ಪುತ್ತೂರು

ಕುಂಡಡ್ಕದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ !

ವಿಟ್ಲ: ಕುಂಡಡ್ಕದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಟ್ಲ ಕುಂಡಡ್ಕ ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿ (58) ಆತ್ಮಹತ್ಯೆ ಮಾಡಿಕೊಂಡವರು. ಸಂಜೆಯಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಕಾರಣ ಹುಡುಕಾಡಿದಾಗ ಮನೆಯ ಸಮೀಪದ ಗುಡ್ಡೆಯಲ್ಲಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಕಾರಣಗಳು ತಿಳಿದು ಬಂದಿಲ್ಲ.

ಕುಂಡಡ್ಕದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ! Read More »

ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರಿಗೆ ಸುರಕ್ಷತಾ ಕಾರ್ಯಾಗಾರ

ಪುತ್ತೂರು: ಕರ್ನಾಟಕ ಸರಕಾರದ ವತಿಯಿಂದ ಕಾರ್ಮಿಕ ಇಲಾಖೆ ಮೂಲಕ ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರಿಗೆ ಸುರಕ್ಷತಾ ಕಾರ್ಯಾಗಾರ ಅನುರಾಗ ವಠಾರದಲ್ಲಿ ನಡೆಯಿತು. ನವಕರ್ನಾಟಕ ಕಟ್ಟಡ ಕಾರ್ಮಿಕ ಸಂಘ ಮತ್ತು ಕರ್ನಾಟಕ  ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘದ ಗೌರವ ಅಧ್ಯಕ್ಷ ಬಿ.ಪುರಂದರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ನಮ್ಮ ಸಂಘದ ಸದಸ್ಯರಿಗೆ ಉಪಯುಕ್ತವಾಗುವಂತ ಹಲವಾರು ಮಾಹಿತಿ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಪ್ರಸ್ತುತ ಸರಕಾರದ ವತಿಯಿಂದ ಕಾರ್ಮಿಕ ಇಲಾಖೆ ಮೂಲಕ ಸುರಕ್ಷತಾ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದಾರೆ. ಎಲ್ಲಾ ಕಾರ್ಮಿಕರು

ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರಿಗೆ ಸುರಕ್ಷತಾ ಕಾರ್ಯಾಗಾರ Read More »

ರಾಷ್ಟ್ರಮಟ್ಟದ ಗಣಿತ ಜ್ಞಾನ-ವಿಜ್ಞಾನ ಮೇಳ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ದ್ವಿತೀಯ

ಪುತ್ತೂರು:: ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಕೃತಿ ಮಹೋತ್ಸವ ವತಿಯಿಂದ ನಡೆದ ರಾಷ್ಟ್ರಮಟ್ಟದ  ಗಣಿತ ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ಕ್ಲೇ ಮಾಡೆಲಿಂಗ್‍ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮಧ್ಯಪ್ರದೇಶದ ಉಜ್ಜೈನಿಯ ಸರಸ್ವತಿ ವಿದ್ಯಾ ಮಂದಿರದ ಸಂಸ್ಕೃತಿ ಭವನದಲ್ಲಿ ನಡೆದ ರಾಷ್ಟ್ರಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆ ನಡೆದಿತ್ತು. ನಿಖಿಲ್‍ ಕೋಡಿಂಬಾಡಿ ನಿವಾಸಿ ಕೃಷ್ಣಪ್ಪ ಮತ್ತು ಧನವತಿ ದಂಪತಿ ಪುತ್ರ. ಶಾಲಾ ಚಿತ್ರಕಲಾ ಶಿಕ್ಷಕ ರುಕ್ಮಯ ತರಬೇತಿ ಮಾರ್ಗದರ್ಶನ ನೀಡಿದ್ದರು.

ರಾಷ್ಟ್ರಮಟ್ಟದ ಗಣಿತ ಜ್ಞಾನ-ವಿಜ್ಞಾನ ಮೇಳ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ದ್ವಿತೀಯ Read More »

ಕಡಬ ಶ್ರೀ ಆದಿ ನಾಗಬ್ರಹ್ಮಣ ಮೊಗೇರ್ಕಳ, ಕೊರಗಜ್ಜ ದೈವಸ್ಥಾನದಿಂದ ಕಳ್ಳತನ

ಕಡಬ : ಕೋಡಿಂಬಾಳ ಗ್ರಾಮದ ರಾಮನಗರದಲ್ಲಿರುವ ಶ್ರೀ ಆದಿ ನಾಗಬ್ರಹ್ಮ – ಮೊಗೇರ್ಕಳ ಹಾಗೂ ಕೊರಗಜ್ಜ ದೈವಸ್ಥಾನದ ಕಾಣಿಕೆ ಹುಂಡಿಗಳನ್ನು ಮುರಿದು ಕಳ್ಳರು ಹಣ ಕಳವುಗೈದ ಘಟನೆ ನಡೆದಿದೆ. ಶನಿವಾರ ದಿನ ದೈವಸ್ಥಾನದಲ್ಲಿ ಅಗೆಲು ಸೇವೆ ನಡೆದಿದ್ದು ಅನ್ನಸಂತರ್ಪಣೆ ಬಳಿಕ ಎಲ್ಲರೂ ತೆರಳಿದ್ದರು. ಅದೇ ದಿನ ರಾತ್ರಿ ಈ ಕಳ್ಳತನ ನಡೆದಿದೆ. ನ.16ರ ರಾತ್ರಿ 2 ಗಂಟೆಯ ಸುಮಾರಿಗೆ ದೈವಸ್ಥಾನ ಬಳಿ ಇರುವ ಮನೆಯವರಿಗೆ ಶಬ್ದ ಕೇಳಿ ಎಚ್ಚರಗೊಂಡಿದ್ದರು. ನ.17ರ ಮುಂಜಾನೆ ದೈವಸ್ಥಾನಕ್ಕೆ ಬಂದು ನೋಡಿದಾಗ ಕಳ್ಳತನ

ಕಡಬ ಶ್ರೀ ಆದಿ ನಾಗಬ್ರಹ್ಮಣ ಮೊಗೇರ್ಕಳ, ಕೊರಗಜ್ಜ ದೈವಸ್ಥಾನದಿಂದ ಕಳ್ಳತನ Read More »

ಪ್ರತಿಷ್ಠಿತ ಕನಕ ಪ್ರಶಸ್ತಿ ಸ್ವೀಕರಿಸಿದ ಡಾ. ತಾಳ್ತಜೆ ವಸಂತ ಕುಮಾರ

ಪುತ್ತೂರು: ಪ್ರತಿಷ್ಠಿತ ‘ಕನಕ’ಪ್ರಶಸ್ತಿಯನ್ನು ಮುಂಬೈ ವಿವಿ ನಿವೃತ್ತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ್ ಅವರಿಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ  ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಿ ಗೌರವಿಸಿದರು. ದಿವಂಗತ ಕೃಷ್ಣ ಭಟ್ಟ ಹಾಗೂ ಲಕ್ಷ್ಮಿ ಅವರ ಸುಪುತ್ರನಾದ ಡಾ ತಾಳ್ತಜೆ ವಸಂತ ಕುಮಾರ  ಇವರು ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ ಎಂಬ ವಿಷಯದಲ್ಲಿ  ಪಿಎಚ್ ಡಿ ಪದವಿಯನ್ನು ಪಡೆದಿರುತ್ತಾರೆ. ಸುದೀರ್ಘ 37 ವರ್ಷಗಳ  ಕಾಲ ಉಪನ್ಯಾಸಕ ವೃತ್ತಿಯನ್ನು ಮಾಡಿರುವ ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಹಾಗೂ ಮುಂಬೈ ವಿಶ್ವವಿದ್ಯಾನಿಲಯದ ಮುಖ್ಯಸ್ಥರಾಗಿ ಸೇವೆಯನ್ನು

ಪ್ರತಿಷ್ಠಿತ ಕನಕ ಪ್ರಶಸ್ತಿ ಸ್ವೀಕರಿಸಿದ ಡಾ. ತಾಳ್ತಜೆ ವಸಂತ ಕುಮಾರ Read More »

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ, ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ಪಟ್ಟಾಭಿಷೇಕ | ನ.26, ಜ.1.2 ರಂದು ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಮತ್ತು ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಅಂಗವಾಗಿ ನ.26 ಹಾಗೂ ಜನವರಿ 1 ಮತ್ತು 2ರಂದು ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಅವರು ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಶ್ವ ಭೂಪಟದಲ್ಲಿ ಶಿಕ್ಷಣ ಕಾಶಿ, ಸಾಂಸ್ಕೃತಿಕ ಶ್ರದ್ಧಾ ಕೇಂದ್ರ ಎಂದು

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ, ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ಪಟ್ಟಾಭಿಷೇಕ | ನ.26, ಜ.1.2 ರಂದು ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ Read More »

ಅಪ್ರಾಪ್ತೆಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ | ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು: ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ತು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಗುಲ್ಬರ್ಗ ಮೂಲದ ಯುವಕ ಕಾರ್ತಿಕ್ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವುದು. ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ ಹೋಗುತ್ತಿದ್ದರು. ನ.16ರಿಂದ ಆಕೆ ಪಿ.ಜಿ.ಯಿಂದ ನಾಪತ್ತೆಯಾಗಿದ್ದರು. ಈ ಕುರಿತು ವಿದ್ಯಾರ್ಥಿನಿಯ ತಾಯಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅಪ್ರಾಪ್ತ ವಿದ್ಯಾರ್ಥಿನಿಯನ್ನು ಗುಲ್ಬರ್ಗ ಮೂಲದ

ಅಪ್ರಾಪ್ತೆಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ | ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು Read More »

ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್  | ಕುಮಿಟೆ, ಕಟಾ ವಿಭಾಗದಲ್ಲಿ ಸ್ಮೃತಿ ಪಲ್ಲತ್ತಾರ್ ಗೆ ಚಿನ್ನದ ಪದಕ

ಪುತ್ತೂರು: ದಕ್ಷಿಣ ಕನ್ನಡ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್  ವತಿಯಿಂದ ಪುತ್ತೂರಿನ ಎಪಿಎಂಸಿ ರೈತ ಸಮುದಾಯ ಭವನದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ 2024 ನಲ್ಲಿ ದರ್ಬೆತ್ತಡ್ಕ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ  8 ನೇ ತರಗತಿ ವಿದ್ಯಾರ್ಥಿನಿ ಸ್ಮೃತಿ ಪಲ್ಲತ್ತಾರು ಚಿನ್ನದ ಪದಕ ಪಡೆದಿದ್ದಾರೆ. ಕುಮಿಟೆ ಹಾಗೂ ಕಟ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ, ಪ್ರಶಸ್ತಿ ಪತ್ರ  ಪಡೆದುಕೊಂಡಿದ್ದಾರೆ. ಕರಾಟೆ ಶಿಕ್ಷಕ ನಾರಾಯಣ ಆಚಾರ್ಯ

ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್  | ಕುಮಿಟೆ, ಕಟಾ ವಿಭಾಗದಲ್ಲಿ ಸ್ಮೃತಿ ಪಲ್ಲತ್ತಾರ್ ಗೆ ಚಿನ್ನದ ಪದಕ Read More »

ಡಿ.28-29 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರೀನಿವಾಸ ಕಲ್ಯಾಣೋತ್ಸವ | ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.28 ಹಾಗೂ 29 ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ಭೂಮಿಯಲ್ಲಿ ಅತ್ಯಂತ ಶ್ರೇಷ್ಠ ಸನ್ನಿಧಿಯಿದ್ದರೆ ಅದು ತಿರುಪತಿ ಕ್ಷೇತ್ರ. ಸಪ್ರಗಿರಿವಾಸ ಹೆಸರಿನೊಂದಿಗೆ ತಿರುಪತಿ

ಡಿ.28-29 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರೀನಿವಾಸ ಕಲ್ಯಾಣೋತ್ಸವ | ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕನಕದಾಸ ಜಯಂತಿ

ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಕನಕದಾಸ ಜಯಂತಿ ಸೋಮವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಉಪತಹಸೀಲ್ದಾರ್ ಸುಲೋಚನಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಕನಕದಾಸರು ದಾಸ ಸಾಹಿತ್ಯದಲ್ಲಿ ಮೈಲಿಗಲ್ಲು ಸ್ಥಾಪಿಸಿದವರು. ಸಾಹಿತ್ಯವನ್ನು ಮುಂದಿಟ್ಟು ಕೀರ್ತನೆಗಳ ಮೂಲಕ ಜೀವನದಲ್ಲಿ ಮುಕ್ತಿ ಮಾರ್ಗವನ್ನು ಕಂಡುಕೊಂಡು ಸಮಾಜಕ್ಕೆ ಕೊಡುಗೆಗಳನ್ನು ನೀಡಿದವರು. ಸಮಾಜಕ್ಕೆ ಕೆಡುಕು ಮಾಡದೇ ಯಾವ ರೀತಿ ಬದುಕು ಸಾಗಿಸಬಹುದು ಎಂಬುದನ್ನು ತನ್ನ ಸಂದೇಶದ ಮೂಲಕ ಸಾರಿದರು. ಶೈಕ್ಷಣಿಕ, ಧಾರ್ಮಿಕ, ಸಾಹಿತ್ಯಿಕವಾಗಿ ಜಗದ

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಕನಕದಾಸ ಜಯಂತಿ Read More »

error: Content is protected !!
Scroll to Top