ಪುತ್ತೂರು

ನಗರಸಭೆ ಅಧ್ಯಕ್ಷರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾನವೀಯ ಸಂದೇಶ ರವಾನೆ | ಆರೋಪಿಯನ್ನು ಬಂಧಿಸುವಂತೆ ಬಿಜೆಪಿಯಿಂದ ಠಾಣೆ ಎದುರು ಪ್ರತಿಭಟನೆ

ಪುತ್ತೂರು: ಪುತ್ತೂರು ನಗರದ ರಸ್ತೆಯ ಅವ್ಯವಸ್ಥೆಯ ಕುರಿತು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಸಹಿತ ಸದಸ್ಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾಕರವಾಗಿ ಸಂದೇಶ ರವಾನಿಸಿದ ವ್ಯಕ್ತಿಯೊಬ್ಬರ ಮೇಲೆ ಪುತ್ತೂರು ನಗರ ಠಾಣೆಗೆ ದೂರು ನೀಡಲು ಹೋದ ನಗರಸಭೆ ಅಧ್ಯಕ್ಷೆ ಲೀಲಾವತಿ ಅವರನ್ನು ದೂರು ಸ್ವೀಕರಿಸದೆ ಸತಾಯಿಸಿದ ಘಟನೆ ಇಂದು ನಡೆದಿದೆ. ಪುತ್ತೂರು ನಗರಸಭೆಯ ಆಡಳಿತ ಇಂದು ಬಿಜೆಪಿ ಕೈಯಲ್ಲಿದೆ, ಪುತ್ತೂರು ಪೇಟೆಯ ರಸ್ತೆಗಳು ನಗರಸಭೆಯ ಅಧೀನದಲ್ಲಿದೆ. ಸಿಟಿ ರಸ್ತೆಗಳನ್ನು ರಿಪೇರಿ ಮಾಡದ ನಗರಸಭೆಯ ಬಿಜೆಪಿ ಆಡಳಿತ ಕೇವಲ ಕಡ್ಲೆಕಾಯಿ […]

ನಗರಸಭೆ ಅಧ್ಯಕ್ಷರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಮಾನವೀಯ ಸಂದೇಶ ರವಾನೆ | ಆರೋಪಿಯನ್ನು ಬಂಧಿಸುವಂತೆ ಬಿಜೆಪಿಯಿಂದ ಠಾಣೆ ಎದುರು ಪ್ರತಿಭಟನೆ Read More »

ಉಚಿತ ಕಣ್ಣು ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ | ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ ಹಾಗೂ ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘ ನೇತೃತ್ವ

ಪುತ್ತೂರು: ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ ಹಾಗೂ ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಭಾನುವಾರ ಅನುರಾಗ ವಠಾರದಲ್ಲಿ ನಡೆಯಿತು. ಡಾ.ಅಂಬಿಕಾ ಕಣಪು ಶಿಬಿರ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ತಮ್ಮ ಕಣ್ಣಿನ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು. ವರ್ಷಕ್ಕೊಮ್ಮೆಯಾದರೂ ಕಣ್ಣಿನ ಪರೀಕ್ಷೆ ಮಾಡಿಸಬೇಕು. ಅದರಲ್ಲೂ ಮಧುಮೇಹ ಇರುವವರು ಕಡ್ಡಾಯವಾಗಿ ಮಾಡಬೇಕು. ಮಕ್ಕಳಿಗೆ ಕಣ್ಣಿನ ತಪಾಸಣೆ ನಡೆಸುವುದರಿಂದ ಮುಂದೆ ಆಗುವ ತೊಂದರೆಯನ್ನು ತಪ್ಪಿಸಬಹುದು ಎಂದರು. ಕಟ್ಟಡ ಕಾರ್ಮಿಕ

ಉಚಿತ ಕಣ್ಣು ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ | ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ ಹಾಗೂ ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘ ನೇತೃತ್ವ Read More »

ಡಿ.25 : ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಆಡಳಿತ ಕಚೇರಿ ಉದ್ಘಾಟನೆ, ವಾರ್ಷಿಕ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ

ಕಡಬ: ಒಕ್ಕಲಿಗ ಗೌಡ ಸೇವಾ ಸಂಘದ ಮಹತ್ವಾಕಾಂಕ್ಷಿ ಯೋಜನೆಯಾದ ನೂತನ ಸಮುದಾಯ ಭವನದಲ್ಲಿ ಸಂಘದ ಆಡಳಿತ ಕಛೇರಿ ಉದ್ಘಾಟನಾ ಸಮಾರಂಭ ಹಾಗೂ ವಾರ್ಷಿಕ ಕ್ರೀಡಕೂಟ ಡಿ.25 ರಂದು ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಭಾನುವಾರ ನಿವೇಶದ ನಾಗದೇವರ ಸನ್ನಿಧಿಯಲ್ಲಿ ನಡೆಯಿತು. ನಾಗಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಮಾತೃ ಸಮಿತಿ ಅಧ್ಯಕ್ಷ ಸುರೇಶ್ ಗೌಡ ಬೈಲು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು, ಕಡಬ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮದ ಸಮುದಾಯ ಭಾಂದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ನಮ್ಮ

ಡಿ.25 : ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಆಡಳಿತ ಕಚೇರಿ ಉದ್ಘಾಟನೆ, ವಾರ್ಷಿಕ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಜ.4 : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಹಾಗೂ ದಶಮಾನೋತ್ಸವ ಸಮಿತಿ ಆಶ್ರಯದಲ್ಲಿ ಜ.4 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿರುವ ಒಕ್ಕಲಿಗ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ-2024-25 ರ ಆಮಂತ್ರಣ ಪತ್ರಿಕೆ ಬಿಡುಗಡೆ ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಹಸ್ತದಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ

ಜ.4 : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ Read More »

ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ತಿ | ನಾಳೆ (ಡಿ.2) : ನೆಕ್ಕಿಲಾಡಿಯ ಆದರ್ಶ ನಗರದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿರುವ ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಗಳನ್ನು ಸಂಪರ್ಕಿಸುವ ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ಥಿಯಾಗಿ ವಾಹಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅಡ್ಡಿಯಾಗಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ಡಿ.೨ರ ಬೆಳಗ್ಗೆ ೧೦ ಗಂಟೆಗೆ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರ ಎಂಬಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮತ್ತು ಲೋಕೋಪಯೋಗಿ ಇಲಾಖೆಗೆ ಬಿಸಿ ಮುಟ್ಟಿಸುವ ಕಾರ್ಯ ನಡೆಸಲಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಜನ ಸಾಮಾನ್ಯರು ನಡೆದಾಡಲೂ ಪರದಾಡುವಂತಹ ಪರಿಸ್ಥಿತಿ

ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ತಿ | ನಾಳೆ (ಡಿ.2) : ನೆಕ್ಕಿಲಾಡಿಯ ಆದರ್ಶ ನಗರದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ Read More »

ಮಾದಕ ವಸ್ತು ಸೇವಿಸಿದ ವ್ಯಕ್ತಿಯ ಬಂಧನ

ಉಪ್ಪಿನಂಗಡಿ: ಮಾದಕ ವಸ್ತು ಮಾರಾಟದ ಜತೆಗೆ ಸೇವನೆ ಮಾಡಿದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಪೆರ್ನೆಯಲ್ಲಿ ನಡೆದಿದೆ. ಕೌಕ್ರಾಡಿ ಗ್ರಾಮದ ದೋಂತಿಲ್ಲ ಮನೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ತೌಫೀಕ್ (22) ಬಂಧಿತ ಆರೋಪಿ. ಪೊಲೀಸರು ಶನಿವಾರ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಆಟೋ ರಿಕ್ಷಾವೊಂದು ನಿಲ್ಲಿಸಲು ಸೂಚಿಸಿದ್ದರು. ರಿಕ್ಷಾ ಚಾಲಕ ಸೂಚನೆಯನ್ನು ಪರಿಗಣಿಸದೆ ಮುಂದಕ್ಕೆ ಚಲಿಸಿದಾಗ ಬೆನ್ನಟ್ಟಿದ ಪೊಲೀಸರು ಚಾಲಕ ಮುಹಮ್ಮದ್ ತೌಫೀಕ್ ನನ್ನು ವಿಚಾರಣೆಗೊಳಪಡಿಸಿದಾಗ ತಾನು ಮಾದಕ

ಮಾದಕ ವಸ್ತು ಸೇವಿಸಿದ ವ್ಯಕ್ತಿಯ ಬಂಧನ Read More »

ಸವಣೂರು ಶಕ್ತಿ ಕೇಂದ್ರದ ಬೂತ್ 65 ರ ಸಂಘಟನಾ ಪರ್ವ ಕಾರ್ಯಚಟುವಟಿಕೆಗಳ ಅಂಗವಾಗಿ ಬೂತ್ ಸಮಿತಿ ಸಭೆ

ಸವಣೂರು: ಸುಳ್ಯ ಮಂಡಲದ ಕುಟ್ರುಪ್ಪಾಡಿ ಮಹಾ ಶಕ್ತಿ ಕೇಂದ್ರ, ಸವಣೂರು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 65 ರ ಸವಣೂರು ಯುವ ಸಭಾ ಭವನದಲ್ಲಿ ಸಂಘಟನಾ ಪರ್ವ ಕಾರ್ಯ ಚಟುವಟಿಕೆಯ ಅಂಗವಾಗಿ  ಬೂತ್ ಸಮಿತಿ ಸಭೆ ನಡೆಯಿತು. ಪಕ್ಷದ ಸೂಚನೆಯ0ತೆ 12 ಜನರ ಬೂತ್ ಸಮಿತಿಯಲ್ಲಿ ಮೂವರು ಮಹಿಳೆಯರು ಮನ್ ಕೀ ಬಾತ್ ಪ್ರಮುಕ್, ಸೋಶಿಯಲ್ ಮಿಡಿಯಾ ಪ್ರಮುಖ್, ಲಾಭಾರ್ಥಿ ಪ್ರಮುಖ್ ರನ್ನು ಆಯ್ಕೆ ಮಾಡಲಾಯಿತು. ಬಿಜೆಪಿ ಸದಸ್ಯತನ, ಮತದಾರರ ಪಟ್ಟಿಗೆ ಸೇರ್ಪಡೆ ಕುರಿತಾದ ವಿಚಾರಗಳ ಕುರಿತಾಗಿ

ಸವಣೂರು ಶಕ್ತಿ ಕೇಂದ್ರದ ಬೂತ್ 65 ರ ಸಂಘಟನಾ ಪರ್ವ ಕಾರ್ಯಚಟುವಟಿಕೆಗಳ ಅಂಗವಾಗಿ ಬೂತ್ ಸಮಿತಿ ಸಭೆ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಲಕ್ಷದೀಪೋತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಲಕ್ಷದೀಪೋತ್ಸವ ಶನಿವಾರ ರಾತ್ರಿ ನಡೆಯಿತು. ದೀಪೋತ್ಸವದ ಅಂಗವಾಗಿ ದೇವಸ್ಥಾನದ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಸಂಜೆ ಬಲಿ ಉತ್ಸವ ನಡೆದು ಬಳಿಕ ಮಹಾಮಂಗಳಾರತಿ ನಡೆಯಿತು. ಮಹಾಮಂಗಳಾರತಿಯ ದೀಪದಿಂದ ದೇವಸ್ಥಾನ ರಥಬೀದಿ ಸಹಿತ ಒಳಾಂಗಣದಲ್ಲಿ ಹಲವಾರು ಸಂಘ ಸಂಸ್ಥೆಗಳ ಕಾರ್ಯಕರ್ತರಿಂದ ಅಚ್ಚುಕಟ್ಟಾಗಿ ಜೋಡಿಸಿಡಲಾದ ಹಣತೆಗೆ ಉರಿಸಲಾಯಿತು. ದೇವಸ್ಥಾನದ ಇಡಿ ವಠಾರ ಹಣತೆಯ ಬೆಳಕಿನಿಂದ  ಸೇರಿದ್ದ ಸಾವಿರಾರು ಭಕ್ತಾದಿಗಳಲ್ಲಿ ಭಕ್ತಿಯನ್ನುಂಟು ಮಾಡಿತು. ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಹೊರಾಂಗಣದಲ್ಲಿ ಕುಣಿತ ಭಜನೆ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಲಕ್ಷದೀಪೋತ್ಸವ Read More »

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಅಧ್ಯಾಪನಾ ಅಭಿವೃದ್ಧಿ ಕಾರ್ಯಕ್ರಮ ನಡೆಯಿತು.

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್ ಕೆ. ಎಂ. ದೀಪ ಬೆಳಗುವ ಮೂಲಕ ಚಾಲನೆ ನೀಡಿ, ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರು, ಶಿಕ್ಷಕ ಅಥವಾ ಉಪನ್ಯಾಸಕ ವೃತ್ತಿಯನ್ನು ಶ್ರೇಷ್ಟ ಹಾಗೂ ಪವಿತ್ರವಾದ ಹುದ್ದಯೆಂದು ಪರಿಗಣಿಸಲಾಗಿದೆ. ಉಪನ್ಯಾಸಕರಾದವರು ಪ್ರತಿಕ್ಷಣ ಕಲಿಯುತ್ತಿರಬೇಕು. ಈ ವೃತ್ತಿಯಲ್ಲಿ ತೊಡಗಿಸಿಕೊಂಡವರಿಗೆ ಇಂದಿನ ಆಧುನಿಕ ಯುಗದಲ್ಲಿ ಉತ್ತಮ ಉಪನ್ಯಾಸಕ ಎಂದು ಕರೆಸಿಕೊಳ್ಳಲು ವಿಷಯ ಜ್ಞಾನ ಮತ್ತು ಬುದ್ಧಿವಂತಿಕೆಯ ಜೊತೆಗೆ ನಿರ್ದಿಷ್ಟ ಕೌಶಲ್ಯಗಳನ್ನು ಹೊಂದಿರಬೇಕು. ಅದನ್ನು ಇಂತಹ ಅಧ್ಯಾಪನಾ ಅಭಿವೃದ್ಧಿ ಕಾರ್ಯಕ್ರಮಗಳು ತಿಳಿಸಿಕೊಡುತ್ತದೆ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಅಧ್ಯಾಪನಾ ಅಭಿವೃದ್ಧಿ ಕಾರ್ಯಕ್ರಮ ನಡೆಯಿತು. Read More »

ಒಡಿಯೂರು  ಶ್ರೀಗಳಿಂದ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು :  ಡಿ. 25 ರಂದು ಪುತ್ತೂರು ನಟರಾಜ ವೇದಿಕೆಯಲ್ಲಿ ನಡೆಯಲಿರುವ ಶ್ರೀ ಆಂಜನೇಯ ಯಕ್ಷಗಾನ ಸಂಘ ಬೊಳುವಾರು  ಇದರ  56 ನೇ ವಾರ್ಷಿಕೋತ್ಸವ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ” ವಿಂಶತಿ”ವರ್ಷದ  ಆಮಂತ್ರಣ ಪತ್ರಿಕೆಯನ್ನು  ಒಡಿಯೂರಿನಲ್ಲಿ ಪರಮಪೂಜ್ಯ ಶ್ರೀ  ಶ್ರೀ ಗುರುದೇವಾನಂದ ಸ್ವಾಮೀಜಿ ಬಿಡುಗಡೆಗೊಳಿಸಿ ಶುಭಹಾರೈಸಿದರು . ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಪ್ರಾಸ್ತವಿಕವಾಗಿ ಮಾತನಾಡಿ ಮಹಿಳಾ ಕಲಾವಿದರಿಂದ ಯಕ್ಷ ತಾಪಸಿಯರು  ಸರಣಿ ಸಂವಾದ ಕಾರ್ಯಕ್ರಮ, ಹಿರಿಯ ಕಲಾವಿದರಿಂದ ತಾಳಮದ್ದಳೆ, ಯಕ್ಷಗಾನ ಸಂಘಟಕ

ಒಡಿಯೂರು  ಶ್ರೀಗಳಿಂದ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ Read More »

error: Content is protected !!
Scroll to Top