ನಗರಸಭೆ ಅಧ್ಯಕ್ಷರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾನವೀಯ ಸಂದೇಶ ರವಾನೆ | ಆರೋಪಿಯನ್ನು ಬಂಧಿಸುವಂತೆ ಬಿಜೆಪಿಯಿಂದ ಠಾಣೆ ಎದುರು ಪ್ರತಿಭಟನೆ
ಪುತ್ತೂರು: ಪುತ್ತೂರು ನಗರದ ರಸ್ತೆಯ ಅವ್ಯವಸ್ಥೆಯ ಕುರಿತು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಸಹಿತ ಸದಸ್ಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾಕರವಾಗಿ ಸಂದೇಶ ರವಾನಿಸಿದ ವ್ಯಕ್ತಿಯೊಬ್ಬರ ಮೇಲೆ ಪುತ್ತೂರು ನಗರ ಠಾಣೆಗೆ ದೂರು ನೀಡಲು ಹೋದ ನಗರಸಭೆ ಅಧ್ಯಕ್ಷೆ ಲೀಲಾವತಿ ಅವರನ್ನು ದೂರು ಸ್ವೀಕರಿಸದೆ ಸತಾಯಿಸಿದ ಘಟನೆ ಇಂದು ನಡೆದಿದೆ. ಪುತ್ತೂರು ನಗರಸಭೆಯ ಆಡಳಿತ ಇಂದು ಬಿಜೆಪಿ ಕೈಯಲ್ಲಿದೆ, ಪುತ್ತೂರು ಪೇಟೆಯ ರಸ್ತೆಗಳು ನಗರಸಭೆಯ ಅಧೀನದಲ್ಲಿದೆ. ಸಿಟಿ ರಸ್ತೆಗಳನ್ನು ರಿಪೇರಿ ಮಾಡದ ನಗರಸಭೆಯ ಬಿಜೆಪಿ ಆಡಳಿತ ಕೇವಲ ಕಡ್ಲೆಕಾಯಿ […]










