ಪುತ್ತೂರು

ಪುತ್ತೂರು ಶಾಸಕ ಅಶೋಕ್ ರೈ ಅವರೊಂದಿಗೆ ಅನ್ಯೋನ್ಯತೆ ಬಿಜೆಪಿಯಲ್ಲಿದ್ದಾಗ ಮಾತ್ರ | ಸಾಮಾಜಿಕ ಜಾಲತಾಣದಲ್ಲಿ ಹಿಂಸೆ ನೀಡುವುದು ಸರಿಯಲ್ಲ : ಪತ್ರಿಕಾಗೋಷ್ಠಿಯಲ್ಲಿ ದಯಾನಂದ ಶೆಟ್ಟಿ ಉಜಿರೆಮಾರು

ಪುತ್ತೂರು: ಚಂದಳಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್ ರೈ  ಭಾಷಣದಲ್ಲಿ ದಯಾನಂದರು ನನಗೆ ಮತ ಹಾಕಿದ್ದಾರೆಂದು ಎಲ್ಲಿಯೂ ಉಲ್ಲೇಖ ಮಾಡಿಲ್ಲ. ಹತ್ತು ವರ್ಷಗಳ ಹಿಂದೆ ಅವರು ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿದ್ದರು. ಆಗ ಅವರು ಬಿಜೆಪಿಯಲ್ಲಿ ಅನ್ಯೋನ್ಯತೆಯಲ್ಲಿದ್ದರು ಹೊರತು ಈಗಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ದಯಾನಂದರು ಅಶೋಕ್‌ ರೈ ಅವರ ಮಾತಿಗೆ ತಲೆ ಅಲ್ಲಾಡಿಸಿದ್ದಾರೆಂದು ಹಿಂಸೆ ನೀಡುವುದು ಸರಿಯಲ್ಲ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಹೇಳಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, […]

ಪುತ್ತೂರು ಶಾಸಕ ಅಶೋಕ್ ರೈ ಅವರೊಂದಿಗೆ ಅನ್ಯೋನ್ಯತೆ ಬಿಜೆಪಿಯಲ್ಲಿದ್ದಾಗ ಮಾತ್ರ | ಸಾಮಾಜಿಕ ಜಾಲತಾಣದಲ್ಲಿ ಹಿಂಸೆ ನೀಡುವುದು ಸರಿಯಲ್ಲ : ಪತ್ರಿಕಾಗೋಷ್ಠಿಯಲ್ಲಿ ದಯಾನಂದ ಶೆಟ್ಟಿ ಉಜಿರೆಮಾರು Read More »

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ, ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆ

ಪುತ್ತೂರು : ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಗೆ ಜ.25ರಂದು ಚುನಾವಣೆ ನಡೆದಿತ್ತು. ಸಾಮಾನ್ಯ ಮೀಸಲು ಸ್ಥಾನದಿಂದ ಬ್ಯಾಂಕಿನ ಹಾಲಿ ಅಧ್ಯಕ್ಷ ಕಿಶೋರ್ ಕೊಳತ್ತಾಯ, ಚಂದ್ರಶೇಖರ ರಾವ್ ಬಪ್ಪಳಿಗೆ, ಸುದೇಂದ್ರ ಪ್ರಭು, ರಾಜು ಶೆಟ್ಟಿ, ಶ್ರೀಧರ ಗೌಡ ರಣಜಾಲು, ಶ್ರೀಧರ ಪಟ್ಲ, ರಾಮಚಂದ್ರ ಕಾಮತ್, ಮಹಿಳಾ ಮೀಸಲು ಸ್ಥಾನದಿಂದ ವೀಣಾ, ಸೀಮಾ,

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ, ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆ Read More »

ಬಸ್ ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾದರೆ ಸುಮ್ಮನಿರಲ್ಲ| ಕೆಎಸ್ಆರ್ಟಿಸಿ ಅಧಿಕಾರಿಗೆ ಶಾಸಕ ಅಶೋಕ್ ರೈ ಖಡಕ್ ವಾರ್ನಿಂಗ್

ಪುತ್ತೂರು: ರೂಟ್‍ ಗಳಿಗೆ ಸರಿಯಾಗಿ ಬಸ್ ಬರುತ್ತಿಲ್ಲ, ಒಂದು ದಿನ ಬಂದರೆ ಮಾರನೇ ದಿನ ಬರುವುದಿಲ್ಲ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಸ್ಗಳ ಓಡಾಟ ಇಲ್ಲದೇ ಇರುವ ಕಾರಣ ತೊಂದರೆಯಲ್ಲಿದ್ದಾರೆ, ನಾನು ಪದೇ ಪದೇ ನಿಮಗೆ ಎಚ್ಚರಿಕೆ ಕೊಟ್ಟರೂ ಮತ್ತೆ ಅದೇ ಸಮಸ್ಯೆ ಮರುಕಳಿಸುತ್ತಿದೆ ಇದಕ್ಕೆ ಏನು ಕಾರಣ? ಬಸ್ ಇಲ್ಲವೇ? ಚಾಲಕರಿಲ್ಲವೇ? ಕಂಡಕ್ಟರ್ ಇಲ್ಲವೇ? ಅಥವಾ ನಿಮಗೆ ಖುಷಿ ಬಂದ ಹಾಗೆ ಬಸ್ ಓಡಾಟ ಮಾಡುತ್ತಿದ್ದೀರಾ ಹೀಗೇ ಕೆಎಸ್ಆರ್ಟಿಸಿ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡದ್ದು ಶಾಸಕ ಅಶೋಕ್ ರೈ.ಸೋಮವಾರ

ಬಸ್ ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾದರೆ ಸುಮ್ಮನಿರಲ್ಲ| ಕೆಎಸ್ಆರ್ಟಿಸಿ ಅಧಿಕಾರಿಗೆ ಶಾಸಕ ಅಶೋಕ್ ರೈ ಖಡಕ್ ವಾರ್ನಿಂಗ್ Read More »

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ  ಅಧ್ಯಕ್ಷ ರಾಗಿ ಮನೋರಾಜ್ ರೈ ಅಡ್ವಾಯಿ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ ಆಯ್ಕೆ

ವಿಟ್ಲ : ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ  ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ನಡೆಯಿತು. ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿಯಿಂದ ಸ್ಪರ್ಧಿಸಿದ ಎಲ್ಲಾ ಹನ್ನೆರಡು ಅಭ್ಯರ್ಥಿಗಳು ಬಹುಮತದಿಂದ ಆರಿಸಲಾಗಿದೆ. ಈ ಚುನಾವಣ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಮನೋರಾಜ್ ರೈ ಅಡ್ವಾಯಿ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿಯವರು ಆಯ್ಕೆಯಾಗಿದ್ದಾರೆ.

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ  ಅಧ್ಯಕ್ಷ ರಾಗಿ ಮನೋರಾಜ್ ರೈ ಅಡ್ವಾಯಿ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ ಆಯ್ಕೆ Read More »

ಕಬಕ-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದ ವರೆಗೆ ವಿಸ್ತರಣೆ | ಕ್ಯಾ.ಬ್ರಿಜೇಶ್ ಚೌಟರಿಂದ ರೈಲ್ವೇ ಮಂಡಳಿ ಅಧ್ಯಕ್ಷರಿಗೆ ಮನವಿ

ಪುತ್ತೂರು: ಕಬಕ – ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲು ಸಂಸದ ಕ್ಯಾ.ಬ್ರಿಜೇಶ್‍ ಚೌಟ ರೈಲ್ವೇ ಮಂಡಳಿ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ. ಈ ರೈಲು ಯೋಜನೆಯನ್ನು ವಿಸ್ತರಿಸಲು ಸಂಸದರು ಅವಿರತ ಪ್ರಯತ್ನಪಡುತ್ತಿದ್ದು, ಸೋಮವಾರ ದೆಹಲಿಯಲ್ಲಿ ರೈಲ್ವೆ ಮಂಡಳಿ ಅಧ್ಯಕ್ಷ ಸತೀಶ್ ಕುಮಾರ್ ಅವರನ್ನು ಭೇಟಿಯಾಗಿ ಕಬಕ-ಪುತ್ತೂರು ಪ್ಯಾಸೆಂಜರ್ ರೈಲು (06485) ವನ್ನು ಸುಬ್ರಹ್ಮಣ್ಯ ಜಂಕ್ಷನ್‌ವರೆಗೆ ವಿಸ್ತರಿಸುವ ಪ್ರಸ್ತಾವನೆಯ ಬಗ್ಗೆ ಪ್ರಗತಿ ಮತ್ತು ಇದನ್ನು ಆದಷ್ಟು ಬೇಗ ಕಾರ್ಯಗತಗೊಳಿಸುವಂತೆ ಮನವಿ ಮಾಡಿದರು. ಬಹು ಕಾಲದ ಬೇಡಿಕೆಯ ಈಡೇರಿಕೆಗೆ ನಾನಾ

ಕಬಕ-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದ ವರೆಗೆ ವಿಸ್ತರಣೆ | ಕ್ಯಾ.ಬ್ರಿಜೇಶ್ ಚೌಟರಿಂದ ರೈಲ್ವೇ ಮಂಡಳಿ ಅಧ್ಯಕ್ಷರಿಗೆ ಮನವಿ Read More »

ಪುತ್ತೂರಿನ ಚಿರಪರಿಚಿತ, ಕಂಪೌಂಡರ್ ನರಸಿಂಹ ಭಟ್‍ ನಿಧನ

ಪುತ್ತೂರು: ಪುತ್ತೂರಿನ ಚಿರಪರಿಚಿತ, ವೈದ್ಯ ಲೋಕದ ಕಂಪೌಂಡರ್ ಹಾರಾಡಿ ನಿವಾಸಿ ಕಂಪೌಂಡರ್ ನರಸಿಂಹ ಭಟ್ (82) ಅವರು ಸೋಮವಾರ ರಾತ್ರಿ ನಿಧನರಾದರು. ಪುತ್ತೂರಿನ ಚಿಕಿತ್ಸಾಲಯವೊಂದರಲ್ಲಿ ಕಾಂಪೌಂಡರ್ ಆಗಿ 68 ವರ್ಷ ಸೇವೆ ಸಲ್ಲಿಸಿದ ನರಸಿಂಹ ಭಟ್ ನಿವೃತ್ತಿಗೊಂಡು ಮನೆಯಲ್ಲಿದ್ದರು. ಡಾ.ಶಿವರಾಮ ಭಟ್ ಜೊತೆ ಕಾಂಪೌಂಡರ್ ಆಗಿ ಕೆಲಸ ಮಾಡಿದ ನರಸಿಂಹ ಭಟ್ ಅವರು ಎಲ್ಲರಿಗೂ ಚಿರಪರಿಚಿತರು. ಮೃತರು ಪತ್ನಿ ಕಾವೇರಮ್ಮ, ಪುತ್ರ ವಿದೇಶದಲ್ಲಿರುವ ಕಾರ್ತಿಕ್, ಇಬ್ಬರು ಸಹೋದರರನ್ನು ಅಗಲಿದ್ದಾರೆ

ಪುತ್ತೂರಿನ ಚಿರಪರಿಚಿತ, ಕಂಪೌಂಡರ್ ನರಸಿಂಹ ಭಟ್‍ ನಿಧನ Read More »

ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾ ಸಂಭ್ರಮ-2025 ಸಂಪನ್ನ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್‍  ಸಹಯೋಗದೊಂದಿಗೆ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 ಭಾನುವಾರ ಸಂಜೆ ಸಂಪನ್ನಗೊಂಡಿತು. ಪ್ರತೀ ವಲಯದವರು ಸಂಘಟನೆ ಬೆಳೆಸಬೇಕು : ಅಮರನಾಥ ಗೌಡ ಸಮಾರಂಭವನ್ನುದ್ದೇಶಿಸಿ ಯುವ ಗೌಡ

ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾ ಸಂಭ್ರಮ-2025 ಸಂಪನ್ನ Read More »

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ’ಗೆ ಆಯ್ಕೆ

ಪುತ್ತೂರು: ನಗರದ ಏಳ್ಮುಡಿಯಲ್ಲಿರುವ ಪ್ರಭು ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ವಿಜಯಪುರ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ’ಗೆ ಆಯ್ಕೆ Read More »

ವಿಟ್ಲ ಚಂದ್ರನಾಥ ಬಸದಿಗೆ ಪಂಚಲೋಹದ ಮೂರ್ತಿ ಆಗಮನ | ತೆರೆದ ವಾಹನದಲ್ಲಿ ಅದ್ದೂರಿ ಮೆರವಣಿಗೆ

ವಿಟ್ಲ: ವಿಟ್ಲದ ಭಗವಾನ್ ಶ್ರೀ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ  ಭ. ಶ್ರೀ 1008 ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ. 1008  ಶ್ರೀ ಮಹಾವೀರ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ ಹಾಗೂ ಶ್ರೀ ಯಕ್ಷಿ ಪದ್ಮಾವತಿ ಅಮ್ಮನವರ ಮತ್ತು ಶ್ರೀ ಯಕ್ಷಿ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಭಾನುವಾರ ಅರ್ಕುಳ ಬೀಡಿನಿಂದ  ನೂತನ ಭ. ಶ್ರೀ 1008 ಚಂದ್ರನಾಥ ಸ್ವಾಮಿ ತೀರ್ಥಂಕರರ ಪಂಚಲೋಹದ ಮೂರ್ತಿಯನ್ನು ವಿಟ್ಲ ಜೈನ ಬಸದಿಗೆ

ವಿಟ್ಲ ಚಂದ್ರನಾಥ ಬಸದಿಗೆ ಪಂಚಲೋಹದ ಮೂರ್ತಿ ಆಗಮನ | ತೆರೆದ ವಾಹನದಲ್ಲಿ ಅದ್ದೂರಿ ಮೆರವಣಿಗೆ Read More »

ಫೆ.5-7 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಿಂದ ಕೌಶಲಾಭಿವೃದ್ಧಿ ಕಾರ್ಯಾಗಾರ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ಮತ್ತು ಮಾನವಿಕ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಅಧ್ಯಾಪಕ ಮಾರ್ಗದರ್ಶಕರಿಗೆ ಉತ್ತಮ ಬೋಧನಾ ಮತ್ತು ಕಲಿಕಾ ಅಭ್ಯಾಸಗಳು ಎನ್ನುವ ವಿಷಯದ ಬಗ್ಗೆ ಫೆ.5 ರಿಂದ 7ರ ವರೆಗೆ ಅಧ್ಯಾಪಕರ ಕೌಶಲಾಭಿವೃದ್ಧಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಬೋಧಕರಲ್ಲಿ ನವೀನ ಶಿಕ್ಷಣ ಕೌಶಲ್ಯಗಳನ್ನು ಹೆಚ್ಚಿಸುವುದು, ಉತ್ತಮ ಬೋಧನಾ ಪದ್ದತಿಗಳನ್ನು ಅಳವಡಿಸುವ ಮೂಲಕ ಫಲಿತಾಂಶ ಅಧಾರಿತ ಶಿಕ್ಷಣದ ಪರಿಷ್ಕರಣೆ, ಪರಿಣಾಮಕಾರಿ ಮಾರ್ಗದರ್ಶನ ಕೌಶಲಗಳನ್ನು ಅಳವಡಿಸುವುದು, ಸಂವಾದಾತ್ಮಕ ಬೋಧನೆಗಾಗಿ ಡಿಜಿಟಲ್ ಉಪಕರಣಗಳು ಮತ್ತು

ಫೆ.5-7 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಿಂದ ಕೌಶಲಾಭಿವೃದ್ಧಿ ಕಾರ್ಯಾಗಾರ Read More »

error: Content is protected !!
Scroll to Top