ಆನಡ್ಕ –ಪುತ್ತೂರು ಬಸ್ ಸ್ಥಗಿತ | ವಿದ್ಯಾರ್ಥಿಗಳ ಪರದಾಟ| ನಾಳೆಯೇ ಪ್ರತಿಭಟನೆ ಮಾಡುತ್ತೇವೆ : ಸಾರ್ವಜನಿಕರ ಎಚ್ಚರಿಕೆ
ಪುತ್ತೂರು : ಶಾಂತಿಗೋಡು ಗ್ರಾಮದ ಆನಡ್ಕಕ್ಕೆ ಬೆಳಿಗ್ಗಿನ ಹೊತ್ತು ಇರುವುದೊಂದೇ ಸರಕಾರಿ ಬಸ್. ದಿನದಲ್ಲಿ ಒಂದು ಸರಕಾರಿ ಬಸ್ ಒಡಾಟ. ಅದೂ ಬೆಳಗ್ಗಿನ ಹೊತ್ತು ಮಾತ್ರ. ಆದರೆ ಕೇವಲ ಒಂದೇ ಬಸ್ ಇದ್ದರೂ ಬರುವುದು ಮಾತ್ರ ವಾರಕ್ಕೊಮ್ಮೆ. ಬಂದರೆ ಬಂತು ಇಲ್ಲದಿದ್ದರೆ ಇಲ್ಲ. ಪರಿಣಾಮ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಈ ಭಾಗಕ್ಕೆ ಬೆಳಗ್ಗೆ 8:00 ಗಂಟೆಗೆ ಬಸ್ ಒಡಾಟ ನಡೆಯುತ್ತಿದೆ. ಈ ಭಾಗದಿಂದ ಸುಮಾರು 80 ರಿಂದ 100 ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗುತ್ತಿದ್ದಾರೆ. […]










