ಪುತ್ತೂರು

ದ.ಕ. ಮತ್ತು ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆ | ಆಡಳಿತ ಮಂಡಳಿಗೆ 17 ನಿರ್ದೇಶಕರು ಹಾಗೂ ಸಲಹಾ ಸಮಿತಿಗೆ 19 ಸದಸ್ಯರ ಆಯ್ಕೆ

ಪುತ್ತೂರು : ದಕ್ಷಿಣ ಕನ್ನಡ ಮತ್ತು ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ನೂತನ ಆಡಳಿತ ಮಂಡಳಿಗೆ 17 ಮಂದಿ ನಿರ್ದೇಶಕರು ಹಾಗೂ ಸಲಹಾ ಸಮಿತಿಗೆ 19 ಮಂದಿ ಸದಸ್ಯರನ್ನು ಇಂದು ಆಯ್ಕೆ ಮಾಡಲಾಯಿತು. ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ನಿರ್ದೇಶಕರ ವಿವರ : ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಪೈಕೆರೆ ಮನೋಹರ ಪಿ., ಉಪಾಧ್ಯಕ್ಷರಾಗಿ ರಾಧಾಕೃಷ್ಣ ನಂದಿಲ, ಕಾರ್ಯದರ್ಶಿಯಾಗಿ ಕಪಿಲ್ ದುಗ್ಗಳ, ಖಜಾಂಚಿಯಾಗಿ ಪುರುಷೋತ್ತಮ ಮುಂಗ್ಲಿಮನೆ, ನಿರ್ದೇಶಕರುಗಳಾಗಿ ಅಂಬೆಕಲ್ಲು ಪ್ರವೀಣ್‍ ಕುಂಟ್ಯಾನ, ಎಂ.ಪಿ.ಉಮೇಶ್‍, ನವೀನ್‍, ಪುದಿಯನೆರವಿನ […]

ದ.ಕ. ಮತ್ತು ಕೊಡಗು ಗೌಡ ಸಮಾಜ ಅಭಿವೃದ್ಧಿ ಸಂಘದ ನೂತನ ಆಡಳಿತ ಮಂಡಳಿಗೆ ನಿರ್ದೇಶಕರುಗಳ ಆಯ್ಕೆ | ಆಡಳಿತ ಮಂಡಳಿಗೆ 17 ನಿರ್ದೇಶಕರು ಹಾಗೂ ಸಲಹಾ ಸಮಿತಿಗೆ 19 ಸದಸ್ಯರ ಆಯ್ಕೆ Read More »

ರಾಜ್ಯ ಒಲಿಂಪಿಕ್ಸ್ ನಲ್ಲಿ ಮಿಂಚಿದ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು

ಪುತ್ತೂರು: ರಾಜ್ಯ ಒಲಿಂಪಿಕ್ಸ್ ವೈಟ್‍ ಲಿಫ್ಟಿಂಗ್‍ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ದ್ವಿತೀಯ ಬಿಎಯ ರಂಜಿತ್ 108+ ಕೆ.ಜಿ. ವಿಭಾಗದಲ್ಲಿ ಚಿನ್ನ, ದ್ವಿತೀಯ ಬಿಎಸ್ಸಿಯ ಸ್ಪಂದನಾ 45 ಕೆ.ಜಿ. ವಿಭಾಗದಲ್ಲಿ ಬೆಳ್ಳಿ, ದ್ವಿತೀಯ ಎಂಕಾಂನ ಬ್ಯೂಲಾಹ್‍ ಪಿ.ಟಿ. 64 ಕೆ.ಜಿ. ವಿಭಾಗದಲ್ಲಿ ಬೆಳ್ಳಿ, ದ್ವಿತೀಯ ಬಿಎಸ್ಸಿಯ ಶಿವಾನಿ 45 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕಗಳನ್ನು ಗಳಿಸಿ ಈ ಮೂಲಕ ಕಾಲೇಜಿನ ಕ್ರೀಡಾ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲನ್ನು

ರಾಜ್ಯ ಒಲಿಂಪಿಕ್ಸ್ ನಲ್ಲಿ ಮಿಂಚಿದ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು Read More »

ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ನರಿಮೊಗರು ಗ್ರಾಮದ ಕೈಪಂಗಳ ಬಾರಿಕೆಯಲ್ಲಿ ಫೆ. 12 ರಿಂದ ಫೆ. 13ರ ವರೆಗೆ 44ನೇ ವರ್ಷದ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ನಡೆಯಲಿದೆ.   ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ಪ್ರಯುಕ್ತ ಜ.17 ರಂದು ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿದೆ. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ವೇದನಾಥ ಸುವರ್ಣ, ಕಾರ್ಯದರ್ಶಿ ವಸಂತ ಗೌಡ ಕೆಬ್ಬಾರ್, ಮೊಕ್ತೇಸರರಾದ ಮೋನಪ್ಪ ಕುಲಾಲ್ ಬಾರಿಕೆ, ಕೋಶಾಧಿಕಾರಿ ಶುಭಾಕರ ಕುಲಾಲ್, ಸದಸ್ಯರಾದ ಗಣೇಶ್ ನಾಲ್ಯಾನ್ ದೋಳ, ಹರೀಶ್ ದೋಳ, ಬಾಳಪ್ಪ ಗೌಡ ಕೆದ್ಮಾರ್, ಮೋಹನ್

ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್‍ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿ ಚುನಾವಣೆಗೆ ಸ್ಪರ್ಧಿಸಲು ಸಹಕಾರಿ ಸಾಮ್ರಾಟ್ ಹೋರಾಟ ಸಮಿತಿ ರಚನೆ | ಸ್ಪರ್ಧಾ ಕಣದಲ್ಲಿರುವ ನನಗೆ ಮತದಾರರ ಪಟ್ಟಿ ನೀಡದ್ದಕ್ಕೆ ‘ಹ್ಯಾಕ್‍’ ಮಾಡಿ ಪಡೆದುಕೊಂಡಿದ್ದೇನೆ : ಪತ್ರಿಕಾಗೋಷ್ಠಿಯಲ್ಲಿ ಸುದರ್ಶನ್ ಗೌಡ

ಪುತ್ತೂರು: ಪ್ರತಿಷ್ಠಿತ ಕೋ ಓಪರೇಟಿವ್‍ ಟೌನ್‍ ಬ್ಯಾಂಕ್‍ನ ಆಡಳಿತ ಮಂಡಳಿಗೆ ಸಹಕಾರ ಭಾರತಿಯ ವಿರುದ್ಧ ಸ್ಪರ್ಧಿಸಲು ಸಹಕಾರಿ ಸಾಮ್ರಾಟ್ ಹೋರಾಟ ಸಮಿತಿಯನ್ನು ರಚಿಸಲಾಗಿದ್ದು, ನಾನು ಸ್ಪರ್ಧಾ ಕಣದಲ್ಲಿದ್ದೇನೆ. ಈ ನಿಟ್ಟಿನಲ್ಲಿ ಬ್ಯಾಂಕ್‍ ನ ಮತದಾರರ ಪಟ್ಟಿಯನ್ನು ಕೇಳಿದ್ದಕ್ಕೆ ನೀಡದ ಹಿನ್ನಲೆಯಲ್ಲಿ ಬ್ಯಾಂಕ್‍ ನ ಮತದಾರರ ಪಟ್ಟಿಯನ್ನು ನಾನು ಹ್ಯಾಕ್‍ ಮಾಡಿ ಪಡೆದುಕೊಂಡಿದ್ದೇನೆ. ಇಂದಿನಿಂದಲೇ ಮನೆ ಮನೆಗೆ ತೆರಳಿ ಅಭಿಯಾನ ನಡೆಸಲಿದ್ದೇವೆ ಎಂದು ಹೋರಾಟ ಸಮಿತಿಯ ಪ್ರಮುಖ, ಚುನಾವಣಾ ಅಭ್ಯರ್ಥಿ ಸುದರ್ಶನ ಗೌಡ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು

ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್‍ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿ ಚುನಾವಣೆಗೆ ಸ್ಪರ್ಧಿಸಲು ಸಹಕಾರಿ ಸಾಮ್ರಾಟ್ ಹೋರಾಟ ಸಮಿತಿ ರಚನೆ | ಸ್ಪರ್ಧಾ ಕಣದಲ್ಲಿರುವ ನನಗೆ ಮತದಾರರ ಪಟ್ಟಿ ನೀಡದ್ದಕ್ಕೆ ‘ಹ್ಯಾಕ್‍’ ಮಾಡಿ ಪಡೆದುಕೊಂಡಿದ್ದೇನೆ : ಪತ್ರಿಕಾಗೋಷ್ಠಿಯಲ್ಲಿ ಸುದರ್ಶನ್ ಗೌಡ Read More »

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆಲಂಕಾರು ಶಾಖೆ ಎರಡನೇ ವರ್ಷಕ್ಕೆ ಪಾದಾರ್ಪಣೆ | ಆಲಂಕಾರು ಶಾಖೆಯಲ್ಲಿ ಗಣಹೋಮ ಮತ್ತು ಲಕ್ಷ್ಮೀ ಪೂಜೆ

ಆಲಂಕಾರು: ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆಲಂಕಾರು  ಶಾಖೆ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡಿತು.   ಈ ಹಿನ್ನಲೆಯಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ  ಆಲಂಕಾರು ಶಾಖೆಯು ಯಶಸ್ವಿಯಾಗಿ ಒಂದು ವರ್ಷವನ್ನು ಪೂರೈಸಿ ಎರಡನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಗಣಹೋಮ, ಲಕ್ಷ್ಮೀ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ  ಮೋಹನ್ ರಾವ್ ಸುಳ್ಳಿ, ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಎಂ., ಆಂತರಿಕ ಲೆಕ್ಕಪರಿಶೋಧಕ ಗುಮ್ಮಣ್ಣ ಗೌಡ ಹೆಚ್., ನ್ಯಾಯವಾದಿ ಶಿವಪ್ರಸಾದ್ ಪುತ್ತಿಲ,

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆಲಂಕಾರು ಶಾಖೆ ಎರಡನೇ ವರ್ಷಕ್ಕೆ ಪಾದಾರ್ಪಣೆ | ಆಲಂಕಾರು ಶಾಖೆಯಲ್ಲಿ ಗಣಹೋಮ ಮತ್ತು ಲಕ್ಷ್ಮೀ ಪೂಜೆ Read More »

ತಾಲೂಕು ಯುವ ಸಾಧಕ ಪ್ರಶಸ್ತಿಗೆ ಭಾಜನರಾದ  ಪ್ರಣವ್ ಭಟ್

ಪುತ್ತೂರು :  ಪುತ್ತೂರಿನ ಯುವ ಪ್ರತಿಭೆ ಪ್ರಣವ್‍ ಭಟ್‍ ತಾಲೂಕು ಯುವ ಸಾಧಕ ಪ್ರಶಸ್ತಿಗೆ  ಆಯ್ಕೆಯಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ  ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ  ನಡೆಸಲ್ಪಡುವ ‘ಕನ್ನಡದಲ್ಲೂ ಐ.ಎ.ಎಸ್ ಬರೆಯಿರಿ’ ಅಭಿಯಾನದಲ್ಲಿ ಐ.ಎ.ಎಸ್- ಐ.ಪಿ.ಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಮಾಹಿತಿಯನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಾ ಬಂದಿರುವ ಯುವ ಪ್ರೇರಕ ಭಾಷಣಗಾರ ಪ್ರಣವ್ ಭಟ್  ಯುವ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈಗಾಗಲೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 

ತಾಲೂಕು ಯುವ ಸಾಧಕ ಪ್ರಶಸ್ತಿಗೆ ಭಾಜನರಾದ  ಪ್ರಣವ್ ಭಟ್ Read More »

ಜ.25 : ಪ್ರತಿಷ್ಠಿತ ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿಗೆ ಚುನಾವಣೆ | ನನ್ನ ಸ್ವಂತ ನಿರ್ಧಾರದಿಂದ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ : ಸದಾಶಿವ ಪೈ

ಪುತ್ತೂರು : ಪ್ರತಿಷ್ಠಿತ ಪುತ್ತೂರು ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿಗೆ ಜ.25 ಶನಿವಾರ ಚುನಾವಣೆ ನಡೆಯಲಿದ್ದು, ಕಳೆದ 20 ವರ್ಷಗಳಿಂದ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡ ನನಗೆ ಈ ಬಾರಿ ಸಹಕಾರ ಭಾರತಿಯಿಂದ ಅವಕಾಶ ವಂಚಿತನಾಗಿದ್ದು, ಈ ನಿಟ್ಟಿನಲ್ಲಿ ಈ ಬಾರಿ ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ. ಮತದಾರರು ನನ್ನನ್ನು ಗೆಲ್ಲಿಸಬೇಕಾಗಿ ಪಕ್ಷೇತರ ಅಭ್ಯರ್ಥಿ ಸದಾಶಿವ ಪೈ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೆಲವೊಂದು ಆಂತರಿಕ ಕಾರಣ ಸಹಿತ ಅವಕಾಶವಾದಿಗಳ ಕಾರಣದಿಂದ ನನಗೆ

ಜ.25 : ಪ್ರತಿಷ್ಠಿತ ಕೋ ಓಪರೇಟಿವ್ ಟೌನ್‍ ಬ್ಯಾಂಕ್‍ ಆಡಳಿತ ಮಂಡಳಿಗೆ ಚುನಾವಣೆ | ನನ್ನ ಸ್ವಂತ ನಿರ್ಧಾರದಿಂದ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ : ಸದಾಶಿವ ಪೈ Read More »

ರಾಷ್ಟ್ರೀಯ ಸ್ವಯಂ ಸೇವಕ ಸಂಘ 100 ವರ್ಷದ ಸಂಭ್ರಮಕ್ಕೆ 100 ಜೋಡಿಗೆ ಸಾಮೂಹಿಕ ವಿವಾಹ | 2025ರ ಡಿಸೆಂಬರ್ ನಲ್ಲಿ ಮೂರು ದಿನಗಳ ಬೃಹತ್ ಕಾರ್ಯಕ್ರಮ | ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ‘ಧನ್ಯೋಸ್ಮಿ’ ಯಲ್ಲಿ ಘೋಷಣೆ

ಪುತ್ತೂರು : ದ್ವಿತೀಯ ವರ್ಷದ  ಶ್ರೀನಿವಾಸ ಕಲ್ಯಾಣೋತ್ಸವದ  ಯಶಸ್ವಿಯಾಗಿ ನೆರವೇರಿದ್ದು  ಹಗಲಿರುಲೆನ್ನದೆ ದುಡಿದ ದೇವದುರ್ಲಭ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ‘ಧನ್ಯೋಸ್ಮಿ’ ಕೋಟೆಚಾ ಹಾಲ್ ನಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೂರು ವರ್ಷದ  ಸಂಭ್ರಮಕ್ಕೆ ನೂರು ಜೋಡಿಗೆ ಸಾಮೂಹಿಕ ವಿವಾಹ ನೆರವೇರಿಸಲು 2025ರ ಡಿಸೆಂಬರ್ ನಲ್ಲಿ ಮೂರು ದಿನಗಳ ಬೃಹತ್  ಕಾರ್ಯಕ್ರಮದ ಬಗ್ಗೆ ಸಭೆಯಲ್ಲಿ ಘೋಷಣೆ ಮಾಡಲಾಯಿತು. ಸಭೆಯಲ್ಲಿ ಮಾತನಾಡಿದ ಶ್ರೀನಿವಾಸ ಕಲ್ಯಾಣೋತ್ಸವ ಸ್ವಾಗತ ಸಮಿತಿ ಸಂಚಾಲಕ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಶ್ರೀನಿವಾಸ

ರಾಷ್ಟ್ರೀಯ ಸ್ವಯಂ ಸೇವಕ ಸಂಘ 100 ವರ್ಷದ ಸಂಭ್ರಮಕ್ಕೆ 100 ಜೋಡಿಗೆ ಸಾಮೂಹಿಕ ವಿವಾಹ | 2025ರ ಡಿಸೆಂಬರ್ ನಲ್ಲಿ ಮೂರು ದಿನಗಳ ಬೃಹತ್ ಕಾರ್ಯಕ್ರಮ | ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ‘ಧನ್ಯೋಸ್ಮಿ’ ಯಲ್ಲಿ ಘೋಷಣೆ Read More »

ಪುತ್ತೂರು ರೋಟರಿ ಕ್ಲಬ್‍ ವತಿಯಿಂದ ಕ್ರಿಸ್ಮಸ್, ಹೊಸ ವರ್ಷಾಚರಣೆ | ಕ್ಲಬ್‍ ನ ವಜ್ರಮಹೋತ್ಸವದ ಅಂಗವಾಗಿ ನೂತನ ಲಾಂಛನ ಬಿಡುಗಡೆ

ಪುತ್ತೂರು: ರೋಟರಿ ಪುತ್ತೂರು ತನ್ನ ಸ್ವಾರ್ಥರಹಿತ ಸೇವೆಯೊಂದಿಗೆ ಮತ್ತು ಸದಸ್ಯರ ಏಕತೆಯ ಶಕ್ತಿಯೊಂದಿಗೆ ಸಮಾಜಮುಖಿ ಸೇವೆಯನ್ನು ಮಾಡುತ್ತಾ ವಜ್ರಮಹೋತ್ಸವದ ಹೊಸ್ತಿಲಲ್ಲಿದ್ದು ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಹೆಮ್ಮೆಯನ್ನು ಗಳಿಸಿದ್ದು, ಪುತ್ತೂರಿನಲ್ಲಿ ಹೆಗ್ಗುರುತು ಸೃಷ್ಟಿಸಿದೆ ಎಂದು ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ಜಿಲ್ಲಾ ಗವರ್ನರ್ ವಿಕ್ರಂ ದತ್ತರವರು ಹೇಳಿದರು. ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರುನಿಂದ ಜ.19 ರಂದು ಬೊಳ್ಳಾರು ಮಹಾವೀರ ವೆಂಚರ್ಸ್‌ ಹವಾನಿಯಂತ್ರಿತ ಸಭಾಂಗಣದಲ್ಲಿ ಸಂಜೆ ನಡೆದ ಕ್ರಿಸ್ಮಸ್, ಹೊಸ ವರ್ಷಾಚರಣೆ

ಪುತ್ತೂರು ರೋಟರಿ ಕ್ಲಬ್‍ ವತಿಯಿಂದ ಕ್ರಿಸ್ಮಸ್, ಹೊಸ ವರ್ಷಾಚರಣೆ | ಕ್ಲಬ್‍ ನ ವಜ್ರಮಹೋತ್ಸವದ ಅಂಗವಾಗಿ ನೂತನ ಲಾಂಛನ ಬಿಡುಗಡೆ Read More »

ಮಹಾಭಾರತ ಸರಣಿಯಲ್ಲಿ ಮಧ್ಯಮ ವ್ಯಾಯೋಗ  ತಾಳಮದ್ದಳೆ

ಉಪ್ಪಿನಂಗಡಿ  : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ  50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ  ಶ್ರೀ ಮಹಾಭಾರತ ಸರಣಿಯಲ್ಲಿ 61ನೇ ಕಾರ್ಯಕ್ರಮವಾಗಿ ಶ್ರೇಣಿ ಡಾ.ಗೋಪಾಲಕೃಷ್ಣ ಭಟ್ ವಿರಚಿತ ಮಧ್ಯಮ ವ್ಯಾಯೋಗ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ ರಾವ್. ಬಿ, ಹರೀಶ ಆಚಾರ್ಯ ಬಾರ್ಯ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಜಯರಾಮ ಬಲ್ಯ(ಭೀಮ), ಹರೀಶ ಆಚಾರ್ಯ ಬಾರ್ಯ (ಧರ್ಮರಾಯ ),  ಪೂರ್ಣಿಮ ರಾವ್

ಮಹಾಭಾರತ ಸರಣಿಯಲ್ಲಿ ಮಧ್ಯಮ ವ್ಯಾಯೋಗ  ತಾಳಮದ್ದಳೆ Read More »

error: Content is protected !!
Scroll to Top