ಪುತ್ತೂರು

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ | 50 ವರ್ಷ ದಾಂಪತ್ಯ ಜೀವನ ಪೂರೈಸಿದ ಸವಣೂರು ಗ್ರಾಮದ ನಾಲ್ಕು ಮಂದಿ ದಂಪತಿಗಳಿಗೆ ಸನ್ಮಾನ

ಸವಣೂರು :ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮದ ಅಂಗವಾಗಿ ತಾಲೂಕಿನ ಪ್ರತೀ ಗ್ರಾಮ ಪಂಚಾಯತ್‍ ವ್ಯಾಪ್ತಿಯಲ್ಲಿರುವ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಸಮುದಾಯದವರಿಗೆ ಸನ್ಮಾನ ಕಾರ್ಯಕ್ರಮ ನಡೆಸುತ್ತಾ ಬಂದಿದೆ. ಇಂದು  ಸವಣೂರು ಗ್ರಾಮ ಒಕ್ಕೂಟದ ನಾಲ್ಕು ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಸವಣೂರು ಯುವ ಸಭಾಭವನದಲ್ಲಿ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ದಶಮಾನೋತ್ಸವ ಸಮಿತಿ ಅಧ್ಯಕ್ಷ ಪಟೇಲ್‍ ಗೋಪಾಲಕೃಷ್ಣ ಗೌಡ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ ಗೌಡ, ಉಪಾಧ್ಯಕ್ಷ ಪ್ರವೀಣ್ ಕುಂಟ್ಯಾನ, ಸವಣೂರು ಪ್ರಾಥಮಿಕ ಕೃಷಿಪತ್ತಿನ […]

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ | 50 ವರ್ಷ ದಾಂಪತ್ಯ ಜೀವನ ಪೂರೈಸಿದ ಸವಣೂರು ಗ್ರಾಮದ ನಾಲ್ಕು ಮಂದಿ ದಂಪತಿಗಳಿಗೆ ಸನ್ಮಾನ Read More »

ಮೃತ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಸಾವು ಪ್ರಕರಣ | ಪ್ರಮುಖ ಆರೋಪಿಯನ್ನು ಬಂಧಿಸದಿದ್ದಲ್ಲಿ ನಾಳೆ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ಆದಿ ದ್ರಾವಿಡ ಸಮಾಜ ಸೇವಾ ಸಂಘ

ಪುತ್ತೂರು: ಮೃತಪಟ್ಟ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಎಂಬವರನ್ನ ರಸ್ತೆ ಬದಿ ಮಲಗಿಸಿ ಅವಮಾನಕಾರಿ ರೀತಿಯಲ್ಲಿ ಬಿಟ್ಟು ಹೋದ ಮಾಲಿಕ, ಪ್ರಮುಖ ಆರೋಪಿ ಹೆನ್ರಿ ತಾವ್ರೋರನ್ನು ಪುತ್ತೂರು ನಗರ ಠಾಣಾ ಪೊಲೀಸರು ಇನ್ನೂ ಬಂಧಿಸದೇ ಇರುವ ನಿಟ್ಟಿನಲ್ಲಿ ನ.22 ನಾಳೆ ಪುತ್ತೂರು ನಗರ ಠಾಣೆ ಎದುರು ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಬಾಬು

ಮೃತ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಸಾವು ಪ್ರಕರಣ | ಪ್ರಮುಖ ಆರೋಪಿಯನ್ನು ಬಂಧಿಸದಿದ್ದಲ್ಲಿ ನಾಳೆ ಪ್ರತಿಭಟನೆ : ಪತ್ರಿಕಾಗೋಷ್ಠಿಯಲ್ಲಿ ಆದಿ ದ್ರಾವಿಡ ಸಮಾಜ ಸೇವಾ ಸಂಘ Read More »

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ “INFOTSAV 2K24”

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ “INFOTSAV 2K24” ವಿವಿಧ ಸ್ಪರ್ಧೆಗಳು ನಡೆಯಿತು. ಈ ಸ್ಪರ್ದೆಯಲ್ಲಿ  ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರಶ್ಮಿ  ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಶುಭ ಹಾರೈಸಿದರು.  MIT ಮೂಡಬಿದ್ರೆಯ ಎಂಸಿಎ ವಿಭಾಗದ ಅಸಿಸ್ಟೆಂಟ್  ಪ್ರೊಸೆಸರ್  ರಾಜೇಶ್ ರಾಜು ಅತಿಥಿಯಾಗಿ ಮಾತನಾಡಿ, ಈ ರೀತಿಯ ಫೆಸ್ಟ್ ನಲ್ಲಿ

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ “INFOTSAV 2K24” Read More »

ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಂಜೂರಾದ ಜಮೀನು ರದ್ದುಪಡಿಸಿ ಪ್ರಿಯದರ್ಶಿನಿ ಚಾರಿಟೇಬಲ್‍ ಟ್ರಸ್ಟ್ ಗೆ ಮಂಜೂರು ಹುನ್ನಾರ | ಸರಕಾರಿ ಜಾಗ ಕಬಳಿಕೆಗೆ ಯತ್ನ : ಶಾಸಕ ಸಂಜೀವ ಮಠಂದೂರು

ಪುತ್ತೂರು :  ಪುತ್ತೂರು ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಂಜೂರಾದ ಜಮೀನನ್ನು ರದ್ದು ಪಡಿಸಿ ಪುತ್ತೂರು ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಗೆ ಮಂಜೂರು ಮಾಡುವ ಹುನ್ನಾರ ನಡೆಯುತ್ತಿದ್ದು, ಇದರ ವಿರುದ್ಧ ಬಿಜೆಪಿಯಿಂದ ಬೃಹತ್ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,  ವಕ್ಫ್ ನಂತೆ ಸರಕಾರಿ ಜಮೀನನ್ನು ನುಂಗುವ ಕೆಲಸ ನಡೆಯುತ್ತಿದೆ. ಇದೇ ರೀತಿ ಮುಂದುವರಿದರೆ ವಿಧಾನಸೌಧದ ಜಾಗವನ್ನು ಕಬಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಪುತ್ತೂರು ಸರಕಾರಿ

ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಂಜೂರಾದ ಜಮೀನು ರದ್ದುಪಡಿಸಿ ಪ್ರಿಯದರ್ಶಿನಿ ಚಾರಿಟೇಬಲ್‍ ಟ್ರಸ್ಟ್ ಗೆ ಮಂಜೂರು ಹುನ್ನಾರ | ಸರಕಾರಿ ಜಾಗ ಕಬಳಿಕೆಗೆ ಯತ್ನ : ಶಾಸಕ ಸಂಜೀವ ಮಠಂದೂರು Read More »

ಹಾರಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡೋತ್ಸವ

ಪುತ್ತೂರು : ಹಾರಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 2024ರ ಸಾಲಿನ ವಾರ್ಷಿಕ ಕ್ರೀಡೋತ್ಸವ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ  ನಡೆಯಿತು. ಪುತ್ತೂರು ಅರಣ್ಯ ಇಲಾಖೆಯ ಬಿಟ್ ಅಧಿಕಾರಿ ರಾಜುಚಂದ್ರ ಧ್ವಜಾರೋಹಣ ನೆರವೇರಿಸಿದರು. ಮಹಾಲಿಂಗೇಶ್ವರ ದೇವಸ್ಥಾನದಿಂದ ಶಾಲಾ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ತಂದರು.  ಪುತ್ತೂರು ಸಂಚಾರ ಠಾಣೆಯ ಸಬ್ ಇನ್ಸ್ಪೆಕ್ಟರ್ ಕುಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,  ಹಾರಾಡಿ ಸರಕಾರಿ ಶಾಲೆಯಲ್ಲಿ ಸುಮಾರು 850 ವಿಧ್ಯಾರ್ಥಿಗಳು ಇರುವುದನ್ನು ತಿಳಿದು ಹರ್ಷ ವ್ಯಕ್ತಪಡಿಸಿದ್ದಲ್ಲದೆ, ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಿ ಭಾರತ ದೇಶವನ್ನು

ಹಾರಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡೋತ್ಸವ Read More »

ನ.24 : ಭಜಕರ ಬೃಹತ್ ಸಮಾವೇಶ | ಭಜನೆ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ನಡೆಯಲಿದೆ ಸಮಾವೇಶ

ಪುತ್ತೂರು: ಭಜನಾ ಸೇವೆ ಹಾಗೂ ಭಜನಾ ಸೇವೆಯಲ್ಲಿ ಪಾಲ್ಗೊಳ್ಳುವ ಮಹಿಳೆಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೃಹತ್ ಭಜಕರ ಸಮಾವೇಶವನ್ನು  ನ.24 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಭಜನಾ ಪರಿಷತ್ ಪುತ್ತೂರು ತಾಲೂಕು ಅಧ್ಯಕ್ಷ ಲೋಕೇಶ್‍ ಬೆತ್ತೋಡಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಭಜನಾ ಪರಿಷತ್ ಪುತ್ತೂರು ತಾಲೂಕು, ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಭಜಕರ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು,

ನ.24 : ಭಜಕರ ಬೃಹತ್ ಸಮಾವೇಶ | ಭಜನೆ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ನಡೆಯಲಿದೆ ಸಮಾವೇಶ Read More »

ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ  ಹೊಡೆದ ಬಸ್

ಪುತ್ತೂರು: ಮದುವೆಗೆ ತೆರಳುತ್ತಿದ್ದ ಬಸ್ದೊಂದು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುದನ್ನು ತಪ್ಪಿಸಲು ಹೋಗಿ ಮನೆಯೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಆಮ್ಮಿನಡ್ಕ ಎಂಬಲ್ಲಿ ಇಂದು ನಡೆದಿದೆ. ಘಟನೆಯ ಪರಿಣಾಮ ಬಸ್ಸಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. ಮನೆ ಗೋಡೆ ಸಂಪೂರ್ಣ ಕುಸಿದಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ  ಹೊಡೆದ ಬಸ್ Read More »

ಶೇಖಮಲೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಶೇಖಮಲೆ ಎಂಬಲ್ಲಿ ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ.ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ನೆಲಕ್ಕುರುಳಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಶೇಖಮಲೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ Read More »

ವಿಟ್ಲದ ಮನೆಯೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ವಿಟ್ಲ: ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿಯ ಮನೆಯೊಂದರಲ್ಲಿ ವ್ಯಕ್ತಿಯೋರ್ವರ ಶವ ಮನೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೌರಿಸ್ ಎಂಬವರ ಮನೆಯಲ್ಲಿ ಕೆಲಸದ ಮಾಡುತ್ತಿದ್ದ ಓರ್ವ ವ್ಯಕ್ತಿ ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾವಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದು ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ವಿಟ್ಲದ ಮನೆಯೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿ ಇಡಿ.ಅಶ್ವಿನ್ ಎಲ್. ಶೆಟ್ಟಿ ಯವರಿಗೆ ಯುಡೊ(YUDO) ಪ್ರಶಸ್ತಿ

ಪುತ್ತೂರು: 1.S.S Science and Technology University ಜಯಚಾಮರಾಜೇಂದ್ರ ಕಾಲೇಜು ಆಫ್‌ ಇಂಜಿನಿಯರಿಂಗ್ ಮೈಸೂರು ಸಂಸ್ಥೆಯ “POLYMER SCIENCE AND TECHNOLOGY” ವಿಭಾಗದ ವತಿಯಿಂದ ನ.16ರಂದು YUDO ಗ್ರೂಪ್ ಆಫ್ ಇಂಡಸ್ಟ್ರೀಸ್ ಮುಂಬೈ ಪ್ರಾಯೋಜಕತ್ವದಲ್ಲಿ “YUDO Best Polymer Technocrat Award 2024” ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮತ್ತು ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಮೈಸೂರಿನ ಜೆಎಸ್‍ ಎಸ್‍ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಯುನಿವರ್ಸಿಟಿಯಲ್ಲಿ ನಡೆಯಿತು. ಹಿರಿಯ ವಿದ್ಯಾರ್ಥಿಗಳ ಸಾಧನೆಗಳನ್ನು ಗುರುತಿಸಿ ಈ ಸಂಸ್ಥೆಯು ಸತತ

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿ ಇಡಿ.ಅಶ್ವಿನ್ ಎಲ್. ಶೆಟ್ಟಿ ಯವರಿಗೆ ಯುಡೊ(YUDO) ಪ್ರಶಸ್ತಿ Read More »

error: Content is protected !!
Scroll to Top