ಪುತ್ತೂರು

ಪುತ್ತೂರು : ವಿದ್ಯುತ್‌ ಕಂಬದ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

ಬಲೂನ್‌ ವಿದ್ಯುತ್‌ ತಂತಿಗೆ ತಗುಲಿದಾಗ ಸಂಭವಿಸಿದ ಅವಘಡ ಪುತ್ತೂರು : ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಶ್ರೀ ಪೂಮಾಣಿ-ಕಿನ್ನಿಮಾನಿ ಬಳಿಯ ಪಡುಮಲೆ ಹಾಗೂ ಬಡಗನ್ನೂರು ಗ್ರಾಮ ಪಂಚಾಯತ್‌ನ ಮೈಂದಿನಡ್ಕ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿಯ ಪಡುಮಲೆಯಲ್ಲಿ ಭಾನುವಾರ ನಡೆದಿದೆ. ದೈವಸ್ಥಾನ ಜಾತ್ರಾ ಮಹೋತ್ಸವ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದೇವಾಲಯದ ಆವರಣದಲ್ಲಿರುವ ವಿದ್ಯುತ್ ಕಂಬದ ಬಳಿ ಕಾರು ಪಾರ್ಕಿಂಗ್‌ ಮಾಡಲಾಗಿತ್ತು. ಆ ಸಮಯದಲ್ಲಿ, ಹತ್ತಿರದ ಜಾತ್ರೆಯಿಂದ […]

ಪುತ್ತೂರು : ವಿದ್ಯುತ್‌ ಕಂಬದ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ Read More »

ಸುಮಂತ್ ಮೃತದೇಹ ‌ಸಿಕ್ಕ ಕೆರೆಯಲ್ಲಿ ನೀಲಿ ಬಣ್ಣದ ಟಾರ್ಚ್ ‌ಲೈಟ್ ಪತ್ತೆ

ಬೆಳ್ತಂಗಡಿ: ಧನು ಪೂಜೆಗೆಂದು ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಬಾಲಕ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ‌ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಂಭೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಸುಮಂತ್ ಅಸಹಜವಾಗಿ ಮೃತಪಟ್ಟ ಬಾಲಕನಾಗಿದ್ದು, ಆತನ ತಲೆಯಲ್ಲಿ ಕತ್ತಿ ಅಥವಾ ಇನ್ಯಾವುದೋ ವಸ್ತುವಿನಿಂದ ಹೊಡೆದ ಮೂರು ಗಾಯಗಳಿರುವುದು ಮತ್ತು ಅರೆಪ್ರಜ್ಞಾವಸ್ಥೆಯಲ್ಲಿ ನೀರಿಗೆ ಬಿದ್ದು ಶ್ವಾಸಕೋಶದಲ್ಲಿ ‌ನೀರು ತುಂಬಿದ ಸಂಗತಿ ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಸದ್ಯ ಪೊಲೀಸರು ಆತನ ಮೃತ ದೇಹ ಸಿಕ್ಕ ಕೆರೆಯ ನೀರನ್ನು ಖಾಲಿ

ಸುಮಂತ್ ಮೃತದೇಹ ‌ಸಿಕ್ಕ ಕೆರೆಯಲ್ಲಿ ನೀಲಿ ಬಣ್ಣದ ಟಾರ್ಚ್ ‌ಲೈಟ್ ಪತ್ತೆ Read More »

ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ಪಿಲಿಗುಂಡದಲ್ಲಿ ನಡೆದಿದೆ. ಮೃತರನ್ನು ಗೋಪಾಲ ನಾಯ್ಕ (55) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮಲಗಿದ್ದ ಇವರು ಬೆಳಗ್ಗೆ ಮನೆ ಮಂದಿ ನೋಡುವ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇವರು ಪುತ್ತೂರು ಬಸ್ಸು ನಿಲ್ದಾಣದ ಸಮೀಪ ರಿಕ್ಷಾ ಬಾಡಿಗೆ ಮಾಡುತ್ತಿದ್ದರು. ಪುತ್ತೂರು ಸಹಕಾರಿ ಸಂಘದಲ್ಲಿ ರಿಕ್ಷಾದ ಸಾಲದ ಕಂತು, ರಿಕ್ಷಾದ ವಿಮೆ ಪಾವತಿ ಸಹ ಬಾಕಿ ಇತ್ತು. ಈ ಹಿನ್ನೆಲೆ

ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಹೆರಿಗೆ ಸಮಯ ಮಗು ಮೃತ್ಯು: ಸಂದೇಹ ವ್ಯಕ್ತಪಡಿಸಿ ಪೊಲೀಸರಿಗೆ ದೂರು

ಪುತ್ತೂರು: ಹೆರಿಗೆ ಸಮಯದಲ್ಲಿ ಶಿಶು ಮೃತಪಟ್ಚ ಘಟನೆಯೊಂದು ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ನಡೆದಿದ್ದು, ಈ ಬಗ್ಗೆ ಸಂದೇಹ ವ್ಯಕ್ತಪಡಿಸಿ ಮಗುವಿನ ತಂದೆ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರ ಸಂದೇಹದ ಮೇರೆಗೆ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಲು ದೇರಳಕಟ್ಟೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಳ್ಳಾರೆಯ ಮಿಲನ್ ಎಂಬವರ ಪತ್ನಿ ಚೈತ್ರ ಅವರು ಮೊದಲನೇ ಬಾರಿ ಗರ್ಭಿಣಿಯಾಗಿದ್ದು ಸಿಟಿ ಆಸ್ಪತ್ರೆಯ ಡಾ. ಶೃತಿ ಅವರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜ. 15 ರಂದು ಚೈತ್ರ ಅವರಿಗೆ ಹೆರಿಗೆ

ಹೆರಿಗೆ ಸಮಯ ಮಗು ಮೃತ್ಯು: ಸಂದೇಹ ವ್ಯಕ್ತಪಡಿಸಿ ಪೊಲೀಸರಿಗೆ ದೂರು Read More »

ಧಾರ್ಮಿಕ, ವೈಜ್ಞಾನಿಕ ಮತ್ತು ಪಾರಂಪರಿಕವಾಗಿ‘ಮಕರ ಸಂಕ್ರಾಂತಿ’ಯ ವಿಶೇಷತೆ

ಪ್ರತಿಯೊಂದು ಜೀವಿಗಳಿಗೂ ಮರುಜನುಮವೆಂಬುವಂತೆ ಹೊಸದಿನವನ್ನು ಪರಿಚಯಿಸಲು ಬೆಳಗು ನೀಡಿ ಎಚ್ಚರಿಸುವ ದಿನಪನು ಪ್ರಕೃತಿದತ್ತವಾಗಿ ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವಂತಹ ಸಂದರ್ಭವನ್ನು “ಮಕರ ಸಂಕ್ರಾಂತಿ”ಎಂದು ಕರೆಯಲಾಗುತ್ತದೆ. ಧಾರ್ಮಿಕವಾಗಿ ಹೇಳುವುದಾದರೆ ಮಕರ ಸಂಕ್ರಾಂತಿಯಂದು ಮುಂಜಾನೆ ತನು, ಮನ, ಮನೆಗಳನ್ನು ಶುಚಿಗೊಳಿಸಿ, ಮನೆ ದೇವರಿಗೆ ಪೂಜೆ ಸಲ್ಲಿಸಿ, ಭೂತ ಚಾವಡಿಯಲ್ಲಿ ದೀಪ ಹಚ್ಚಿ ನಮಸ್ಕರಿಸಿ, ಹಿರಿಯರ ಆಶೀರ್ವಾದ ಪಡೆದು, ದೇವಸ್ಥಾನಕ್ಕೆ ಪೂಜೆಗೆ ಹೋಗಿ ಬರುವುದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಡುಬರುವ ಪದ್ಧತಿ. ಅದೇ ರೀತಿ ರಾಗಿ, ಗೋಧಿ, ಜೋಳ

ಧಾರ್ಮಿಕ, ವೈಜ್ಞಾನಿಕ ಮತ್ತು ಪಾರಂಪರಿಕವಾಗಿ‘ಮಕರ ಸಂಕ್ರಾಂತಿ’ಯ ವಿಶೇಷತೆ Read More »

ಧನುಪೂಜೆಗೆಂದು ಹೋಗಿದ್ದ ಬಾಲಕ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು ಗೊತ್ತಾ?

ಬೆಳ್ತಂಗಡಿ: ದೇವಸ್ಥಾನಕ್ಕೆ ಧನು ಪೂಜೆಗೆಂದು ಹೊರಟು ತೋಟದ ಕೆರೆಯಲ್ಲಿ ಶವ ಪತ್ತೆಯಾದ ಸಂಭೋಳ್ಯದ ಸುಮಂತ್ (16) ಎಂಬ ಬಾಲಕನ ಮರಣೋತ್ತರ ಪರೀಕ್ಷೆ ನಡೆದಿದ್ದು, ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಅಂಶ ಬಯಲಾಗಿದೆ. ಬಾಲಕನ ತಲೆಗೆ ಕತ್ತಿ ಅಥವಾ ಇನ್ಯಾವುದೋ ರೀತಿಯ ಆಯುಧದಿಂದ ಬಲವಾದ ಪೆಟ್ಟು ಬಿದ್ದಿದೆ. ಆತ ಅರೆಪ್ರಜ್ಞಾವಸ್ಥೆಯಲ್ಲಿ ಕೆರೆಗೆ ಬಿದ್ದಿರುವ ಸಾಧ್ಯತೆ ಇದ್ದು, ಆತನ ಶ್ವಾಸಕೋಶದಲ್ಲಿ ನೀರು ತುಂಬಿದ್ದ ಅಂಶ ಸಹ ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಬಾಲಕನನ್ನು ಯಾರೋ

ಧನುಪೂಜೆಗೆಂದು ಹೋಗಿದ್ದ ಬಾಲಕ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು ಗೊತ್ತಾ? Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪೆರಾಜೆ ಒಕ್ಕೂಟದ ಒಕ್ಕೂಟೋತ್ಸವ ಕಾರ್ಯಕ್ರಮ

ವಿಟ್ಲ: ಗ್ರಾಮಗಳ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಂತಹ ಸಂಘಟನೆಗಳು ಅತೀ ಅಗತ್ಯವಾಗಿದೆ. ಹೊಸ ಯೋಜನೆ, ಹೊಸ ಆಲೋಚನೆಗಳೊಂದಿಗೆ ಯುವ ಪೀಳಿಗೆಯನ್ನು ಪ್ರೊಡಕ್ಷನ್ ಈ ಸಂಘದಲ್ಲಿ ಕಲ್ಯಾಣ ಸಮಾಜಕ್ಕೆ ಇದು ದಾರಿದೀಪವಾಗಲಿ ಎಂದು ಕಿಯೋನಿಕ್ಸ್ ಬೆಂಗಳೂರು ಇದರ ನಿಕಟಪೂರ್ವ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ನುಡಿದರು‌. ಪೆರಾಜೆ ಶಾಲೆಯ ಸಭಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯದ ಪೆರಾಜೆ ಒಕ್ಕೂಟದ 20 ನೇ ವರ್ಷಾಚರಣೆ ಪ್ರಯುಕ್ತ ನಡೆಸಿದ ಒಕ್ಕೂಟೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪೆರಾಜೆ ಒಕ್ಕೂಟದ ಒಕ್ಕೂಟೋತ್ಸವ ಕಾರ್ಯಕ್ರಮ Read More »

ಧನುಪೂಜೆಗೆ ಹೋಗಿದ್ದ ಬಾಲಕ ನಾಪತ್ತೆ ಪ್ರಕರಣ: ಮೃತ ದೇಹ ಕೆರೆಯಲ್ಲಿ ಪತ್ತೆ

ಮಡಂತ್ಯಾರ್: ಬೆಳಗ್ಗೆ ಧನುಪೂಜೆಗೆಂದು ಮನೆಯಿಂದ ದೇವಸ್ಥಾನಕ್ಕೆ ಹೋದ ಬಾಲಕ ನಾಪತ್ತೆ ಪ್ರಕರಣ ದುಃಖಾಂತ್ಯವಾಗಿದ್ದು, ಬಾಲಕನ ಮೃತ ದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಎಂದಿನಂತೆ ಗೆಳೆಯರ ಜೊತೆಗೆ ಧನುಪೂಜೆಗೆ ಹೋಗುವುದಾಗಿ ಹೇಳಿ ಹೋಗಿದ್ದ ಸಂಬೋಳ್ಯದ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ 9 ನೇ ತರಗತಿ ವಿದ್ಯಾರ್ಥಿ ಸುಮಂತ್ (16) ಮೃತ ದುರ್ದೈವಿ. ಎಂದಿನಂತೆ ಆತನ ಗೆಳೆಯರು ಧನುಪೂಜೆಗೆ ಹೋಗಲು ಆತನಿಗಾಗಿ ಕಾದಿದ್ದು, ಆತ ಬರದೇ ಇದ್ದಾಗ ಅವರು ಪೂಜೆಗೆ ತೆರಳಿದ್ದಾರೆ. ಪೂಜೆ ಯಿಂದ. ಮರಳಿ ಸುಮಂತ್ ಮನೆಗೆ

ಧನುಪೂಜೆಗೆ ಹೋಗಿದ್ದ ಬಾಲಕ ನಾಪತ್ತೆ ಪ್ರಕರಣ: ಮೃತ ದೇಹ ಕೆರೆಯಲ್ಲಿ ಪತ್ತೆ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಶತ ಜಯಘೋಷ ಪಥಸಂಚಲನ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘವು ಈ ಬಾರಿಯೂ ಕೇಸರಿ ಸಂತ ವಿವೇಕಾನಂದರ ಜಯಂತಿಯನ್ನು ‌ವಿಶೇಷವಾಗಿ ಆಚರಿಸಿದ್ದು, ಆ ಪ್ರಯುಕ್ತ ಇಂದು ಸಂಘದ ಸಮೂಹ ಸಂಸ್ಥೆಗಳು ಶತ ಜಯಘೋಷ್ ಪರಿಕಲ್ಪನೆಯಡಿ ಪಥಸಂಚಲನ ನಡೆಸಿದವು. ವಿವೇಕಾನಂದ ವಿದ್ಯಾಸಂಸ್ಥೆಯ ಎಲ್ಲಾ ಶಾಲೆಗಳ ಸುಮಾರು 1500 ವಿದ್ಯಾರ್ಥಿಗಳು ಈ ವಿಶೇಷ ಪಥಸಂಚಲನದಲ್ಲಿ ಭಾಗವಹಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ ಭಟ್ ಕಲ್ಲಡ್ಕ, ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್. ಮಾಜಿ ಶಾಸಕ ಸಂಜೀವ ಮಠಂದೂರು ಪುತ್ತೂರಿನ ಅಟಲ್ ಉದ್ಯಾನ ಕೊಂಬೆಟ್ಟು‌ವಿನಲ್ಲಿ

ವಿವೇಕಾನಂದ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಶತ ಜಯಘೋಷ ಪಥಸಂಚಲನ Read More »

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ ಅವರಿಗೆ ಅಭಿನಂದನೆ

ಉಪ್ಪಿನಂಗಡಿ: ಅಮೆರಿಕಾದ ಫ್ಲೋರಿಡಾದ ಯೋಗ ಯುನಿವರ್ಸಿಟಿಯಿಂದ ಉಪವಾಸ ಮತ್ತು ಆಧ್ಯಾತ್ಮಿಕ ಪ್ರಗತಿ ಎಂಬ ವಿಷಯದ ಮೇಲೆ ಮಹಾ ಪ್ರಬಂಧವನ್ನು ಮಂಡಿಸಿ ಡಾಕ್ಟರೇಟ್ ಪದವಿಯನ್ನು ಪಡೆದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಡಾ.ಯೋಗಿಂದ್ರ ಭಟ್ ಇವರಿಗೆ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ಇಂಜಿನಿಯರ್ ಯಜ್ಞೇಶ್ ಪುತ್ತಿಲ ನೇತೃತ್ವದಲ್ಲಿ ಅಭಿನಂದನಾ ಸಮಾರಂಭ ಜರಗಿತು. ದೇವಳದ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆ ವಹಿಸಿದ್ದರು ಯಕ್ಷಧ್ರುವ ಪಟ್ಲ ಫೌಂಡೇಶನ್ ಅಧ್ಯಕ್ಷ ಭಾಗವತ ಪಟ್ಲ ಸತೀಶ್ ಶೆಟ್ಟಿ ಅಭಿನಂದನಾ

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ ಅವರಿಗೆ ಅಭಿನಂದನೆ Read More »

error: Content is protected !!
Scroll to Top