ಪುತ್ತೂರು

ಕಾರು ಡಿಕ್ಕಿ ಹೊಡೆದು ಕುದ್ಮಾರ್ ನ ಉಸ್ಮಾನ್‍ ಮೃತ್ಯು

ಕೆದಿಲ: ಕಾರು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪೆರಮುಗೇರಿನ ಸತ್ತಿಕಲ್ ಎಂಬಲ್ಲಿ ನಡೆದಿದೆ. ಕೆದಿಲ ಗ್ರಾಮದ ಕುದ್ಮಾರ್ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಪೈಂಟರ್ ಉದ್ಯೋಗಿ ಉಸ್ಮಾನ್ (24) ಅಪಘಾತದಿಂದ ಮೃತಪಟ್ಟವರು. ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಮೊಬೈಲಲ್ಲಿ ಮಾತನಾಡುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದೆ. ಗಂಭೀರ ಗಾಯಗೊಂಡಿದ್ದ ಉಸ್ಮಾನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾರು ಡಿಕ್ಕಿ ಹೊಡೆದು ಕುದ್ಮಾರ್ ನ ಉಸ್ಮಾನ್‍ ಮೃತ್ಯು Read More »

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಪ್ತ ಕಾರ್ಯದರ್ಶಿಯಾಗಿ ಜಯಪ್ರಕಾಶ್‍ ಎನ್‍. ನೇಮಕ

ಪುತ್ತೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಆಪ್ತ ಕಾರ್ಯದರ್ಶಿಯನ್ನಾಗಿ ಜಯಪ್ರಕಾಶ್‍ ಎ. ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್ ಅಧೀನ ಕಾರ್ಯದರ್ಶಿ ಎನ್‍.ಜಯಂತಿ ಅವರು ಈ ನೇಮಕ ಮಾಡಿ ಆದೇಶಿಸಿದ್ದಾರೆ. ಜಯಪ್ರಕಾಶ್‍ ಎನ್‍. ಅವರು ಈ ಹಿಂದೆ ಡಿ.ವಿ.ಸದಾನಂದ ಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹಾಗೂ ಕೇಂದ್ರ ಸಚಿವರಾಗಿದ್ದಾಗ ಅವರ ಪಿ.ಎ. ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಪ್ತ ಕಾರ್ಯದರ್ಶಿಯಾಗಿ ಜಯಪ್ರಕಾಶ್‍ ಎನ್‍. ನೇಮಕ Read More »

ಜ.18 : ಮಹೋತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವ | ಸಮರ್ಪಣ್ ವಿಟ್ಲ ಅರ್ಪಿಸುವ ‘ಸಮರ್ಪಣ್ ಕಲೋತ್ಸವ – 2025” | ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ

ವಿಟ್ಲ : ಮಹೋತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಅಂಗವಾಗಿ ಶ್ರೀ ದೇವರ ಬಯ್ಯದ ಬಲಿ ಉತ್ಸವ ಜ.18 ಶನಿವಾರ ನಡೆಯಲಿದ್ದು, ಅಂದು ಸಮರ್ಪಣ್‍ ವಿಟ್ಲ ಅರ್ಪಿಸುವ ಸಮರ್ಪಣ್ ಕಲೋತ್ಸವ – 2025 ಜರುಗಲಿದೆ. ಕಲೋತ್ಸವದ ಅಂಗವಾಗಿ ರಾತ್ರಿ 8 ರಿಂದ ಸಾಧಕರಿಗೆ ಗೌರವಾರ್ಪಣೆ ಹಾಗೂ ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಸಮರ್ಪಣಾ ಚಾರಿಟೇಬಲ್‍ ಟ್ರಸ್ಟ್  ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ ಎಣ್ಮೂರು ಗುತ್ತು, ಬೆಂಗಳೂರು ಕೆ.ಎಸ್. ಆರ್.

ಜ.18 : ಮಹೋತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವ | ಸಮರ್ಪಣ್ ವಿಟ್ಲ ಅರ್ಪಿಸುವ ‘ಸಮರ್ಪಣ್ ಕಲೋತ್ಸವ – 2025” | ಸಮರ್ಪಣ್ ಸೇವಾ ಪ್ರಕಲ್ಪದಲ್ಲಿ ನಿರ್ಮಿಸಿದ ಮನೆ ಹಸ್ತಾಂತರ Read More »

ಜ.18 : ಕುಳಾಲು ಪ್ರೀಮಿಯರ್ ಲೀಗ್‍ ಸೀಸನ್‍ 11

ವಿಟ್ಲ : ಕೆ.ಪಿ.ಎಲ್‍. ಕುಳಾಲು ಇದರ ಆಶ್ರಯದಲ್ಲಿ ಲೀಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್‍ ಕ್ರಿಕೆಟ್ ಪಂದ್ಯಾಟ ಕುಳಾಲು ಪ್ರೀಮಿಯರ್ ಲೀಗ್‍ ಸೀಸನ್‍ 11, ಜ.18 ರಂದು ಸಂಜೆ 7 ಗಂಟೆಗೆ ಕುಳಾಲು ವಾರಾಹಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಕುಳಾಲು ಪ್ರೀಮಿಯರ್ ಲೀಗ್‍ ಸೀಸನ್‍ 11ರ ಕ್ರಿಕೇಟ್‍ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 15,555 KPL ಟ್ರೋಫಿ ಹಾಗೂ ದ್ವಿತೀಯ ಬಹುಮಾನ 11,111 KPL ಟ್ರೋಫಿಯನ್ನು ನೀಡಲಿದ್ದಾರೆ. ಉತ್ತಮ ದಾಂಡಿಗ, ಉತ್ತಮ ದಾಳಿಗಾರ, ಹಾಗೂ ಸವ್ಯಸಾಚಿ ಟ್ರೋಫಿಯನ್ನು

ಜ.18 : ಕುಳಾಲು ಪ್ರೀಮಿಯರ್ ಲೀಗ್‍ ಸೀಸನ್‍ 11 Read More »

ದಶಮಾನೋತ್ಸವದ  ಪ್ರಯುಕ್ತ ಶ್ರೀಮಾತಾ ಅರ್ಟ್ಸ್ ಉಜಿರೆ ಪ್ರಾಯೋಜಕತ್ವದಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮ

ಉಜಿರೆ : ಯಕ್ಷಭಾರತಿ(ರಿ )ಕನ್ಯಾಡಿ ಬೆಳ್ತಂಗಡಿ ಇದರ ದಶಮಾನೋತ್ಸವದ  ಪ್ರಯುಕ್ತ ಶ್ರೀಮಾತಾ ಅರ್ಟ್ಸ್ ಉಜಿರೆ ಪ್ರಾಯೋಜಕತ್ವದಲ್ಲಿ ನಾಗರಾಜ ಕಾಂಪೌಂಡ್ ಆವರಣದಲ್ಲಿ  ಜ್ಞಾನಶಕ್ತಿ ಸುಬ್ರಹ್ಮಣ್ಯ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ಶ್ರೀದೇವಿ ಮಹಾತ್ಮೆ ಬಯಲಾಟ ಮತ್ತು ಸನ್ಮಾನ ಕಾರ್ಯಕ್ರಮ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ವಹಿಸಿದ್ದರು. ಅತಿಥಿಗಳಾಗಿ ಪದ್ಮಶೇಖರ ಜೈನ್ ಕಾವಳಕಟ್ಟೆ,ಭಾಗವತ ಪಟ್ಲ ಸತೀಶ್ ಶೆಟ್ಟಿ, ಭುಜಬಲಿ ಧರ್ಮಸ್ಥಳ, ಉಜಿರೆ ಲಕ್ಷ್ಮಿ ಗ್ರೂಪ್ಸ್ ಮೋಹನ ಕುಮಾರ್, ಉಜಿರೆ ಶ್ರೀ ದುರ್ಗಾ ಇಂಡಸ್ಟ್ರೀಸ್ ರಮೇಶ್

ದಶಮಾನೋತ್ಸವದ  ಪ್ರಯುಕ್ತ ಶ್ರೀಮಾತಾ ಅರ್ಟ್ಸ್ ಉಜಿರೆ ಪ್ರಾಯೋಜಕತ್ವದಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮ Read More »

ರೆಂಜದಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ

ಪುತ್ತೂರು: ಆಟೋ ಚಾಲಕರು ಮತ್ತು ಸ್ವಚ್ಚತಾ ಕಾರ್ಮಿಕರು ಸಮಾಜದ ಎರಡು ಕಣ್ಣುಗಳಿದ್ದಂತೆ. ಅವರು ಇಲ್ಲದೇ ಇರುವ ಅದು ಪರಿಪೂರ್ಣತೆಯನ್ನು ಹೊಂದಲು ಸಾಧ್ಯವೇ ಇಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ಶಾಸಕರ ಅನುದಾನದಿಂದ ನಿರ್ಮಾಣವಾದ ನೂತನ ರಿಕ್ಷಾ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು. ಆಟೋ ಚಾಲಕರು ಸಂಕಷ್ಟದಲ್ಲಿ ನೆರವಿಗೆ ದಾವಿಸುವ ಆಪತ್ಬಾಂದವರಾದರೆ, ಸ್ವಚ್ಚತಾ ಕಾರ್ಮಿಕರು ಜನರ ಆರೋಗ್ಯ ಕಾಪಾಡುವ ರಕ್ಷಕರು. ಈ ಕಾರಣಕ್ಕೆ ಇವರನ್ನು ಸಮಾಜ ಯಾವತ್ತೂ ಅಗೌರವದಿಂದ ಕಾಣಬಾರದು. ಬೆಳಿಗ್ಗೆಯಿಂದ

ರೆಂಜದಲ್ಲಿ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ Read More »

ಜ.24: ಹೊಟೇಲ್‍ ಶ್ರೀಕೃಷ್ಣಭವನ ಸ್ಥಳಾಂತರಗೊಂಡು ಶುಭಾರಂಭ

ಪುತ್ತೂರು: ಪುತ್ತೂರಿನ ನೆಹರು ನಗರದ ನಿಮ್ಮ ಪ್ರೀತಿಯ ಹೋಟೆಲ್ ಶ್ರೀಕೃಷ್ಣಭವನ ಸ್ಥಳಾoತರಗೊಳ್ಳುತ್ತಿದೆ  20 ವರುಷಗಳಿಂದಲೂ ಅಧಿಕ ಸಮಯದಿಂದ ನೆಹರು ನಗರದಲ್ಲಿನ ಪುತ್ತೂರು-ಮಂಗಳೂರು ಹೆದ್ದಾರಿ ರಸ್ತೆಯ ಈಚೆ ಬದಿಯ ಅಶ್ವಿನಿ ಕಾಂಪ್ಲೆಕ್ಸ್’ನಲ್ಲಿ ಕಾರ್ಯಚರಿಸುತ್ತಿರುವ ಹೋಟೆಲ್ ಶ್ರೀಕೃಷ್ಣಭವನವು ಆಚೆ ಬದಿಯ ಪಟ್ಲ ಕಾಂಪ್ಲೆಕ್ಸ್’ಗೆ ಸ್ಥಳಾoತರಗೊಳ್ಳುತ್ತಿದೆ ಇದೇ 2025ನೆ ಜನವರಿ 24ರಂದು ಲಕ್ಷ್ಮೀ ಪೂಜೆಯೊಂದಿಗೆ ನಿಮ್ಮ ಉಪಸ್ಥಿತಿಯಲ್ಲಿ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡು ಶುಭಾರಂಭಗೊಳ್ಳಲಿದೆ. ಆ ಶುಭ ಘಳಿಗೆಯಲ್ಲಿ ನೀವು ನಮ್ಮೊಂದಿಗಿರಬೇಕು. ನಮ್ಮೆಲ್ಲಾ ಬಂಧು ಮಿತ್ರರಿಗೆ ಮತ್ತು ಆತ್ಮೀಯ ಗ್ರಾಹಕರಿಗೆ ಪ್ರೀತಿಯ ಸ್ವಾಗತ.

ಜ.24: ಹೊಟೇಲ್‍ ಶ್ರೀಕೃಷ್ಣಭವನ ಸ್ಥಳಾಂತರಗೊಂಡು ಶುಭಾರಂಭ Read More »

ಡೀಸೆಲ್‍ ಕಳವು ಪ್ರಕರಣ| ನಾಲ್ವರ ಬಂಧನ

ಮಂಗಳೂರು : ಮಂಗಳೂರು ತಾಲೂಕಿನ ಬಾಳ ಗ್ರಾಮದ ಟ್ಯಾಂಕರ್ ಯಾರ್ಡಿನಲ್ಲಿರುವ ಟ್ಯಾಂಕರುಗಳಿಂದ ಮಾಲಕರಿಗೆ ತಿಳಿಯದೇ ಡೀಸೆಲ್‌ನ್ನು ಕಳವು ಮಾಡಿ ದಾಸ್ತಾನು ಮಾಡಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂದಿಸಿ ಪತ್ತೆ ಹಚ್ಚಿರುವ ಮಂಗಳೂರು ನಗರ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕುಳಾಯಿಗುಡ್ಡೆಯ ಸಂತೋಷ್ (42), ಕಾಟಿಪಳ್ಳದ ಐರನ್ ರಿತೇಶ್ ಮಿನೇಜ್ (36), ಟ್ಯಾಂಕರ್ ಚಾಲಕ ಕಡಿರುದ್ಯಾವರ, ನಾರಾಯಣ ( 23 ) ಮತ್ತು ಹೆಜಮಾಡಿಯ ರವಿ ಜನಾಂದ್ರ ಪುತ್ರನ್ (59)ಎಂದು ತಿಳಿದು ಬಂದಿದೆ. ಬಂಧಿತ

ಡೀಸೆಲ್‍ ಕಳವು ಪ್ರಕರಣ| ನಾಲ್ವರ ಬಂಧನ Read More »

ರಾಜ್ಯಮಟ್ಟದ ತ್ರೋಬಾಲ್‍ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದ್ವಿತೀಯ : ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ, ದೈಹಿಕ ಶಿಕ್ಷಕರಿಗೆ ಸನ್ಮಾನ

ಪುತ್ತೂರು: ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ನಡೆದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದ 17 ರ ವಯೋಮಾನದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ ಪಡೆದು ಶಾಲೆಗೆ ಹಿರಿಮೆ ತಂದಿರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ ಶಿಕ್ಷಕರಿಗೆ ಸನ್ಮಾನ ಸಮಾರಂಭ ಬುಧವಾರ ಶಾಲಾ ಆಡಿಟೋರಿಯಂನಲ್ಲಿ ನಡೆಯಿತು. 8ನೇ ತರಗತಿಯ ಹನಾನಫೀಸ, 9ನೇ ತರಗತಿಯ ವೈಗಾ ಎಂ., ಫಾತಿಮರಿಧಾ, ನಿಹಾನಿ ಮುತ್ಲಾಜೆ, ನಿಹಾರಿಕಾ, ಪೂರ್ವಿಕಾ, 10ನೇ ತರಗತಿಯ ವಿದ್ಯಾರ್ಥಿಗಳಾದ ರೋಶ್ನಿ ಆ್ಯನೇಟ್ ಫೆರ್ನಾಂಡಿಸ್, ಪ್ರಿಯಾಂಕ ಪಿ. ಹಾಗೂ ಹಿತಾಶ್ರೀ

ರಾಜ್ಯಮಟ್ಟದ ತ್ರೋಬಾಲ್‍ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದ್ವಿತೀಯ : ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ, ದೈಹಿಕ ಶಿಕ್ಷಕರಿಗೆ ಸನ್ಮಾನ Read More »

ಪುತ್ತೂರಿನ ಬ್ಯಾನರ್ ಪ್ರಕರಣ | ಪೊಲೀಸ್ ದೌರ್ಜನ್ಯ ತನಿಖೆಗೆ  ‘ಬಿ’ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಉಡುಪಿಯ ತನಿಖಾಧಿಕಾರಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ ” ಬಿ ” ರಿಪೋರ್ಟ್ ನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ವರ್ಷದ ಹಿಂದೆ ಪುತ್ತೂರಿನ ನಗರದಲ್ಲಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಯುವಕರ ಮೇಲೆ ನಡೆದಿದ್ದ ಪೊಲೀಸ್ ದೌರ್ಜನ್ಯದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್

ಪುತ್ತೂರಿನ ಬ್ಯಾನರ್ ಪ್ರಕರಣ | ಪೊಲೀಸ್ ದೌರ್ಜನ್ಯ ತನಿಖೆಗೆ  ‘ಬಿ’ ರಿಪೋರ್ಟ್ ತಿರಸ್ಕರಿಸಿದ ನ್ಯಾಯಾಲಯ Read More »

error: Content is protected !!
Scroll to Top