ಪುತ್ತೂರು

ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ನಿಧನ

ಪುತ್ತೂರು : ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ಪೂಜಾರಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಮಾಣಿಯವರಾಗಿದ್ದು, ಬೊಳುವಾರಿನಲ್ಲಿ ವಾಸವಾಗಿದ್ದರು. ಕೆಲ ವರ್ಷಗಳಿದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಗುಣ ಮುಖರಾಗಿದ್ದು, ಆರೋಗ್ಯವಾಗಿದ್ದರು. ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದು, ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ. ನ.25ರಂದು ಬೆಳಗ್ಗೆ ಬೊಳುವಾರಿನ ವಾಸವಿದ್ದ ರೂಂನಲ್ಲಿ ಮೃತ ಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ ಎಂದು ತಿಳಿದು ಬಂದಿದೆ.

ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ನಿಧನ Read More »

ನ.27 ರಿಂದ ಡಿ.12 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ನ.27 ರಿಂದ ಡಿ.12 ರವರೆಗೆ ನಡೆಯಲಿದೆ. ನ.27 ರಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.30 ರಂದು ಲಕ್ಷದೀಪೋತ್ಸವ, ಡಿ.1 ರಂದು ರಾತ್ರಿ ಶೇಷ ವಾಹನೋತ್ಸವ, ಡಿ.2 ರಂದು ರಾತ್ರಿ ಅಶ್ವವಾಹನೋತ್ಸವ, ಡಿ.3 ರಂದು ರಾತ್ರಿ ಮಯೂರವಾಹನೋತ್ಸವ, ಡಿ.4 ರಂದು ರಾತ್ರಿ ಶೇಷವಾಹನೋತ್ಸವ, ಡಿ.5 ರಂದು ರಾತ್ರಿ ಹೂವಿನ ತೇರಿನ ಉತ್ಸವ, ಡಿ.6  ರಂದು ರಾತ್ರಿ ಪಂಚಮಿ ಉತ್ಸವ,

ನ.27 ರಿಂದ ಡಿ.12 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ Read More »

ಮೃತ ಕೂಲಿ ಕಾರ್ಮಿಕ ಶಿವಪ್ಪರ ಮೃತದೇಹ ಇಳಿಸಿ ಹೋದ ಘಟನೆ | ಪ್ರಮುಖ ಆರೋಪಿ ಹೆನ್ರಿ ತಾವ್ರೋ ಬಂಧನ

ಪುತ್ತೂರು: ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಶಿವಪ್ಪ ಅವರ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಹೆನ್ರಿ ತಾವ್ರೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಓರ್ವ ಆರೋಪಿಯನ್ನು ಈ ಹಿಂದೆಯೇ ಬಂಧಿಸಿದ್ದರು. ಸಹಾಯಕ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಮುಂದಿನ ರಸ್ತೆ ಸಮೀಪ ಅಮಾನವೀಯ ರೀತಿಯಲ್ಲಿ ಇರಿಸಿ ಹೋದ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಶಿವಪ್ಪ ಅವರು ಕೆಲಸ ಮಾಡುತ್ತಿದ್ದ

ಮೃತ ಕೂಲಿ ಕಾರ್ಮಿಕ ಶಿವಪ್ಪರ ಮೃತದೇಹ ಇಳಿಸಿ ಹೋದ ಘಟನೆ | ಪ್ರಮುಖ ಆರೋಪಿ ಹೆನ್ರಿ ತಾವ್ರೋ ಬಂಧನ Read More »

ನ.25 : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಮಹಾರುದ್ರ ಯಾಗ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ  ಶ್ರೀ ದೇವರಿಗೆ ಮಹಾರುದ್ರ ಯಾಗ ನ.25 ಸೋಮವಾರ ನಡೆಯಲಿದೆ. ಈ ಯಾಗದಲ್ಲಿ 1333 ರುದ್ರಗಳನ್ನು ಜಪಿಸಿ ಮಹಾದೇವನಿಗೆ ಅರ್ಪಿಸಲಾಗುತ್ತದೆ. ಭಗವತಿ ಸೇವೆ, ಸಹಸ್ರ ಮೋದಕ ಹವನ, ಶತ ರುದ್ರಾಭಿಷೇಕ ಮೊದಲಾದ ಸೇವೆಗಳು ನಡೆಯಲಿವೆ. ಕಾರ್ತಿಕ ಸೋಮವಾರದಂದು ನಡೆಯಲಿರುವ ಈ ಯಾಗಕ್ಕೆ ವಸ್ತು ರೂಪದಲ್ಲಿ ಎಳ್ಳು, ಭತ್ತ, ತುಪ್ಪ ಅಥವಾ ಕಾಣಿಕೆ ರೂಪದಲ್ಲಿ ದೇವಸ್ಥಾನಕ್ಕೆ ಸಮರ್ಪಣೆ ಮಾಡಬಹುದು. ಮಹಾರುದ್ರ ಯಾಗದಲ್ಲಿ ಪ್ರಥಮವಾಗಿ ನೋಂದಾಯಿಸಿದ 1333 ಜನರಿಗೆ ಮಾತ್ರ ಅವಕಾಶವಿದೆ

ನ.25 : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಮಹಾರುದ್ರ ಯಾಗ Read More »

ಪುತ್ತೂರಿನಲ್ಲಿ ಬೃಹತ್ ಭಜಕರ ಸಮಾವೇಶ | ಮೆರವಣಿಗೆ ಮೂಲಕ ಸಾಗಿದ ಕುಣಿತ ಭಜನೆ | ಶ್ರೀ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಭಜನಾ ನಿಂದಕರಿಗೆ ಸದ್ಭುದ್ದಿ ನೀಡಲೆಂದು ಪ್ರಾರ್ಥನೆ

ಪುತ್ತೂರು: ಭಜನಾ ಪರಿಷತ್ ಪುತ್ತೂರು ಹಾಗೂ ಪುತ್ತೂರಿನ ವಿವಿಧ ಹಿಂದೂ ಸಂಘಟನೆಗಳ ಮತ್ತು ಭಜಕರ ಸಹಕಾರದಲ್ಲಿ ಬೃಹತ್ ಭಜಕರ ಸಮಾವೇಶ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಭಾನುವಾರ ನಡೆಯಿತು. ಸಮಾವೇಶದ ಮೊದಲು ನಗರದ ದರ್ಬೆ ವೃತ್ತದಿಂದ ಭಜನಾ ಸಂಕೀರ್ತನೆಯ ಕುಣಿತದ ಮೂಲಕ ಮೆರವಣಿಗೆ ನಡೆಯಿತು. ಸಾವಿರಾರು ಮಂದಿ ಭಜಕರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಬಳಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಜನೆ ಹಾಗೂ ಭಜನಾ ತಂಡದ ಮಹಿಳೆಯರನ್ನು ನಿಂದನೆ ಮಾಡುವವರಿಗೆ ಸದ್ಭುದ್ಧಿ ಕರುಣಿಸುವಂತೆ ಪ್ರಾರ್ಥನೆ ಸಲ್ಲಿಸಲಾಯಿತು. ಈ

ಪುತ್ತೂರಿನಲ್ಲಿ ಬೃಹತ್ ಭಜಕರ ಸಮಾವೇಶ | ಮೆರವಣಿಗೆ ಮೂಲಕ ಸಾಗಿದ ಕುಣಿತ ಭಜನೆ | ಶ್ರೀ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಭಜನಾ ನಿಂದಕರಿಗೆ ಸದ್ಭುದ್ದಿ ನೀಡಲೆಂದು ಪ್ರಾರ್ಥನೆ Read More »

ಡಿ.12 ರಿಂದ 15 : ಶಾಂತಿಮೊಗರು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಕುದ್ಮಾರು: ಶಾಂತಿಮೊಗರು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಡಿ.14 ರಿಂದ ಡಿ.15 ರ ತನಕ ನಡೆಯಲಿರುವ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಶಾಂತಿಮೊಗರಿನಲ್ಲಿ ನಡೆಯಿತು. ಬೆಳ್ತಂಗಡಿ ಲಾಯಿಲದ ದೀಕ್ಷಿತ ಕೆ.ಯುವರಾಜ ಗುರುಸ್ವಾಮಿ ಅವರ ಶುಭಾಶೀರ್ವಾದದೊಂದಿಗೆ, ದೀಕ್ಷಿತ ಮೇದಪ್ಪ ಗುರುಸ್ವಾಮಿ ಮತ್ತು ಆಲಂಕಾರು ಅಯ್ಯಪ್ಪ ಭಕ್ತವೃಂದದ ಹಿರಿತನದಲ್ಲಿ ಜನಾರ್ದನ ಗುರುಸ್ವಾಮಿಯವರ ನೇತೃತ್ವದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ನಡೆಯಲಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭ ಶಾಂತಿಮೊಗರು ಶ್ರೀ ಅಯ್ಯಪ್ಪ ಭಕ್ತವೃಂದದವರು ಉಪಸ್ಥಿತರಿದ್ದರು.

ಡಿ.12 ರಿಂದ 15 : ಶಾಂತಿಮೊಗರು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪುತ್ತೂರು ಇನ್ನರ್ ವ್ಹೀಲ್ ಕ್ಲಬ್‍ ನಿಂದ ಮೇಳೈಸಿದ “ಕನಕ ಸಂಭ್ರಮ” | ಅಧ್ಯಕ್ಷರಿಗೆ ಗೋಲ್ಡನ್ ಕಾಲರ್ ಪ್ರದಾನ

ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್‍ ವತಿಯಿಂದ ‘ಕನಕ ಸಂಭ್ರಮ’ ಕಾರ್ಯಕ್ರಮ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶನಿವಾರ ಸಂಜೆ ನಡೆಯಿತು. ಇನ್ನರ್ ವ್ಹೀಲ್ ಕ್ಲಬ್‍ ಜಿಲ್ಲೆ 318 ರ ಜಿಲ್ಲಾ ಚೆಯರ್ ಮ್ಯಾನ್‍ ವಿಶಾಲಾಕ್ಷಿ ಕುಡ್ವ ದೀಪ ಬೆಳಗಿಸಿ, ಕಲ್ಪವೃಕ್ಷದ ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಸ್ನೇಹ ಮತ್ತು ಸೇವೆಯೇ ನಮ್ಮ ಕ್ಲಬ್‌ನ ಗುರಿ. ತಮ್ಮ ಸೇವಾ ಚಟುವಟಿಕೆಯನ್ನು ಮತ್ತೆ ಸರಕಾರವೇ ಮುಂದುವರಿಸಿರುವುದು ಸಂತೋಷದ ವಿಚಾರ. ಅವೆಲ್ಲ ಕೇವಲ ಮಹಿಳೆಯರ ಸಾಧನೆಯಲ್ಲ, ಇದರ ಜೊತೆಗೆ

ಪುತ್ತೂರು ಇನ್ನರ್ ವ್ಹೀಲ್ ಕ್ಲಬ್‍ ನಿಂದ ಮೇಳೈಸಿದ “ಕನಕ ಸಂಭ್ರಮ” | ಅಧ್ಯಕ್ಷರಿಗೆ ಗೋಲ್ಡನ್ ಕಾಲರ್ ಪ್ರದಾನ Read More »

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ವಿದ್ಯಾರ್ಥಿ ಜೀವನ ಬಂಗಾರವಾಗಲು ವಿದ್ಯಾರ್ಥಿಯಾಗಿ ಕಠಿಣ ಪರಿಶ್ರಮ ಅಗತ್ಯ.  ವೈಫಲ್ಯಗಳು ಯಶಸ್ಸಿನ ಭಾಗವೇ ಆಗಿರುವುದರಿಂದ ವೈಫಲ್ಯಗಳಿಗೆ ಸಿದ್ಧರಾಗಿರಿ ಮತ್ತು ಅದು ಯಶಸ್ಸನ್ನು ಸಾಧಿಸಲು ಸಹಕಾರಿ’ ಎಂದು ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ನಳಿನಾಕ್ಷಿ ಎ. ಎಸ್ ಹೇಳಿದರು. ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 2024-25ನೇ ಸಾಲಿನ ವಾಣಿಜ್ಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಡಾl ಆ್ಯಂಟನಿ ಪ್ರಕಾಶ್ ಮೊಂತೇರೊ, ವಿದ್ಯಾರ್ಥಿಗಳು

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ Read More »

ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಯುವ ಮನಸ್ಸುಗಳು ಒಂದಾಗಲಿ | ವಿವೇಕಾನಂದ ಕಾಲೇಜಿನ ನವಯುಗ -2024 ಕಾರ್ಯಕ್ರಮದಲ್ಲಿ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ನನ್ನ ಇಂದಿನ ಬೆಳವಣಿಗೆಯ ಬಹುಪಾಲು ಯಶಸ್ಸು ಪುತ್ತೂರು ವಿವೇಕಾನಂದ ಕಾಲೇಜಿಗೆ ಸಲ್ಲಬೇಕು. ವ್ಯಕ್ತಿತ್ವ‌ ವಿಕಸನದ ಮೂಲಕ ಕಾಲೇಜು ಉತ್ತಮ ನಾಗರಿಕರನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ 2024 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿಧ್ಯಾಭ್ಯಾಸದ‌ ಜೊತೆ ಜೀವನದ ಗುರಿಯನ್ನು ಸಾಧಿಸಲು ಬೇಕಾದ ಮಾನಸಿಕ ದೃಢತೆಯನ್ನು ಬೆಳೆಸಿಕೊಳ್ಳಿ. ದೇಶದ ಭವಿಷ್ಯದ ಶಕ್ತಿ ನೀವು. ಹೊಸತನದ ಚಿಂತನೆಗಳು ನಿಮ್ಮ ಮೂಲಕ ದೇಶಕ್ಕೆ ದೊರೆಯುವಂತಾಗಲಿ

ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಯುವ ಮನಸ್ಸುಗಳು ಒಂದಾಗಲಿ | ವಿವೇಕಾನಂದ ಕಾಲೇಜಿನ ನವಯುಗ -2024 ಕಾರ್ಯಕ್ರಮದಲ್ಲಿ ಕಿಶೋರ್ ಕುಮಾರ್ ಪುತ್ತೂರು Read More »

ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ದಾಂಪತ್ಯ ಜೀವನದ ಐವತ್ತು ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಕುದ್ಮಾರು ಅನ್ಯಾಡಿ ತರವಾಡು ಮನೆಯಲ್ಲಿ ಸನ್ಮಾನ

ಕಾಣಿಯೂರು: ಪುತ್ತೂರು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಮಿತಿಯ ಸಹಯೋಗದೊಂದಿಗೆ ಒಕ್ಕಲಿಗ ಸ್ವಸಹಾಯ ಒಕ್ಕೂಟ, ಯುವ ಸಂಘ, ಮಹಿಳಾ ಸಂಘ ಗ್ರಾಮ ಸಮಿತಿಗಳ  ಸಹಕಾರದೊಂದಿಗೆ  ಒಕ್ಕಲಿಗ ಟ್ರಸ್ಟ್ ನ ದಶಮಾನೋತ್ಸವದ ಸಂಭ್ರಮದ ಅಂಗವಾಗಿ ಒಕ್ಕಲಿಗ ಸ್ವ ಸಹಾಯ ಸಂಘಗಳಿರುವ ಎಲ್ಲಾ ಗ್ರಾಮಗಳಲ್ಲಿ ದಾಂಪತ್ಯ ಜೀವನದ ಐವತ್ತು ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನ.23 ರಂದು ಕುದ್ಮಾರು ಅನ್ಯಾಡಿ ತರವಾಡು ಮನೆಯಲ್ಲಿ 6 ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ 50

ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ದಾಂಪತ್ಯ ಜೀವನದ ಐವತ್ತು ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಕುದ್ಮಾರು ಅನ್ಯಾಡಿ ತರವಾಡು ಮನೆಯಲ್ಲಿ ಸನ್ಮಾನ Read More »

error: Content is protected !!
Scroll to Top