ಪುತ್ತೂರು

ನೇತ್ರಾವತಿ ಗ್ರಾಮೀಣ ಬ್ಯಾಂಕ್‍ನ ಶ್ರೀಪತಿ ಹೆಬ್ಬಾರ್ ನಿವೃತ್ತಿ | ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‍ನಲ್ಲಿ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ನೇತ್ರಾವತಿ ಗ್ರಾಮೀಣ ಬ್ಯಾಂಕ್‍ ನ ಪ್ರಧಾನ ಕಚೇರಿಯಲ್ಲಿ ಕ್ಯಾಶಿಯರ್ ಆಗಿ ಸುಮಾರು 39 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀಪತಿ ಹೆಬ್ಬಾರ್ ಅವರಿಗೆ ಪುತ್ತೂರಿನ ಪ್ರಭು ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‍ ನಲ್ಲಿ ಬೀಳ್ಕೊಡುಗೆ ಸಮಾರಂಭ ಶನಿವಾರ ಸಂಜೆ ನಡೆಯಿತು. ಸಮಾರಂಭದಲ್ಲಿ ಶ್ರೀಪತಿ ಹೆಬ್ಬಾರ್ ದಂಪತಿಯನ್ನು ಪೇಟ ತೊಡಿಸಿ, ಹಾರ ಹಾಕಿ, ಫಲಪುಷ್ಪ, ಸ್ಮರಣಿಕೆಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನೇತ್ರಾವತಿ ಗ್ರಾಮೀಣ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ಗಿರಿಧರ […]

ನೇತ್ರಾವತಿ ಗ್ರಾಮೀಣ ಬ್ಯಾಂಕ್‍ನ ಶ್ರೀಪತಿ ಹೆಬ್ಬಾರ್ ನಿವೃತ್ತಿ | ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‍ನಲ್ಲಿ ಬೀಳ್ಕೊಡುಗೆ ಸಮಾರಂಭ Read More »

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ, ದೇವಸ್ಥಾನ, ಮಠ ಮಂದಿರಗಳ ಲೂಟಿ ಖಂಡನೀಯ | ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ದಯಾನಂದ ಶೆಟ್ಟಿ ಉಜಿರೆಮಾರು

ಪುತ್ತೂರು: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹೀನಾಯವಾಗಿ ದೌರ್ಜನ್ಯ ನಡೆಯುತ್ತಿದ್ದು, ನಾಗರಿಕ ಸಮಾಜವನ್ನು ಒಪ್ಪಿಕೊಳ್ಳವ ರೀತಿಯಲ್ಲಿರಬೇಕಾದ ಅಲ್ಲಿನ ಪ್ರಧಾನಿ ಅನಾಗರಿಕ ರೀತಿಯಲ್ಲಿ ವರ್ತಿಸುತ್ತಿರುವುದು ಖಂಡನೀಯ. ಈ ನಿಟ್ಟಿನಲ್ಲಿ ಡಿ.4 ರಂದು ಮಂಗಳೂರಿನ ಮಿನಿವಿಧಾನ ಸೌಧದ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಾಂಗ್ಲಾದಲ್ಲಿ ಹಿಂದೂಗಳನ್ನು ಮಾತ್ರ ಗುರಿಯಾಗಿಟ್ಟುಕೊಂಡು ದೌರ್ಜನ್ಯ ನಡೆಸಿ, ದೇವಸ್ಥಾನ, ಮಠ, ಮಂದಿರಗಳನ್ನು ಲೂಟಿ ಮಾಡುತ್ತಿರುವ ವಿಚಾರವನ್ನು

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ, ದೇವಸ್ಥಾನ, ಮಠ ಮಂದಿರಗಳ ಲೂಟಿ ಖಂಡನೀಯ | ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ದಯಾನಂದ ಶೆಟ್ಟಿ ಉಜಿರೆಮಾರು Read More »

ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ | ಡಿ.4 ರಂದು ಮಂಗಳೂರಿನ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ಡಾ.ಕೃಷ್ಣ ಪ್ರಸನ್ನ

ಪುತ್ತೂರು: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನ ಮಿನಿವಿಧಾನ ಸೌಧದ ಎದುರು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣ ಪ್ರಸನ್ನ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಂಗ್ಲಾದಲ್ಲಿ ಮುಸ್ಲಿಂ ಮೂಲಭೂತವಾದಿಗಳು ಹಿಂದೂಗಳನ್ನು ಗುರಿಯಾಗಿಟ್ಟುಕೊಂಡು ದೌರ್ಜನ್ಯ ನಡೆಸುತ್ತಿದ್ದಾರೆ. ಅನೇಕ ಹೆಣ್ಣು ಮಕ್ಕಳ ಮಾನಹರಣದ ಜತೆ ಮಕ್ಕಳನ್ನು ಒಳಗೊಂಡಂತೆ ಬರ್ಬರವಾಗಿ ಹತ್ಯೆ ಮಾಡುತ್ತಿದ್ದಾರೆ. ಹಿಂದೂಗಳ ಆಸ್ತಿಪಾಸ್ತಿಗಳನ್ನು ನಾಶ ಮಾಡುತ್ತಿದ್ದಾರೆ. ಹಿಂದೂಗಳ ಹಕ್ಕಿಗಾಗಿ

ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ | ಡಿ.4 ರಂದು ಮಂಗಳೂರಿನ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ಡಾ.ಕೃಷ್ಣ ಪ್ರಸನ್ನ Read More »

ಪುತ್ತೂರು ಬಿಜೆಪಿ 149ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಕೇಶವ ಮುಕ್ವೆ ಕಾರ್ಯದರ್ಶಿಯಾಗಿ ಆನಂದ ಮಣಿಯ  ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 149ನೇ ಬೂತ್‍ನ ನೂತನ ಅಧ್ಯಕ್ಷರಾಗಿ ಕೇಶವ ಮುಕ್ವೆ , ಕಾರ್ಯದರ್ಶಿಯಾಗಿ ಆನಂದ ಮಣಿಯ  ಆಯ್ಕೆಯಾಗಿದ್ದಾರೆ. ಬಜಪಲ ಕೇಶವ ಮುಕ್ವೆ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ  ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ, ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ವಿಠಲ, ಸುರೇಖಾ ರೈ, ರಕ್ಷಿತ್, ರವೀಂದ್ರ ಮುಗೆರಡ್ಕ, ಶಿವಕುಮಾರ್ ಮುಗೆರಡ್ಕ, ರಂಜಿತ್, ಗಿರೀಶ್ ಕಾರ್ಗಲ್, ಹರೀಶ್, ಜಯಲಕ್ಷ್ಮಿ,

ಪುತ್ತೂರು ಬಿಜೆಪಿ 149ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಕೇಶವ ಮುಕ್ವೆ ಕಾರ್ಯದರ್ಶಿಯಾಗಿ ಆನಂದ ಮಣಿಯ  ಆಯ್ಕೆ Read More »

ಸುಳ್ಯ – ಪುತ್ತೂರಿನಿಂದ ಪ್ರಯಾಣಿಸುವವರಿಗೆ 7:30ರ ನಂತರ ಬಸ್‍ ಇಲ್ಲ | ಬಸ್‍ಗಾಗಿ ಪ್ರಯಾಣಿಕರ ಪರದಾಟ

ಪುತ್ತೂರು: ಸುಳ್ಯ ಸೇರಿದಂತೆ ಪುತ್ತೂರು ಸುಳ್ಯ ನಡುವಿನ ಪ್ರದೇಶಗಳಿಂದ ಪುತ್ತೂರಿಗೆ ಕೆಲಸಕ್ಕೆಂದು ಬರುವ ಪ್ರಯಾಣಿಕರಿಗೆ ಅನುಕೂಲಕರವಾಗಿದ್ದ ಪುತ್ತೂರು ಸುಳ್ಯ ಸರಕಾರಿ ಲೋಕಲ್ ಬಸ್ಸುಗಳ ಸಂಚಾರದಲ್ಲಿ ರಾತ್ರಿ 7.30 ಬಳಿಕ ವ್ಯತ್ಯಯ ಉಂಟಾಗುತ್ತಿರುವುದರಿಂದ ಇದನ್ನೆ ನಂಬಿಕೊಂಡಿರುವ ಹಲವಾರು ನಿತ್ಯ ಪ್ರಯಾಣಿಕರಿಗೆ ತೊಂದರೆಯುಂಟಾಗುತ್ತಿದೆ. ನ.30ರ ಶನಿವಾರದಂದು ಇದೇ ಪರಿಸ್ಥಿತಿ ನಿರ್ಮಾಣಗೊಂಡ ಕಾರಣ ಪುತ್ತೂರಿನಿಂದ ಕಚೇರಿ ಸೇರಿದಂತೆ ವಿವಿಧ ಕೆಲಸಗಳನ್ನು ಮುಗಿಸಿ ತಮ್ಮ ಮನೆಗಳಿಗೆ ತೆರಳಬೇಕಿದ್ದ ಮಹಿಳಾ ಪ್ರಯಾಣಿಕರು ಸೇರಿದಂತೆ ಹಲವು ಪ್ರಯಾಣಿಕರು ಪುತ್ತೂರು ಬಸ್ ಸ್ಟ್ಯಾಂಡಿನಲ್ಲಿ ಪರದಾಡುವಂತಾಗಿತ್ತು. ಈ ಹಿಂದೆ

ಸುಳ್ಯ – ಪುತ್ತೂರಿನಿಂದ ಪ್ರಯಾಣಿಸುವವರಿಗೆ 7:30ರ ನಂತರ ಬಸ್‍ ಇಲ್ಲ | ಬಸ್‍ಗಾಗಿ ಪ್ರಯಾಣಿಕರ ಪರದಾಟ Read More »

ನಗರಸಭೆ ಅಧ್ಯಕ್ಷೆ ವಿರುದ್ಧ ಅವಹೇಳನಕಾರಿ ಸಂದೇಶ ರವಾನೆ | ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ

ಪುತ್ತೂರು: ಪುತ್ತೂರು ನಗರಸಭಾಧ್ಯಕ್ಷೆ ವಿರುದ್ಧ ಅವಾಚ್ಯ ಪದ ಬಳಸಿದ ಅದ್ದು ಪಡೀಲ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ಥಳೀಯ ಶಾಸಕ ಅಶೋಕ್ ಕುಮಾರ್ ರೈ ಅವರ ಆಪ್ತನೆಂಬಂತೆ ಅದ್ದು ಪಡೀಲ್ ಗುರುತಿಸಿಕೊಂಡಿದ್ದು, ಶಾಸಕರು ಇಂತಹವರಿಂದ ದೂರ ಇರುವುದು ಉತ್ತಮ. ಇಂತಹವರನ್ನು ಇಟ್ಟುಕೊಳ್ಳುವುದು ಸೊಂಟದಲ್ಲಿ ಕೆಂಡ ಕಟ್ಟಿಕೊಂಡಂತೆ ಎಂದರು. ಅದ್ದು ಪಡೀಲ್ ಬಿಜೆಪಿ ಪಕ್ಷದ ಕಮಲ ಚಿಹ್ನೆಗೆ ಹಾಗೂ ಪುತ್ತೂರಿನ ಪ್ರಥಮ

ನಗರಸಭೆ ಅಧ್ಯಕ್ಷೆ ವಿರುದ್ಧ ಅವಹೇಳನಕಾರಿ ಸಂದೇಶ ರವಾನೆ | ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ Read More »

ಯುವಕ ನಾಪತ್ತೆ : ಪ್ರಕರಣ ದಾಖಲು

ಪುತ್ತೂರು: ಪರ್ಲಡ್ಕದಲ್ಲಿ ವಾಸ್ತವ್ಯವಿರುವ ಯುವಕನೋರ್ವ ನಾಪತ್ತೆಯಾದ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೂಲತಃ ರಾಜಸ್ಥಾನ ನಿವಾಸಿ, ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್ (22) ನಾಪತ್ತೆಯಾದ ಯುವಕ. ಲೋಕೇಂದರ್ ಸಿಂಗ್ ಕಳೆದ ಎರಡು ತಿಂಗಳ ಹಿಂದೆ ಪಾಸ್ ಪೋರ್ಟ್ ಮಾಡಿಸಿಕೊಂಡಿದ್ದ. ನ.30ರಂದು ಎಂದಿನಂತೆ ಮನೆಯಲ್ಲಿ ಊಟ ಮಾಡಿ ಟಿವಿ ನೋಡಿಕೊಂಡಿದ್ದ. ಬೆಳಿಗ್ಗೆ ನೋಡುವಾಗ ಆತ ಮನೆಯಲ್ಲಿಲ್ಲದೆ ನಾಪತ್ತೆಯಾಗಿದ್ದಾನೆ. ಆತನ ಉಡುಪುಗಳು ತುಂಬಿದ್ದ ಬ್ಯಾಗ್, ದಾಖಲೆ ಪತ್ರಗಳು ಹಾಗೂ ಪಾಸ್‌ಪೋರ್ಟ್ ಸಹಿತ

ಯುವಕ ನಾಪತ್ತೆ : ಪ್ರಕರಣ ದಾಖಲು Read More »

ಕೆಲಸಕ್ಕೆಂದು ಮನೆಯಿಂದ ಹೊರ ಹೋದ ಯುವಕ ನಾಪತ್ತೆ

ಪುತ್ತೂರು: ಕೆಲಸಕ್ಕೆಂದು ಮನೆಯಿಂದ ಹೊರಹೋದ ಯುವಕನೋರ್ವ ನಾಪತ್ತೆಯಾದ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡರ ಪುತ್ರ ಸಂದೀಪ್ ಗೌಡ (29) ನಾಪತ್ತೆಯಾದವರು. ಸಂದೀಪ್ ಮರ್ದಾಳದಲ್ಲಿ ಶಾಮಿಯಾನ ಹಾಕುವ ಕೆಲಸ ಮಾಡುತ್ತಿದ್ದು ನ. 27 ರಂದು ಬೆಳಿಗ್ಗೆ ಕೆಲಸಕ್ಕೆಂದು ಮನೆಯಿಂದ ಹೋದವನು ಮನೆಗೆ ವಾಪಾಸಾಗಿರಲಿಲ್ಲ. ಈ ಬಗ್ಗೆ ವಿನಯ ಅವರಲ್ಲಿ ಸಂದೀಪ್‌ನ ತಾಯಿ ಸರೋಜ ವಿಚಾರಿಸಿದಾಗ ಸಂದೀಪ್ ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನೊಂದಿಗೆ ಕಾರಿನಲ್ಲಿ ಹೋಗಿರುವುದಾಗಿ

ಕೆಲಸಕ್ಕೆಂದು ಮನೆಯಿಂದ ಹೊರ ಹೋದ ಯುವಕ ನಾಪತ್ತೆ Read More »

ನಗರಸಭೆ ಅಧ್ಯಕ್ಷರ ವಿರುದ್ಧ ಅವಹೇಳನಕಾರಿ ಸಂದೇಶ ರವಾನೆ | ಆರೋಪಿ ಅದ್ದು ಪಡೀಲ್‍ ಪೊಲೀಸರ ವಶಕ್ಕೆ

ಪುತ್ತೂರು: ನಗರಸಭಾ ಅಧ್ಯಕ್ಷರು ಸಹಿತ ಇತರರ ವಿರುದ್ಧ ಅವಹೇಳನಕಾರಿಯಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ ರವಾನಿಸಿದ ಆರೋಪಿ ಅದ್ದು ಪಡೀಲ್‍ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾಟ್ಸಾಪ್ ಗ್ರೂಪ್ ನಲ್ಲಿ ನಗರಸಭೆ ಅಧ್ಯಕ್ಷರು ಹಾಗೂ ಇತರರ ವಿರುದ್ಧ ಅವಹೇಳನಕಾರಿಯಾಗಿದ್ದ ಬರೆದಿದ್ದರ ವಿರುದ್ಧ ನಗರಸಭೆ ಅಧ್ಯಕ್ಷೆ ಸಹಿತ ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭೆ ಸದಸ್ಯರು ಠಾಣೆ ಎದುರು ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಇದೀಗ ಅದ್ದು ಪಡೀಲ್ ನನ್ನು ಪೊಲೀಸರು

ನಗರಸಭೆ ಅಧ್ಯಕ್ಷರ ವಿರುದ್ಧ ಅವಹೇಳನಕಾರಿ ಸಂದೇಶ ರವಾನೆ | ಆರೋಪಿ ಅದ್ದು ಪಡೀಲ್‍ ಪೊಲೀಸರ ವಶಕ್ಕೆ Read More »

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನ ಸಮಾರಂಭ | ಸನ್ಮಾನ ಸ್ವೀಕರಿಸಿದ ಶಶಿಕುಮಾರ್ ರೈ ಬಾಲ್ಯೊಟ್ಟು, ಅಶ್ವಿನಿ ಎಲ್‍ ಶೆಟ್ಟಿ,,ಉದಯ ರೈ ಮಾದೋಡಿ

ಸವಣೂರು:  ದ.ಕ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲೊಟ್ಟು, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಲದ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಸವಣೂರು ಪ್ರಾ.ಕೃ.ಪತ್ತಿನ ಸಹಕಾರ ಸಂಘದ ನಿರ್ದೇಶಕ ಉದಯ ರೈ ಮಾದೋಡಿ ಹಾಗೂ ಯುಡೋ ಪ್ರಶಸ್ತಿ ಪುರಸ್ಕೃತರಾದ ಸವಣೂರು ಪ್ರಾ.ಕೃ.ಪತ್ತಿನ ಸಹಕಾರ ಸಂಘದ ನಿರ್ದೇಶಕ ಅಶ್ವಿನ್ ಎಲ್. ಶೆಟ್ಟಿಯವರಿಗೆ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನ ಸಮಾರಂಭ ಸಂಘದ ಸಭಾಭವನದಲ್ಲಿ ನಡೆಯಿತು. ಸಮಾರಂಭದಲ್ಲಿ ಶಶಿಕುಮಾರ್ ರೈ

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನ ಸಮಾರಂಭ | ಸನ್ಮಾನ ಸ್ವೀಕರಿಸಿದ ಶಶಿಕುಮಾರ್ ರೈ ಬಾಲ್ಯೊಟ್ಟು, ಅಶ್ವಿನಿ ಎಲ್‍ ಶೆಟ್ಟಿ,,ಉದಯ ರೈ ಮಾದೋಡಿ Read More »

error: Content is protected !!
Scroll to Top