ಪುತ್ತೂರು

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಫೆಬ್ರವರಿ 7ರಂದು ಜರಗಲಿರುವ 5ನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವದ ಅಂಗವಾಗಿ  ಗೊನೆ ಮುಹೂರ್ಥ ಮತ್ತು ಚಪ್ಪರ ಮುಹೂರ್ಥ ನಡೆಯಿತು. ಆಡಳಿತ ಸೇವಾ ಟ್ರಸ್ಟ್‍ ನ ಅಧ್ಯಕ್ಷ ಭಾಸ್ಕರ ಬಾರ್ಯ ಮತ್ತು ಅರ್ಚಕರಾದ ಗುರುಪ್ರಸಾದ ನೂರಿತ್ತಾಯರು ವೈದಿಕ ವಿಧಿ ವಿಧಾನಗಳೊಂದಿಗೆ ಚಪ್ಪರ ಮುಹೂರ್ತ ನೆರವೇರಿಸಿಕೊಟ್ಟರು. ಪವಿತ್ರ ಪಾಣಿ  ಸೂರ್ಯನಾರಾಯಣ ಕುದ್ದಣ್ಣಾಯ ಆಡಳಿತ ಸೇವಾ ಟ್ರಸ್ಟ್‍ ನ  ಟ್ರಸ್ಟಿಗಳು ಮತ್ತು ಪದಾಧಿಕಾರಿಗಳಾದ ಪ್ರಶಾಂತ್ ಪೈ, ಮನೋಹರ ಶೆಟ್ಟಿ, ನಾರಾಯಣಗೌಡ, […]

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ Read More »

ಕುದ್ಮಾರು ಶಾಲೆಯಲ್ಲಿ ನಡೆದ ಹುತಾತ್ಮರ ದಿನಾಚರಣೆ

ಕಾಣಿಯೂರು: ಕುದ್ಮಾರು ನ.ಉ.ಹಿ. ಪ್ರಾ ಶಾಲೆಯಲ್ಲಿ ಹುತಾತ್ಮರ ದಿನಾಚರಣೆಯನ್ನು  ಜ.30ರಂದು ಆಚರಿಸಲಾಯಿತು. ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆಯನ್ನು ಹಾಡಲಾಯಿತು. ಶಿಕ್ಷಕಿ ಪ್ರಿಯಾಂಕ ದಿನದ ಮಹತ್ವದ ಕುರಿತಾಗಿ ಮಾಹಿತಿ ನೀಡಿದರು. ಹುತಾತ್ಮರ ದಿನಾಚರಣೆಯನ್ನು ಆಚರಿಸುವುದರ ಹಿನ್ನೆಲೆ, ಗಾಂಧೀಜಿಯವರ ಜೀವನ ಚರಿತ್ರೆ ಮತ್ತು ಹುತಾತ್ಮರನ್ನು ಸ್ಮರಿಸಲಾಯಿತು. ಬಳಿಕ ಮೌನ ಪ್ರಾರ್ಥನೆಯನ್ನು ಮಾಡಿ ಹುತಾತ್ಮರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.

ಕುದ್ಮಾರು ಶಾಲೆಯಲ್ಲಿ ನಡೆದ ಹುತಾತ್ಮರ ದಿನಾಚರಣೆ Read More »

ಕಾಂತಮಂಗಲ ಕುರುಂಜಿಯ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ | ದೇವರ ದರ್ಶನ ಪಡೆದ ಸಾವಿರಾರು ಭಕ್ತರು

ಸುಳ್ಯ: ಕಾಂತಮಂಗಲ ಕುರುಂಜಿಯ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಜ.31ರಂದು ನಡೆಯಿತು. ವಾರ್ಷಿಕ ಉತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಉತ್ಸವದ ಅಂಗವಾಗಿ ಜ.31 ರಂದು ಕ್ಷೇತ್ರದ ಗರ್ಭಗುಡಿ ತೆರೆದು ವಿಶೇಷ ಪೂಜೆ ನೆರವೇರಿತು. ವರ್ಷದಲ್ಲಿ ಒಂದು ದಿನ ಮಾತ್ರ ಗರ್ಭಗುಡಿಯ ಬಾಗಿಲು ತೆರೆಯುವುದು ಈ ಕ್ಷೇತ್ರದ ವಿಶೇಷತೆ. ಡಾ.ರೇಣುಕಾಪ್ರಸಾದ್ ಕೆ.ವಿ. ಧರ್ಮದರ್ಶಿಗಳಾಗಿರುವ ಕ್ಷೇತ್ರದಲ್ಲಿ ಪ್ರತಿ ಜ.31ರಂದು ವಾರ್ಷಿಕ ಉತ್ಸವ  ವಿಜೃಂಭಣೆಯಿಂದ ನಡೆಯುತ್ತದೆ. ದೈವಜ್ಞರಾದ

ಕಾಂತಮಂಗಲ ಕುರುಂಜಿಯ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ | ದೇವರ ದರ್ಶನ ಪಡೆದ ಸಾವಿರಾರು ಭಕ್ತರು Read More »

ನಾಳೆಯಿಂದ ಪಂಜ ಪಂಚಲಿಂಗೇಶ್ವರ ಸನ್ನಿದಾನದಲ್ಲಿ ಜಾತ್ರೋತ್ಸವ : ಫೆ. 1 ರಿಂದ ಫೆ. 9ರ ತನಕ ವಿಜೃಂಭನೆಯಿಂದ ಜರುಗಲಿದೆ ಜಾತ್ರಾ ಸಂಭ್ರಮ

ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಫೆ. 1ರಿಂದ 9ರ ತನಕ ವೈಭವದಿಂದ ನಡೆಯಲಿದೆ. ಪ್ರತಿ ದಿನ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೀಮೆಯ ಭಕ್ತಾಧಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಬೇಕಾಗಿ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫೆ. 1ರಂದು ದೇಗುಲದಲ್ಲಿ ಪೂರ್ವಾಹ್ನ 7.30ರಿಂದ ಶ್ರೀ ಗಣಪತಿ ಹವನ, ಶ್ರೀ ರುದ್ರ ಹವನ ಮತ್ತು ವೇದಪಾರಾಯಣಗಳ ಆರಂಭವಾಗಲಿದೆ. ಪೂರ್ವಾಹ್ನ 10.30ರಿಂದ ಗರಡಿ ಬೈಲ್ ಮೂಲ ನಾಗನ ಕಟ್ಟೆಯಲ್ಲಿ

ನಾಳೆಯಿಂದ ಪಂಜ ಪಂಚಲಿಂಗೇಶ್ವರ ಸನ್ನಿದಾನದಲ್ಲಿ ಜಾತ್ರೋತ್ಸವ : ಫೆ. 1 ರಿಂದ ಫೆ. 9ರ ತನಕ ವಿಜೃಂಭನೆಯಿಂದ ಜರುಗಲಿದೆ ಜಾತ್ರಾ ಸಂಭ್ರಮ Read More »

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತಾಮ್ರಧ್ವಜ ಕಾಳಗ ತಾಳಮದ್ದಳೆ

ಗುರುವಾಯನ ಕೆರೆ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ  ಶ್ರೀ ಮಹಾಭಾರತ ಸರಣಿಯ 63ನೇ ಕಾರ್ಯಕ್ರಮವಾಗಿ ತಾಮ್ರಧ್ವಜ ಕಾಳಗ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ,  ಅರ್ಥಧಾರಿಗಳಾಗಿ ಮಧೂರು ಮೋಹನ ಕಲ್ಲೂರಾಯ (ಮಯೂರಧ್ವಜ),ಶಿವಾನಂದ ಭಂಡಾರಿ (ನಾರದ ),ಹರೀಶ ಆಚಾರ್ಯ ಬಾರ್ಯ (ತಾಮ್ರಧ್ವಜ ), ದಿವಾಕರ ಆಚಾರ್ಯ ಗೇರುಕಟ್ಟೆ (ನಕುಲ ಧ್ವಜ ), ರಾಘವ ಮೆದಿನ (ಶ್ರೀಕೃಷ್ಣ ), ರಾಘವ. ಯಚ್ (ಅರ್ಜುನ )

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತಾಮ್ರಧ್ವಜ ಕಾಳಗ ತಾಳಮದ್ದಳೆ Read More »

ಹಿರಿಯರ ಸೇವಾ ಪ್ರತಿಷ್ಠಾನದ ಪುತ್ತೂರು ಘಟಕದ ಸಭೆ

ಪುತ್ತೂರು  : ಅಖಿಲ ಕರ್ನಾಟಕ ಹಿರಿಯರ ಸೇವಾಪ್ರತಿಷ್ಠಾನ( ರಿ ) ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ಸಭೆಯು ಪುತ್ತೂರು ಸ್ವಾಗತ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ ಹಿರಿಯರ ಸೇವಾ ಸಂಘಟನೆಯನ್ನು ಸದಸ್ಯರ ಸೇರ್ಪಡೆ ಮಾಡುವ ಮೂಲಕ ಬಲಪಡಿಸಬೇಕೆಂದು  ತಿಳಿಸಿದರು. ಪ್ರತೀ ತಿಂಗಳ ಕೊನೆಯ  ಗುರುವಾರ ಸಭೆ ನಡೆಸುವ  ಮತ್ತು ಸಮಾಜದ ವಿವಿದ ರಂಗಗಳಲ್ಲಿ ಸೇವೆ ಸಲ್ಲಿಸಿದ ಹಿರಿಯರನ್ನು ಗುರುತಿಸಿ ಗೌರವಿಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಕೇಂದ್ರ

ಹಿರಿಯರ ಸೇವಾ ಪ್ರತಿಷ್ಠಾನದ ಪುತ್ತೂರು ಘಟಕದ ಸಭೆ Read More »

ಮುಕ್ರಂಪಾಡಿ ಬೊಮ್ಮಣ್ಣ ಗೌಡ ನಿಧನ

ಪುತ್ತೂರು : ಪುತ್ತೂರಿನ ದರ್ಬೆಯ ಮುಕ್ರಂಪಾಡಿ ನಿವಾಸಿ ಬೊಮ್ಮಣ್ಣ ಗೌಡ ನಿಧನರಾಗಿದ್ದಾರೆ. ಮೃತರು ಪತ್ನಿ ಪ್ರೇಮಾ, ಶೋಭಾ .ಕೆ, ಸತೀಶ್ ಗೌಡ, ವಿದ್ಯಾ .ಕೆ, ಹರೀಶ್.ಕೆ, ಶಿವಪ್ರಸಾದ್, ಪವಿತ್ರ, ಕುಟುಂಬಸ್ಥರನ್ನು ಅಗಲಿದ್ದಾರೆ.

ಮುಕ್ರಂಪಾಡಿ ಬೊಮ್ಮಣ್ಣ ಗೌಡ ನಿಧನ Read More »

ಕಾಡಿನಲ್ಲಿರುವ ಐರೋಳ್ ಹಣ್ಣು ತಿಂದು  ಮೃತಪಟ್ಟ ವ್ಯಕ್ತಿ

ಸುಳ್ಯ : ಕಾಡಿನಲ್ಲಿರುವ ಐರೋಳ್ ಹಣ್ಣನ್ನು ತಿಂದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ. ಅಮರ ಪಟ್ಟೂರು ಗ್ರಾಮದ ಕುಳ್ಳಾಜೆಯಲ್ಲಿ 2023ರ ಅಕ್ಟೋಬರ್‌ನಲ್ಲಿ ಲೋಕಯ್ಯ ಹಾಗೂ ಅವರ ಮಗಳು ಲೀಲಾವತಿಯವರು ಐರೋಳ್ ಹಣ್ಣನ್ನು ತಿಂದಿದ್ದು, ಪರಿಣಾಮ ಇಬ್ಬರೂ ಅಸ್ವಸ್ಥಗೊಂಡಿದ್ದರು. ಬಳಿಕ ಔಷಧ ಪಡೆದುಕೊಂಡಿದ್ದ ಲೋಕಯ್ಯ ಅವರು ಗುಣಮುಖರಾಗಿದ್ದರು. ಲೀಲಾವತಿ ಕೆಲವು ದಿನಗಳ ಬಳಿಕ ಮೃತರಾಗಿದ್ದರು ಆದರೀಗ ಲೋಕಯ್ಯ ಗುಣಮುಖರಾಗಿದ್ದರೂ, ಕೆಲವು ದಿನಗಳಿಂದ ಅಸೌಖ್ಯಗೊಂಡಿದ್ದು, ಬುಧವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕಾಡಿನಲ್ಲಿರುವ ಐರೋಳ್ ಹಣ್ಣು ತಿಂದು  ಮೃತಪಟ್ಟ ವ್ಯಕ್ತಿ Read More »

ದಾವಣಗೆರೆಯಲ್ಲಿ ಕಲಾ ನಿರ್ದೇಶಕರಾದ ಕುಮಾರ್ ಪೆರ್ನಾಜೆ  “ಸ್ವರ ಸಿಂಚನ”, ಕಲಾ ತಂಡದ ವಿಶೇಷ ಬರಹಗಾರಕ್ಕೆ ಸೌಮ್ಯ ಪೆರ್ನಾಜೆ, ಸಂಗೀತಕ್ಕೆ ಸವಿತಾ ಕೊಡಂದೂರು  ಅವರಿಗೆ “ಸರಸ್ವತಿ ಸಾಧಕ ಸಿರಿ “ರಾಷ್ಟ್ರ ಪ್ರಶಸ್ತಿಗೆ ಆಯ್ಕೆ.

ಪೆರ್ನಾಜೆ: ದಾವಣಗೆರೆಯ ಸಾಲಿಗ್ರಾಮ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ವತಿಯಿಂದ ದಾವಣಗೆರೆ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆ ಯ ಸಹಯೋಗದಲ್ಲಿ  70ನೇ ಕನ್ನಡ ನಿತ್ಯೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ನೇ ಸಾಲಿನ ರಾಷ್ಟ್ರಪ್ರಶಸ್ತಿಗೆ ದಾವಣಗೆರೆಯಲ್ಲಿ ಕಲಾ ನಿರ್ದೇಶಕರಾದ ಕುಮಾರ್ ಪೆರ್ನಾಜೆ  “ಸ್ವರ ಸಿಂಚನ”, ಕಲಾ ತಂಡದ ವಿಶೇಷ ಬರಹಗಾರಕ್ಕೆ ಸೌಮ್ಯ ಪೆರ್ನಾಜೆ, ಸಂಗೀತಕ್ಕೆ ಸವಿತಾ ಕೊಡಂದೂರು  ಅವರಿಗೆ “ಸರಸ್ವತಿ ಸಾಧಕ ಸಿರಿ “ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ ನಾಡು ನುಡಿ ಕಲೆ ಸಾಹಿತ್ಯ

ದಾವಣಗೆರೆಯಲ್ಲಿ ಕಲಾ ನಿರ್ದೇಶಕರಾದ ಕುಮಾರ್ ಪೆರ್ನಾಜೆ  “ಸ್ವರ ಸಿಂಚನ”, ಕಲಾ ತಂಡದ ವಿಶೇಷ ಬರಹಗಾರಕ್ಕೆ ಸೌಮ್ಯ ಪೆರ್ನಾಜೆ, ಸಂಗೀತಕ್ಕೆ ಸವಿತಾ ಕೊಡಂದೂರು  ಅವರಿಗೆ “ಸರಸ್ವತಿ ಸಾಧಕ ಸಿರಿ “ರಾಷ್ಟ್ರ ಪ್ರಶಸ್ತಿಗೆ ಆಯ್ಕೆ. Read More »

ತುಳು ಸಿನಿಮಾ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’  ನಾಳೆ ತೆರೆಗೆ

ಪುತ್ತೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್, ಎಚ್‌.ಪಿ.ಆರ್. ಫಿಲ್ಡ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಎನ್. ಕುಂಚಲ ಅವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್  ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಜ. 31ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ಸಿನಿಮಾದ ನಿರ್ದೇಶಕ ರಾಹುಲ್ ಅಮೀನ್ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿನ ಭಾರತ್ ಮಾಲ್, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್’ನಲ್ಲಿ

ತುಳು ಸಿನಿಮಾ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’  ನಾಳೆ ತೆರೆಗೆ Read More »

error: Content is protected !!
Scroll to Top