ಪುತ್ತೂರು

ಎವಿಜಿ  ಅಸೋಸಿಯೇಷನ್ ನ ಬೆಳ್ಳಿ ಹಬ್ಬದ ಪ್ರಯುಕ್ತ ಚಿತ್ರೋತ್ಸವ*

ಪುತ್ತೂರು: ಎವಿಜಿ ಅಸೋಸಿಯೇಷನ್ ನ ಬೆಳ್ಳಿ ಹಬ್ಬದ ಪ್ರಯುಕ್ತ ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 19 ಆದಿತ್ಯವಾರದಂದು ತಾಲೂಕು ಮಟ್ಟದ ಚಿತ್ರೋತ್ಸವ ಸ್ಪರ್ಧೆಯು  ನಡೆಯಿತು. ಸಮಾರೋಪ ಸಮಾರಂಭದ ಮೊದಲಿಗೆ  ಒಂದು ಗಂಟೆಯ ಕಾಲಾವಧಿಯೊಂದಿಗೆ ವಿವಿಧ ಶಾಲೆಗಳಿಂದ ಪಾಲ್ಗೊಂಡಂತಹ ವಿದ್ಯಾರ್ಥಿ, ವಿದ್ಯಾರ್ಥಿನಿಯರ 5 ವಿಭಾಗಗಳ ಚಿತ್ರರಚನಾ ಸ್ಪರ್ಧೆಯು ನಡೆಯಿತು. ಸ್ಪರ್ಧೆಯಲ್ಲಿ ಪೂರ್ವ ಪ್ರಾಥಮಿಕದಿಂದ 10 ನೇ ತರಗತಿವರೆಗಿನ 175 ಮಂದಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವಿವಿಧ ಶಾಲೆಗಳಿಂದ ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಬಾಲಾಜಿ ಪೈಂಟ್ […]

ಎವಿಜಿ  ಅಸೋಸಿಯೇಷನ್ ನ ಬೆಳ್ಳಿ ಹಬ್ಬದ ಪ್ರಯುಕ್ತ ಚಿತ್ರೋತ್ಸವ* Read More »

ನಾಪತ್ತೆಯಾದ ಬಾಲಕ ಪತ್ತೆ

ಸುಳ್ಯ  :  ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಶಾಂತಿ ಮಜಲಿನಿಂದ ನಾಪತ್ತೆಯಾಗಿದ್ದ ಅನ್ವಿತ್ ಎನ್ನುವ ಬಾಲಕ ಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ. ಈತ ಅಜ್ಜಾವರದ ಭಜನಾ ಮಂದಿರದಲ್ಲಿ ಜ.23ರ ಗುರುವಾರ ಮುಂಜಾನೆ ಪತ್ತೆಯಾಗಿದ್ದಾನೆ. ಅಡಂಗಾಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅನ್ವಿತ್‍ ಜ.22ರ ಬುಧವಾರ ಮಧ್ಯಾಹ್ನ ನಂತರ ಕಾಣೆಯಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಅನ್ವಿತ್ ಮೂಲತ ಪುತ್ತೂರು ತಾಲೂಕಿನ ಈಶ್ವರಮಂಗಳ ನಿವಾಸಿಯಾಗಿದ್ದು, ತನ್ನ ಅಜ್ಜಿ ಮನೆಯಾದ ಶಾಂತಿಮೂಲೆಯಿಂದ ಶಾಲೆಗೆ ಹೋಗುತ್ತಿದ್ದಾನೆ. ಬಾಲಕ ನಾಪತ್ತೆಯಾಗಿರುವ ಬಗ್ಗೆ ಸುಳ್ಯ

ನಾಪತ್ತೆಯಾದ ಬಾಲಕ ಪತ್ತೆ Read More »

ಕಬಕ ಗ್ರಾಮ ಪಂಚಾಯಿತಿಯಲ್ಲಿ “ಸ್ವಚ್ಛ ಸಂಸ್ಕೃತಿ, ನಮ್ಮ ಸಂಸ್ಕೃತಿ” ಕಾರ್ಯಕ್ರಮಕ್ಕೆ ಚಾಲನೆ

ಪುತ್ತೂರು: “ಸ್ವಚ್ಛ ಸಂಸ್ಕೃತಿ, ನಮ್ಮ ಸಂಸ್ಕೃತಿ” ಕಾರ್ಯಕ್ರಮ ಮೆಸ್ಕಾ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ನೇತೃತ್ವದಲ್ಲಿ ಕಬಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ವಹಿಸಿದ್ದರು ಕಬಕ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮದ ಪಟ್ಟಿ ತಯಾರಿಸಲಾಯಿತು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು,ಶ್ರೀ ಮಹಾದೇವಿ ದೇವಸ್ಥಾನದ ಅಧ್ಯಕ್ಷ ಚಂದ್ರಶೇಖರ್ ನಾಯಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯವರು, ಶಾಲಾ  ಮುಖ್ಯ

ಕಬಕ ಗ್ರಾಮ ಪಂಚಾಯಿತಿಯಲ್ಲಿ “ಸ್ವಚ್ಛ ಸಂಸ್ಕೃತಿ, ನಮ್ಮ ಸಂಸ್ಕೃತಿ” ಕಾರ್ಯಕ್ರಮಕ್ಕೆ ಚಾಲನೆ Read More »

ದಕ್ಷಿಣ ಕನ್ನಡ ಜಿಲ್ಲೆಗೆ  ಡಿ ಸಿ ಆರ್ ಇ ಘಟಕ ಮಂಜೂರುಗೊಳಿಸಿದ ರಾಜ್ಯ ಸರಕಾರ | ಪುತ್ತೂರಿನಲ್ಲೇ ಸ್ಥಾಪಿಸುವಂತೆ ಶಾಸಕ ಅಶೋಕ್ ರೈಯವರಿಂದ ಎಡಿಜಿಪಿಗೆ ಮನವಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಗೆ ಡಿಸಿಆರ್‌ ಇ  ಘಟಕ ಮಂಜೂರಾಗಿದ್ದು, ಈ ಭಾಗದ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದಂತಾಗಿದೆ. ದ ಕ ಜಿಲ್ಲೆಗೆ ಮಂಜೂರಾದ ಘಟಕವನ್ನು ಪುತ್ತೂರಿನಲ್ಲೇ ಸ್ಥಾಪಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಡಿಸಿಆರ್‌ ಇ ಘಟಕದ ಎಡಿಜಿಪಿ ಅರುಣ್‌ ಚಕ್ರವರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪುತ್ತೂರು ನಗರವು ಅತೀ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ನಗರ ಹೊರತುಪಡಿಸಿದರೆ ಅತಿ ದೊಡ್ಡ ನಗರ ಪುತ್ತೂರು ಆಗಿರುತ್ತದೆ. ಅಲ್ಲದೆ ಪುತ್ತೂರು ಅತ್ಯಂತ

ದಕ್ಷಿಣ ಕನ್ನಡ ಜಿಲ್ಲೆಗೆ  ಡಿ ಸಿ ಆರ್ ಇ ಘಟಕ ಮಂಜೂರುಗೊಳಿಸಿದ ರಾಜ್ಯ ಸರಕಾರ | ಪುತ್ತೂರಿನಲ್ಲೇ ಸ್ಥಾಪಿಸುವಂತೆ ಶಾಸಕ ಅಶೋಕ್ ರೈಯವರಿಂದ ಎಡಿಜಿಪಿಗೆ ಮನವಿ Read More »

ಜ.24-25 : ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್‍ : ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ಅನಘಾ ಕೆ.ಎನ್‍. ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿ ಅನಘ.ಕೆ.ಎನ್. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯಾಗಿರುವ ಅನಘ ಕೆ.ಎನ್‍. ತುಮಕೂರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜನವರಿ 24 ಹಾಗೂ 25 ರಂದು ಮೈಸೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ

ಜ.24-25 : ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್‍ : ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ಅನಘಾ ಕೆ.ಎನ್‍. ಆಯ್ಕೆ Read More »

ಜ.25 : ಪುತ್ತೂರು ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಚುನಾವಣೆ | ಸಂಘದ ಹಿಂದಿನ ಆಡಳಿತ ಮತ್ತು ಸಹಕಾರ ಭಾರತಿಯ ವಿರುದ್ಧದ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ : ಕಿಶೋರ್ ಕೊಳತ್ತಾಯ ಎನ್‍.

ಪುತ್ತೂರು: ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯ ಅವರಿಂದ ಸ್ಥಾಪನೆಯಾದ, 115 ವರ್ಷಗಳ ಇತಿಹಾಸವಿರುವ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್‍ನ ಮುಂದಿನ 5 ವರ್ಷಗಳ ನೂತನ ಆಡಳಿತ ಮಂಡಳಿ ಆಯ್ಕೆಗಾಗಿ ಜ.25ರಂದು ಚುನಾವಣೆ ನಡೆಯಲಿದ್ದು, ಕೇವಲ ರಾಜಕೀಯ ಕಾರಣಕ್ಕೆ ಸಂಘದ ಹಿಂದಿನ ಆಡಳಿತ ಮತ್ತು ಸಹಕಾರ ಭಾರತಿಯ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ. ಇದರಲ್ಲಿ ಯಾವುದೇ ಹುರುಳಿಲ್ಲ. ಕಳೆದ ಆಡಳಿತ ಮಂಡಳಿ ಅವಧಿಯಲ್ಲಿ ಕೈಗೊಳ್ಳಲಾದ ಎಲ್ಲ ನಿರ್ಧಾರಗಳು ಕಾನೂನು ಬದ್ಧವಾಗಿಯೇ ಇದೆ ಎಂದು ಸಹಕಾರ ಭಾರತಿ ಮತ್ತು

ಜ.25 : ಪುತ್ತೂರು ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಚುನಾವಣೆ | ಸಂಘದ ಹಿಂದಿನ ಆಡಳಿತ ಮತ್ತು ಸಹಕಾರ ಭಾರತಿಯ ವಿರುದ್ಧದ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ : ಕಿಶೋರ್ ಕೊಳತ್ತಾಯ ಎನ್‍. Read More »

ಜ.25 : ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಮಹಾಸತ್ಸಂಗ, ಮಹಾಆರತಿ

ಪುತ್ತೂರು: ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ವಿಶ್ವಹಿಂದು ಪರಿಷದ್‌, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಪುತ್ತೂರು ಜಿಲ್ಲೆಯ ವತಿಯಿಂದ ಮಹಾಸತ್ಸಂಗ ಮತ್ತು ಮಹಾ ಆರತಿಯು ಜ.25ರಂದು ಸಂಜೆ ನಡೆಯಲಿದೆ ಎಂದು ವಿಶ್ವಹಿಂದು ಪರಿಷತ್‌ ಪುತ್ತೂರು ಜಿಲ್ಲೆ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಅವರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಟಿಯಲ್ಲಿ  ಅವರು ಮಾತನಾಡಿ, ವಿಶ್ವಹಿಂದು ಪರಿಷತ್‌ನ 17 ಆಯಾಮಗಳಲ್ಲಿ ಒಂದಾದ ಸತ್ಸಂಗ ಪ್ರಮುಖ್ ವಿಭಾಗದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಪ್ರತಿಷ್ಠಾ ದಿನದ ಅಂಗವಾಗಿ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ

ಜ.25 : ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಮಹಾಸತ್ಸಂಗ, ಮಹಾಆರತಿ Read More »

ಮರದ ಕೊಂಬೆಗೆ ನೇಣು ಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುವನ್ನೂರು ಗ್ರಾಮದ ಪುಂಡಿಕಾಯಿಯಲ್ಲಿ ನಡೆದಿದೆ. ಪಡುವನ್ನೂರು ಗ್ರಾಮದ ಪುಂಡಿಕಾಯಿ ನಿವಾಸಿ  ವೆಯರಿಂಗ್ ಕೆಲಸ ಮಾಡುತ್ತಿದ್ದ ಮೋಹನ್ (31)ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಿಂದ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು. ಮೋಹನ್ ಅವರು ಜ.20ರಂದು ರಾತ್ರಿ ಊಟ ಮಾಡಿ ಮಲಗಿದವರು ಜ.21ರ ಬೆಳಗ್ಗೆ ನಾಪತ್ತೆಯಾಗಿದ್ದರು. ವಿಷಯ ಅರಿತು ಹುಡುಕಾಡಿದಾಗ ಮೋಹನ್ ಅವರು ಮನೆಯ ಪಕ್ಕದ ಪದ್ಮನಾಭ ಭಟ್ ಎಂಬವರ ಜಾಗದ ಕಾಡು

ಮರದ ಕೊಂಬೆಗೆ ನೇಣು ಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ Read More »

ವಾಹನಗಳ ಮೇಲೆ ವಿವಾದಾತ್ಮಕ ಸ್ಟಿಕ್ಕರ್‌ ಹಾಕಿದರೆ ದಂಡ | ಭಾವನೆ ಕೆರಳಿಸುವ ಸ್ಟಿಕ್ಕರ್‌, ಪೋಸ್ಟರ್‌ಗಳ ವಿರುದ್ಧ ಕ್ರಮಗೊಂಡ ಸಾರಿಗೆ ಇಲಾಖೆ | ಸಾರಿಗೆ ಇಲಾಖೆಯನ್ನು ಅಭಿನಂದಿಸಿದ ನ್ಯೂಸ್‍ ಪುತ್ತೂರು  ಸಂಸ್ಥೆ

ಪುತ್ತೂರು : ವಾಹನಗಳಲ್ಲಿ ವಿಚಿತ್ರ  ರೀತಿಯ  ಸ್ಟಿಕ್ಕರ್,  ಪೋಸ್ಟರ್’ ಗಳನ್ನು  ಅಂಟಿಸಿ  ಪ್ರದರ್ಶಿಸುವುದರ  ವಿರುದ್ಧ ಕ್ರಮ  ಕೈಗೊಳ್ಳಲು  ಮುಂದಾದ  ಸಾರಿಗೆ  ಇಲಾಖೆ  ಅಧಿಕಾರಿಗಳೇ  ನಿಮಗಿದೋ  ನ್ಯೂಸ್  ಪುತ್ತೂರು ವತಿಯಿಂದ  ಹೃದ್ಯ  ಅಭಿನಂದನೆಗಳು. ‘Better late than never’  ಎಂಬಂತೆ  ತಡವಾಗಿಯಾದರೂ  ದಿಟ್ಟ  ನಿರ್ಧಾರ  ಕೈಗೊಂಡ  ನೀವು ಶ್ಲಾಘನಾರ್ಹರು.  ನಿಮ್ಮ  ಈ  ನಡೆಗೆ  ನ್ಯೂಸ್  ಪುತ್ತೂರು  ಸರ್ವತ್ರ  ಬೆಂಬಲ  ನೀಡುತ್ತದೆ. ಹಾಗೆಯೇ  ನಮ್ಮದೊಂದು  ಮನವಿ.   ಈ  ಕೆಳಗಿನ  ಅಂಶಗಳನ್ನೂ  ದಯವಿಟ್ಟು  ಪರಿಗಣಿಸುವಿರಾ? 1) ಇಲಾಖೆಯ  ನಿಯಮಾನುಸಾರ  ವಾಹನ  ಉತ್ಪಾದಕ

ವಾಹನಗಳ ಮೇಲೆ ವಿವಾದಾತ್ಮಕ ಸ್ಟಿಕ್ಕರ್‌ ಹಾಕಿದರೆ ದಂಡ | ಭಾವನೆ ಕೆರಳಿಸುವ ಸ್ಟಿಕ್ಕರ್‌, ಪೋಸ್ಟರ್‌ಗಳ ವಿರುದ್ಧ ಕ್ರಮಗೊಂಡ ಸಾರಿಗೆ ಇಲಾಖೆ | ಸಾರಿಗೆ ಇಲಾಖೆಯನ್ನು ಅಭಿನಂದಿಸಿದ ನ್ಯೂಸ್‍ ಪುತ್ತೂರು  ಸಂಸ್ಥೆ Read More »

ದೇವರ ಪ್ರಭಾವಳಿಗೆ ಬಡಿದ ಡ್ರೋನ್‌!

ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ರಥೋತ್ಸವದಲ್ಲಿ ನಡೆದ ಘಟನೆ ಭಾರಿ ವೈರಲ್‌ ಮಂಗಳೂರು: ವಿಟ್ಲದ ಪ್ರಸಿದ್ಧ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥೋತ್ಸವದ ವೇಳೆ ನಿಯಂತ್ರಣ ತಪ್ಪಿದ ಡ್ರೋನ್‌ ರಥದ ಮೇಲಿದ್ದ ದೇವರ ಪ್ರಭವಳಿಗೆ ಬಡಿದಿದ್ದು, ಈ ಘಟನೆ ಇಲ್ಲಿನ ಭಕ್ತರ ಆತಂಕಕ್ಕೆ ಕಾರಣವಾಗಿದೆ. ಜ.21ರಂದು ಕ್ಷೇತ್ರದ ವರ್ಷಾವಧಿ ಉತ್ಸವದ ನಿಮಿತ್ತ ರಥೋತ್ಸವ ನೆರವೇರಿದ್ದು, ಈ ಸಂದರ್ಭದಲ್ಲಿ ಈ ಅಚಾತುರ್ಯ ಸಂಭವಿಸಿದೆ. ಬ್ರಹ್ಮವಾಹಕರು ದೇವರನ್ನು ಹೊತ್ತುಕೊಂಡು ರಥವೇರಿ ಒಳ ಪ್ರವೇಶಿಸುವ ಮೊದಲೊಮ್ಮೆ ಭಕ್ತರತ್ತ ತಿರುಗಿದ ಸಂದರ್ಭದಲ್ಲೇ ಹಾರಿಕೊಂಡು ಬಂದ ಡ್ರೋನ್‌

ದೇವರ ಪ್ರಭಾವಳಿಗೆ ಬಡಿದ ಡ್ರೋನ್‌! Read More »

error: Content is protected !!
Scroll to Top