ಪುತ್ತೂರು

ಕೋಡಿಂಬಾಡಿ ಗ್ರಾಪಂ ಸಾಮಾನ್ಯ ಸಭೆ ರದ್ದು : ಕೋರಂ ಕೊರತೆ

ಪುತ್ತೂರು: ಡಿ.4 ರಂದು ನಡೆಯಬೇಕಿದ್ದ ಕೋಡಿಂಬಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಸದಸ್ಯರ ಕೋರಂ ಕೊರತೆಯ ಹಿನ್ನೆಲೆಯಲ್ಲಿ ರದ್ದುಗೊಂಡಿದೆ. 11 ಮಂದಿ ಸದಸ್ಯರನ್ನು ಗ್ರಾಮ ಪಂಚಾಯಿತಿ ಹೊಂದಿದೆ. ಈ ಪೈಕಿ ಅಧ್ಯಕ್ಷೆ ಮಲ್ಲಿಕಾ, ಉಪಾಧ್ಯಕ್ಷ ಜಯಪ್ರಕಾಶ್‍ ಬದಿನಾರು, ಸದಸ್ಯರಾದ ಉಷಾ ಲಕ್ಷ್ಮಣ ಪೂಜಾರಿ, ಪುಷ್ಪಾ  ಅವರುಗಳು ಮಾತ್ರ ಸಭೆಗೆ ಹಾಜರಾಗಿದ್ದರು. ಉಳಿದಂತೆ ಜಗನ್ನಾಥ ಶೆಟ್ಟಿ ನಡುಮನೆ, ಗೀತಾ, ಪೂರ್ಣಿಮಾ, ರಾಮಣ್ಣ ಗೌಡ ಗುಂಡೋಳೆ, ರಾಮಚಂದ್ರ ಪೂಜಾರಿ ಶಾಂತಿನಗರ, ವಿಶ್ವನಾಥ ಹಾಗೂ ಮೋಹಿನಿಯವರು ಸಭೆಗೆ ಗೈರಾಗಿದ್ದರು. ಈ ಹಿನ್ನಲೆಯಲ್ಲಿ […]

ಕೋಡಿಂಬಾಡಿ ಗ್ರಾಪಂ ಸಾಮಾನ್ಯ ಸಭೆ ರದ್ದು : ಕೋರಂ ಕೊರತೆ Read More »

ಪುತ್ತೂರು ಭಾರತೀಯ ಜನತಾ ಪಾರ್ಟಿ 145ನೇ ಬೂತ್‍ ನ ನೂತನ ಅಧ್ಯಕ್ಷರಾಗಿ ರಾಜಶೇಖರ್,  ಕಾರ್ಯದರ್ಶಿಯಾಗಿ ನವೀನ್ ರೈ ಪಂಜಳ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 145ನೇ ಬೂತ್‍ ನ ನೂತನ ಅಧ್ಯಕ್ಷರಾಗಿ ರಾಜಶೇಖರ್, ಕಾರ್ಯದರ್ಶಿಯಾಗಿ ನವೀನ್ ರೈ ಪಂಜಳ ಆಯ್ಕೆಯಾಗಿದ್ದಾರೆ. ಸಂಕಪ್ಪ ಪಂಜಳ ಅವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ಪರಮೇಶ್, ಗುರುಪ್ರಸಾದ್, ಪ್ರವೀಣ್ ಶುಭರಾತ್ರಿ ಶಿಬರ, ನವೀನ್ ರೈ ಶಿಬರ, ಉಷಾ, ಹರಿಣಿ , ಸನತ್, ಉಮಾವತಿ,

ಪುತ್ತೂರು ಭಾರತೀಯ ಜನತಾ ಪಾರ್ಟಿ 145ನೇ ಬೂತ್‍ ನ ನೂತನ ಅಧ್ಯಕ್ಷರಾಗಿ ರಾಜಶೇಖರ್,  ಕಾರ್ಯದರ್ಶಿಯಾಗಿ ನವೀನ್ ರೈ ಪಂಜಳ ಆಯ್ಕೆ Read More »

ಡಿ.28-29 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವೈಭವದ ‘ಶ್ರೀನಿವಾಸ ಕಲ್ಯಾಣೋತ್ಸವ’, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಜಂಟಿ ಆಶ್ರಯದಲ್ಲಿ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಧರ್ಮ ಸಂಗಮ, ಧಾರ್ಮಿಕ ಸಭೆ ಡಿ.28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಅವರು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್

ಡಿ.28-29 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವೈಭವದ ‘ಶ್ರೀನಿವಾಸ ಕಲ್ಯಾಣೋತ್ಸವ’, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ Read More »

ಕಟ್ಟಡವೊಂದರಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ

ಉಪ್ಪಿನಂಗಡಿ: ಓರ್ವ ವ್ಯಕ್ತಿಯ ಮೃತದೇಹ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪತ್ತೆಯಾಗಿದೆ. ಕಟ್ಟಡಕ್ಕೆ ನೀರು ಬಿಡಲು ಬಂದ ವೇಳೆ ಮೃತದೇಹ ಇರುವ  ಶಂಕೆ ತಿಳಿದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಧಾವಿಸಿ, ತನಿಕೆ ನಡೆಸುತ್ತಿದ್ದಾರೆ.

ಕಟ್ಟಡವೊಂದರಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ Read More »

ಪುತ್ತೂರು ಭಾರತೀಯ ಜನತಾ ಪಾರ್ಟಿ 148ನೇ ಬೂತುನ ನೂತನ ಅಧ್ಯಕ್ಷರಾಗಿ ವಿಮಲಾ ನಾಯಕ್ ಎಳಿಕ, ಕಾರ್ಯದರ್ಶಿಯಾಗಿ ಸಂತೋಷ್ ಮಣಿಯ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 148ನೇ ಬೂತುನ ನೂತನ ಅಧ್ಯಕ್ಷರಾಗಿ ವಿಮಲಾ ನಾಯಕ್ ಎಳಿಕ, ಕಾರ್ಯದರ್ಶಿಯಾಗಿ ಸಂತೋಷ್ ಮಣಿಯ ಆಯ್ಕೆಯಾಗಿದ್ದಾರೆ.  ಸಿಎ ಬ್ಯಾಂಕ್ ಅಧ್ಯಕ್ಷರಾದ ನವೀನ್ ಡಿ ಅವರ ಮನೆಯಲ್ಲಿ  ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ಚಂದ್ರ ಮಣಿಯ, ಮಂಜುನಾಥ, ಮಹೇಶ್ ಪ್ರಭು, ಕರುಣಾಕರ ಗೌಡ, ಶಿವಪ್ರಸಾದ್, ಸತೀಶ್ ನಾಯಕ್,

ಪುತ್ತೂರು ಭಾರತೀಯ ಜನತಾ ಪಾರ್ಟಿ 148ನೇ ಬೂತುನ ನೂತನ ಅಧ್ಯಕ್ಷರಾಗಿ ವಿಮಲಾ ನಾಯಕ್ ಎಳಿಕ, ಕಾರ್ಯದರ್ಶಿಯಾಗಿ ಸಂತೋಷ್ ಮಣಿಯ ಆಯ್ಕೆ Read More »

ಕಾಂಗ್ರೆಸ್ ನಿಂದ ಸಂಸ್ಕಾರ ಕಲಿಯಬೇಕಿಲ್ಲ : ಶಿವಕುಮಾರ್ ಪಿ.ಬಿ. | ಅದ್ದು ಪಡೀಲ್‍ ಹೇಳಿಕೆಯನ್ನು ಖಂಡಿಸುವ ಸೌಜನ್ಯ ಕಾಂಗ್ರೆಸ್‍ ಗಿಲ್ಲವೇ : ದಯಾನಂದ ಶೆಟ್ಟಿ ಉಜಿರೆಮಾರು

ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ವರ್ಸಸ್ ಕಾಂಗ್ರೆಸ್ ನಾಯಕರ ವಾಕ್ಸಮರ ಮುಂದುವರೆದಿದೆ. ಅದ್ದು ಪಡೀಲ್ ವಿರುದ್ಧ ಹೇಳಿಕೆ ನೀಡುವ ಸಂದರ್ಭ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, “ಅದ್ದು ಪಡೀಲ್ ಕೈಕಾಲು ಮುರಿಯೋದಕ್ಕೆ ಬಿಜೆಪಿ ಕಾರ್ಯಕರ್ತರಿಗೆ ಗೊತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ವಿಧಾನ ಪರಿಷತ್ ಸದಸ್ಯರ ಹೊಡಿಬಡಿ ಸಂಸ್ಕಾರವನ್ನು ಒಪ್ಪುವುದಿಲ್ಲ. ಸಾಂವಿಧಾನಿಕ ಸ್ಥಾನದಲ್ಲಿರುವವರ ಇಂತಹ ಹೇಳಿಕೆ ಒಪ್ಪಲಾಗದು ಎಂದಿದ್ದರು. ಇದೀಗ ಕಾಂಗ್ರೆಸ್ ಪಕ್ಷದ

ಕಾಂಗ್ರೆಸ್ ನಿಂದ ಸಂಸ್ಕಾರ ಕಲಿಯಬೇಕಿಲ್ಲ : ಶಿವಕುಮಾರ್ ಪಿ.ಬಿ. | ಅದ್ದು ಪಡೀಲ್‍ ಹೇಳಿಕೆಯನ್ನು ಖಂಡಿಸುವ ಸೌಜನ್ಯ ಕಾಂಗ್ರೆಸ್‍ ಗಿಲ್ಲವೇ : ದಯಾನಂದ ಶೆಟ್ಟಿ ಉಜಿರೆಮಾರು Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಜ್ಞಾನ ವಿಕಾಸ ಕಾರ್ಯಕ್ರಮದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮಂಗಳವಾರ ಬೊಳವಾರು ವಿಶ್ವಕರ್ಮ ಸಭಾ ಭನವದಲ್ಲಿ ನಡೆಯಿತು. ವಕೀಲರು, ಜೇಸಿಐಯ ರಾಷ್ಟ್ರೀಯ ಸಂಯೋಜಕಿ  ಸ್ವಾತಿ ಜಗನ್ನಾಥ ರೈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜ್ಞಾನ ವಿಕಾಸದಿಂದಾಗಿ ಮಹಿಳೆಯರ ಜೀವನ ಶೈಲಿಯಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ಯೋಜನೆಯ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮುಖಾಂತರ ಮಹಿಳೆಯರಲ್ಲಿ ನಂಬಿಕೆ, ಧೈರ್ಯ, ಆತ್ಮಸ್ಥೈರ್ಯ ವೃದ್ಧಿಯಾಗಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ Read More »

ಬಿಜೆಪಿ 147ನೇ ಬೂತ್ ನ ನೂತನ ಅಧ್ಯಕ್ಷರಾಗಿ ಗಣೇಶ್ ದೊಳ, ಕಾರ್ಯದರ್ಶಿಯಾಗಿ ಕೇಶವ ಗೌಡ ಬರೆಮೇಲು  ಆಯ್ಕೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ 147ನೇ ಬೂತ್  ನೂತನ ಅಧ್ಯಕ್ಷರಾಗಿ ಗಣೇಶ್ ದೊಳ, ಕಾರ್ಯದರ್ಶಿಯಾಗಿ ಕೇಶವ ಗೌಡ ಬರೆಮೇಲು  ಆಯ್ಕೆಯಾಗಿದ್ದಾರೆ. ಪರಮಾರ್ಗ ಯೋಗೇಶ್ ಅವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿದರು. ನೂತನ ಸದಸ್ಯರಾಗಿ ದಿನೇಶ್ ದೊಳ, ಪವಿತ್ರ ಆನಂದ ಗೌಡ, ರಮೇಶ್ ಕಾಯರ್ ಮುಗೇರು, ರಮೇಶ್ ಗೌಡ, ಸಂಧ್ಯಾ ಗಣೇಶ್ ಸಾಲಿಯಾನ್, ಹರಿಣಾಕ್ಷಿ, ಸಂದೀಪ್,

ಬಿಜೆಪಿ 147ನೇ ಬೂತ್ ನ ನೂತನ ಅಧ್ಯಕ್ಷರಾಗಿ ಗಣೇಶ್ ದೊಳ, ಕಾರ್ಯದರ್ಶಿಯಾಗಿ ಕೇಶವ ಗೌಡ ಬರೆಮೇಲು  ಆಯ್ಕೆ Read More »

ರಾಜ್ಯ ಕಾನೂನು ವಿವಿ ಅಂತರ್ ಕಾಲೇಜು ಮಟ್ಟದ ಚದುರಂಗ ಸ್ಪರ್ಧೆ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮಹಿಳಾ ತಂಡಕ್ಕೆ ದ್ವಿತೀಯ ಸ್ಥಾನ

ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ವಿಶಿಷ್ಟ ಸಾಧನೆಯನ್ನು ಮಾಡುತ್ತಿದ್ದಾರೆ. ಇದೀಗ ಅದಕ್ಕೆ ಉದಾಹರಣೆ ಎಂಬಂತೆ ಚದರಂಗ ಸ್ಪರ್ಧೆಯಲ್ಲಿ ಸಾಧನೆ ಮಾಡುವ ಮೂಲಕ ಗುರುತಿಸಿಕೊಂಡಿದ್ದಾರೆ. ಚಿತ್ರದುರ್ಗದ ಎಸ್ ಜೆ ಎಂ ಕಾನೂನು ಮಹಾವಿದ್ಯಾಲಯ ಮತ್ತು ಕರ್ನಾಟಕ ಕಾನೂನು ವಿಶ್ವ ವಿದ್ಯಾಲಯ ಆಯೋಜಿಸಿದ ಕರ್ನಾಟಕ ಕಾನೂನು ವಿವಿ ಅಂತರ್ ಕಾಲೇಜು ಪುರುಷ ಹಾಗೂ ಮಹಿಳೆಯರ ಚದರಂಗ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮಹಿಳೆಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ರಾಜ್ಯ ಕಾನೂನು ವಿವಿ ಅಂತರ್ ಕಾಲೇಜು ಮಟ್ಟದ ಚದುರಂಗ ಸ್ಪರ್ಧೆ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮಹಿಳಾ ತಂಡಕ್ಕೆ ದ್ವಿತೀಯ ಸ್ಥಾನ Read More »

ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ.

ಪುತ್ತೂರು: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮತ್ತು ದೌರ್ಜನ್ಯದಿಂದ ನೊಂದ ಅಲ್ಪಸಂಖ್ಯಾತರಾಗಿರುವ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಪುತ್ತೂರು ಬಿಜೆಪಿ ಮಂಡಲದ ವತಿಯಿಂದ ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲಾಯಿತು. ಇದೇ ಸಂದರ್ಭ ಡಿ.4ರಂದು ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯ ಯಶಸ್ಸಿಗಾಗಿ ಪ್ರಾರ್ಥನೆ ಮಾಡಲಾಯಿತು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷೆ ದಯಾನಂದ ಶೆಟ್ಟಿ ಉಜಿರುಮಾರು, ನಗರ ಮಂಡಲದ ಅಧ್ಯಕ್ಷೆ ಶಿವಕುಮಾ‌ರ್ ಕಲ್ಲಿಮಾ‌ರ್, ಶಶಿಧ‌ರ್ ನಾಯಕ್, ಸಂತೋಷ್ ರೈ ಕೈಕಾರ, ನಾಗೇಶ್ ಟಿ.ಎಸ್, ನಾಗೇಂದ್ರ ಬಾಳಿಗೆ

ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ. Read More »

error: Content is protected !!
Scroll to Top