ಗ್ರಾಮದ 8 ಮಂದಿ ವಿಶೇಷ ಚೇತನ ವ್ಯಕ್ತಿಗಳಿಗೆ ನೀರಿನ ಟ್ಯಾಂಕ್ ವಿತರಿಸಿ ಮಾತನಾಡಿದರು. ರಾಜ್ಯದ ಕಾಂಗ್ರೆಸ್ ಸರಕರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ದೊರೆಯುತ್ತಿದೆ. ಇಂದು ಬಡವರ ಮೂರು ಹೊತ್ತಿನ ಊಟಕ್ಕೂ ಈ ಯೋಜನೆ ಸಹಕಾರಿಯಾಗಿದೆ. […]

ಕೋಡಿಂಬಾಡಿ ಗ್ರಾಪಂ ವ್ಯಾಪ್ತಿಯ ವಿಶೇಷ ಚೇತನರಿಗೆ ನೀರಿನ ಟ್ಯಾಂಕ್ ವಿತರಣೆ Read More »

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಗೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ | ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಪ್ರೇರಣಾ ಸಂಸ್ಥೆಯ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ, ವಸಂತ ವೀರಮಂಗಲ

ಪುತ್ತೂರು: ನಗರದ ಏಳ್ಮುಡಿಯಲ್ಲಿರುವ ಪ್ರಭು ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಫೆ.5 ಬುಧವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ‘ಪ್ರೇರಣಾ’ ಸಂಸ್ಥೆಯ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ ಹಾಗೂ ವಸಂತ

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಗೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ | ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಪ್ರೇರಣಾ ಸಂಸ್ಥೆಯ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ, ವಸಂತ ವೀರಮಂಗಲ Read More »

ಬಿಜೆಪಿ ಮುಖಂಡ ರಾಜೇಶ್‍ ಬನ್ನೂರು ಮನೆ ಧ್ವಂಸ ಪ್ರಕರಣ | ಇದೊಂದು ದರೋಡೆ ಪ್ರಕರಣವಾಗಿದ್ದು, ಅಪರಾಧಿಗಳನ್ನು ಪತ್ತೆಹಚ್ಚಿ ದರೋಡೆ ಪ್ರಕರಣ ದಾಖಲಿಸಿ | ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‍ ಆಗ್ರಹ

ಪುತ್ತೂರು: ಬಿಜೆಪಿ ಮುಖಂಡ ರಾಜೇಶ್‍ ಬನ್ನೂರು ಕಳೆದ ಹಲವಾರು ವರ್ಷಗಳಿಂದ ವಾಸವಾಗಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಮನೆಯನ್ನು ರಾತ್ರೋ ರಾತ್ರಿ ಕೆಡವಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದು, ಇದೊಂದು ದರೋಡೆ ಕೃತ್ಯ. ಈ ಹಿನ್ನಲೆಯಲ್ಲಿ ಅಪರಾಧಿಗಳನ್ನು ಪತ್ತೆಹಚ್ಚಿ ದರೋಡೆ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಂಸದ ನಳಿನ್‍ ಕುಮಾರ್ ಕಟೀಲ್‍ ಪೊಲೀಸ್ ಇಲಾಖೆಗೆ ಆಗ್ರಹಿಸಿದರು. ಮಂಗಳವಾರ ರಾತ್ರೋ ರಾತ್ರಿ ಅಂದರೆ ಸುಮಾರು ಮಧ್ಯರಾತ್ರಿ 2 ಗಂಟೆ ಹೊತ್ತಿಗೆ ದೇವಸ್ಥಾನದ ವಠಾರದಲ್ಲಿ ರಾಜೇಶ್‍ ಬನ್ನೂರು ಅವರ ಮನೆಯನ್ನು

ಬಿಜೆಪಿ ಮುಖಂಡ ರಾಜೇಶ್‍ ಬನ್ನೂರು ಮನೆ ಧ್ವಂಸ ಪ್ರಕರಣ | ಇದೊಂದು ದರೋಡೆ ಪ್ರಕರಣವಾಗಿದ್ದು, ಅಪರಾಧಿಗಳನ್ನು ಪತ್ತೆಹಚ್ಚಿ ದರೋಡೆ ಪ್ರಕರಣ ದಾಖಲಿಸಿ | ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‍ ಆಗ್ರಹ Read More »

ನ್ಯೂಸ್‍ ಪುತ್ತೂರು ಸಂಪಾದಕರಾಗಿ ಜ್ಯೋತಿ ಪ್ರಕಾಶ್‍ ಪುಣಚ

ಪುತ್ತೂರು : ಪುತ್ತೂರು ಕೇಂದ್ರವಾಗಿರಿಸಿ ಕಳೆದ ಕೆಲವು ವರ್ಷಗಳಿಂದ ಜನಪರ ಸೇವಾಧಾರಿತ ಕಾರ್ಯ ಚಟುವಟಿಗಳನ್ನು ನೀಡುತ್ತಾ ಜನರ ಪ್ರೀತಿ ವಿಶ್ವಾಸಗಳಿಗೆ ಪಾತ್ರವಾಗಿರುವ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನ ವ್ಯಾಪ್ತಿಯಲ್ಲಿ ಜನಮನದ ಪ್ರತಿಧ್ವನಿಯಾಗಿ ಕಾರ್ಯಾಚರಿಸುತ್ತಿರುವ ಸಮಗ್ರ ನೈಜ ಸುದ್ದಿಗಳ ಪ್ರಸರಣದ “ನ್ಯೂಸ್ ಪುತ್ತೂರು” ವಾಹಿನಿಯ ಸಂಪಾದಕರಾಗಿ ಹಿರಿಯ ಅನುಭವಿ ಪತ್ರಕರ್ತ, ಸಾಹಿತಿ ಹಾಗೂ ಲೇಖಕರಾಗಿರುವ  ಜ್ಯೋತಿಪ್ರಕಾಶ್ ಪುಣಚ ಅವರನ್ನು ಸಂಸ್ಥೆ ನೇಮಕ ಮಾಡಿದೆ. ಕರಾವಳಿ ಮಾಧ್ಯಮ ಲೋಕದಲ್ಲಿ ಎರಡನೇಯ ವರ್ಷಕ್ಕೆ ಕಾಲಿಡುತ್ತಿರುವ ನ್ಯೂಸ್ ಪುತ್ತೂರು ಪುತ್ತೂರಿನ ಏಳ್ಮುಡಿಯಲ್ಲಿ ಸುಸಜ್ಜಿತ

ನ್ಯೂಸ್‍ ಪುತ್ತೂರು ಸಂಪಾದಕರಾಗಿ ಜ್ಯೋತಿ ಪ್ರಕಾಶ್‍ ಪುಣಚ Read More »

ಟ್ಯಾಕ್ಟರ್ ಪಲ್ಟಿ : ತುಂಡಾಗಿ ಬಿದ್ದ ಎರಡು ವಿದ್ಯುತ್ ಕಂಬಗಳು

ಪುತ್ತೂರು: ನರಿಮೊಗರು ಶಾಲಾ ಬಳಿ ಟ್ರ್ಯಾಕ್ಟರ್ ಒಂದು ಪಲ್ಟಿಯಾದ ಪರಿಣಾಮ ಎರಡು ವಿದ್ಯುತ್‍ ಕಂಬ ಮುರಿದುಬಿದ್ದ ಬುಧವಾರ ಸಂಜೆ ನಡೆದಿದೆ. ಟ್ರ್ಯಾಕ್ಟರ್ ಗಡಿಪಿಲದಿಂದ ಪುರುಷರಕಟ್ಟೆಗೆ ತೆರಳುತ್ತಿದ್ದ ಸಂದರ್ಭ ಪಲ್ಟಿಯಾಗಿದೆ. ಅಪಘಾತದಿಂದ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಗಡಿಪಿಲ ಬಳಿ ಮೇಲೆ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗೆ ನೀರು ಕೊಂಡೊಯ್ಯುತ್ತಿದ್ದ ಟ್ರ್ಯಾಕ್ಟರ್ ಇದಾಗಿತ್ತು.

ಟ್ಯಾಕ್ಟರ್ ಪಲ್ಟಿ : ತುಂಡಾಗಿ ಬಿದ್ದ ಎರಡು ವಿದ್ಯುತ್ ಕಂಬಗಳು Read More »

ದೇವಸ್ಥಾನದ ಜಮೀನಿನಲ್ಲಿದ್ದ ಮನೆ ತೆರವು ಪ್ರಕರಣ | ಜಮಾಯಿಸಿದ ಬಿಜೆಪಿ ಕಾರ್ಯಕರ್ತರು | ಸ್ಥಳಕ್ಕಾಗಮಿಸಿದ ಪೊಲೀಸರು

ಪುತ್ತೂರು : ಮುಖ್ಯ ರಸ್ತೆಗೆ ಬದಿಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಮೀನಿನಲ್ಲಿದ್ದ ರಾಜೇಶ್ ಬನ್ನೂರು  ವಾಸಿಸುತ್ತಿದ್ದ  ಮನೆಯನ್ನು ಮಂಗಳವಾರ ತಡ ರಾತ್ರಿ ತೆರವುಗೊಳಿಸಿದ ವಿಚಾರವಾಗಿ ಬುಧವಾರ ಬೆಳಿಗ್ಗೆ ಪೊಲೀಸ್‍  ಠಾಣೆಗೆ ತೆರಳಿ ದೂರು ನೀಡಿದ ಬಳಿಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಸುಮಾರು 2.30ರಿಂದ 3 ಗಂಟೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ದೂರಲಾಗಿದೆ. ಮಂಗಳೂರಿನ ಜಾತ್ರೆಗೆ ತೆರಳಿದ್ದ ವೇಳೆ ಹಿಂಭಾಗದಿಂದ ಜೆಸಿಬಿ ಮೂಲಕ ಮನೆಯನ್ನು ದೂಡಿ ಹಾಕಲಾಗಿದೆ.

ದೇವಸ್ಥಾನದ ಜಮೀನಿನಲ್ಲಿದ್ದ ಮನೆ ತೆರವು ಪ್ರಕರಣ | ಜಮಾಯಿಸಿದ ಬಿಜೆಪಿ ಕಾರ್ಯಕರ್ತರು | ಸ್ಥಳಕ್ಕಾಗಮಿಸಿದ ಪೊಲೀಸರು Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ನೆಪ | ರಾತ್ರೋ ರಾತ್ರಿ ಶ್ವಾನಪ್ರೇಮಿಯ ಮನೆ ಕೆಡವಿದ ಆಡಳಿತ ಮಂಡಳಿ | ನಾಲ್ಕು ನಾಯಿಮರಿಗಳ ಸಾವು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಮನೆಗಳ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಕೆಲವರ ವಿರೋಧದ ನಡುವೆಯೂ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ರಾತ್ರೋರಾತ್ರಿ ಶ್ವಾನ ಪ್ರೇಮಿಯೊಬ್ಬರ ಮನೆಯನ್ನು ಆಡಳಿತ ಮಂಡಳಿ ಕಡೆವಿ ಹಾಕಿದ್ದು, ಮನೆಯೊಳಗಿದ್ದ ನಾಲ್ಕು ನಾಯಿ ಮರಿಗಳು ಸಾವನಪ್ಪಿದೆ ಎಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಆಡಳಿತ ಮಂಡಳಿ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 60 ಕೋ.ರೂ.ವೆಚ್ಚದ ಮಾಸ್ಟರ್ ಪ್ಲಾನ್‌ಗೆ ಪೂರಕವಾಗಿ ಶ್ರೀ ಮಹಾಲಿಂಗೇಶ್ವರ ದೇಗುಲದ ವಠಾರದ ಮನೆಗಳ ತೆರವು ಕಾರ್ಯಾಚರಣೆ ಮುಂದುವರಿದಿದೆ. ಈಗಾಗಲೇ ಬಹುತೇಕ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ನೆಪ | ರಾತ್ರೋ ರಾತ್ರಿ ಶ್ವಾನಪ್ರೇಮಿಯ ಮನೆ ಕೆಡವಿದ ಆಡಳಿತ ಮಂಡಳಿ | ನಾಲ್ಕು ನಾಯಿಮರಿಗಳ ಸಾವು Read More »

ಕುದ್ಮಾರು ಶಾಲೆ ಎಸ್ ಡಿ ಎಂ ಸಿ ರಚನೆ | ಅಧ್ಯಕ್ಷರಾಗಿ ದೇವರಾಜ್‍ ನೂಜಿ, ಉಪಾಧ್ಯಕ್ಷರಾಗಿ  ನವ್ಯಾ ಅನ್ಯಾಡಿ ಆಯ್ಕೆ

ಕಾಣಿಯೂರು : ಕುದ್ಮಾರು ನ. ಉ.ಹಿ.ಪ್ರಾ ಶಾಲೆಯ ನೂತನ ಎಸ್ ಡಿ ಎಂ ಸಿಯ ಅಧ್ಯಕ್ಷರಾಗಿ ದೇವರಾಜ್‍ ನೂಜಿ, ಉಪಾಧ್ಯಕ್ಷರಾಗಿ  ನವ್ಯಾ ಅನ್ಯಾಡಿ ಆಯ್ಕೆಯಾಗಿದ್ದಾರೆ. ಕುದ್ಮಾರು ನ. ಉ.ಹಿ.ಪ್ರಾ ಶಾಲೆಯ ನೂತನ ಎಸ್ ಡಿ ಎಂ ಸಿ ರಚನೆಯನ್ನು ಬೆಳಂದೂರು ಗ್ರಾಮ ಪಂಚಾಯತ್ ನಾಗರಿಕ ಸೌಲಭ್ಯ ಸಮಿತಿಯ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಭಾಸ್ಕರ ಪೂಜಾರಿ ಕೊಡಂಗೆಯವರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಲೋಹಿತಾಕ್ಷ ಕಡೆಂಜಿಕಟ್ಟ, ಪ್ರವೀಣ್ ಕೆರೆನಾರು, ಹಾಗೂ ಸವಣೂರು ಸಿ.ಆರ್.ಪಿ ಜಯಂತ್

ಕುದ್ಮಾರು ಶಾಲೆ ಎಸ್ ಡಿ ಎಂ ಸಿ ರಚನೆ | ಅಧ್ಯಕ್ಷರಾಗಿ ದೇವರಾಜ್‍ ನೂಜಿ, ಉಪಾಧ್ಯಕ್ಷರಾಗಿ  ನವ್ಯಾ ಅನ್ಯಾಡಿ ಆಯ್ಕೆ Read More »

ಆಟೋರಿಕ್ಷಾ-ಬೈಕ್ ಡಿಕ್ಕಿ : ಬೈಕ್‍ ಸವಾರ ಮೃತ್ಯು

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಮುರದಲ್ಲಿ ನಡೆದಿದೆ. ಚೇತನ್ ಕೆಮ್ಮಿಂಜೆ ಮೃತಪಟ್ಟ ಬೈಕ್‍ ಸವಾರ. ಪುತ್ತೂರು ದಿ. ನಿವೃತ್ತ ಅರಣ್ಯಾಧಿಕಾರಿ ಪುರುಷೋತ್ತಮ ರವರ ಪುತ್ರನಾಗಿದ್ದು,  ಕೆಎಸ್‍ ಆರ್ ಟಿಸಿ ಮೆಕ್ಯಾನಿಕ್ ಅಶೋಕರವರ ತಮ್ಮ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿನೆ ನಡೆಸಿದ್ದಾರೆ.

ಆಟೋರಿಕ್ಷಾ-ಬೈಕ್ ಡಿಕ್ಕಿ : ಬೈಕ್‍ ಸವಾರ ಮೃತ್ಯು Read More »

ವಿವೇಕಾನಂದ ಕಾಲೇಜು ವಿದ್ಯಾರ್ಥಿ ಅಶ್ವೀಜ್ ಕಶ್ಯಪ್‍ ನಿಧನ

ಪುತ್ತೂರು: ವಿವೇಕಾನಂದ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಶ್ವೀಜ್ ಕಶ್ಯಪ್ (18) ಮಂಗಳವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ವರ್ಷದ ಸೈನ್ಸ್ ವಿಭಾಗದ ವಿದ್ಯಾರ್ಥಿಯಾಗಿದ್ದ ಅಶ್ವೀಜ್ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪೆರ್ಲ ನಿವಾಸಿಯಾಗಿದ್ದ ಅಶ್ವೀಜ್ ತಂದೆ, ತಾಯಿ, ಅಜ್ಜ, ಅಜ್ಜಿಯನ್ನು ಅಗಲಿದ್ದಾರೆ.

ವಿವೇಕಾನಂದ ಕಾಲೇಜು ವಿದ್ಯಾರ್ಥಿ ಅಶ್ವೀಜ್ ಕಶ್ಯಪ್‍ ನಿಧನ Read More »

error: Content is protected !!
Scroll to Top