ಪುತ್ತೂರು

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಕಲಾವಿಸ್ಮಯ-2024’ಕ್ಕೆ ಚಾಲನೆ

ಕಾನೂನು ಶಿಕ್ಷಣ ಎಂಬುದು ಎಲ್ಲದರ ಮೂಲ: ಕೃಷ್ಣವೇಣಿ ಪ್ರಸಾದ್ ಮುಳಿಯ ಪುತ್ತೂರು:  ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಕಲಾವಿಸ್ಮಯ-2024’ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದ ಮುಳಿಯ ಜುವೇಲರ್ಸ್ ನ ನಿರ್ದೇಶಕಿ ಹಾಗೂ ‘ಪಾಂಚಜನ್ಯ’ ರೇಡಿಯೋದ ಅಧ್ಯಕ್ಷರಾದ ಕೃಷ್ಣವೇಣಿ ಪ್ರಸಾದ್ ಮುಳಿಯ ಮಾತನಾಡಿ, ಕಾನೂನು ಶಿಕ್ಷಣ ತಾಯಿಯಿದ್ದಂತೆ. ಕಾನೂನು ಶಿಕ್ಷಣ ಎಂಬುದು ಎಲ್ಲದರ ಮೂಲವಾಗಿದೆ. ಕಾನೂನು ಸರಿಯಾಗಿದ್ದರೇ ಮಾತ್ರ ದೇಶದ ಭವಿಷ್ಯ ಉತ್ತಮ ರೀತಿಯಲ್ಲಿ ರೂಪುಗೊಳ್ಳಲು ಸಾಧ್ಯವಿದೆ. […]

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಕಲಾವಿಸ್ಮಯ-2024’ಕ್ಕೆ ಚಾಲನೆ Read More »

ಕುರಿಯ ಉಳ್ಳಾಲ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಿಷ್ಣು ಸೇವಾ ಸಮಿತಿಯಿಂದ ಕೃತಜ್ಞತಾ ಸಭೆ

ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಿಷ್ಣು ಸೇವಾ ಸಮಿತಿಯಿಂದ ಕೃತಜ್ಞತಾ ಸಭೆ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ನಕ್ಷತ್ರಿತ್ತಾಯ, ಪ್ರಧಾನ ಅರ್ಚಕ ಸುರೇಶ್ ಕುಮಾರ್‍, ಮಾಜಿ ಅಧ್ಯಕ್ಷರುಗಳಾದ ರವೀಂದ್ರನಾಥ ರೈ ಬಳ್ಳಮಜಲು, ಸತೀಶ್‍ರೈ ಕುಂಬ್ರ, ವಿಷ್ಣು ಸೇವಾ ಸಮಿತಿ ಗೌರವಾಧ್ಯಕ್ಷ ಶಿವರಾಮ ಆಳ್ವ, ಪ್ರಧಾನ ಕಾರ್ಯದರ್ಶಿ ತಿರುಮಲೇಶ್ವರ ಭಟ್‍, ಖಜಾಂಚಿ ಅರವಿಂದ ಭಗವಾನ್ ದಾಸ್ ರೈ, ಕಾರ್ಯದರ್ಶಿ ಶ್ರೀಕೃಷ್ಣ ಬೊಳಂತಿಮಾರು, ಭಜನಾ ಮಂಡಳಿ ಸದಸ್ಯರಾದ ನವೀನ ಕುರಿಯ, ಜಿತೇಶ್‍,

ಕುರಿಯ ಉಳ್ಳಾಲ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಿಷ್ಣು ಸೇವಾ ಸಮಿತಿಯಿಂದ ಕೃತಜ್ಞತಾ ಸಭೆ Read More »

ಸಂತ ಫಿಲೋಮಿನಾ  ಕಾಲೇಜಿನ ದ್ವಿತೀಯ  ಬಿ.ಬಿ.ಎ. ವಿದ್ಯಾರ್ಥಿನಿ ಸ್ವಾತಿ ಡಿ. ಗೌಡ   ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ತೇರ್ಗಡೆ.

ಪುತ್ತೂರು: ಸಂತ  ಫಿಲೋಮಿನಾ ಕಾಲೇಜಿನ ದ್ವಿತೀಯ ಬಿ.ಬಿ.ಎ. ವಿದ್ಯಾರ್ಥಿನಿ ಸ್ವಾತಿ ಡಿ ಗೌಡ ಕಂಪನಿ ಸೆಕ್ರೆಟರಿಯ ಪ್ರವೇಶ ಪರೀಕ್ಷೆ ಸಿ.ಯಸ್.ಇ.ಇ.ಟಿ. ಯಲ್ಲಿ ತೇರ್ಗಡೆ ಹೊಂದಿದ್ದಾರೆ. ಪ್ರಸ್ತುತ ವರ್ಷದಲ್ಲಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಸಿಎಸ್ಐ ನೊಂದಿಗಿನ ಸಹಯೋಗದಿಂದ  ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸಿ ಅವರನ್ನು ಕಂಪನಿ ಸೆಕ್ರೆಟರಿ ಕೋರ್ಸ್‌ಗೆ ಅಥವಾ ತತ್ಸಮಾನ ಕೋರ್ಸ್‌ಗಳಿಗೆ ಸೇರುವಂತೆ ಅಣಿಗೊಳಿಸಲಾಗುತ್ತದೆ. ಸಂಸ್ಥೆಯು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾದ ಏಕೈಕ ಅಧ್ಯಯನ ಕೇಂದ್ರವಾಗಿದೆ.  ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ವಿದ್ಯಾರ್ಥಿಗಳಿಗೆ 

ಸಂತ ಫಿಲೋಮಿನಾ  ಕಾಲೇಜಿನ ದ್ವಿತೀಯ  ಬಿ.ಬಿ.ಎ. ವಿದ್ಯಾರ್ಥಿನಿ ಸ್ವಾತಿ ಡಿ. ಗೌಡ   ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ತೇರ್ಗಡೆ. Read More »

ಪಾಪೆಮಜಲು ನಿವಾಸಿ ಯೋಗೀಶ್‍ ಭಂಡಾರಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗನ್ನೂರು ಗ್ರಾಮದ ತಲೆಂಜಿ ಸಾಮಾಜಿಕ ಗೇರು ನೆಡುತೋಪು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅರಿಯಡ್ಕ ಗ್ರಾಮದ ಪಾಪೆಮಜಲು ನಿವಾಸಿ ಯೋಗೀಶ್ ಭಂಡಾರಿ ಆತ್ಮಹತ್ಯೆ ಮಾಡಿಕೊಂಡವರು. ಬೆಳಗಿನ ಜಾವ ವ್ಯಕ್ತಿಯೊಬ್ಬರು ಹಾಲು ಕೊಂಡೊಯ್ಯುವ ಸಂದರ್ಭದಲ್ಲಿ ಪಕ್ಕದ ಕಾಡಿನಿಂದ ಮೊಬೈಲ್ ರಿಂಗಣಿಸುವ ಶಬ್ದ ಕೇಳಿಸಿ ಅದನ್ನು ಆಲಿಸಿಕೊಂಡು ಆ ಸ್ಥಳಕ್ಕೆ ತೆರಳಿದಾಗ ಯೋಗೀಶ್ ಭಂಡಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ

ಪಾಪೆಮಜಲು ನಿವಾಸಿ ಯೋಗೀಶ್‍ ಭಂಡಾರಿ ನೇಣು ಬಿಗಿದು ಆತ್ಮಹತ್ಯೆ Read More »

ಕ್ಯಾಂಪ್ಕೋ ಪುತ್ತೂರು ಶಾಖೆಯ ನವೀಕೃತ ಕಚೇರಿ ಉದ್ಘಾಟನೆ, ಸದಸ್ಯ ಬೆಳೆಗಾರರ ಸಭೆ

ಪುತ್ತೂರು: ಕ್ಯಾಂಪ್ಕೋ ಪುತ್ತೂರು ಶಾಖೆಯ ನವೀಕೃತ ಕಚೇರಿ ಉದ್ಘಾಟನೆ ಶ್ರೀ ಮಹಾಮಾಯಿ ದೇವಸ್ಥಾನದ ಬಳಿಯ ಕಟ್ಟಡದಲ್ಲಿ ನಡೆಯಿತು. ಶಾಖೆಯನ್ನು ಹಿರಿಯ ಸದಸ್ಯ ಬೆಳೆಗಾರರಾದ ಎನ್. ಎಸ್. ಹರಿಹರ್ ರಾವ್ ಕೊಡಿಪ್ಪಾಡಿ, ಸುರೇಶ್ ಬಲ್ನಾಡು, ಬಿ. ಟಿ. ನಾರಾಯಣ ಭಟ್, ಕೆ. ಟಿ. ಭಟ್ ಉದ್ಘಾಟಿಸಿದರು. ಸದಸ್ಯರ ಬೇಡಿಕೆಯಂತೆ ಸಣ್ಣ ಮಟ್ಟದ ಮಣ್ಣು ತಪಾಸಣೆ ಯಂತ್ರವನ್ನು ಕ್ಯಾಂಪ್ಕೊ ಖರೀದಿಸಿದ್ದು, ಈ ಮೊಬೈಲ್ ಸಾಯಿಲ್ ಟೆಸ್ಟ್ ಯಂತ್ರವನ್ನು ಪುತ್ತೂರಿನಲ್ಲಿ ಇರಿಸಿ ಬೆಳೆಗಾರರ ಬಳಕೆಗೆ ಲಭ್ಯವಾಗುವಂತೆ ಮಾಡಲಾಗುವುದು. 1.45 ಲಕ್ಷ ಸದಸ್ಯರಿದ್ದು,

ಕ್ಯಾಂಪ್ಕೋ ಪುತ್ತೂರು ಶಾಖೆಯ ನವೀಕೃತ ಕಚೇರಿ ಉದ್ಘಾಟನೆ, ಸದಸ್ಯ ಬೆಳೆಗಾರರ ಸಭೆ Read More »

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜು ತಂಡಕ್ಕೆ ದ್ವಿತೀಯ ಸ್ಥಾನ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿಕೊಂಡಿದೆ. ಬೆಂಗಳೂರಿನ ರಾಜರಾಜೇಶ್ವರಿ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎಂಟು ವಿಭಾಗದ ಒಟ್ಟು ೧೬ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ತಂಡವನ್ನು ಸಮರ್ಥವಾಗಿ ಮುನ್ನಡೆಸಿದ ನಾಯಕಿ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜು ತಂಡಕ್ಕೆ ದ್ವಿತೀಯ ಸ್ಥಾನ Read More »

ಇಂದು (ನ.23) : ಕನಕ ಸಂಭ್ರಮ

ಪುತ್ತೂರು : ಇನ್ನೆರ್‍  ವ್ಹೀಲ್‍ ಕ್ಲಬ್‍ 50 ವರ್ಷ ಪೂರೈಸಿದ ಸಲುವಾಗಿ ಕನಕ ಸಂಭ್ರಮ ನ.23 ರಂದು ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಸಂಜೆ 4:30 ಗಂಟೆಗೆ ಉಧ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಯಾಗಿ  ಇನ್ನೆರ್ ವ್ಹೀಲ್‍ ಕ್ಲಬ್ ಜಿಲ್ಲಾಧ್ಯಕ್ಷ ವೈಶಾಲಿ ಕುಡುವ,   ಪರಿಸರವಾದಿ, ಬೆಂಗಳೂರು ಪಿಲಾಂತ್ರೊಪಿಸ್ಟ್,  ರೇವತಿ ಕಾಮತ್‍, ಪಾಲ್ಗೊಳ್ಳರಿದ್ದಾರೆ ಎಂದು ಇನ್ನೆರ್‍ ವ್ಹೀಲ್‍ ಕ್ಲಬ್ ಅಧ್ಯಕ್ಷೆ ರಾಜೇಶ್ವರಿ, ಕಾರ್ಯದರ್ಶಿ ವಚನ ಜಯರಾಮ್‍ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು (ನ.23) : ಕನಕ ಸಂಭ್ರಮ Read More »

ಗುಂಡ್ಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 20 ಕ್ಕೂ ಅಧಿಕ ಮಂದಿಗೆ ಗಾಯ

ಪುತ್ತೂರು: ಸರಕಾರಿ ಬಸ್, ಖಾಸಗಿ ಬಸ್ ಹಾಗೂ ಕಾರಿನ ನಡುವೆ ನಡೆದ ಸರಣಿ ಅಪಘಾತದಲ್ಲಿ 20 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ಸಂದರ್ಭ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದು

ಗುಂಡ್ಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 20 ಕ್ಕೂ ಅಧಿಕ ಮಂದಿಗೆ ಗಾಯ Read More »

ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಸಾಕ್ಷರತೆ, ನಾಯಕತ್ವ ಕುರಿತು ತರಬೇತಿ

ಪುತ್ತೂರು: ಶಿಕ್ಷಣ ಪೌಂಡೇಶನ್ ಸಂಸ್ಥೆಯ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿ ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ  ಒಂದು ದಿನದ ಡಿಜಿಟಲ್ ಸಾಕ್ಷರತೆ ಹಾಗೂ ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಗಳನ್ನೊಳಗೊಂಡ  ತರಬೇತಿಯನ್ನು ಪುತ್ತೂರು ತಾಲೂಕು ಪಂಚಾಯತ್  ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಭಾರತಮಾತೆ ಹಾಗೂ ಗ್ರಂಥಾಲಯ ಪಿತಾಮಹ ಎಸ್. ಆರ್. ರಂಗನಾಥನ್ ರವರ ಭಾವಚಿತ್ರಕ್ಕೆ  ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಡಿಜಿಟಲ್ ಸಾಕ್ಷರತೆಯ

ಗ್ರಂಥಾಲಯ ಮೇಲ್ವಿಚಾರಕರಿಗೆ ಡಿಜಿಟಲ್ ಸಾಕ್ಷರತೆ, ನಾಯಕತ್ವ ಕುರಿತು ತರಬೇತಿ Read More »

ಜಿಲ್ಲೆಯ ರೈತರ 14 ಕೋಟಿ ಸಾಲದ ಬಡ್ಡಿ, ಚಕ್ರಬಡ್ಡಿ ಮನ್ನಾಕ್ಕೆ ಆಗ್ರಹ | ಪತ್ರಿಕಾಗೋಷ್ಠಿಯಲ್ಲಿ ವಿಕ್ಟರ್ ಮಾರ್ಟಿನ್

ಪುತ್ತೂರು: ಸುಸ್ತಿಯಾದ ಬೆಳೆಸಾಲದ ಬಡ್ಡಿಯನ್ನು ಮನ್ನಾ ಮಾಡದಿರುವುದರಿಂದ ದ.ಕ.ಜಿಲ್ಲೆಯ 731 ಮಂದಿ ರೈತರು ಅವಕಾಶ ವಂಚಿತರಾಗಿದ್ದು, ಈ ರೈತರ ರೂ. 14 ಕೋಟಿಯಷ್ಟು ಬಡ್ಡಿ ಮತ್ತು ಚಕ್ರಬಡ್ಡಿಯನ್ನು ಮನ್ನಾ ಮಾಡಲು ಸರ್ಕಾರ ಗಮನ ಹರಿಸಬೇಕು. ಜಿಲ್ಲೆಯ ಶಾಸಕರುಗಳು ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ರೈತರ ಧ್ವನಿಯಾಗಬೇಕು ಎಂದು ಎಸ್‍ಡಿಪಿಐ ಪಕ್ಷದ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿನ್ ಅವರು ಆಗ್ರಹಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ಮಾತನಾಡಿ, ರಾಜ್ಯದ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಫೆಬ್ರವರಿ ತಿಂಗಳಲ್ಲಿ

ಜಿಲ್ಲೆಯ ರೈತರ 14 ಕೋಟಿ ಸಾಲದ ಬಡ್ಡಿ, ಚಕ್ರಬಡ್ಡಿ ಮನ್ನಾಕ್ಕೆ ಆಗ್ರಹ | ಪತ್ರಿಕಾಗೋಷ್ಠಿಯಲ್ಲಿ ವಿಕ್ಟರ್ ಮಾರ್ಟಿನ್ Read More »

error: Content is protected !!
Scroll to Top