ವಿಟ್ಲ ಅಂಬೇಡ್ಕರ್ ಭವನಕ್ಕೆ ಅನುದಾನ ಮಂಜೂರು ಮಾಡಲು ವಿಳಂಬ | ಡಿ.30 ರಂದು ದಲಿತ್ ಸೇವಾ ಸಮಿತಿಯಿಂದ ಕಾಲ್ನಡಿಗೆ ಜಾಥಾ ಮೂಲಕ ಮನವಿ
ಪುತ್ತೂರು: ವಿಟ್ಲದಲ್ಲಿ ಮಂಜೂರುಗೊಂಡಿರುವ ಅಂಬೇಡ್ಕರ್ ಭವನಕ್ಕೆ ಈಗಾಗಲೇ 2 ಕೋಟಿ ಅನುದಾನ ಮಂಜೂರುಗೊಳಿಸಲು ವಿಳಂಬ ಮಾಡಿರುವ ಹಿನ್ನಲೆಯಲ್ಲಿ ಸರಕಾರದ ವಿರುದ್ಧ ಡಿ.30 ರಂದು ಕಬಕ ವೃತ್ತದಿಂದ ಶಾಸಕರ ಕಚೇರಿ ತನಕ ಕಾಲ್ನಡಿಗೆ ಜಾಥಾ ನಡೆಸಿ ಪುತ್ತೂರು ಶಾಸಕರಿಗೆ ಮನವಿ ಸಲ್ಲಿಸಲಾಗುವುದು ಎಂದು ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರಿಗೆ ಮನವಿ ಸಲ್ಲಿಸಿದ ಬಳಿಕವೂ ನಮ್ಮ ಬೇಡಿಕೆ ಈಡೇರದಿದ್ದಲ್ಲಿ ದಲಿತ ಏಳು ಸಮುದಾಯವನ್ನು ಸೇರಿಸಿಕೊಂಡು ಜನವರಿ […]










