ಪುತ್ತೂರು

ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಕರೆ ಉತ್ಸವ ಮಂಗಳವಾರ ಮುಸ್ಸಂಜೆ ನಡೆಯಿತು.

ಪುತ್ತೂರು : ತುಳುನಾಡಿನಲ್ಲಿ ಭತ್ತವನ್ನು ಬೇಸಾಯ ಮಾಡುವ ರೈತಾಪಿ ಜನರು ಆರಾಧಿಸುತ್ತಾ ಬಂದಿರುವ ಆಚರಣೆಯಲ್ಲಿ ಪೂಕರೆ ಹಾಕುವ ಪದ್ಧತಿಯೂ ಒಂದು. ಫಲವಂತಿಕೆಯ ಹಿನ್ನೆಲೆಯಲ್ಲಿ ಸುಗ್ಗಿ ಪೂಕರೆಯ ವೇಳೆ ಬೇಸಾಯದ ದೈವವಾಗಿ ಎರುಕೋಲ ದೈವದ ಆರಾಧನೆ ನಡೆಯುತ್ತದೆ. ದೇವರ ಮಾರು ಗದ್ದೆಯಲ್ಲಿ ಪೂಕರೆ ಉತ್ಸವದ ಆಚರಣೆಯೂ ಇಲ್ಲಿನ ಸಂಪ್ರದಾಯಕ್ಕೆ ಸೇರಿದೆ. ಪೂಕರೆಯ ಅಂಗವಾಗಿ ಹಿಂದಿನ ಕಾಲದಿಂದ ನಡೆದು ಬಂದ ಈ ಕ್ಷೇತ್ರದ ಪೂರ್ವಶಿಷ್ಟ ಸಂಪ್ರದಾಯದಂತೆ ಪುಷ್ಪಕನ್ನಡಿ ರಹಿತವಾಗಿ ನಿತ್ಯದ ಬಲಿಮೂರ್ತಿಗೆ ಆಭರಣ ಮತ್ತು ವಿವಿಧ ಹೂವುಗಳಿಂದ ಓರಣವಾಗಿ ಅಲಂಕರಿಸಿ […]

ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಕರೆ ಉತ್ಸವ ಮಂಗಳವಾರ ಮುಸ್ಸಂಜೆ ನಡೆಯಿತು. Read More »

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ | ಆಟೋಟ ಸ್ಪರ್ಧೆ

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು ಇದರ ಶತಮಾನೋತ್ಸವದ ಅಂಗವಾಗಿ ಆಟೋಟ ಸ್ಪರ್ಧೆ ನಾಣಿಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಹಕಾರಿ ಸಂಘದ ವ್ಯಾಪ್ತಿಯ ನಾಣಿಲ ಶಾಲೆಗೆ ಸಂಬಂಧಪಟ್ಟ ಆಟೋಟ ಸ್ಪರ್ಧೆ ನಡೆಯಿತು. ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಸುಂದರ ದೇವಸ್ಯ, ವೀಣಾ ಅಂಬುಲ, ಶಾಲಾ ಮುಖ್ಯ ಶಿಕ್ಷಕ ಪದ್ಮಯ್ಯಗೌಡ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯ ಪುರಂದರ ಅಂಬುಲ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು .

ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ | ಆಟೋಟ ಸ್ಪರ್ಧೆ Read More »

ಕಾಳಿಕಾಂಬ ಯಕ್ಷಗಾನ  ಕಲಾಸೇವಾ ಸಂಘದಿಂದ ಮಹಾಭಾರತ ಸರಣಿ ತಾಳಮದ್ದಳೆ

ಹಾಸ್ಯಗಾರ ದಿ.ಬಂಟ್ವಾಳ ಜಯರಾಮ ಆಚಾರ್ಯರಿಗೆ ಶ್ರದ್ಧಾಂಜಲಿ  ಅರ್ಪಣೆ ಸುಳ್ಯ : ಹಾಸ್ಯಗಾರ ಬಂಟ್ವಾಳ ಜಯರಾಮ ಆಚಾರ್ಯರು ತೆಂಕುತಿಟ್ಟಿನ ಹಾಸ್ಯಗಾರರಲ್ಲಿ ಅನನ್ಯ ಸ್ಥಾನವನ್ನು ಪಡೆದ ಕಲಾವಿದರಾಗಿದ್ದು ಯಕ್ಷಗಾನದಲ್ಲಿ ಹಾಸ್ಯ ಪಾತ್ರಗಳನ್ನು ಮಾದರಿಯಾಗಿ ರೂಪಿಸಿದವರು. ಈ ಪರಂಪರೆಯನ್ನು ಮುಂದುವರಿಸುವ ಹಾಸ್ಯ ಕಲಾವಿದರು ಯಕ್ಷರಂಗದಲ್ಲಿ ಮೂಡಿ ಬರಬೇಕೆಂದು  ಜಯರಾಮ ಆಚಾರ್ಯರ ಮೂರು ದಶಕಗಳ ಒಡನಾಡಿ ಕಲಾವಿದ ಪಾತಾಳ ಅಂಬಾಪ್ರಸಾದ್ ತಿಳಿಸಿದರು.  ಕೊಂಬೋಟು ಕುಟುಂಬಸ್ಥರ ತರವಾಡು ಮನೆ ಉಬರಡ್ಕ ಸುಳ್ಯ ಇಲ್ಲಿ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ಜರಗಿದ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ

ಕಾಳಿಕಾಂಬ ಯಕ್ಷಗಾನ  ಕಲಾಸೇವಾ ಸಂಘದಿಂದ ಮಹಾಭಾರತ ಸರಣಿ ತಾಳಮದ್ದಳೆ Read More »

ಗ್ರಾಮ ಪಂಚಾಯಿತಿ ಉಪಚುನಾವಣೆ | ಅರಿಯಡ್ಕ, ಕೆದಂಬಾಡಿ ಎರಡೂ ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಜಯಭೇರಿ

ಪುತ್ತೂರು: ಅರಿಯಡ್ಕ ಹಾಗೂ ಕೆದಂಬಾಡಿ ಗ್ರಾ.ಪಂಗೆ ನಡೆದ ಉಪಚುನಾವಣೆಯಲ್ಲಿ ಎರಡು ಗ್ರಾ.ಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಕೆದಂಬಾಡಿ ಗ್ರಾ.ಪಂನ ವಾರ್ಡ್-4 ರಲ್ಲಿ ಸಾಮಾನ್ಯ ಮೀಸಲು ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೋಂತರೋ 272 ಮತ ಪಡೆದು 30 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ. ಮೋಹನ್ 242 ಹಾಗೂ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ರಫೀಕ್ ನಂಜೆ 108 ಮತಗಳನ್ನು ಪಡೆದುಕೊಂಡಿದ್ದಾರೆ. 11 ಮತ ತಿರಸ್ಕೃತಗೊಂಡಿದೆ. ಅರಿಯಡ್ಕ ಗ್ರಾ.ಪನಲ್ಲಿ ಕಾಂಗ್ರೆಸ್ ಬೆಂಬಲಿತ

ಗ್ರಾಮ ಪಂಚಾಯಿತಿ ಉಪಚುನಾವಣೆ | ಅರಿಯಡ್ಕ, ಕೆದಂಬಾಡಿ ಎರಡೂ ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಜಯಭೇರಿ Read More »

ಜ.12 : ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ, ಧರ್ಮದೈವಗಳ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ ಹಾಗೂ ಧರ್ಮ ದೈವಗಳ ದೈವಸ್ಥಾನದಲ್ಲಿ ಜ.12 ರಂದು ನಡೆಯಲಿರುವ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಲ್ಲೇಗ ಮಾಡತ್ತಾರಿನಲ್ಲಿ ನಡೆಯಿತು. ದೈವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಆಮಂತ್ರಣ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಅರ್ಚಕ ಕೃಷ್ಣ ಶೇವಿರೆ, ಅಧ್ಯಕ್ಷ ಯು. ಶ್ರೀಧರ್ ಹೆಗ್ಡೆ ಉಳಿಯ, ಕಾರ್ಯದರ್ಶಿ ಉಮೇಶ್ ಆಚಾರ್ಯ ಕಗ, ಉಪಾಧ್ಯಕ್ಷ ಜಿನ್ನಪ್ಪ ಪೂಜಾರಿ ಮುರ, ತಿಮ್ಮಪ್ಪ ಗೌಡ ಪೋಳ್ಯ ಹಾಗೂ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು

ಜ.12 : ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ, ಧರ್ಮದೈವಗಳ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ರಾಷ್ಟ್ರಮಟ್ಟದ ಗಣಿತ ಮೇಳ – ಅಂಬಿಕಾ ವಿದ್ಯಾಲಯದ ಸಾನ್ವಿ ಜಿ. ಪ್ರಥಮ

ಪುತ್ತೂರು :  ರಾಷ್ಟ್ರಮಟ್ಟದ  ಗಣಿತ ಮೇಳ ಬಾಲ ವರ್ಗ ಗಣಿತ ಮಾದರಿ ಪ್ರದರ್ಶನದ ರಾಷ್ಟ್ರಮಟ್ಟ ಸ್ಪರ್ಧೆಯಲ್ಲಿ ಬಪ್ಪಳಿಗೆಯ  ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಆರನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಜಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಒರಿಸ್ಸಾದ – ಅಂಗುಲ್ ಸರಸ್ವತಿ ಶಿಶುಮಂದಿರದಲ್ಲಿ ರಾಷ್ಟ್ರಮಟ್ಟದ  ಗಣಿತ ಮೇಳ ಬಾಲ ವರ್ಗ ಗಣಿತ ಮಾದರಿ ಪ್ರದರ್ಶನದ ರಾಷ್ಟ್ರಮಟ್ಟ ಸ್ಪರ್ಧೆ ನಡೆಯಿತು. ಸಾನ್ವಿ ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್ , ಸುಮಿತ್ರ ದಂಪತಿ

ರಾಷ್ಟ್ರಮಟ್ಟದ ಗಣಿತ ಮೇಳ – ಅಂಬಿಕಾ ವಿದ್ಯಾಲಯದ ಸಾನ್ವಿ ಜಿ. ಪ್ರಥಮ Read More »

ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರವಿಪ್ರಕಾಶ್ ವಿಟ್ಲ  ಆಯ್ಕೆ

ವಿಟ್ಲ : ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರವಿಪ್ರಕಾಶ್ ವಿಟ್ಲ ಆಯ್ಕೆಯಾದರು. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನೈತೊಟ್ಟು, ಉಪಾಧ್ಯಕ್ಷರಾದ ಸಂಗೀತ ಪಣೆಮಜಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರುಣಾಕರ ಹಾಗೂ ಸ್ಥಾಯಿ ಸಮಿತಿ ಸದಸ್ಯರಾದ ಅರುಣ್ ವಿಟ್ಲ ಅಶೋಕ್ ಶೆಟ್ಟಿ, ಹರೀಶ್, ಜಯಂತ , ವಿಜಯಲಕ್ಷ್ಮಿ, ಉಪಸ್ಥಿತರಿದ್ದರು.

ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರವಿಪ್ರಕಾಶ್ ವಿಟ್ಲ  ಆಯ್ಕೆ Read More »

ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ನಿಧನ

ಪುತ್ತೂರು : ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ಪೂಜಾರಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಮಾಣಿಯವರಾಗಿದ್ದು, ಬೊಳುವಾರಿನಲ್ಲಿ ವಾಸವಾಗಿದ್ದರು. ಕೆಲ ವರ್ಷಗಳಿದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಗುಣ ಮುಖರಾಗಿದ್ದು, ಆರೋಗ್ಯವಾಗಿದ್ದರು. ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದು, ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ. ನ.25ರಂದು ಬೆಳಗ್ಗೆ ಬೊಳುವಾರಿನ ವಾಸವಿದ್ದ ರೂಂನಲ್ಲಿ ಮೃತ ಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ ಎಂದು ತಿಳಿದು ಬಂದಿದೆ.

ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ನಿಧನ Read More »

ನ.27 ರಿಂದ ಡಿ.12 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ನ.27 ರಿಂದ ಡಿ.12 ರವರೆಗೆ ನಡೆಯಲಿದೆ. ನ.27 ರಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.30 ರಂದು ಲಕ್ಷದೀಪೋತ್ಸವ, ಡಿ.1 ರಂದು ರಾತ್ರಿ ಶೇಷ ವಾಹನೋತ್ಸವ, ಡಿ.2 ರಂದು ರಾತ್ರಿ ಅಶ್ವವಾಹನೋತ್ಸವ, ಡಿ.3 ರಂದು ರಾತ್ರಿ ಮಯೂರವಾಹನೋತ್ಸವ, ಡಿ.4 ರಂದು ರಾತ್ರಿ ಶೇಷವಾಹನೋತ್ಸವ, ಡಿ.5 ರಂದು ರಾತ್ರಿ ಹೂವಿನ ತೇರಿನ ಉತ್ಸವ, ಡಿ.6  ರಂದು ರಾತ್ರಿ ಪಂಚಮಿ ಉತ್ಸವ,

ನ.27 ರಿಂದ ಡಿ.12 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ Read More »

ಮೃತ ಕೂಲಿ ಕಾರ್ಮಿಕ ಶಿವಪ್ಪರ ಮೃತದೇಹ ಇಳಿಸಿ ಹೋದ ಘಟನೆ | ಪ್ರಮುಖ ಆರೋಪಿ ಹೆನ್ರಿ ತಾವ್ರೋ ಬಂಧನ

ಪುತ್ತೂರು: ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಶಿವಪ್ಪ ಅವರ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಹೆನ್ರಿ ತಾವ್ರೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಓರ್ವ ಆರೋಪಿಯನ್ನು ಈ ಹಿಂದೆಯೇ ಬಂಧಿಸಿದ್ದರು. ಸಹಾಯಕ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಮುಂದಿನ ರಸ್ತೆ ಸಮೀಪ ಅಮಾನವೀಯ ರೀತಿಯಲ್ಲಿ ಇರಿಸಿ ಹೋದ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಶಿವಪ್ಪ ಅವರು ಕೆಲಸ ಮಾಡುತ್ತಿದ್ದ

ಮೃತ ಕೂಲಿ ಕಾರ್ಮಿಕ ಶಿವಪ್ಪರ ಮೃತದೇಹ ಇಳಿಸಿ ಹೋದ ಘಟನೆ | ಪ್ರಮುಖ ಆರೋಪಿ ಹೆನ್ರಿ ತಾವ್ರೋ ಬಂಧನ Read More »

error: Content is protected !!
Scroll to Top