ಹೊರ ಜಿಲ್ಲೆಗಳಿಂದ ಬಂದ ಜೆಸಿಬಿ ಅಸಂಘಟಿತರನ್ನು ಓಡಿಸುವ ಬೆದರಿಕೆ | ಇಂತಹಾ ಘಟನೆ ಮರುಕಳಿಸಿದರೆ ಗೂಂಡಾ ಕಾಯ್ದೆಯಡಿ ಬಳ್ಳಾರಿ ಜೈಲಿಗೆ ಹಾಕಲು ಸರಕಾರಕ್ಕೆ ಆಗ್ರಹ : ಕಾವು ಹೇಮನಾಥ ಶೆಟ್ಟಿ
ಪುತ್ತೂರು: ಹೊರ ಜಿಲ್ಲೆಯಿಂದ ಅಂದರೆ ಘಟ್ಟ ಪ್ರದೇಶದಿಂದ ಬಂದು ಜೆಸಿಬಿ, ಹಿಟಾಚಿ ಇಟ್ಟುಕೊಂಡು ಕೆಲಸ ಮಾಡುತ್ತಿರುವವರ ಮೇಲೆ ಸ್ಥಳೀಯವಾಗಿ ಕೆಲವೊಂದು ವ್ಯಕ್ತಿಗಳು ದಬ್ಬಾಳಿಕೆ ಮಾಡುವ ಮೂಲಕ ಒಂದು ರೀತಿಯ ಗೊಂದಲ ಉಂಟು ಮಾಡುತ್ತಿದ್ದು, ಇಂತಹಾ ಘಟನೆಗಳು ಮುಂದಿನ ದಿನಗಳಲ್ಲಿ ಪುನಾರಾವರ್ತನೆಯಾದಲ್ಲಿ ಅಂತಹವರ ವಿರುದ್ಧ ಗೂಂಡಾ ಕಾಯ್ದೆಯಡಿ ಬಳ್ಳಾರಿ ಜೈಲಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ. ಅವರು ಈ ಕುರಿತು ಹೊರ ಜಿಲ್ಲೆಯಿಂದ ಬಂದ ಜೆಸಿಬಿ ಮಾಲಕರು ಹಾಗೂ ಆಪರೇಟರ್ಗಳಿಗೆ […]










