ಪುತ್ತೂರು

ಜ.4 : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಹಾಗೂ ದಶಮಾನೋತ್ಸವ ಸಮಿತಿ ಆಶ್ರಯದಲ್ಲಿ ಜ.4 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿರುವ ಒಕ್ಕಲಿಗ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ-2024-25 ರ ಆಮಂತ್ರಣ ಪತ್ರಿಕೆ ಬಿಡುಗಡೆ ಭಾನುವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಹಸ್ತದಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ […]

ಜ.4 : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ Read More »

ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ತಿ | ನಾಳೆ (ಡಿ.2) : ನೆಕ್ಕಿಲಾಡಿಯ ಆದರ್ಶ ನಗರದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿರುವ ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಗಳನ್ನು ಸಂಪರ್ಕಿಸುವ ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ಥಿಯಾಗಿ ವಾಹಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅಡ್ಡಿಯಾಗಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ಡಿ.೨ರ ಬೆಳಗ್ಗೆ ೧೦ ಗಂಟೆಗೆ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರ ಎಂಬಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮತ್ತು ಲೋಕೋಪಯೋಗಿ ಇಲಾಖೆಗೆ ಬಿಸಿ ಮುಟ್ಟಿಸುವ ಕಾರ್ಯ ನಡೆಸಲಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಜನ ಸಾಮಾನ್ಯರು ನಡೆದಾಡಲೂ ಪರದಾಡುವಂತಹ ಪರಿಸ್ಥಿತಿ

ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ತಿ | ನಾಳೆ (ಡಿ.2) : ನೆಕ್ಕಿಲಾಡಿಯ ಆದರ್ಶ ನಗರದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ Read More »

ಮಾದಕ ವಸ್ತು ಸೇವಿಸಿದ ವ್ಯಕ್ತಿಯ ಬಂಧನ

ಉಪ್ಪಿನಂಗಡಿ: ಮಾದಕ ವಸ್ತು ಮಾರಾಟದ ಜತೆಗೆ ಸೇವನೆ ಮಾಡಿದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಪೆರ್ನೆಯಲ್ಲಿ ನಡೆದಿದೆ. ಕೌಕ್ರಾಡಿ ಗ್ರಾಮದ ದೋಂತಿಲ್ಲ ಮನೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ತೌಫೀಕ್ (22) ಬಂಧಿತ ಆರೋಪಿ. ಪೊಲೀಸರು ಶನಿವಾರ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಆಟೋ ರಿಕ್ಷಾವೊಂದು ನಿಲ್ಲಿಸಲು ಸೂಚಿಸಿದ್ದರು. ರಿಕ್ಷಾ ಚಾಲಕ ಸೂಚನೆಯನ್ನು ಪರಿಗಣಿಸದೆ ಮುಂದಕ್ಕೆ ಚಲಿಸಿದಾಗ ಬೆನ್ನಟ್ಟಿದ ಪೊಲೀಸರು ಚಾಲಕ ಮುಹಮ್ಮದ್ ತೌಫೀಕ್ ನನ್ನು ವಿಚಾರಣೆಗೊಳಪಡಿಸಿದಾಗ ತಾನು ಮಾದಕ

ಮಾದಕ ವಸ್ತು ಸೇವಿಸಿದ ವ್ಯಕ್ತಿಯ ಬಂಧನ Read More »

ಸವಣೂರು ಶಕ್ತಿ ಕೇಂದ್ರದ ಬೂತ್ 65 ರ ಸಂಘಟನಾ ಪರ್ವ ಕಾರ್ಯಚಟುವಟಿಕೆಗಳ ಅಂಗವಾಗಿ ಬೂತ್ ಸಮಿತಿ ಸಭೆ

ಸವಣೂರು: ಸುಳ್ಯ ಮಂಡಲದ ಕುಟ್ರುಪ್ಪಾಡಿ ಮಹಾ ಶಕ್ತಿ ಕೇಂದ್ರ, ಸವಣೂರು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 65 ರ ಸವಣೂರು ಯುವ ಸಭಾ ಭವನದಲ್ಲಿ ಸಂಘಟನಾ ಪರ್ವ ಕಾರ್ಯ ಚಟುವಟಿಕೆಯ ಅಂಗವಾಗಿ  ಬೂತ್ ಸಮಿತಿ ಸಭೆ ನಡೆಯಿತು. ಪಕ್ಷದ ಸೂಚನೆಯ0ತೆ 12 ಜನರ ಬೂತ್ ಸಮಿತಿಯಲ್ಲಿ ಮೂವರು ಮಹಿಳೆಯರು ಮನ್ ಕೀ ಬಾತ್ ಪ್ರಮುಕ್, ಸೋಶಿಯಲ್ ಮಿಡಿಯಾ ಪ್ರಮುಖ್, ಲಾಭಾರ್ಥಿ ಪ್ರಮುಖ್ ರನ್ನು ಆಯ್ಕೆ ಮಾಡಲಾಯಿತು. ಬಿಜೆಪಿ ಸದಸ್ಯತನ, ಮತದಾರರ ಪಟ್ಟಿಗೆ ಸೇರ್ಪಡೆ ಕುರಿತಾದ ವಿಚಾರಗಳ ಕುರಿತಾಗಿ

ಸವಣೂರು ಶಕ್ತಿ ಕೇಂದ್ರದ ಬೂತ್ 65 ರ ಸಂಘಟನಾ ಪರ್ವ ಕಾರ್ಯಚಟುವಟಿಕೆಗಳ ಅಂಗವಾಗಿ ಬೂತ್ ಸಮಿತಿ ಸಭೆ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಲಕ್ಷದೀಪೋತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಲಕ್ಷದೀಪೋತ್ಸವ ಶನಿವಾರ ರಾತ್ರಿ ನಡೆಯಿತು. ದೀಪೋತ್ಸವದ ಅಂಗವಾಗಿ ದೇವಸ್ಥಾನದ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಸಂಜೆ ಬಲಿ ಉತ್ಸವ ನಡೆದು ಬಳಿಕ ಮಹಾಮಂಗಳಾರತಿ ನಡೆಯಿತು. ಮಹಾಮಂಗಳಾರತಿಯ ದೀಪದಿಂದ ದೇವಸ್ಥಾನ ರಥಬೀದಿ ಸಹಿತ ಒಳಾಂಗಣದಲ್ಲಿ ಹಲವಾರು ಸಂಘ ಸಂಸ್ಥೆಗಳ ಕಾರ್ಯಕರ್ತರಿಂದ ಅಚ್ಚುಕಟ್ಟಾಗಿ ಜೋಡಿಸಿಡಲಾದ ಹಣತೆಗೆ ಉರಿಸಲಾಯಿತು. ದೇವಸ್ಥಾನದ ಇಡಿ ವಠಾರ ಹಣತೆಯ ಬೆಳಕಿನಿಂದ  ಸೇರಿದ್ದ ಸಾವಿರಾರು ಭಕ್ತಾದಿಗಳಲ್ಲಿ ಭಕ್ತಿಯನ್ನುಂಟು ಮಾಡಿತು. ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಹೊರಾಂಗಣದಲ್ಲಿ ಕುಣಿತ ಭಜನೆ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಲಕ್ಷದೀಪೋತ್ಸವ Read More »

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಅಧ್ಯಾಪನಾ ಅಭಿವೃದ್ಧಿ ಕಾರ್ಯಕ್ರಮ ನಡೆಯಿತು.

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್ ಕೆ. ಎಂ. ದೀಪ ಬೆಳಗುವ ಮೂಲಕ ಚಾಲನೆ ನೀಡಿ, ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರು, ಶಿಕ್ಷಕ ಅಥವಾ ಉಪನ್ಯಾಸಕ ವೃತ್ತಿಯನ್ನು ಶ್ರೇಷ್ಟ ಹಾಗೂ ಪವಿತ್ರವಾದ ಹುದ್ದಯೆಂದು ಪರಿಗಣಿಸಲಾಗಿದೆ. ಉಪನ್ಯಾಸಕರಾದವರು ಪ್ರತಿಕ್ಷಣ ಕಲಿಯುತ್ತಿರಬೇಕು. ಈ ವೃತ್ತಿಯಲ್ಲಿ ತೊಡಗಿಸಿಕೊಂಡವರಿಗೆ ಇಂದಿನ ಆಧುನಿಕ ಯುಗದಲ್ಲಿ ಉತ್ತಮ ಉಪನ್ಯಾಸಕ ಎಂದು ಕರೆಸಿಕೊಳ್ಳಲು ವಿಷಯ ಜ್ಞಾನ ಮತ್ತು ಬುದ್ಧಿವಂತಿಕೆಯ ಜೊತೆಗೆ ನಿರ್ದಿಷ್ಟ ಕೌಶಲ್ಯಗಳನ್ನು ಹೊಂದಿರಬೇಕು. ಅದನ್ನು ಇಂತಹ ಅಧ್ಯಾಪನಾ ಅಭಿವೃದ್ಧಿ ಕಾರ್ಯಕ್ರಮಗಳು ತಿಳಿಸಿಕೊಡುತ್ತದೆ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಅಧ್ಯಾಪನಾ ಅಭಿವೃದ್ಧಿ ಕಾರ್ಯಕ್ರಮ ನಡೆಯಿತು. Read More »

ಒಡಿಯೂರು  ಶ್ರೀಗಳಿಂದ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು :  ಡಿ. 25 ರಂದು ಪುತ್ತೂರು ನಟರಾಜ ವೇದಿಕೆಯಲ್ಲಿ ನಡೆಯಲಿರುವ ಶ್ರೀ ಆಂಜನೇಯ ಯಕ್ಷಗಾನ ಸಂಘ ಬೊಳುವಾರು  ಇದರ  56 ನೇ ವಾರ್ಷಿಕೋತ್ಸವ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ” ವಿಂಶತಿ”ವರ್ಷದ  ಆಮಂತ್ರಣ ಪತ್ರಿಕೆಯನ್ನು  ಒಡಿಯೂರಿನಲ್ಲಿ ಪರಮಪೂಜ್ಯ ಶ್ರೀ  ಶ್ರೀ ಗುರುದೇವಾನಂದ ಸ್ವಾಮೀಜಿ ಬಿಡುಗಡೆಗೊಳಿಸಿ ಶುಭಹಾರೈಸಿದರು . ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯ ಪ್ರಾಸ್ತವಿಕವಾಗಿ ಮಾತನಾಡಿ ಮಹಿಳಾ ಕಲಾವಿದರಿಂದ ಯಕ್ಷ ತಾಪಸಿಯರು  ಸರಣಿ ಸಂವಾದ ಕಾರ್ಯಕ್ರಮ, ಹಿರಿಯ ಕಲಾವಿದರಿಂದ ತಾಳಮದ್ದಳೆ, ಯಕ್ಷಗಾನ ಸಂಘಟಕ

ಒಡಿಯೂರು  ಶ್ರೀಗಳಿಂದ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ Read More »

ಪುತ್ತೂರು ಬಿಜೆಪಿ 144ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಚಿದಾನಂದ ಗೌಡ, ಕಾರ್ಯದರ್ಶಿಯಾಗಿ ರಾಜ್ ಕಿರಣ್ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 144ನೇ ಬೂತ್‍ನ ನೂತನ ಅಧ್ಯಕ್ಷರಾಗಿ ಚಿದಾನಂದ ಗೌಡ, ಕಾರ್ಯದರ್ಶಿಯಾಗಿ ರಾಜ್ ಕಿರಣ್ ಆಯ್ಕೆಯಾಗಿದ್ದಾರೆ. ಬಜಪಲ ಶರತ್ ಚಂದ್ರ ಬೈಪಡಿತಯ ಅವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ಪುಷ್ಪಾವತಿ, ಧನಂಜಯ ಬಜಪಲ, ಶರತ್ ಚಂದ್ರ ಬೈಪಡಿತ್ತಾಯ , ಹರೀಶ್ ನಾಯಕ್, ಪ್ರವೀಣ್ ನಾಯಕ್, ದೇವಿ

ಪುತ್ತೂರು ಬಿಜೆಪಿ 144ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಚಿದಾನಂದ ಗೌಡ, ಕಾರ್ಯದರ್ಶಿಯಾಗಿ ರಾಜ್ ಕಿರಣ್ ಆಯ್ಕೆ Read More »

ಧರ್ಮಸ್ಥಳ ವಸ್ತು ಪ್ರದರ್ಶನ ಮಂಟಪದಲ್ಲಿ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ತಾಳಮದ್ದಳೆ

ಪುತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ರಾಜ್ಯಮಟ್ಟದ  ವಸ್ತು ಪ್ರದರ್ಶನ ಮಂಟಪದಲ್ಲಿ ಪುತ್ತೂರು  ಬೊಳುವಾರು  ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವಿಂಶತಿ ಸಂಭ್ರಮದ 15ನೇ ಸರಣಿ  ತಾಳಮದ್ದಳೆ “ಶರಸೇತುಬಂಧ ಜರಗಿತು. ಭಾಗವತರಾಗಿ ಮುರಳೀಕೃಷ್ಣ ಶಾಸ್ತ್ರಿ ತೆಂಕಬೈಲು, ಚೆಂಡೆ, ಮದ್ದಲೆಗಳಲ್ಲಿ ಪಿ.ಟಿ. ಜಯರಾಮ್ ಭಟ್, ಪಿ.ಜಿ.ಜಗನ್ನಿವಾಸ ರಾವ್, ಮುಮ್ಮೇಳದಲ್ಲಿ ಶುಭಾ ಅಡಿಗ (ಹನೂಮಂತ), ಪ್ರೇಮಲತಾರಾವ್ (ಶ್ರೀ ರಾಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ಅರ್ಜುನ),  ಹರಿಣಾಕ್ಷಿ .ಜೆ.ಶೆಟ್ಟಿ (ವೃದ್ಧ ಬ್ರಾಹ್ಮಣ) ಭಾಗವಹಿಸಿದ್ದರು. ಸಂಘದ ನಿರ್ದೇಶಕ ಭಾಸ್ಕರ

ಧರ್ಮಸ್ಥಳ ವಸ್ತು ಪ್ರದರ್ಶನ ಮಂಟಪದಲ್ಲಿ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ತಾಳಮದ್ದಳೆ Read More »

 ಗುರುಪ್ರಕಾಶ್‍ ಅನಾರೋಗ್ಯದಿಂದ ನಿಧನ

ಪುತ್ತೂರು : ಅನಾರೋಗ್ಯದಿಂದ ಬಳಲುತ್ತಿದ್ದ ಗುರುಪ್ರಕಾಶ್‍ ನಿಧನರಾಗಿದ್ದಾರೆ. ಪುತ್ತೂರು ಎಪಿಎಂಸಿ ರಸ್ತೆ ನಿವಾಸಿ ಕೆಲ ಸಮಯದಿಂದ ಅನಾರೋಗ್ಯವಾಗಿದ್ದರು. ಮೃತರು ತಾಯಿ , ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

 ಗುರುಪ್ರಕಾಶ್‍ ಅನಾರೋಗ್ಯದಿಂದ ನಿಧನ Read More »

error: Content is protected !!
Scroll to Top