ಪುತ್ತೂರು

ಅಂತರ್ ವಿಶ್ವವಿದ್ಯಾಲಯ ವೈಟ್‌ ಲಿಫ್ಟಿಂಗ್‌ ಸ್ಪರ್ಧೆ : ಫಿಲೋಮಿನಾ ಕಾಲೇಜಿನ ಸ್ಪಂದನ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ದ್ವಿತೀಯ ಬಿಎಸ್ಸಿ ಯ ಸ್ಪಂದನ 2024-25ನೇ ಸಾಲಿನ ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯ ವೈಟ್‌ ಲಿಫ್ಟಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಆಂಧ್ರಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ಸ್ಪರ್ಧೆಯ 45 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿರುವ ಸ್ಪಂದನಾ ಸಂತ ಫಿಲೋಮಿನಾದ ಮಹಿಳಾ ವೈಟ್  ಲಿಫ್ಟರ್ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಮೊದಲ ಬಾರಿಗೆ ಪದಕವನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ ಸಂಚಾಲಕ ರೆ.ಫಾ.ಲಾರೆನ್ಸ್ ಮಸ್ಕರೇನ್ಹಸ್, ಪ್ರಾಂಶುಪಾಲ  ರೆ. ಡಾ.ಆಂಟನಿ ಪ್ರಕಾಶ್ ಮೊಂತೇರೊ ಸೇರಿದಂತೆ ಕಾಲೇಜು ಅಧ್ಯಾಪಕ ವೃಂದ, ಅಧ್ಯಾಪಕೇತರ ವೃಂದ ಹಾಗೂ ವಿದ್ಯಾರ್ಥಿ ಅಭಿನಂದನೆ ಸಲ್ಲಿಸಿದ್ದಾರೆ.

ಅಂತರ್ ವಿಶ್ವವಿದ್ಯಾಲಯ ವೈಟ್‌ ಲಿಫ್ಟಿಂಗ್‌ ಸ್ಪರ್ಧೆ : ಫಿಲೋಮಿನಾ ಕಾಲೇಜಿನ ಸ್ಪಂದನ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಪುತ್ತೂರು ಬಿಜೆಪಿ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆಯಾದರು. ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದೇವಪ್ಪ ಗೌಡ ಓಲಾಡಿಯವರ ಮನೆಯಲ್ಲಿ ನಡೆದ ಆಯ್ಕೆ  ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಿಳಾ ಮೋರ್ಚಾದ  ಅಧ್ಯಕ್ಷೆ ಯಶೋಧ ಗೌಡ ಪ್ರಭಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಬೂತ್ ಸದಸ್ಯರಾಗಿ ಪ್ರವೀಣ್ ಕಲ್ಕಾರ್, ರೂಪ ಪರಕಮೆ, ಹರೀಶ್ ಕರ್ಬಡ್ಕ, ಪ್ರವೀಣ್ ಶೆಟ್ಟಿ ಕುದುರೆಪಾಡ್ಡಿ,

ಪುತ್ತೂರು ಬಿಜೆಪಿ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆ Read More »

ಸಂಸ್ಥೆಯ  ಇತಿಹಾಸವನ್ನು ತಿಳಿದಾಗ ಮಾತ್ರ ಪ್ರಗತಿ ಸಾಧ್ಯ : ಸಂಜೀವ ಮಠoದೂರು

ಉಪ್ಪಿನಂಗಡಿ : ಉಪ್ಪಿನಂಗಡಿ ಬೋರ್ಡ್ ಹೈಸ್ಕೂಲ್ 1957ರಲ್ಲಿ ಸ್ಥಾಪನೆಯಾಗಿದ್ದು ಇಂದು ಪದವಿ ಪೂರ್ವ ವಿಭಾಗವನ್ನು ಹೊಂದಿ  ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದೆ. ಶೈಕ್ಷಣಿಕ ಸಾಧನೆ, ಕ್ರೀಡೆ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ರಾಜ್ಯ ರಾಷ್ಟ್ರಮಟ್ಟದಲ್ಲಿ ಮಿಂಚಿದ ಪ್ರತಿಭೆಗಳನ್ನು ಈ ಸಂಸ್ಥೆ ನೀಡಿದೆ. ಶಾಲೆಯ ಸ್ಥಾಪನೆಗೆ ಅಂದು ಭೂದಾನ ಮಾಡಿದ ಬೆನಗಲ್ ಸಹೋದರರು, ನೇತೃತ್ವ ವಹಿಸಿದ ವೇಣುಗೋಪಾಲ್ ನಾಯಕ್, ವಿದ್ಯಾಭಿಮಾನಿಗಳ ಕೊಡುಗೆ ಮತ್ತು  ಅಧ್ಯಾಪಕ ವೃಂದದ  ಶ್ರಮವನ್ನು ಸದಾ ಸ್ಮರಿಸುವ ಅವಶ್ಯಕತೆ ಇದೆಯೆಂದು ಪುತ್ತೂರು ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ 

ಸಂಸ್ಥೆಯ  ಇತಿಹಾಸವನ್ನು ತಿಳಿದಾಗ ಮಾತ್ರ ಪ್ರಗತಿ ಸಾಧ್ಯ : ಸಂಜೀವ ಮಠoದೂರು Read More »

ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಕರೆ ಉತ್ಸವ ಮಂಗಳವಾರ ಮುಸ್ಸಂಜೆ ನಡೆಯಿತು.

ಪುತ್ತೂರು : ತುಳುನಾಡಿನಲ್ಲಿ ಭತ್ತವನ್ನು ಬೇಸಾಯ ಮಾಡುವ ರೈತಾಪಿ ಜನರು ಆರಾಧಿಸುತ್ತಾ ಬಂದಿರುವ ಆಚರಣೆಯಲ್ಲಿ ಪೂಕರೆ ಹಾಕುವ ಪದ್ಧತಿಯೂ ಒಂದು. ಫಲವಂತಿಕೆಯ ಹಿನ್ನೆಲೆಯಲ್ಲಿ ಸುಗ್ಗಿ ಪೂಕರೆಯ ವೇಳೆ ಬೇಸಾಯದ ದೈವವಾಗಿ ಎರುಕೋಲ ದೈವದ ಆರಾಧನೆ ನಡೆಯುತ್ತದೆ. ದೇವರ ಮಾರು ಗದ್ದೆಯಲ್ಲಿ ಪೂಕರೆ ಉತ್ಸವದ ಆಚರಣೆಯೂ ಇಲ್ಲಿನ ಸಂಪ್ರದಾಯಕ್ಕೆ ಸೇರಿದೆ. ಪೂಕರೆಯ ಅಂಗವಾಗಿ ಹಿಂದಿನ ಕಾಲದಿಂದ ನಡೆದು ಬಂದ ಈ ಕ್ಷೇತ್ರದ ಪೂರ್ವಶಿಷ್ಟ ಸಂಪ್ರದಾಯದಂತೆ ಪುಷ್ಪಕನ್ನಡಿ ರಹಿತವಾಗಿ ನಿತ್ಯದ ಬಲಿಮೂರ್ತಿಗೆ ಆಭರಣ ಮತ್ತು ವಿವಿಧ ಹೂವುಗಳಿಂದ ಓರಣವಾಗಿ ಅಲಂಕರಿಸಿ

ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಕರೆ ಉತ್ಸವ ಮಂಗಳವಾರ ಮುಸ್ಸಂಜೆ ನಡೆಯಿತು. Read More »

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ | ಆಟೋಟ ಸ್ಪರ್ಧೆ

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು ಇದರ ಶತಮಾನೋತ್ಸವದ ಅಂಗವಾಗಿ ಆಟೋಟ ಸ್ಪರ್ಧೆ ನಾಣಿಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಹಕಾರಿ ಸಂಘದ ವ್ಯಾಪ್ತಿಯ ನಾಣಿಲ ಶಾಲೆಗೆ ಸಂಬಂಧಪಟ್ಟ ಆಟೋಟ ಸ್ಪರ್ಧೆ ನಡೆಯಿತು. ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಸುಂದರ ದೇವಸ್ಯ, ವೀಣಾ ಅಂಬುಲ, ಶಾಲಾ ಮುಖ್ಯ ಶಿಕ್ಷಕ ಪದ್ಮಯ್ಯಗೌಡ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯ ಪುರಂದರ ಅಂಬುಲ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು .

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ | ಆಟೋಟ ಸ್ಪರ್ಧೆ Read More »

ಕಾಳಿಕಾಂಬ ಯಕ್ಷಗಾನ  ಕಲಾಸೇವಾ ಸಂಘದಿಂದ ಮಹಾಭಾರತ ಸರಣಿ ತಾಳಮದ್ದಳೆ

ಹಾಸ್ಯಗಾರ ದಿ.ಬಂಟ್ವಾಳ ಜಯರಾಮ ಆಚಾರ್ಯರಿಗೆ ಶ್ರದ್ಧಾಂಜಲಿ  ಅರ್ಪಣೆ ಸುಳ್ಯ : ಹಾಸ್ಯಗಾರ ಬಂಟ್ವಾಳ ಜಯರಾಮ ಆಚಾರ್ಯರು ತೆಂಕುತಿಟ್ಟಿನ ಹಾಸ್ಯಗಾರರಲ್ಲಿ ಅನನ್ಯ ಸ್ಥಾನವನ್ನು ಪಡೆದ ಕಲಾವಿದರಾಗಿದ್ದು ಯಕ್ಷಗಾನದಲ್ಲಿ ಹಾಸ್ಯ ಪಾತ್ರಗಳನ್ನು ಮಾದರಿಯಾಗಿ ರೂಪಿಸಿದವರು. ಈ ಪರಂಪರೆಯನ್ನು ಮುಂದುವರಿಸುವ ಹಾಸ್ಯ ಕಲಾವಿದರು ಯಕ್ಷರಂಗದಲ್ಲಿ ಮೂಡಿ ಬರಬೇಕೆಂದು  ಜಯರಾಮ ಆಚಾರ್ಯರ ಮೂರು ದಶಕಗಳ ಒಡನಾಡಿ ಕಲಾವಿದ ಪಾತಾಳ ಅಂಬಾಪ್ರಸಾದ್ ತಿಳಿಸಿದರು.  ಕೊಂಬೋಟು ಕುಟುಂಬಸ್ಥರ ತರವಾಡು ಮನೆ ಉಬರಡ್ಕ ಸುಳ್ಯ ಇಲ್ಲಿ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ಜರಗಿದ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ

ಕಾಳಿಕಾಂಬ ಯಕ್ಷಗಾನ  ಕಲಾಸೇವಾ ಸಂಘದಿಂದ ಮಹಾಭಾರತ ಸರಣಿ ತಾಳಮದ್ದಳೆ Read More »

ಗ್ರಾಮ ಪಂಚಾಯಿತಿ ಉಪಚುನಾವಣೆ | ಅರಿಯಡ್ಕ, ಕೆದಂಬಾಡಿ ಎರಡೂ ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಜಯಭೇರಿ

ಪುತ್ತೂರು: ಅರಿಯಡ್ಕ ಹಾಗೂ ಕೆದಂಬಾಡಿ ಗ್ರಾ.ಪಂಗೆ ನಡೆದ ಉಪಚುನಾವಣೆಯಲ್ಲಿ ಎರಡು ಗ್ರಾ.ಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಕೆದಂಬಾಡಿ ಗ್ರಾ.ಪಂನ ವಾರ್ಡ್-4 ರಲ್ಲಿ ಸಾಮಾನ್ಯ ಮೀಸಲು ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೋಂತರೋ 272 ಮತ ಪಡೆದು 30 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ. ಮೋಹನ್ 242 ಹಾಗೂ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ರಫೀಕ್ ನಂಜೆ 108 ಮತಗಳನ್ನು ಪಡೆದುಕೊಂಡಿದ್ದಾರೆ. 11 ಮತ ತಿರಸ್ಕೃತಗೊಂಡಿದೆ. ಅರಿಯಡ್ಕ ಗ್ರಾ.ಪನಲ್ಲಿ ಕಾಂಗ್ರೆಸ್ ಬೆಂಬಲಿತ

ಗ್ರಾಮ ಪಂಚಾಯಿತಿ ಉಪಚುನಾವಣೆ | ಅರಿಯಡ್ಕ, ಕೆದಂಬಾಡಿ ಎರಡೂ ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಜಯಭೇರಿ Read More »

ಜ.12 : ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ, ಧರ್ಮದೈವಗಳ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ ಹಾಗೂ ಧರ್ಮ ದೈವಗಳ ದೈವಸ್ಥಾನದಲ್ಲಿ ಜ.12 ರಂದು ನಡೆಯಲಿರುವ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಲ್ಲೇಗ ಮಾಡತ್ತಾರಿನಲ್ಲಿ ನಡೆಯಿತು. ದೈವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಆಮಂತ್ರಣ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಅರ್ಚಕ ಕೃಷ್ಣ ಶೇವಿರೆ, ಅಧ್ಯಕ್ಷ ಯು. ಶ್ರೀಧರ್ ಹೆಗ್ಡೆ ಉಳಿಯ, ಕಾರ್ಯದರ್ಶಿ ಉಮೇಶ್ ಆಚಾರ್ಯ ಕಗ, ಉಪಾಧ್ಯಕ್ಷ ಜಿನ್ನಪ್ಪ ಪೂಜಾರಿ ಮುರ, ತಿಮ್ಮಪ್ಪ ಗೌಡ ಪೋಳ್ಯ ಹಾಗೂ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು

ಜ.12 : ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ, ಧರ್ಮದೈವಗಳ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ರಾಷ್ಟ್ರಮಟ್ಟದ ಗಣಿತ ಮೇಳ – ಅಂಬಿಕಾ ವಿದ್ಯಾಲಯದ ಸಾನ್ವಿ ಜಿ. ಪ್ರಥಮ

ಪುತ್ತೂರು :  ರಾಷ್ಟ್ರಮಟ್ಟದ  ಗಣಿತ ಮೇಳ ಬಾಲ ವರ್ಗ ಗಣಿತ ಮಾದರಿ ಪ್ರದರ್ಶನದ ರಾಷ್ಟ್ರಮಟ್ಟ ಸ್ಪರ್ಧೆಯಲ್ಲಿ ಬಪ್ಪಳಿಗೆಯ  ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಆರನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಜಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಒರಿಸ್ಸಾದ – ಅಂಗುಲ್ ಸರಸ್ವತಿ ಶಿಶುಮಂದಿರದಲ್ಲಿ ರಾಷ್ಟ್ರಮಟ್ಟದ  ಗಣಿತ ಮೇಳ ಬಾಲ ವರ್ಗ ಗಣಿತ ಮಾದರಿ ಪ್ರದರ್ಶನದ ರಾಷ್ಟ್ರಮಟ್ಟ ಸ್ಪರ್ಧೆ ನಡೆಯಿತು. ಸಾನ್ವಿ ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್ , ಸುಮಿತ್ರ ದಂಪತಿ

ರಾಷ್ಟ್ರಮಟ್ಟದ ಗಣಿತ ಮೇಳ – ಅಂಬಿಕಾ ವಿದ್ಯಾಲಯದ ಸಾನ್ವಿ ಜಿ. ಪ್ರಥಮ Read More »

ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರವಿಪ್ರಕಾಶ್ ವಿಟ್ಲ  ಆಯ್ಕೆ

ವಿಟ್ಲ : ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರವಿಪ್ರಕಾಶ್ ವಿಟ್ಲ ಆಯ್ಕೆಯಾದರು. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನೈತೊಟ್ಟು, ಉಪಾಧ್ಯಕ್ಷರಾದ ಸಂಗೀತ ಪಣೆಮಜಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರುಣಾಕರ ಹಾಗೂ ಸ್ಥಾಯಿ ಸಮಿತಿ ಸದಸ್ಯರಾದ ಅರುಣ್ ವಿಟ್ಲ ಅಶೋಕ್ ಶೆಟ್ಟಿ, ಹರೀಶ್, ಜಯಂತ , ವಿಜಯಲಕ್ಷ್ಮಿ, ಉಪಸ್ಥಿತರಿದ್ದರು.

ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರವಿಪ್ರಕಾಶ್ ವಿಟ್ಲ  ಆಯ್ಕೆ Read More »

error: Content is protected !!
Scroll to Top