ಕಾರ್ಮಿಕ ಶಿವಪ್ಪ ಮೃತದೇಹ ಇಳಿಸಿ ಹೋದ ಘಟನೆ | ಹೆನ್ರಿ ತಾವ್ರೋರನ್ನು ಶೀಘ್ರ ಬಂಧಿಸುವಂತೆ ಆದಿ ದ್ರಾವಿಡ ಸಮಾಜ ಸೇವಾ ಸಂಘದಿಂದ ಪ್ರತಿಭಟನೆ | ಪ್ರತಿಭಟನೆಗೆ ಎಸ್ಡಿ ಪಿಐ ಸಾಥ್
ಪುತ್ತೂರು: ಕಾರ್ಮಿಕ ಶಿವಪ್ಪ ಮೃತಪಟ್ಟು ಅವರ ಮೃತ ದೇಹವನ್ನು ತಂದಿಟ್ಟ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಶಿವಪ್ಪರವರು ಕೆಲಸ ಮಾಡುತ್ತಿದ್ದ ಮಾಲೀಕ ಹೆನ್ರಿ ತಾರ್ವೋ ರನ್ನು ಶೀಘ್ರ ಬಂಧಿಸಬೇಕು ಎಂದು ಒತ್ತಾಯಿಸಿ ಆದಿ ದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಎಸ್ಡಿರಪಿಐ ಬೆಂಬಲದೊಂದಿಗೆ ಶುಕ್ರವಾರ ಅಮರ್ ಜವಾನ್ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ದಲಿತ ಮುಖಂಡ ಸೇಸಪ್ಪ ಬೆದ್ರಕಾಡು ಮಾತನಾಡಿ, ಶಿವಪ್ಪರ ಮೃತದೇಹವನ್ನು ತಂದು ಇರಿಸಿದ ರೀತಿ ಅಮಾನವೀಯವಾಗಿದ್ದು, ಇಂತಹಾ ನೀಚ ಕೃತ್ಯವನ್ನು […]










