ಪುತ್ತೂರು

ಸರಕಾರದಿಂದಲೇ ನಮಗೆ ನೇರವಾಗಿ ಸಂಬಳ ಸಿಗುವಂತಾಗಲಿ | ಘನತ್ಯಾಜ್ಯ ಘಟಕ ಸಿಬ್ಬಂದಿಗಳಿಂದ ಶಾಸಕ ಅಶೋಕ್ ರೈ ಗೆ ಮನವಿ

ಪುತ್ತೂರು: ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ಘಟಕದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಸರಕಾರದಿಂದಲೇ ನೇರವಾಗಿ ಸಂಬಳ ಸಿಗುವಂತೆ ಮಾಡಬೇಕು, ಈ ಬಗ್ಗೆ ಸಚಿವರು, ಸರಕಾರದ ಜೊತೆ ಮಾತುಕತೆ ನಡೆಸಬೇಕು ಎಂದು ಘನತ್ಯಾಜ್ಯ ಘಟಕದ ಸಿಬ್ಬಂದಿಗಳು ಪುತ್ತೂರು ಶಾಸಕ ಅಶೋಕ್ ರೈಗಳಿಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಯೋಜನೆ ಸಂಜೀವಿನಿಯಡಿಯಲ್ಲಿ ಮಹಿಳೆಯರ ಜೀವನ ಮಟ್ಟ ಸುಧಾರಿಸುವ ದಿಶೆಯಲ್ಲಿ ಆರಂಭಗೊಂಡ ಘನತ್ಯಾಜ್ಯ ಘಟಕದ ಮಹಿಳಾ ಸಿಬ್ಬಂದಿ ಮಹಿಳಾ ಚಾಲಕರು ಹಾಗೂ ನಿರ್ವಾಹಕರಾಗಿ ಆಯ್ಕೆಗೊಂಡು ಸುಮಾರು ವರ್ಷಗಳಿಂದ ಗ್ರಾಮ […]

ಸರಕಾರದಿಂದಲೇ ನಮಗೆ ನೇರವಾಗಿ ಸಂಬಳ ಸಿಗುವಂತಾಗಲಿ | ಘನತ್ಯಾಜ್ಯ ಘಟಕ ಸಿಬ್ಬಂದಿಗಳಿಂದ ಶಾಸಕ ಅಶೋಕ್ ರೈ ಗೆ ಮನವಿ Read More »

ಸೊಂಪಾಡಿ ಶ್ರೀ ಮಾರಿಯಮ್ಮ ಕ್ಷೇತ್ರದ ಜೀರ್ಣೋದ್ದಾರ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಸವಣೂರು:  ಸೊಂಪಾಡಿ ಶ್ರೀ ಮಾರಿಯಮ್ಮ ಕ್ಷೇತ್ರದ ಜೀರ್ಣೋದ್ದಾರ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಗೌರವಾಧ್ಯಕ್ಷರಾಗಿ ಸುದರ್ಶನ್‍ ನ್ಯಾಕ್ ಕಂಪ, ಗಿರಿಶಂಕರ ಸುಲಾಯ, ಸತೀಶ್‍ ಕುಮಾರ್‍ ಕೆಡೆಂಜಿ, ಅಧ್ಯಕ್ಷರಾಗಿ ಸುಳ್ಯ ಶಾಸಕರಾದ ಕು. ಭಾಗಿರಥಿ ಮುರುಳ್ಯ, ಕಾರ್ಯಧ್ಯಕ್ಷರಾಗಿ ರಾಕೇಶ್‍ ರೈ ಕೆಡೆಂಜಿ, ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ಕೆ. ಸವಣೂರು, ಜತೆ ಕಾರ್ಯದರ್ಶಿಯಾಗಿ ತಾರಾನಾಥ ಕಾಯರ್ಗ, ಕೋಶಾಧಿಕಾರಿಯಾಗಿ ವಿಜಯನ್‍  ಸೊಂಪಾಡಿ ಆಯ್ಕೆಯಾದರು.

ಸೊಂಪಾಡಿ ಶ್ರೀ ಮಾರಿಯಮ್ಮ ಕ್ಷೇತ್ರದ ಜೀರ್ಣೋದ್ದಾರ ಸಮಿತಿಗೆ ಪದಾಧಿಕಾರಿಗಳ ಆಯ್ಕೆ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಸಭೆ ದಿನಾಂಕ ನಡೆಯಿತು. ಸಭೆಯಲ್ಲಿ 2024-25 ಸಾಲಿಗೆ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಪ್ರಶಾಂತ್ ಆಚಾರ್, ಉಪಾಧ್ಯಕ್ಷರುಗಳಾಗಿ ಕೃಷ್ಣ ಕುಮಾರ್, ಅಶ್ವಿನಿ, ಸುರೇಶ್ ಕುಮಾರ್ ಆಯ್ಕೆಯಾದರು. ಸಭೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶಿವಪ್ರಕಾಶ್.ಎಂ., ಸಂಚಾಲಕ ರವಿನಾರಾಯಣ, ಶಾಲಾ ಮುಖ್ಯ ಶಿಕ್ಷರು, ಎಲ್.ಕೆ.ಜಿ ಯಿಂದ 10ನೇ ತರಗತಿಯವರೆಗೆ ಆಯ್ಕೆಯಾದ ತರಗತಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ Read More »

ನ.21-22 : ವಕ್ಫ್ ಆಸ್ತಿ ಅಕ್ರಮದ ವಿರುದ್ಧ ಬಿಜೆಪಿಯಿಂದ ಮಂಗಳೂರು ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ, ಧರಣಿ | ‘ನಮ್ಮ ಭೂಮಿ-ನಮ್ಮ ಹಕ್ಕು’ ಹೆಸರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪುತ್ತೂರಿನಿಂದ ಒಂದು ಸಾವಿರ ಕಾರ್ಯಕರ್ತರು ಭಾಗಿ : ಸಂಜೀವ ಮಠಂದೂರು

ಪುತ್ತೂರು: ವಕ್ಫ್ ಆಸ್ತಿ ಅಕ್ರಮದ ವಿರುದ್ಧ ಬಿಜೆಪಿ ರಾಜ್ಯಾಧ್ಯಂತ ಬೀದಿಗಿಳಿದು ಹೋರಾಟದ ಜತೆಗೆ ಸವಾಲು ಸ್ವೀಕಾರ ಮಾಡಲಿದ್ದು ನ.21 ಹಾಗೂ 22 ರಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆ ತನಕ ಬೃಹತ್‍ ಪ್ರತಿಭಟನೆ ಹಾಗೂ ಧರಣಿ ನಡೆಸಲಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಂಗಳೂರು ಮಿನಿ ವಿಧಾನಸೌಧದ ಎದುರು ‘ನಮ್ಮ ಭೂಮಿ-ನಮ್ಮ ಹಕ್ಕು’ ಎಂಬ ನಾಮಧ್ಯೇಯದೊಂದಿಗೆ ಪ್ರತಿಭಟನೆ ಮಾಡಲಿದ್ದು,

ನ.21-22 : ವಕ್ಫ್ ಆಸ್ತಿ ಅಕ್ರಮದ ವಿರುದ್ಧ ಬಿಜೆಪಿಯಿಂದ ಮಂಗಳೂರು ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ, ಧರಣಿ | ‘ನಮ್ಮ ಭೂಮಿ-ನಮ್ಮ ಹಕ್ಕು’ ಹೆಸರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪುತ್ತೂರಿನಿಂದ ಒಂದು ಸಾವಿರ ಕಾರ್ಯಕರ್ತರು ಭಾಗಿ : ಸಂಜೀವ ಮಠಂದೂರು Read More »

ನ.22 : ನವಿಕೃತ ಕಛೇರಿ ಉದ್ಘಾಟನೆ,  ಸದಸ್ಯ ಬೆಳೆಗಾರರ ಸಭೆ

ಪುತ್ತೂರು  : ಕೇಂದ್ರ ಅಡಿಕೆ ಮತ್ತು ಕೊಕ್ಕೋ ಮಾರಾಟ ಮತ್ತು ಪರಿಷ್ಕರಣ ಸಹಕಾರಿಯ  ಪುತ್ತೂರು ಶಾಖೆಯ ನವಿಕೃತ ಕಛೇರಿ ಉದ್ಘಾಟನೆ ಹಾಗೂ ಸದಸ್ಯ ಬೆಳೆಗಾರರ ಸಭೆ ನ.22 ರಂದು  ಮಹಮ್ಮಾಯಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಮದ್ಯಾಹ್ನ 3 ಗಂಟೆಗೆ ನಡೆಯುವ ಸಮಾರಂಭವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕಾರಿಣಿ ಸದಸ್ಯ  ಕಜಂಪಾಡಿ ಸುಬ್ರಹ್ಮಣ್ಯ ಭಟ್ ಉದ್ಘಾಟಿಸಲಿದ್ದಾರೆ.    ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ  ಎ.ಕಿಶೋರ್‍ ಕುಮಾರ್‍ ಕೊಡ್ಗಿಅಧ್ಯಕ್ಷತೆ ವಹಿಸಲಿದ್ದಾರೆ.  ಕ್ಯಾಂಪ್ಕೋ ಉಪಾಧ್ಯಕ್ಷ  ಶಂಕರನಾರಾಯಣ ಭಟ್ ಖಂಡಿಗೆ, ವ್ಯವಸ್ಥಾಪಕ ನಿರ್ದೇಶಕ  ಡಾ.ಬಿ.ವಿ.

ನ.22 : ನವಿಕೃತ ಕಛೇರಿ ಉದ್ಘಾಟನೆ,  ಸದಸ್ಯ ಬೆಳೆಗಾರರ ಸಭೆ Read More »

ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ವಾರ್ಷಿಕ  ಧ್ಯಾನ ಕೂಟ

ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ದಿವ್ಯ ಚೇತನಾ ಅಸೋಸಿಯೇಶನ್ ವತಿಯಿಂದ ದಿವ್ಯ ಚೇತನ ಚಾಪೆಲ್‌ ಕಾಲೇಜಿನ ಕ್ಯಾಥೋಲಿಕ್ ವಿದ್ಯಾರ್ಥಿಗಳಿಗೆ ಒಂದು ದಿನದ ‘ದೇವರನ್ನು ಹುಡುಕು”.ಎಂಬ ವಿಷಯದ ಮೇಲೆ ವಾರ್ಷಿಕ ಧ್ಯಾನ ಕೂಟ ನಡೆಯಿತು. ಪಾಪ ನಿವೇದನೆ, ಭಗವಂತನೊಂದಿಗಿನ ಸಂಬಂಧ, ದೇವರೊಂದಿಗಿನ ಜೀವನ, ಯುವಕರ ಪ್ರಲೋಭನೆಗಳನ್ನು ನಿಭಾಯಿಸುವುದು ಮತ್ತು ಪವಿತ್ರಾತ್ಮದ ಶಕ್ತಿಯ ಕುರಿತು ಸೆಷನ್‌ಗಳನ್ನು ಖ್ಯಾತ ಬೋಧಕ ರೆ.ಫಾ.ರಾನ್ಸನ್ ಪಿಂಟೋ ನಡೆಸಿಕೊಟ್ಟರು. ಆಧ್ಯಾತ್ಮಿಕ ತಳಹದಿಗಳನ್ನು ಮತ್ತು ಸಾಮುದಾಯಿಕ ಬಂಧಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಸೆಷನ್‌ಗಳು ಸ್ವಯಂ-ಪ್ರತಿಬಿಂಬದ ಮೇಲೆ

ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ವಾರ್ಷಿಕ  ಧ್ಯಾನ ಕೂಟ Read More »

ಅಕ್ಷಯ ಕಾಲೇಜಿನಲ್ಲಿ ವಿಜ್ರಂಭಿಸಿದ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ “ಅಟೆರ್ನಸ್-2024” ಯಶಸ್ವಿ ಸಮಾಪನ | ಬೆಳ್ತಂಗಡಿ ವಾಣಿ ಪಿಯು ಕಾಲೇಜು ಚಾಂಪಿಯನ್, ಸುಳ್ಯ ಎನ್‌ಎಂಸಿ ರನ್ನರ್ಸ್

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು  ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್-2024 ಅಕ್ಷಯ ಕಾಲೇಜಿನಲ್ಲಿ ಉದ್ಘಾಟನೆಗೊಂಡು ಯಶಸ್ವಿಯಾಗಿ ಸಮಾಪನಗೊಂಡಿತು. ಈ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ವಾಣಿ ಪಿಯು ಕಾಲೇಜು ಚಾಂಪಿಯನ್ ಎನಿಸಿಕೊಂಡಿದ್ದು, ಸುಳ್ಯ ನೆಹರು ಮೆಮೋರಿಯಲ್ ಕಾಲೇಜು ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸ್ಪರ್ಧೆಗಳಾದ ಗ್ರೂಪ್ ಸಿಂಗಿಂಗ್, ಸೋಲೊ ಸಿಂಗಿಂಗ್, ಸೋಲೊ ಡ್ಯಾನ್ಸ್, ಗ್ರೂಪ್ ಡ್ಯಾನ್ಸ್, ಮೊಡೆಲ್ ಪ್ರೆಸೆಂಟೇಶನ್, ಜಾಹಿರಾತು, ಪಾಟ್ ಡೆಕೋರೇಶನ್, ಬೆಂಕಿಯಿಲ್ಲದ ಅಡುಗೆ,

ಅಕ್ಷಯ ಕಾಲೇಜಿನಲ್ಲಿ ವಿಜ್ರಂಭಿಸಿದ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ “ಅಟೆರ್ನಸ್-2024” ಯಶಸ್ವಿ ಸಮಾಪನ | ಬೆಳ್ತಂಗಡಿ ವಾಣಿ ಪಿಯು ಕಾಲೇಜು ಚಾಂಪಿಯನ್, ಸುಳ್ಯ ಎನ್‌ಎಂಸಿ ರನ್ನರ್ಸ್ Read More »

ಕುಂಡಡ್ಕದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ !

ವಿಟ್ಲ: ಕುಂಡಡ್ಕದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಟ್ಲ ಕುಂಡಡ್ಕ ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿ (58) ಆತ್ಮಹತ್ಯೆ ಮಾಡಿಕೊಂಡವರು. ಸಂಜೆಯಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಕಾರಣ ಹುಡುಕಾಡಿದಾಗ ಮನೆಯ ಸಮೀಪದ ಗುಡ್ಡೆಯಲ್ಲಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಕಾರಣಗಳು ತಿಳಿದು ಬಂದಿಲ್ಲ.

ಕುಂಡಡ್ಕದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ! Read More »

ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರಿಗೆ ಸುರಕ್ಷತಾ ಕಾರ್ಯಾಗಾರ

ಪುತ್ತೂರು: ಕರ್ನಾಟಕ ಸರಕಾರದ ವತಿಯಿಂದ ಕಾರ್ಮಿಕ ಇಲಾಖೆ ಮೂಲಕ ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರಿಗೆ ಸುರಕ್ಷತಾ ಕಾರ್ಯಾಗಾರ ಅನುರಾಗ ವಠಾರದಲ್ಲಿ ನಡೆಯಿತು. ನವಕರ್ನಾಟಕ ಕಟ್ಟಡ ಕಾರ್ಮಿಕ ಸಂಘ ಮತ್ತು ಕರ್ನಾಟಕ  ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘದ ಗೌರವ ಅಧ್ಯಕ್ಷ ಬಿ.ಪುರಂದರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ನಮ್ಮ ಸಂಘದ ಸದಸ್ಯರಿಗೆ ಉಪಯುಕ್ತವಾಗುವಂತ ಹಲವಾರು ಮಾಹಿತಿ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಪ್ರಸ್ತುತ ಸರಕಾರದ ವತಿಯಿಂದ ಕಾರ್ಮಿಕ ಇಲಾಖೆ ಮೂಲಕ ಸುರಕ್ಷತಾ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದಾರೆ. ಎಲ್ಲಾ ಕಾರ್ಮಿಕರು

ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರಿಗೆ ಸುರಕ್ಷತಾ ಕಾರ್ಯಾಗಾರ Read More »

ರಾಷ್ಟ್ರಮಟ್ಟದ ಗಣಿತ ಜ್ಞಾನ-ವಿಜ್ಞಾನ ಮೇಳ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ದ್ವಿತೀಯ

ಪುತ್ತೂರು:: ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಕೃತಿ ಮಹೋತ್ಸವ ವತಿಯಿಂದ ನಡೆದ ರಾಷ್ಟ್ರಮಟ್ಟದ  ಗಣಿತ ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ಕ್ಲೇ ಮಾಡೆಲಿಂಗ್‍ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮಧ್ಯಪ್ರದೇಶದ ಉಜ್ಜೈನಿಯ ಸರಸ್ವತಿ ವಿದ್ಯಾ ಮಂದಿರದ ಸಂಸ್ಕೃತಿ ಭವನದಲ್ಲಿ ನಡೆದ ರಾಷ್ಟ್ರಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆ ನಡೆದಿತ್ತು. ನಿಖಿಲ್‍ ಕೋಡಿಂಬಾಡಿ ನಿವಾಸಿ ಕೃಷ್ಣಪ್ಪ ಮತ್ತು ಧನವತಿ ದಂಪತಿ ಪುತ್ರ. ಶಾಲಾ ಚಿತ್ರಕಲಾ ಶಿಕ್ಷಕ ರುಕ್ಮಯ ತರಬೇತಿ ಮಾರ್ಗದರ್ಶನ ನೀಡಿದ್ದರು.

ರಾಷ್ಟ್ರಮಟ್ಟದ ಗಣಿತ ಜ್ಞಾನ-ವಿಜ್ಞಾನ ಮೇಳ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ದ್ವಿತೀಯ Read More »

error: Content is protected !!
Scroll to Top