ಪುತ್ತೂರು

ಬೈಕ್‍—ಖಾಸಗಿ ಬಸ್ ಡಿಕ್ಕಿ | ಬೈಕ್‍ ಸವಾರ ಸ್ಥಳದಲ್ಲೇ ಮೃತ್ಯು

ಕೊಕ್ಕಡ: ಖಾಸಗಿ ಬಸ್ ಹಾಗೂ ಬೈಕ್‍ ಡಿಕ್ಕಿ ಹೊಡೆದುಕೊಂಡು ಬೈಕ್‍ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ನಿವಾಸಿ ಮಾಧವ ಆಚಾರಿ (52) ಮೃತಪಟ್ಟ ಬೈಕ್‍ ಸವಾರ . ಆಂಧ್ರಪ್ರದೇಶದಿಂದ ಅಯ್ಯಪ್ಪ ವೃತಧಾರಿಗಳನ್ನು ಶಬರಿಮಲೆ ಯಾತ್ರೆಗೆ ಕೊಂಡೊಯ್ಯುವ ಖಾಸಗಿ ಬಸ್ಸು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದು, ಬೈಕ್ ಸವಾರ ಕೊಕ್ಕಡದಿಂದ ಕಾಪಿನಬಾಗಿಲಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. […]

ಬೈಕ್‍—ಖಾಸಗಿ ಬಸ್ ಡಿಕ್ಕಿ | ಬೈಕ್‍ ಸವಾರ ಸ್ಥಳದಲ್ಲೇ ಮೃತ್ಯು Read More »

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ! ಉಪಾಧ್ಯಕ್ಷರಾಗಿ ಡಾ|| ರೇಣುಕ ಪ್ರಸಾದ್ ಕೆ. ವಿ.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ಖಜಾಂಚಿಯ ಆಯ್ಕೆ ಪ್ರಕ್ರಿಯೆಯು ಡಿ 15ರಂದು ನಡೆಯಿತು. ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ. ಕೆಂಚಪ್ಪ ಗೌಡ, ಉಪಾಧ್ಯಕ್ಷ ರೇಣುಕ ಪ್ರಸಾದ್ ಕೆ. ವಿ., ಹಾಗೂ ಎಲ್. ಶ್ರೀನಿವಾಸ್ ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿ ಟಿ ಕೋನಪ್ಪ ರೆಡ್ಡಿ, ಸಹಾಯಕ ಕಾರ್ಯದರ್ಶಿ ಹನುಮಂತರಾಯಪ್ಪ. ಆರ್, ಖಜಾಂಚಿ ಎನ್. ಬಾಲಕೃಷ್ಣ ಆಯ್ಕೆಯಾಗಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ! ಉಪಾಧ್ಯಕ್ಷರಾಗಿ ಡಾ|| ರೇಣುಕ ಪ್ರಸಾದ್ ಕೆ. ವಿ. Read More »

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಕಾರ್ಯಲಯ ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಉದ್ಘಾಟನೆಗೊಂಡಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಕಾರ್ಯಾಲಯ ಉದ್ಘಾಟಿಸಿ,  ಪ್ರಥಮ ವರ್ಷ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಈ ವರ್ಷವೂ

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ Read More »

ಕಾರುಗಳ ಡಿಕ್ಕಿ | ಜಖಂಗೊಂಡ ಕಾರು

ಪುತ್ತೂರು: ಕಾರುಗಳೆರಡು ಡಿಕ್ಕಿ ಹೊಡೆದುಕೊಂಡ ಘಟನೆ ತೆಂಕಿಲ ಬೈಪಾಸ್‍ ಬಳಿ ನಡೆದಿದೆ. ಅಪಘಾತ ಪರಿಣಾಮ ಕಾರುಗಳು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾರುಗಳ ಡಿಕ್ಕಿ | ಜಖಂಗೊಂಡ ಕಾರು Read More »

ಸಾವರ್ಕರ್ ಅಖಂಡ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಹಾನ್ ಹೋರಾಟಗಾರ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ನೂತನ ‘ಸಾವರ್ಕರ್’ ಸಭಾಭವನ ಉದ್ಘಾಟನೆ

ಪುತ್ತೂರು: ವಿನಾಯಕ ದಾಮೋದರ ಸಾವರ್ಕರ್ ಅಖಂಡ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಹಾನ್ ಹೋರಾಟಗಾರ. ಅವರ ಜೀವನ ಚರಿತ್ರೆಯನ್ನು ಸರಿಯಾಗಿ ಓದದವರು ಮಾತ್ರ ಸಾವರ್ಕರ್ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಲು ಸಾಧ್ಯ. ಅವರನ್ನು ಸರಿಯಾಗಿ ತಿಳಿದವರಿಗೆ ಈ ಪ್ರಶ್ನೆ ಬರಲು ಸಾಧ್ಯವೇ ಇಲ್ಲ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ ಸಾವರ್ಕರ್ ಸಭಾಭವನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ

ಸಾವರ್ಕರ್ ಅಖಂಡ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಹಾನ್ ಹೋರಾಟಗಾರ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ನೂತನ ‘ಸಾವರ್ಕರ್’ ಸಭಾಭವನ ಉದ್ಘಾಟನೆ Read More »

ವೇತನ ವಿಳಂಬ, ಕಡಿತ | ಪುತ್ತೂರು ಕೆಎಸ್‍ ಆರ್ ಟಿಸಿ ಹೊರಗುತ್ತಿಗೆ ಚಾಲಕರಿಂದ ಮುಷ್ಕರ

ಪುತ್ತೂರು: ವೇತನ ಪಾವತಿ ವಿಳಂಬ ಮಾಡುತ್ತಿರುವ ಗುತ್ತಿಗೆ ಸಂಸ್ಥೆಗಳ ನಡೆಯನ್ನು ವಿರೋಧಿಸಿ ಪುತ್ತೂರು ಕೆಎಸ್‌ ಆರ್‌ ಟಿಸಿ ಹೊರಗುತ್ತಿಗೆ ಚಾಲಕರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಮುಷ್ಕರದ ಪರಿಣಾಮ ಪ್ರಯಾಣಿಕರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಕೆಎಸ್‌ಆರ್‌ಟಿಸಿ ಪುತ್ತೂರು ಘಟಕದಲ್ಲಿ ಹತ್ತು ಮಂದಿ ಚಾಲಕರು ಪನ್ನಗ ಮತ್ತು ಪೂಜಾಯ ಸೆಕ್ಯುರಿಟೀಸ್ ಎಂಬ ಸಂಸ್ಥೆಯ ಅಧೀನದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಮಗೆ ನೀಡುವ ವೇತನದಲ್ಲಿ ಪ್ರತಿ ತಿಂಗಳು ಒಬ್ಬೊಬ್ಬರಿಂದ 3000 ದಿಂದ 5000 ತನಕ ಕಡಿತ

ವೇತನ ವಿಳಂಬ, ಕಡಿತ | ಪುತ್ತೂರು ಕೆಎಸ್‍ ಆರ್ ಟಿಸಿ ಹೊರಗುತ್ತಿಗೆ ಚಾಲಕರಿಂದ ಮುಷ್ಕರ Read More »

ಕುಂಬ್ರ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಕುಂಬ್ರ ಸಮೀಪದ ಗಟ್ಟಮನೆ ಸನ್ಯಾಸಿಗುಡ್ಡೆಯಲ್ಲಿ ನಡೆದಿದೆ. ಸನ್ಯಾಸಿಗುಡ್ಡೆ ಕ್ವಾಟ್ರಸ್ ನಿವಾಸಿ ಮರದ ವ್ಯಾಪಾರಿ ಹೈದರಾಲಿ (35) ಆತ್ಮಹತ್ಯ ಮಾಡಿಕೊಂಡವರು. ಮನೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕುಂಬ್ರ ನಿವಾಸಿ ನೇಣು ಬಿಗಿದು ಆತ್ಮಹತ್ಯೆ Read More »

ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಮುಂಚೂಣಿಯಲ್ಲಿದೆ : ಸುರೇಶ್‍ ಶೆಟ್ಟಿ | ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎಚ್.ಆರ್.ಡಿ. ಕಾರ್ಯಕ್ರಮ

ಪುತ್ತೂರು: ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಹಿಂದಿನಿಂದಲೂ ಮುಂಚೂಣಿಯಲ್ಲಿತ್ತು. ದಕ್ಷಿಣ ಕನ್ನಡವನ್ನು ಸಹಕಾರಿ ಕ್ಷೇತ್ರದ ತೊಟ್ಟಿಲು ಎಂದು ಕರೆದಿದ್ದಾರೆ. ಕೆನರಾ ಬ್ಯಾಂಕ್, ವಿಜಯ ಬ್ಯಾಂಕ್, ಆಗಿನ ಸಿಂಡಿಕೇಟ್ ಬ್ಯಾಂಕುಗಳು ಪ್ರಾರಂಭಿಕ ಹಂತದಲ್ಲೇ ತುಂಬಾ ಹೆಸರು ಪಡೆದಿವೆ ಎಂದು ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಹೇಳಿದರು. ಅವರು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ  ಆಯೋಜಿಸಲಾದ ಎಚ್‍.ಆರ್.ಡಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಶ್ರೀಹರಿ,

ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಮುಂಚೂಣಿಯಲ್ಲಿದೆ : ಸುರೇಶ್‍ ಶೆಟ್ಟಿ | ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎಚ್.ಆರ್.ಡಿ. ಕಾರ್ಯಕ್ರಮ Read More »

ಸವಣೂರು ವಿದ್ಯಾರಶ್ಮಿಯಲ್ಲಿ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾರಶ್ಮಿ’

 ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾರಶ್ಮಿ’ ಶನಿವಾರ ನಡೆಯಿತು. ಪುತ್ತೂರು ನಗರ ಠಾಣಾ ಪೋಲೀಸ್ ಉಪ ನಿರೀಕ್ಷಕ ಅಂಜನೇಯ ರೆಡ್ಡಿ ಪಾರಿವಾಳ ಹಾರಿಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಇಂದು ಶಿಸ್ತು ಮತ್ತು ಸಮಯ ಪಾಲನೆಗಳೇ ಬದುಕಿನ ಪ್ರಮುಖ ಅಸ್ತ್ರಗಳಾಗಿದ್ದು ಅವುಗಳನ್ನು ರೂಢಿಸಿಕೊಳ್ಳಲು ಕ್ರೀಡಾ ಚಟುವಟಿಕೆಗಳು ಸಹಕಾರಿ. ಸಹಕಾರ ರತ್ನ ಸವಣೂರು ಸೀತಾರಾಮ ರೈಯವರ ಸಂಚಾಲಕತ್ವದಲ್ಲಿ ನಡೆಯುತ್ತಿರುವ ವಿದ್ಯಾರಶ್ಮಿ ಸಂಸ್ಥೆಗಳು ಅವರ ವ್ಯಕ್ತಿತ್ವದಂತೆಯೇ ಶಿಸ್ತುಬದ್ಧವಾಗಿದೆ ಮತ್ತು ಇಲ್ಲಿನ ವಿದ್ಯಾರ್ಥಿಗಳು ಬೌದ್ಧಿಕವಾಗಿ ಬಹು ಎತ್ತರದಲ್ಲಿದ್ದಾರೆ ಎಂದರು. ಮುಖ್ಯ ಅತಿಥಿಯಾಗಿ

ಸವಣೂರು ವಿದ್ಯಾರಶ್ಮಿಯಲ್ಲಿ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾರಶ್ಮಿ’ Read More »

ಕರ್ನಾಟಕ ಸರಕಾರದ ವಿಳಂಬ ನೀತಿ : ಪುತ್ತೂರು ಬಿಜೆಪಿಯಿಂದ ಡಿ.16ರಂದು ಪ್ರತಿಭಟನಾ ಸಭೆ

ಪುತ್ತೂರು : ಕರ್ನಾಟಕ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಪುತ್ತೂರು ಬಿಜೆಪಿ ವತಿಯಿಂದ ಪ್ರತಿಭಟನೆ ಡಿ 16ರಂದು ನಡೆಯಲಿದೆ.   ಕಿಲ್ಲೆ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಯ ಬಳಿ ಪ್ರತಿಭಟನೆ ನಡೆಯಲಿದೆ. ಪುತ್ತೂರು ನಗರಸಭೆಯ 2022-2023ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೊತ್ಥಾನ ಹಂತ 4 ನೇ(ಮುನಿಸಿಪಾಲಿಟಿ) ಯೋಜನೆಯ ಸಹಾಯಧನ ಬಿಡುಗಡೆಗೆ ಕರ್ನಾಟಕ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ ಪತ್ರಿಕಾ

ಕರ್ನಾಟಕ ಸರಕಾರದ ವಿಳಂಬ ನೀತಿ : ಪುತ್ತೂರು ಬಿಜೆಪಿಯಿಂದ ಡಿ.16ರಂದು ಪ್ರತಿಭಟನಾ ಸಭೆ Read More »

error: Content is protected !!
Scroll to Top